No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ

ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಒಂದು ಆರೋಗ್ಯ ದಿನ 2025 ಆಚರಣೆ

kalpa News by kalpa News
November 5, 2025
in ಶಿವಮೊಗ್ಗ
0
ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಾಳಿ, ನೀರು, ಬೆಳಕು, ಆಹಾರ, ಚಟುವಟಿಕೆ ಹಾಗೂ ಮನಸ್ಸು ಈ ಆರು ಅಂಶಗಳು ನಮ್ಮನ್ನು ಕಾಪಾಡುವ ಆರೂ ಶ್ರೇಷ್ಠ ವೈದ್ಯರುಗಳು ಎಂದು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ವಿಭಾಗದ ಅಧ್ಯಕ್ಷ ಡಾ. ಕೆ.ಆರ್. ರವೀಶ್ ಹೇಳಿದರು.

ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಪ್ರಾಣಿಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ವಿಭಾಗ, ಐಕ್ಯೂ ಎಸಿ ಹಾಗೂ ಭಾರತೀಯ ವೈದ್ಯಕೀಯ ಸಂಘ, ಶಿವಮೊಗ್ಗ ಶಾಖೆ ಸಹಯೋಗದಲ್ಲಿ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಒಂದು ಆರೋಗ್ಯ ದಿನ 2025 ಆಚರಣೆಯ ಪ್ರಯುಕ್ತ ಹವಾಮಾನ ಬದಲಾವಣೆ ಹಾಗೂ ಆರೋಗ್ಯ ಎಂಬ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಚಟುವಟಿಕೆಯಿಂದ ಜೀವನ ನಡೆಸುವುದರಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರ ಇದ್ದು ಉತ್ತಮ ಆರೋಗ್ಯವನ್ನು ರೂಪಿಸುವ ಗುಟ್ಟು ಅಡಗಿದೆ ಎಂದರು.

ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುತ್ತಿರುವ ಆರು ಮುಖ್ಯ ಹಾಗೂ ಶ್ರೇಷ್ಠ ವೈದ್ಯರುಗಳೆಂದರೆ ಗಾಳಿ, ನೀರು, ಬೆಳಕು, ಆಹಾರ, ಚಟುವಟಿಕೆ ಮತ್ತು ಮನಸ್ಸು. ಇವುಗಳ ಸಮತೋಲನವನ್ನು ಕಾಪಾಡಿಕೊಂಡು ಜೊತೆಯಲ್ಲಿ ಪರಿಸರವನ್ನು ಸಂರಕ್ಷಿಸಿಕೊಟಡು ಜೀವನ ನಡೆಸುವುದು ನಮ್ಮೆಲ್ಲ ಜವಾಬ್ದಾರಿ ಎಂದು ಕರೆ ಕೊಟ್ಟರು.2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾದ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ರಾಜೇಂದ್ರ ಚೆನ್ನಿ ಅವರನ್ನು ಸಂಸ್ಥೆಯ ನಿರ್ದೇಶಕರಾದ ಡಾ. ರಜನಿ ಎ ಪೈರವರು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ರಾಜೇಂದ್ರ ಚೆನ್ನಿ, ಭಾರತೀಯ ಸಾಹಿತ್ಯದ ಅತ್ಯುತ್ತಮ ಶ್ರೇಷ್ಠ ಲೇಖಕರಲ್ಲಿ ಒಬ್ಬರಾದ ಅಮೀತಾವ್ ಘೋಷ್ ಅವರನ್ನು ಉಲ್ಲೇಖಿಸಿ, ಮನುಷ್ಯರು ಇರುವ ಒಂದೇ ಭೂಮಿಯನ್ನು ನಾಶಗೊಳಿಸುತ್ತಿರುವುದು ಸಾಮೂಹಿಕ ಆತ್ಮಹತ್ಯೆಗೆ ಸಮಾನವಾಗಿದೆ. ಅದು ಒಂದು ಮಾನಸಿಕ ಹುಚ್ಚು ಎಂಬುದನ್ನು ನಾವು ಕಂಡುಕೊಳ್ಳಬೇಕಾಗಿದೆ ಎಂದರು.

ಸುಮಾರು 75 ದಶಲಕ್ಷ ಜನ ಭಾರತದಲ್ಲಿ ವಾಯುಮಾಲಿನ್ಯದಿಂದ ಸಾವನ್ನಪ್ಪುತ್ತಿದ್ದಾರೆ. ನಾವು ಭೂಮಿಯನ್ನು ಹೇಗೆ ಬೇಕು ಹಾಗೆ ಭೋಗಿಸಬಹುದು ಎಂಬ ಭ್ರಮೆಯಲ್ಲಿ ಬದುಕುತ್ತಿದ್ದೇವೆ. ಸಾಹಿತಿಗಳು ಸಾಹಿತ್ಯದಲ್ಲಿ ನೇರವಾಗಿ ಹವಾಮಾನ ವೈಪರೀತ್ಯದ ಬಗ್ಗೆ ಬರೆಯುವುದು ಕಲ್ಪನೆ ಎಂದಾಗುತ್ತದೆ. ಇಂತಹ ವಿಚಾರ ಸಂಕಿರಣಗಳು ಅವುಗಳನ್ನು ವಿಸ್ತಾರವಾಗಿ ತಿಳಿಸುವುದರಿಂದ ಜಾಗೃತಿ ಮೂಡಿಸಬಹುದು ಎಂದು ಅಭಿಪ್ರಾಯಪಟ್ಟರು.ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎ.ವಿ. ಶ್ರೀಕಾಂತ್ ಮಾತನಾಡಿ, ನಮ್ಮ ಜೀವನ ಶೈಲಿಯ ಕಾರಣದಿಂದ ನಾವು ಅತ್ಯಂತ ಹೆಚ್ಚು ಮಿಥೇನ್ ರಾಸಾಯನಿಕವನ್ನು ಬಿಡುಗಡೆ ಮಾಡುತ್ತಿದ್ದೇವೆ. ಆಧುನಿಕ ಜೀವನ ಶೈಲಿ,ಅತಿ ಹೆಚ್ಚು ವಾಹನ ಅನಿಲ ಬಿಡುಗಡೆ, ತ್ಯಾಜ್ಯ ಚೆಲ್ಲುವಿಕೆ ಇವೆಲ್ಲವೂ ಮುಂದುವರಿದ ದೇಶಗಳಲ್ಲಿ ಹೆಚ್ಚಾಗಿದೆ. ಮಾತ್ರವಲ್ಲ ಇಂದು ವ್ಯಕ್ತಿಯ ಇಂಗಾಲದ ಹೆಜ್ಜೆಗಳು ನೇರವಾಗಿ ಜಾಗತಿಕ ತಾಪಮಾನಕ್ಕೆ ಕಾರಣವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ನಾವೀಗ 1.5 ಡಿಗ್ರಿ ತಾಪಮಾನ ಏರಿಕೆಯ ಅಂಚಿನಲ್ಲಿದ್ದೇವೆ. ಇದು ಹೆಚ್ಚಾದಲ್ಲಿ ಹಿಂತಿರುಗಲಾರದ ಸ್ಥಿತಿಗೆ ತಲುಪುತ್ತೇವೆ. ಇದನ್ನು ತಡೆಯಬೇಕಾದರೆ ಪ್ರತಿಯೊಬ್ಬರು ತಮ್ಮ ಮಟ್ಟದಲ್ಲಿ ಪರಿಸರ ರಕ್ಷಣೆಯ ಜೀವನ ಶೈಲಿ ಅಳವಡಿಸಿಕೊಳ್ಳಲೇಬೇಕು ಎಂದು ತಿಳಿಸಿದರು.

ಮಾನಸ ಟ್ರಸ್ಟ್ ನಿರ್ದೇಶಕರಾದ ಡಾ.ರಜನಿ ಎ. ಪೈ ಅವರು ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಆಡಳಿತ ನಿರ್ದೇಶಕರಾದ ಡಾ. ಪ್ರೀತಿ ವಿ. ಶಾನಭಾಗ್ ಅವರು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ, ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಕೆ ಉಪಸ್ಥಿತರಿದ್ದರು.ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ವಿಭಾಗದ ಕಾರ್ಯದರ್ಶಿ ಡಾ.ಶುಭ್ರತಾ, ವೈದ್ಯರುಗಳಾದ ನಾವು ವೈದ್ಯಕೀಯ ವೃತ್ತಿಯನ್ನು ಮಾಡುವುದರ ಜೊತೆಗೆ ಸಮುದಾಯದ ಆರೋಗ್ಯಕ್ಕೆ ಭಾರತೀಯ ವೈದ್ಯಕೀಯದ ಸಂಘದ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ವರ್ಷವಿಡಿ ಅನೇಕ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರದ ಬಗ್ಗೆ ಹವಮಾನದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಇಂದಿನ ಕಾರ್ಯಕ್ರಮವು ಅದರ ಒಂದು ಭಾಗವಾಗಿದ್ದು, ಸಮಾಜವು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ರಾಜೇಂದ್ರ ಚೆನ್ನಿ ಅವರನ್ನು ರಸಾಯನ ಶಾಸ್ತ ವಿಭಾಗದ ಮುಖ್ಯಸ್ಥೆ ಮಾಧುರಿಯವರು ಪರಿಚಯಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಕಾಂತ್ ಅವರನ್ನು ಕು.ಸುಷ್ಮಿತಾ, ತೃತೀಯ ಬಿಎಸ್ಸಿ ಪರಿಚಯಿಸಿದರು. ಭೂಮಿಕಾ ಸ್ವಾಗತಿಸಿ, ಕುಮಾರ ಕಶಿಶ್ ವಂದಿಸಿದರು. ಆಮಿನಾ ಅಫ್ರೀನ್ ನಿರೂಪಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

  

Tags: IQKannada News WebsiteKateel Ashok Pai Memorial InstituteLatest News KannadaShimogaShivamoggaShivamogga Newsಐಕ್ಯೂಒಂದು ಆರೋಗ್ಯ ದಿನ 2025ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಪ್ರಾಣಿಶಾಸ್ತ್ರಮಾನಸ ಟ್ರಸ್ಟ್ರಸಾಯನ ಶಾಸ್ತ್ರರಾಜ್ಯೋತ್ಸವ ಪ್ರಶಸ್ತಿವೈದ್ಯರುಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಂತೆಯಿಂದ ಹೊರ ಬರಲು ಅನ್ನದಾಸೋದಂತಹ ಸೇವೆ ಮಾಡಿ: ಡಾ. ಧನಂಜಯ ಸರ್ಜಿ

Next Post

ತಕ್ಷಣದ ನಿರ್ಣಯ & ತುರ್ತು ಶಸ್ತ್ರಚಿಕಿತ್ಸೆ | 16 ವರ್ಷದ ಬಾಲಕನ ಪ್ರಾಣ ಉಳಿಸಿದ ಮೆಡಿಕವರ್ ವೈದ್ಯರು

kalpa News

kalpa News

Next Post
ತಕ್ಷಣದ ನಿರ್ಣಯ & ತುರ್ತು ಶಸ್ತ್ರಚಿಕಿತ್ಸೆ | 16 ವರ್ಷದ ಬಾಲಕನ ಪ್ರಾಣ ಉಳಿಸಿದ ಮೆಡಿಕವರ್ ವೈದ್ಯರು

ತಕ್ಷಣದ ನಿರ್ಣಯ & ತುರ್ತು ಶಸ್ತ್ರಚಿಕಿತ್ಸೆ | 16 ವರ್ಷದ ಬಾಲಕನ ಪ್ರಾಣ ಉಳಿಸಿದ ಮೆಡಿಕವರ್ ವೈದ್ಯರು

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL