ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುವ ಜನತೆ ಪರಸ್ಪರ ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಹೇಳಿದರು.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ, ನೆಹರೂ ಯುವ ಕೇಂದ್ರ, ನಿಸರ್ಗ ಯುವತಿ ಮಂಡಳಿ, ಶಿವಮೊಗ್ಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ 2023-24ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರಿದ್ದಾಗ ಅತ್ಯುತ್ತಮ ಕೆಲಸಗಳನ್ನು ಮಾಡಲು ಸಾಧ್ಯವಿದ್ದು, ದೇಶಕ್ಕಾಗಿ ದುಡಿಯಬೇಕು. ಇಂತಹ ಯುವಜನೋತ್ಸವದಲ್ಲಿ ಯುವಕರು ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ಇತರರು ಭಾಗವಹಿಸುವಂತೆ ಮಾಡಬೇಕು. ಸಾಂಸ್ಕೃತಿಕ ಮತ್ತು ಕಲಾ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಯುವಕರ ಸ್ವಾವಲಂಬನೆಗಾಗಿ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದ್ದು ಅದನ್ನು ಬಳಕೆ ಮಾಡಿಕೊಳ್ಳಿರಿ ಎಂದು ಕರೆ ನೀಡಿದರು.
Also read: ಬಾಲ್ಯದಲ್ಲಿ ಬ್ರೂಸ್ಲಿ ಸಿನಿಮಾ ನೋಡಿದ ಅನುಭವ ನೆನೆದು ಶಾಸಕ ಚನ್ನಬಸಪ್ಪ ಹೇಳಿದ್ದೇನು?
ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ DSArun ಮಾತನಾಡಿ, ನೈತಿಕತೆ, ಸಂವಿಧಾನ ಮತ್ತು ಪ್ರಸ್ತುತದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಪ್ರಜಾಪ್ರಭತ್ವ ವ್ಯವಸ್ಥೆಯ ರಾಜ್ಯಂಗ, ಶಾಸಕಾಂಗ, ಕಾರ್ಯಾಂಗದ ವ್ಯವಸ್ಥೆಯನ್ನು ಇಂದಿನ ವಿದ್ಯಾರ್ಥಿಗಳು ಹೆಚ್ಚು ಒಗ್ಗೂಡಿಸಿಕೊಳ್ಳಬೇಕು. ಶಾಸಕಾಂಗದ ಟೀಕೆ ಸರ್ವೇ ಸಾಮಾನ್ಯ ಆದರೆ ಶಾಸಕಾಂಗಿದ ಬಗ್ಗೆ ತಿಳಿದುಕೊಂಡು ಯುವ ಜನತೆ ವ್ಯವಸ್ಥೆಯನ್ನು ಸರಿ ಮಾಡುವ ಕೆಲಸ ಮಾಡಬೇಕು. ದೇಶದಲ್ಲಿ ಶೇ.55 ರಷ್ಟು ಯುವ ಜನತೆ ಇದ್ದು, ಮುಂದಿನ ಪೀಳಿಗೆಗೆ ಏನಾದರೂ ಕಾಣಿಕೆ ಕೊಡುವಂತಿರಬೇಕು. ನಿಜ ಜೀವನದಲ್ಲಿ ನೈತಿಕವಾಗಿ ಸದೃಢರಾಗಬೇಕು. ಆಗ ಉತ್ತಮ ಭವಿಷ್ಯ ಸಾಧ್ಯ ಎಂದರು.
ಶಿಕ್ಷಣದೊಂದಿಗೆ ವ್ಯಕ್ತಿತ್ವ ನಿರ್ಮಾಣ ಕೆಲಸವಾದರೇ ಮಾತ್ರ ದೇಶದ ಬೆಳವಣಿಗೆ ಉತ್ತಮವಾಗುತ್ತದೆ. ಇದನ್ನು ಮಾಡುವುದು ನಮ್ಮಲ್ಲರ ಕರ್ತವ್ಯ. ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ಕಲೆ ಸ0ಸ್ಕೃತಿಯನ್ನು ಕಾಪಾಡಲು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಯುಸ ಮತ್ತು ಕ್ರೀ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥಸ್ವಾಮಿ, ಮಾತನಾಡಿ, ಜಾನಪದದ ಜೊತೆಗೆ ಈ ಬಾರಿ ಹಲವು ಸೃಜನಾತ್ಮಕ ಸ್ಫರ್ಧೆಗಳನ್ನೂ ಸಹ ಆಯೋಜಿಸಲಾಗಿದೆ. ಇಲ್ಲಿ ಆಯ್ಕೆಯಾದವರು ರಾಜ್ಯ ಮಟ್ಟದಲ್ಲಿ ಭಾಗವಹಿಸುತ್ತಾರೆ ಎಂದು ಪ್ರಾಸ್ತಾವಿಕ ನುಡಿದರು.
ಈ ರೀತಿಯ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಯುವ ಜನರಲ್ಲಿನ ಕಲೆಗಳ ಕುರಿತು ಪ್ರೇರೆಪಿಸಲು ಸಾಧ್ಯವಾಗುತ್ತದೆ. ಬೇರೆಯವರ ಕಲೆಯಿಂದ ನಮ್ಮ ಕಲೆಯಲ್ಲಿ ಬದಲಾವಣೆ ಮಾಡಿಕೊಂಡು ಆ ಕ್ಷೇತ್ರದಲ್ಲಿ ಹೆಚ್ಚಿನ ಬೆಳವಣಿಗೆಯನ್ನು ಕಂಡುಕೊಳ್ಳಬಹುದು.
-ರಾಹುಲ್, ವಿದ್ಯಾರ್ಥಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಎನ್ ಎಸ್ ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಪರಿಸರ ನಾಗರಾಜ್, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಮಹೇಶ್, ಗಣೇಶ್ ಕೆಂಚನಾಲ್, ಮಹೇಂದ್ರ ಇತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post