ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರಿ ನೌಕರರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ #C S Shadakshari ಹೇಳಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದೊಳಗೆ ಎನ್ಪಿಎಸ್ ನೌಕರರು ಒಪಿಎಸ್ಗೆ ಪರಿವರ್ತನೆ ಆಗಬೇಕು. ಈಗಾಗಲೇ ಸಿಎಂ ಸಿದ್ದರಾಮಯ್ಯ ಜತೆ ಮಾತುಕತೆಗೆ ಕಾಲಾವಕಾಶ ಕೇಳಿದ್ದೇನೆ. ಡಿ.30ರಂದು ಬೆಳಗ್ಗೆ ಭೇಟಿಗೆ ಸಿಎಂ ಅವಕಾಶ ನೀಡಿದ್ದಾರೆ. ಈಕುರಿತು ಅವರೊಂದಿಗೆ ಚರ್ಚೆ ನಡೆಸಲಿದ್ದೇನೆ ಎಂದರು.
ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿಯಲ್ಲಿ ವೇತನವನ್ನು 2026ರಲ್ಲಿ ಕೊಡಿಸುವಂತಹ ಗುರಿ ಹೊಂದಲಾಗಿದೆ. ಆರೋಗ್ಯ ಸಂಜೀವಿನಿ ಯೋಜನೆ ಜ.1ರಿಂದಲೇ ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದು ಭರವಸೆ ನೀಡಿದರು.
ಚುನಾವಣೆಯಲ್ಲಿ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಸಂಘ ಗೆದ್ದಿದೆ. ಮೊದಲ ಬಾರಿ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಶೇ.90ರಷ್ಟು ಭರವಸೆಗಳನ್ನು ಈಡೇರಿಸಿ ನೌಕರರ ಕಣ್ಣೀರು ಒರೆಸಿದ್ದೇನೆ. ಈ ಬಾರಿ ಕೂಡ ನನ್ನ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ನೌಕರರ ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ ಎಂದರು.
ನೌಕರರಿಗೆ ಕೇಂದ್ರ ಮಾದರಿ ವೇತನ, ಎನ್ಪಿಎಸ್ ರದ್ದು, ಆರೋಗ್ಯ ಯೋಜನೆ ಜಾರಿ, ಹೈದರಾಬಾದ್ -ಕರ್ನಾಟಕ ಭಾಗದ ನೌಕರರಿಗೆ ಮುಂಬಡ್ತಿಗಾಗಿ 371-ಜಿ ವಿಶೇಷ ಸ್ಥಾನಮಾನ ಸೇರಿ ಹಲವು ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುವೆ ಎಂದು ಭರವಸೆ ನೀಡಿದರು.
Also read: ಮಾಲೆ ಧರಿಸಿದ ಸ್ವಾಮಿಗಳಿಂದ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ
ರಾಜ್ಯದ ಎಲ್ಲ ಜಿಲ್ಲೆಗಳಿಂದ ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 3008 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿನಕ್ಷೆ ರೂಪಿಸಲಾಗಿದೆ. ಎರಡೂರು ತಿಂಗಳಲ್ಲಿ ಈ ಬಗ್ಗೆ ಸಭೆ ನಡೆಸಿ ಅನುಷ್ಠಾನಕ್ಕೆ ತರಲಾಗುವುದು ಎಂದರು.
ಸರ್ಕಾರಿ ನೌಕರರಿಗೆ ದಿನವೊಂದಕ್ಕೆ 100 ರೂ. ಬಾಡಿಗೆ ದರದಲ್ಲಿ ಕೊಠಡಿ ನೀಡಲಾಗುವುದು. ಇದರೊಂದಿಗೆ ಎಲ್ಲ ಜಿಲ್ಲೆಗಳಲ್ಲೂ ನೌಕರರ ಭವನ ಹಾಗೂ ಸಭಾಂಗಣ, ನೌಕರರ ಮಕ್ಕಳ ಶುಭಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಕಲ್ಯಾಣ ಮಂಟಪಗಳನ್ನೂ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಚುನಾವಣೆಯಲ್ಲಿ ಆರೋಪ, ಪ್ರತ್ಯಾರೋಪ ಸಹಜ. ಇತಿಹಾಸ, ವರ್ತಮಾನ ಹಾಗೂ ಭವಿಷ್ಯದ ಚಿಂತನೆಗಳಿಲ್ಲದೆ ಕೆಲವರು ಚುನಾವಣೆಗೆ ಸ್ಪರ್ಧಿಸಿದ್ದರು. ನಾನು ಕೆಲಸ ಮಾಡಿದ್ದೇನೆ. ಅವರ ಆರೋಪಗಳೇ ನನಗೆ ಗೆಲುವಿನ ಅಸ್ತ್ರವಾದವು.ವಹಣದ ಆಮಿಷಕ್ಕೆ ಒಳಗಾಗದೆ ನನ್ನ ಕೈ ಹಿಡಿದಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸತ್ಯ ಕಾಯಕಕ್ಕೆ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಿಕ್ಕಿದೆ. ಕಳೆದ ಹತ್ತು ವರ್ಷಗಳಿಂದ ಶಿವಮೊಗ್ಗ ಜಿಲ್ಲೆ ಸರ್ಕಾರಿ ನೌಕರ ಸಂಘದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. 2019ರಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೊದಲ ಬಾರಿ ಸ್ಪರ್ಧೆ ಮಾಡಿ 57 ಮತಗಳ ಅಂತರದಿಂದ ಆಯ್ಕೆಯಾಗಿದ್ದೆ. ಐದು ವರ್ಷಗಳ ಅವಧಿಯಲ್ಲಿ ನೌಕರ ಪರವಾದ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರದೊಂದಿಗೆ ಚರ್ಚಿಸಿ ರೂಪಿಸಿದ್ದೇನೆ. ಅದರ ಪರಿಣಾಮವಾಗಿ ಈ ಬಾರಿ 67 ಮತಗಳ ಅಂತರದಿಂದ ಗೆಲುವು ಸಿಕ್ಕಿದೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 971 ನೌಕರರು ಮತದಾನದ ಹಕ್ಕು ಪಡೆದಿದ್ದರು. ಅದರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 28 ಮತದಾರರಿದ್ದು 27 ಮತಗಳು ನನಗೆ ಬಿದ್ದಿವೆ. ನನ್ನ ವಿರುದ್ಧ ಅಪಪ್ರಚಾರ ನಡೆದರೂ ಅದಕ್ಕೆ ಟೀಕಿಸುವ ಗೋಜಿಗೆ ಹೋಗಲಿಲ್ಲ. ನೌಕರರ ಅಶೋತ್ತರಗಳಿಗೆ ಸ್ಪಂದಿಸಲು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ನನ್ನ ಮನೆ ದುರಸ್ತಿ ವೆಚ್ಚದ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ 5 ಸಚಿವ ಮಧು ಬಂಗಾರಪ್ಪ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ -ಸಭೆಯಲ್ಲಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ -ಮಾಹಿತಿ ಇಲ್ಲ. ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನಿಮ್ಮ ಪ್ರಶ್ನೆಗೆ ಜಿಲ್ಲಾಧಿಕಾರಿಗಳ ಬಳಿ ಉತ್ತರ ಸಿಗಬಹುದು ಎಂದು ಹೇಳಿದರು.
ಇದೇ ವೇಳೆ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ಸಂಘದ ಗೌರವಾಧ್ಯಕ್ಷ ಡಾ. ಸಿ.ಎ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಪಾಪಣ್ಣ, ಭದ್ರಾವತಿ ತಾಲೂಕು ನೌಕರ ಸಂಘದ ಅಧ್ಯಕ್ಷ ಸಿದ್ಧಬಸಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post