ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಪದಾಧಿಕಾರಿಗಳು ಆಗಿದ್ದ ಕವಿ, ಕಥೆಗಾರ, ಲೇಖಕ ಪ್ರಕಾಶ್ ಆರ್. ಕಮ್ಮಾರ್ ಇಂದು ಮಧ್ಯಾಹ್ನ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅನಾರೋಗ್ಯದಿಂದಾಗಿ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಸಾಗರದ ಹಿರಿಯ ಸಾಹಿತಿಗಳಾಗಿದ್ದ ಟಿ. ಮಹಾಬಲೇಶ್ವರ ಭಟ್ಟರ ಜೊತೆಯಲ್ಲಿ ಕಸಾಪ ಕಾರ್ಯದರ್ಶಿಯಾಗಿ ಕನ್ನಡದ ಸೇವೆಯಲ್ಲಿ ತೊಡಗಿದ್ದ ಅವರು, ಡಿ. ಮಂಜುನಾಥ ಅವರು ಜಿಲ್ಲಾಧ್ಯಕ್ಷರಾಗಿದ್ದ ಸಮಯದಲ್ಲಿ ಮೊದಲ ಅವಧಿಯಲ್ಲಿ ಸಾಗರ ತಾಲೂಕಿನ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.
ಸಾಗರ ಶಿವಲಿಂಗಪ್ಪ ಪ್ರೌಢಶಾಲಾ ಶಿಕ್ಷಕರಾಗಿದ್ದ ಅವರು ನಂತರ ಶಿವಮೊಗ್ಗ ಡಿವಿಎಸ್ ಸಂಯುಕ್ತ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ತಮ್ಮ ವಿಶ್ರಾಂತಿ ಜೀವನವನ್ನು ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಮತ್ತೂರಿನ ಶಾರದಾ ವಿಲಾಸ ಪ್ರೌಢಶಾಲಾ ಮತ್ತು ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದರು.
ಕಸಾಪ ಭವನಕ್ಕೆ ನಿವೇಶನ ಪಡೆಯುವಲ್ಲಿ ಶ್ರಮಿಸಿದ್ದರು. ಅವರೊಂದಿಗೆ ವಿ.ಟಿ. ಸ್ವಾಮಿ, ಸಾ.ಕೆ. ಸುರೇಶ್, ಜಿ.ಎಂ. ಭಟ್, ರಘುನಾಥ್, ಲೋಕೇಶ್, ಉಮೇಶ್ ಹಿರೇನಲ್ಲೂರು, ಗೋಪಾಲಕೃಷ್ಣ ರಾಯರು, ಒಡೆಯರ್ ಸೇರಿದಂತೆ ಹಲವರು ಸಹಕಾರ ನೀಡಿದ್ದರು.
ಶಿವಮೊಗ್ಗ ಕರ್ನಾಟಕ ಸಂಘದ ಕಾರ್ಯಕಾರಿ ಸದಸ್ಯರಾಗಿದ್ದ ಅವರು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ, ಪುತ್ರಿ, ಪುತ್ರ ಮೋಹನ್ ಕಮ್ಮಾರ್, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ:
ಮೃತರ ಅಗಲಿಕೆಗೆ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಡಿ. ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎಸ್. ಶಿವಮೂರ್ತಿ, ಎಂ. ಎಂ. ಸ್ವಾಮಿ, ಉಪಾಧ್ಯಕ್ಷ ಟಿ. ಕೃಷ್ಣಪ್ಪ, ಭಾರತಿ ರಾಮಕೃಷ್ಣ, ಕಾರ್ಯದರ್ಶಿ ಡಿ. ಗಣೇಶ್, ಪಿ. ಕೆ. ಸತೀಶ್, ಭೈರಾಪುರ ಶಿವಪ್ಪಗೌಡ, ಆರ್. ಜಯಪ್ರಕಾಶ್, ಕೋಶಾಧ್ಯಕ್ಷರಾದ ಯು. ಮಧುಸೂದನ್ ಐತಾಳ್, ಸಾಗರ ತಾಲೂಕು ಅಧ್ಯಕ್ಷ ವಿ. ಟಿ. ಸ್ವಾಮಿ, ವೇದಿಕೆಯ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post