ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆಯು #Shri Raghavendraswamy Aradhane ಭಾನುವಾರ ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು.
ತಿಲಕನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಹೊರವಲಯ ಬೊಮ್ಮನಕಟ್ಟೆಯ ಶ್ರೀ ರಾಘವೇಂದ್ರಸ್ವಾಮಿಗಳ ಮಠವಲ್ಲದೆ ಜಿಲ್ಲೆಯ ಬೇರೆ ಬೇರೆ ಸ್ಥಳದಲ್ಲಿರುವ ಶ್ರೀ ರಾಯರ ಮಠದಲ್ಲಿಯೂ ಶ್ರೀ ಸ್ವಾಮಿಗಳ ಆರಾಧನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪುನೀತರಾದರು.

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದ್ವಿತೀಯ ಮೃತ್ತಿಕಾ ವೃಂದಾವನ ಎಂದೇ ಖ್ಯಾತಿ ಪಡೆದಿರುವ ಶಿಕಾರಿಪುರ ತಾಲೂಕಿನ ಉಡುಗಣಿಯಲ್ಲಿ, ತೀರ್ಥಹಳ್ಳಿ ತಾಲುಕಿನ ಕಮ್ಮರಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ, ಮತ್ತು ಅದೇ ತಾಲೂಕಿನ ಬಾಳಗಾರು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಗಳ ಆರಾಧನೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಭಾಳಗಾರು ಮಠದಲ್ಲಿ ಗುರುರಾಯರಿಗೆ ನೂತನ ರಥ ಸಮರ್ಪಣೆ ಕಾರ್ಯವೂ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post