ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆಯಲ್ಲಿ ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಕಮ್ಯೂನಿಟಿ ಮೆಡಿಷನ್ ವಿಭಾಗದಿಂದ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಯು ಬ್ಯಾಟಲ್ ಆಫ್ ದಿ ಬ್ರಷ್ ಎಂಬ ಶೀರ್ಷಿಕೆಯಡಿ ಕ್ಯಾನ್ಸರ್ ಕುರಿತು ವೈದ್ಯಕೀಯ ವಿದ್ಯಾರ್ಥಿಗಳ ಜ್ಞಾನ ಮತ್ತು ಅರಿವು ಮೂಡಿಸುವುದಾಗಿತ್ತು. ಕ್ಯಾನ್ಸರ್ ಎಂದ ಕೂಡಲೇ ಜೀವಕ್ಕೆ ಕುತ್ತು ಎಂದು ಪರಿಗಣಿಸಬೇಕಿಲ್ಲ. ಪ್ರಾಥಮಿಕ ಹಂತದಲ್ಲಿಯೇ ಕಾಯಿಲೆಯನ್ನು ಗುರುತಿಸಿ ನಿರ್ಧಿಷ್ಠ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ರೋಗ ನಿಯಂತ್ರಣ ಹಾಗೂ ಉಪಶಮನ ಮಾಡಲು ಸಾಧ್ಯವಾಗುತ್ತದೆ. ಇಡೀ ವಿಶ್ವವೇ ಕ್ಯಾನ್ಸರ್ ವಿರುದ್ಧ ಹೋರಾಟುತ್ತಿರುವ ಸಂದರ್ಭದಲ್ಲಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಜೊತೆಗೆ ಜನ ಸಮೂದಾಯದಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಅನಿವಾರ್ಯವಾಗಿದೆ ಎಂಬ ವಿಷಯಗಳನ್ನೊಳಗೊಂಡು ಸ್ಪರ್ಧೆ ಜರಿಗಿತು. ಕಾಲೇಜಿನ 20 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ಬಹುಮಾನ ಹಾಘೂ ಪ್ರಮಾಣ ಪತ್ರಗಳನ್ನು ಮುಡಿಗೇರಿಸಿಕೊಂಡರು.
ಕಾರ್ಯಕ್ರಮದಲ್ಲಿ ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿದೇರ್ಶಕರಾದ ಡಾ. ವಿನಯ ಶ್ರೀನಿವಾಸ್, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೃಷ್ಣಪ್ರಸಾದ್, ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್. ಸುರೇಶ್ ಹಾಗೂ ದಂತ ವೈದ್ಯಕೀಯ ಕಾಲೇಜಿನ ವೈದ್ಯ ವೃಂದದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post