Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜ.23ರಿಂದ ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್‌’ಪ್ರೆಸ್ ರೈಲು ಸಂಚಾರ ಆರಂಭ

ಮಲೆನಾಡಿಗೆ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಕೊಡುಗೆ, ಇಲ್ಲಿದೆ ವೇಳಾಪಟ್ಟಿ

January 21, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಕೊಡುಗೆ ನೀಡಿದ್ದು, ಶಿವಮೊಗ್ಗ-ಯಶವಂತಪುರ ನಡುವೆ ಇನ್ನೊಂದು ರೈಲು ಸಂಚಾರ ಆರಂಭವಾಗಲಿದೆ.

ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್ ಎಕ್ಸ್‌ಪ್ರೆಸ್ ಹೊಸ ರೈಲು(06539-06540) ಜ.23ರಿಂದ ವಾರದಲ್ಲಿ ನಾಲ್ಕು ದಿನಗಳು ಸಂಚಾರ ಆರಂಭಿಸಲಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಸಂಸದರು, ಇದರಿಂದಾಗಿ ಶಿವಮೊಗ್ಗ-ಯಶವಂತಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಂಟರ್’ಸಿಟಿ ರೈಲು ಮುಂದಿನ ದಿನಗಳಲ್ಲಿ ವಾರದ ಏಳು ದಿನಗಳು ಸಂಚಾರಕ್ಕೆ ಲಭ್ಯವಾದಂತಾಗಲಿದೆ. ಈ ಭಾಗದ ನಾಗರಿಕರು ತಮ್ಮ ಅಗತ್ಯತೆಗಳಿಗಾಗಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಒಟ್ಟಾರೆಯಾಗಿ ಇಲ್ಲಿನ ವಾಣಿಜ್ಯ ಚಟುವಟಿಕೆಗಳು, ವ್ಯವಹಾರ, ಪ್ರವಾಸೋದ್ಯಮ, ಉದ್ಯೋಗಾವಕಾಶಗಳ ಲಭ್ಯತೆ ಹಾಗೂ ಜಿಲ್ಲೆಯ ಸರ್ವಾಂಗೀಣ ವಿಕಾಸವನ್ನು ದೃಷ್ಟಿಯಲ್ಲಿಟ್ಟುಕೊಂಡು ಇನ್ನಷ್ಟು ರೈಲ್ವೇ ಯೋಜನೆಗಳನ್ನು ಅನುಷ್ಠಾನಕ್ಕೆ ಯತ್ನಿಸಲಾಗುವುದು. ಅಲ್ಲದೇ ಜಿಲ್ಲೆಯ ನೆರೆಯ ಜಿಲ್ಲೆ ಹಾಗೂ ರಾಜ್ಯಗಳಿಗೂ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಅನುಷ್ಠಾನಗೊಳಿಸಲು ಈಗಾಗಲೇ ಯೋಜನೆಗಳನ್ನು ರೂಪಿಸಿ, ಸಂಬಂಧಿಸಿದ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಶಿವಮೊಗ್ಗ ಸಂಸದರಾಗಿದ್ದ ಸಂದರ್ಭದಲ್ಲಿ ಆರಂಭಿಸಲಾಗಿದ್ದ ರೈಲು ಗಾಡಿ ಸಂಖ್ಯೆ: 16579/16580 ಯಶವಂತಪುರ-ಶಿವಮೊಗ್ಗ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿಗೆ ನೂತನವಾಗಿ ವಾರದಲ್ಲಿ ನಾಲ್ಕು ದಿನಗಳ ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್ ವಿಶೇಷ ರೈಲು ಮಂಜೂರಾಗಿದ್ದು, ಇದರ ಸೇವೆಯನ್ನು ಜನವರಿ 23 ಗುರುವಾರದಂದು ಚಾಲನೆ ನೀಡಲಾಗುವುದು. ಇದರಿಂದ ಯಶವಂತಪುರ-ಶಿವಮೊಗ್ಗ-ಯಶವಂತಪುರ ಇಂಟರ್ ಸಿಟಿ ರೈಲು ಇನ್ನು ಮುಂದೆ ವಾರದ 7 ದಿನವು ಸಂಚರಿಸಲಿದೆ ಎಂದವರು ತಿಳಿಸಿದ್ದಾರೆ.

ವಾರದಲ್ಲಿ 3 ದಿನ ಅಂದರೆ ಶನಿವಾರ, ಭಾನುವಾರ ಮತ್ತು ಸೋಮವಾರ ಮಾತ್ರ ಸಂಚರಿಸುತ್ತಿದ್ದ ರೈಲು ಸಂಖ್ಯೆ: 16579/16580 ಒಂದು ಜನಪ್ರಿಯ ರೈಲು ಗಾಡಿಯಾಗಿದ್ದು ವಾರದ ಉಳಿದ ದಿನಗಳು ಸಹ ಈ ರೈಲುಗಳಿಗೆ ಬೇಡಿಕೆ ಇತ್ತು. ಆದಕಾರಣ ವಾರದ ಇನ್ನುಳಿದ ದಿನಗಳಲ್ಲಿಯು ರೈಲು ಸೇವೆಯನ್ನು ಆರಂಭಿಸಲು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಈಗ ಮಂಗಳವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ ರೈಲು ಸಂಖ್ಯೆ: 06539/06540 ಯಶವಂತಪುರ-ಶಿವಮೊಗ್ಗ-ಯಶವಂತಪುರ ತತ್ಕಾಲ್ ಸ್ಪೆಷಲ್ ಆಗಿ ಸಂಚರಿಸಲಿದೆ.

ಈ ರೈಲು ಬೆಳಿಗ್ಗೆ 9:00 ಗಂಟೆಗೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 02.45 ಗಂಟೆಗೆ ಶಿವಮೊಗ್ಗ ತಲುಪಿ ಶಿವಮೊಗ್ಗದಿಂದ ಮಧ್ಯಾಹ್ನ 3.30ಕ್ಕೆ ಹೊರಟು ರಾತ್ರಿ 9.00ಕ್ಕೆ ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬಿರೂರು, ತರೀಕೆರೆ ಹಾಗೂ ಭದ್ರಾವತಿಗಳಲ್ಲಿ ಈ ರೈಲು ನಿಲುಗಡೆಯನ್ನು ಹೊಂದಿರುತ್ತದೆ ಎಂದವರು ತಿಳಿಸಿದ್ದಾರೆ.

ಈ ರೈಲು ಸೇವೆಗೆ ಜನವರಿ 23ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ನಗರ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಗ್ರಾಮೀಣಾಭಿವೃದ್ಧಿ, ಪಂಚಾಯತ್’ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದವರು ತಿಳಿಸಿದ್ದಾರೆ.

ಈ ನೂತನ ರೈಲು ಸೇವೆಗಳ ಆರಂಭಕ್ಕೆ ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್, ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: CM B S YedyurappaIndian RailwayIRCTCKannada News WebsiteMalnad NewsMP B Y RaghavendraShimoga Bangalore TrainsTatkal ExpressYeshwanthpurಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಯಶವಂತಪುರಶಿವಮೊಗ್ಗಶಿವಮೊಗ್ಗ ಬೆಂಗಳೂರು ರೈಲುಸಂಸದ ಬಿ.ವೈ. ರಾಘವೇಂದ್ರ
Previous Post

ಪಾವಗಡ: 10 ಆಸ್ಪತ್ರೆ ಬದಲಾಗಿ ಒಂದು ಶಾಲೆ ಆರಂಭಿಸಲು ಕರೆ

Next Post

ಮಂಡ್ಯದಲ್ಲಿ ಕತ್ತು ಸೀಳಿ ವ್ಯಕ್ತಿಯ ಭೀಕರ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಂಡ್ಯದಲ್ಲಿ ಕತ್ತು ಸೀಳಿ ವ್ಯಕ್ತಿಯ ಭೀಕರ ಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!