Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ಮಾರ್ಟ್ ಸಿಟಿಯ 2.5 ಕೋಟಿ ಗಿಡಗಳು ಎಲ್ಲಿ? ಕಾಮಗಾರಿ ನಿರ್ವಹಣೆ ಎಲ್ಲಿ? ಫುಟ್’ಪಾತ್’ಗಳು ಎಲ್ಲಿ?

ಶಿವಮೊಗ್ಗದ ಸ್ಮಾರ್ಟ್ ಸಿಟಿ ಸಮಸ್ಯೆಗಳ ಕುರಿತು ಅಹವಾಲು ಸ್ವೀಕಾರ ಸಭೆಯಲ್ಲಿ ಪ್ರಶ್ನೆಗಳ ಸುರಿಮಳೆ

September 13, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಸ್ಮಾರ್ಟ್ ಸಿಟಿಯಿಂದ ನಗರದಲ್ಲಿ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳ ಕುರಿತಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಹಾಗೂ ಪರಿಹಾರಾತ್ಮಕ ಕ್ರಮಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಪ್ರಶ್ನೆಗಳ ಸುರಿಮಳೆಯೇ ತೂರಿಬಂದವು.

ಸಭೆಯಲ್ಲಿ ಮಾತನಾಡಿದ, ಶಿವಮೊಗ್ಗ ಸ್ಮಾರ್ಟ್ ಸಿಟಿ Shivamogga Smart City ವ್ಯವಸ್ಥಾಪಕ ನಿರ್ದೇಶಕ ಕೆ. ಮಾಯಣ್ಣ ಗೌಡ, ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ 930 ಕೋಟಿ ಮಂಜೂರಾಗಿದ್ದು, 71 ಕಾಮಗಾರಿಗಳ ಪೈಕಿ 66 ಕಾಮಗಾರಿಗಳು ಭೌತಿಕವಾಗಿ ಮತ್ತು ಆರ್ಥಿಕವಾಗಿ ಪೂರ್ಣಗೊಂಡಿದೆ. 5 ಕಾಮಗಾರಿಗಳು ಪ್ರಗತಿಯಲ್ಲಿವೆ. 6.0 ಚ.ಕಿ.ಮೀ ನ್ನು ಎಬಿಡಿ ಏರಿಯಾ ಅಭಿವೃದ್ದಿಗೆ ಪರಿಗಣಿಸಲಾಗಿದೆ.
2020ರ ಜುಲೈ 3ರಿಂದ 2022ರ ಜೂನ್ 1 ರವರೆಗೆ ಒಟ್ಟು 952 ಅಹವಾಲು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. 2022ರ ಜೂನ್ 1 ರಿಂದ ಪ್ರಸ್ತುತದವರೆಗೆ 1408 ಅಹಲವಾಲು ಸ್ವೀಕರಿಸಿದ್ದು, 1385 ವಿಲೇವಾರಿಯಾಗಿದ್ದು 23 ಬಾಕಿ ಉಳಿದಿದೆ. ಇಂದಿನ ಸಭೆಯಲ್ಲಿ ಸ್ವೀಕರಿಸಲಾಗುವ ಅಹವಾಲುಗಳನ್ನು ವರ್ಗೀಕರಿಸಿ ಕ್ರಿಯಾಯೋಜನೆ ರೂಪಿಸಿ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಗ್ರಾಹಕ ಹಿತರಕ್ಷಣೆ ಒಕ್ಕೂಟದ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ನಾಗರೀಕರಲ್ಲಿ ಅನೇಕ ದೂರುಗಳಿವೆ. ಸಮಸ್ಯೆ ಪರಿಹಾರಕ್ಕೆ ಮೊದಲು ಸ್ಥಳವೀಕ್ಷಣೆ ಆಗಬೇಕು. ಹಲವಾರು ವಿಷಯಗಳಲ್ಲಿ ಸ್ಪಷ್ಟತೆ ಇಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಸ್ಮಾರ್ಟ್ ಸಿಟಿಯಿಂದ 5 ವರ್ಷಗಳ ನಿರ್ವಹಣೆ ಇದೆ ಎಂದಿದ್ದು, ಕಾಲಾವಧಿಯನ್ನು ತಿಳಿಸಬೇಕು. ಹಾಗೂ ಭಾಗೀದಾರರ ಸಭೆಗಳು ನಡೆದಿಲ್ಲ. ಆದ್ದರಿಂದ ಅನೇಕ ಸಮಸ್ಯೆಗಳು ತಲೆದೋರಿವೆ ಎಂದರು.

ಸ್ಮಾರ್ಟ್ ಸಿಟಿ ಕಾರ್ಯಪಾಲಕ ಅಭಿಯಂತರ ಕೃಷ್ಣಪ್ಪ ಉತ್ತರಿಸಿ, 2023ರ ಜೂನ್ 3 ರಿಂದ 5 ವರ್ಷಗಳ ಕಾಲ ಪಾರ್ಕ್ ಹೊರತುಪಡಿಸಿ ಇನ್ನುಳಿದ ಕಾಮಗಾರಿಗಳಿಗೆ ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಣೆ ಇದೆ ಎಂದರು.
ನಾಗರೀಕ ಹಿತ ರಕ್ಷಣಾ ವೇದಿಕೆಯ ಜನಾರ್ಧನ ಪೈ ಮಾತನಾಡಿ, ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ಗ್ರೀನ್ ಅರ್ಬನೈಸೇಷನ್ ಕೈಗೊಳ್ಳಲಾಗಿದೆ. ಎಲ್ಲಿ ಗಿಡಗಳನ್ನು ನೆಡಲಾಗಿದೆ. ಗಿಡಗಳು ಯಾವ ಸ್ಥಿತಿಯಲ್ಲಿವೆ. ಕಾರ್ಯಪಾಲಕ ಇಂಜಿನಿಯರ್ 8600 ಗಿಡಗಳು ಇವೆ ಎನ್ನುತ್ತಿದ್ದು, ಅದರ ಬಗ್ಗೆ ಭೌತಿಕ ಪರಿಶೀಲನೆ ಆಗಬೇಕು. ಲಕ್ಷ್ಮಿ ಟಾಕೀಸ್ ರಸ್ತೆಯಲ್ಲಿ ಸಾರ್ವಜನಿಕರು ಬೇಡವೆಂದರೂ ಉಪಯೋಗವಿಲ್ಲದ ಸೈಕಲ್ ಪಾಥ್ ನಿರ್ಮಿಸಲಾಗಿದೆ. ಸರ್ವೇ ವರದಿ ಪಡೆಯುವ ವೇಳೆ ಇಲ್ಲಿ ಪಾಥ್ ಬೇಡ ಎಂದಿದ್ದೆವು. ಹಾಗೂ ಸ್ಮಾರ್ಟ್ ಸಿಟಿ ಕೇಬಲ್ ಕೆಲಸದಲ್ಲಿ ಕಳಪೆ ವೈರ್ ಬಳಕೆಯಾಗಿದ್ದು, ಜನರು ಭಯದಲ್ಲಿದ್ದಾರೆ. ಅನಾಹುತಗಳು ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದರು.

ಚನ್ನಪ್ಪ ಲೇಔಟ್ ನಾಗರಿಕರು ಮಾತನಾಡಿ, ತಮ್ಮ ಭಾಗದಲ್ಲಿ ಒಂದು ಕಾಂಕ್ರಿಟ್ ಭರಿತವಾದ ಕಂಬ ಇದ್ದು ಅತ್ಯಂತ ಅಪಾಯಕಾರಿಯಾಗಿದೆ. ಹಾಗೂ ಯುಜಿಡಿ ಕಾಮಗಾರಿಗೆ ಮನೆ ಮುಂದೆ ನೆಲ ಅಗೆಯುತ್ತಾರೆ ಅದನ್ನು ಮುಚ್ಚುವುದಿಲ್ಲ. ಮತ್ತೆ 15 ದಿನಗಳಾದರೂ ಕಸ ತೆಗೆದಕೊಂಡು ಹೋಗುವುದಿಲ್ಲವೆಂದು ದೂರಿದರು.
ರವೀಂದ್ರನಗರದ ವಕೀಲರಾದ ಸೋಮಣ್ಣ ಮಾತನಾಡಿ, ತಮ್ಮ ವಾರ್ಡ್’ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಪೂರ್ಣಗೊಂಡಿಲ್ಲ. ಯುಜಿಡಿ ಕೆಲಸ ಅಪಾಯಕಾರಿಯಾಗಿದೆ. 24*7 ನೀರು ಇರಲಿ 2 ಗಂಟೆ ಕೂಡ ನೀರು ಬರುವುದಿಲ್ಲ ಎಂದರು.

ವಕೀಲರಾದ ಚಂದ್ರಕಾAತ್ ಮಾತನಾಡಿ, ಗಾರ್ಡನ್ ಏರಿಯಾದಲ್ಲಿ ಯಾವ ರಸ್ತೆಯೂ ಸರಿ ಇಲ್ಲ. ನೀರಿನ ಪೈಪ್’ಗಳು ಒಡೆದು ಹೋಗಿವೆ. ಇಲ್ಲಿ ಅಸಮರ್ಪಕವಾಗಿ ಚರಂಡಿ ಕೆಲಸ ಮಾಡಲಾಗಿದೆ. ಗುತ್ತಿಗೆದಾರರು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಿಲ್ಲವೆಂದರು.
12 ನೆಯ ವಾರ್ಡಿನಲ್ಲಿ ಮೂಲಭೂತ ಸೌಕರ್ಯದ ಕೊರತೆ ಹೆಚ್ಚಿದೆ. ಸಣ್ಣಪುಟ್ಟ ಮಳೆ ಬಂದರೂ ಜನರು ಪೇಚಾಡುವ ಸ್ಥಿತಿ ಇದೆ. ಅಂಗಳಯ್ಯನ ಕೇರಿಗೆ ಮೂಲಭೂತ ಸೌಕರ್ಯಗಳನ್ನು ಒಗದಿಸಬೇಕೆಂದರು.

Also read: ಹಿಂದೂ ಕಾರ್ಯಕರ್ತೆ, ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್: ಕಾರಣವೇನು?

ಪಾಲಿಕೆ ಸದಸ್ಯೆ ಸುರೇಖಾ ಮುರಳಿಧರ್ ಮಾತನಾಡಿ, ಸದರಿ ವಾರ್ಡ್ ಶೇ.100 ಸ್ಮಾರ್ಟ್ ಸಿಟಿ ವ್ಯಾಪ್ತಿಗೆ ಬರುತ್ತದೆ. ಆದರೆ 3 ಮುಖ್ಯ ರಸ್ತೆಗಳ ಕೆಲಸ ಆಗದೆ ಬಾಕಿ ಇದೆ. ಇವುಗಳನ್ನು ಹೇಗೆ ಅಭಿವೃದ್ದಿಪಡಿಸಬೇಕು ಎಂದರು.
ರವಿ ಕಿಶನ್ ಮಾತನಾಡಿ, ಸೀನಪ್ಪಶೆಟ್ಟಿ ವೃತ್ತದಿಂದ ರೈಲ್ವೇ ಸ್ಟೇಷನ್’ವರೆಗಿನ ರಸ್ತೆ ತುಂಬ ಚೇಂಬರ್’ಗಳಿವೆ. ಹಲವಾರು ಕಡೆ ಬ್ಯಾರಿಕೇಡ್ ಹಾಕಿದ್ದು, ದಿನದಿಂದ ದಿನಕ್ಕೆ ಈ ಬ್ಯಾರಿಕೇಡ್ ಬದಲಾಯಿಸಲಾಗುತ್ತಿರುತ್ತದೆ. ದ್ವಿಚಕ್ರ ವಾಹನ ಸವಾರರಿಗೆ ಇದು ಸವಾಲಾಗಿದೆ ಎಂದರು.

ಸಂಬಂಧಿಸಿದ ಅಧಿಕಾರಿ ಮನೋಜ್ ಮಾತನಾಡಿ, ಸದರಿ ರಸ್ತೆಯಲ್ಲಿ 55 ಚೇಂಬರ್’ಗಳಿದ್ದು, 20 ಚೇಂಬರ್ ಸಮಸ್ಯೆ ಇತ್ತು. 8 ನ್ನು ಸರಿಪಡಿಸಲಾಗಿದ್ದು, ಉಳಿದವನ್ನು ಸರಿಪಡಿಸಲಾಗುತ್ತಿದೆ ಎಂದರು.

ಡಾ. ಶ್ರೀನಿವಾಸನ್ ಮಾತನಾಡಿ, ವಿನೋಬನಗರದಲ್ಲಿ ರಸ್ತೆಯಲ್ಲಿ ಅಂಗಡಿ ಮುಗ್ಗಟ್ಟಿನವರು ತಮ್ಮ ವಸ್ತು ಪ್ರದರ್ಶನಕ್ಕೆ ಇಟ್ಟಿದ್ದು, ನಡೆಯಲಿಕ್ಕೆ ದಾರಿ ಇಲ್ಲದಂತಾಗಿದೆ ಎಂದರು.
ಬಸವನಗುಡಿಯ ರೇಖಾ ಮಾತನಾಡಿ, ತಮ್ಮ ಪ್ರದೇಶದಲ್ಲಿ ಯುಜಿಡಿ ಕೆಲಸ ಕಳಪೆಯಾಗಿದೆ ಹಾಗೂ ಅವೈಜ್ಞಾನಿಕವಾಗಿದೆ. ಮಳೆ ಬಂದರೆ ನೀರು ಮನೆ ಒಳಗೆ ನುಗ್ಗುತ್ತದೆ. ಸ್ಮಾರ್ಟ್ ಸಿಟಿ ಕಾಮಗಾರಿಗೂ ಮುನ್ನ ಈ ರೀತಿ ಆಗುತ್ತಿರಲಿಲ್ಲ. ಹಾಗೂ ಕನ್ಸರ್ವೆನ್ಸಿಯೂ ಅವೈಜ್ಞಾನಿವಕಾಗಿ ಆಗಿದ್ದು ಹೊಸದಾಗಿ ಮಾಡಬೇಕಿದೆ. ಸಮರ್ಪಕ ಯೋಜನೆ ಇಲ್ಲದೆ ಕೆಲಸ ಮಾಡಿದ್ದಾರೆ. ಸಮಸ್ಯೆ ಕುರಿತು ಇಂಜಿನಿಯರ್’ಗಳಿಗೆ ಕರೆ ಮಾಡಿದರೆ ಮತ್ತೊಬ್ಬರ ಮೇಲೆ ಹೇಳುತ್ತಾರೆ. ಸರಿಯಾದ ಸ್ಪಂದನೆ ಇಲ್ಲ ಎಂದು ದೂರಿದ ಅವರು ಮುಂದೆ ಮಾಡುವ ಕೆಲಸವನ್ನಾದರೂ ಸಮರ್ಪಕವಾಗಿ ಮಾಡುವಂತೆ ಹಾಗೂ ತಪ್ಪುಗಳನ್ನು ಸರಿಪಡಿಸುವಂತೆ ಆಗ್ರಹಿಸಿದರು.

ಬಾಪೂಜಿನಗರದ ನಾಗರೀಕರು ತಮ್ಮ ವಾರ್ಡ್’ನಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. 24×7 ನೀರಿನ ಸಂಪರ್ಕ ಹಾಳಾಗಿದೆ. ನೀರಿನ ಸಂಪರ್ಕವಿಲ್ಲದೆ 6 ತಿಂಗಳಾಯಿತು. ಅತ್ಯಂತ ಸಮಸ್ಯೆಯಾಗಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಮೋಹನ್ ಮಾತನಾಡಿ, ಸ್ಮಾರ್ಟ್ ಸಿಟಿ ಅನುಷ್ಟಾನಗೊಂಡಿರುವ ಪ್ರತಿ ವಾರ್ಡಿನಲ್ಲಿ ಸ್ಥಳ ಪರಿಶೀಲನೆ ಆಗಬೇಕೆಂದರು. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಟಾನಗೊಂಡಿರುವ ವ್ಯಾಪ್ತಿಯ ಜನರು ಅನೇಕ ದೂರುಗಳನ್ನು ಸಲ್ಲಿಸಿದರು.

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಕೆ. ಮಾಯಣ್ಣ ಗೌಡ ಮಾತನಾಡಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಜನರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಗೊಳಿಸಲಾಗುವುದು. ತೊಂದರೆ ಇರುವೆಡೆ ಸಾಧ್ಯವಾದಷ್ಟು ಸ್ಥಳ ಪರಿಶೀಲನೆ ನಡೆಸಿ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ನಾಗರೀಕರು ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ವರ್ಗದ ಅಭಿಯಂತರರು, ತಾಂತ್ರಿಕ ಅಧಿಕಾರಿಗಳು, ಪಾಲಿಕೆ, ಮೆಸ್ಕಾಂ ಅಧಿಕಾರಿಗಳು, ನೀರು ಸರಬರಾಜು ಮತ್ತು ಒಳಚರಂಡಿ, ಜಲ ಮಂಡಳಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಪಾಲ್ಗೊಂಡು ಪರಿಹಾರಾತ್ಮಕ ಕ್ರಮಗಳ ಕುರಿತು ಚರ್ಚಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಿಂದೂ ಕಾರ್ಯಕರ್ತೆ, ವಾಗ್ಮಿ ಚೈತ್ರಾ ಕುಂದಾಪುರ ಅರೆಸ್ಟ್: ಕಾರಣವೇನು?

Next Post

ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ಬ್ರಿಟನ್ ಪ್ರಧಾನಿ ಪೋಷಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ಬ್ರಿಟನ್ ಪ್ರಧಾನಿ ಪೋಷಕರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!