ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವ್ಯಕ್ತಿಗಿಂತ ಪಕ್ಷ ಮುಖ್ಯ. ಈ ಚುನಾವಣೆಯಲ್ಲಿ ಅಭ್ಯರ್ಥಿ ಯಾರೇ ಇರಲಿ, ಗೆಲುವು ಬಿಜೆಪಿ ಪಕ್ಷದ್ದಾಗಬೇಕು ಎಂದು ಬಿಜೆಪಿ ಜಿಲ್ಲಾ ಪ್ರಣಾಳಿಕಾ ಸಲಹಾ ಸಂಗ್ರಹ ಸಮಿತಿ ಜಿಲ್ಲಾ ಸಂಚಾಲಕ ಡಾ. ಧನಂಜಯ ಸರ್ಜಿ ಹೇಳಿದರು.
ನಗರದ 5ನೇ ವಾರ್ಡಿನ ಪುರಲೆ ಭಾಗಕ್ಕೆ ಸೋಮವಾರ ಬೆಳಗ್ಗೆ ಭೇಟಿ ಕೊಟ್ಟ ಸಂದರ್ಭ ಅವರು ಮಾತನಾಡಿ, ರಾಜ್ಯ ಮತ್ತು ಕೇಂದ್ರದ ಡಬಲ್ ಎಂಜಿನ್ ಸರಕಾರಗಳು ಹಿಂದೆಂದೂ ಆಗದಂತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಜನಸಮಾನ್ಯರಿಗೆ ತಿಳಿಸುವ ಕೆಲಸವನ್ನು ಮಾಡಬೇಕು ಎಂದರಲ್ಲದೇ, ಹಿಂದುತ್ವದ ಬಗ್ಗೆ ಗ್ರಾಮಸ್ಥರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.
ನಗರ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರೆಡ್ಡಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮಲ್ಲಿಕಾರ್ಜುನ್, ವಾರ್ಡ್ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಮಾಲ್ತೇಶ್ ಹಾಗೂ ಪಕ್ಷದ ಕಾರ್ಯಕರ್ತರು ಊರಿನ ಮುಖಂಡರು ಯುವಕರು ಭಾಗವಹಿಸಿದ್ದರು.
Also read: ಬಿಜೆಪಿ ವಿಶ್ವಾಸ ದ್ರೋಹ ಮಾಡಿದೆ: ಜಗದೀಶ್ ಶೆಟ್ಟರ್ ಪತ್ನಿ ಕಣ್ಣೀರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post