No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯಪುರ

ಜೆಡಿಎಸ್‌ ವಿರುದ್ಧ ಅಪಪ್ರಚಾರ ಹಿನ್ನೆಲೆ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಹೆಚ್‌ಡಿಕೆ ನೇರ ಸವಾಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 23, 2021
in ವಿಜಯಪುರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸಿಂಧಗಿ  |

ಈ ಚುನಾವಣೆಯಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಿಕ್ಕಿಲ್ಲ, ಆ ಪಕ್ಷವು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡಿದೆ ಎಂದು ನಿರಾಧಾರ ಆರೋಪ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠ ನಾಯಕರಾದ ಹೆಚ್.‌ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದರು.

ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿಗಳು ಮೋರಟಗಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ವಿರುದ್ಧ ಸುಖಾಸುಮ್ಮನೆ ದುರುದ್ದೇಶಪೂರಿತ ಅಪಪ್ರಚಾರ ಮಾಡುತ್ತಿರುವ ಸಿದ್ದರಾಮಯ್ಯಗೆ ನೇರ ಸವಾಲು ಹಾಕಿದ ಅವರು; “ಎಷ್ಟು ವರ್ಷ ಇದೇ ರೀತಿಯ ಸುಳ್ಳು ಹೇಳಲು ಸಾಧ್ಯ? ಕಳೆದ ಇಪ್ಪತ್ತು ವರ್ಷಗಳಿಂದ ಸಿಂಧಗಿ ಕ್ಷೇತ್ರದ ಜನರು ನಮ್ಮ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಏನು? ನಾವು ಕೊಟ್ಟ ಕೊಡುಗೆ ಏನು? ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ” ಎಂದರು.

ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮೊದಲಿನಿಂದಲೂ ಮೂರನೇ ಸ್ಥಾನದಲ್ಲಿದೆ. ಅದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಯಾರ ಯಾರ ಕಾಲದಲ್ಲಿ ಈ ನಾಡಿನ ಅಭಿವೃದ್ಧಿಗೆ ಏನೆಲ್ಲ ಕೆಲಸ ಆಗಿದೆ ಎಂಬುದನ್ನು ಚರ್ಚೆ ನಡೆಸಲು ಮೂರೂ ಪಕ್ಷಗಳ ನಾಯಕರು ಒಂದೇ ವೇದಿಕೆ ಮೇಲೆ ಚರ್ಚೆಗೆ ಬರಲಿ. ಇದು ನನ್ನ ಸವಾಲು. ನಮ್ಮ ಪಕ್ಷ ಅಧಿಕಾರಿದಲ್ಲಿದ್ದ ಕಾಲದಲ್ಲಿ ರಾಜ್ಯದ ಅಭಿವೃದ್ಧಿಗೆ ಗುಣಾತ್ಮಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮುಕ್ತ ಚರ್ಚೆಗೆ ನಾನು ಸಿದ್ಧ ಇದ್ದೇನೆ ಎಂದ ಅವರು, ನಾನು ಅಧಿಕಾರದಲ್ಲಿ ಇದ್ದಿದ್ದು ಒಮ್ಮೆ 18 ತಿಂಗಳು, ಇನ್ನೊಮ್ಮೆ 14 ತಿಂಗಳು ಮಾತ್ರ. ಇವರು ಐದೈದು ವರ್ಷ ಅಧಿಕಾರದಲ್ಲಿ ಇದ್ದರಲ್ಲಾ, ಏನೇನು ಸಾಧನೆ ಮಾಡಿದರು ಎಂದು ಹೇಳಲು ಬಹಿರಂಗ ಚರ್ಚೆಗೆ ಬರಲಿ ಎಂದು ಅವರು ನೇರ ಸವಾಲು ಒಡ್ಡಿದರು.

ಜಮೀರ್‌ ಹರಕೆಯ ಕುರಿ ಎಂದಿದ್ದ ಸಿದ್ದರಾಮಯ್ಯ!:
2004ರಲ್ಲಿ ಎಸ್.ಎಂ.ಕೃಷ್ಣ ಅವರು ರಾಜೀನಾಮೆ ನೀಡಿದ ನಂತರ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್‌ ನೀಡಿತು. ನಾವೇನು ಈಗ ಹೊಸದಾಗಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ಕೊಟ್ಟಿದ್ದಲ್ಲ. ಮೊದಲಿನಿಂದಲೂ ಕೊಡುತ್ತಾ ಬಂದಿದ್ದೇವೆ. ಆಗ ಅದೇ ಅಭ್ಯರ್ಥಿ ಬಗ್ಗೆ ಮಾತನಾಡಿದ್ದ ಇದೇ ಸಿದ್ದರಾಮಯ್ಯ ಚಾಮರಾಜಪೇಟೆ ಕ್ಷೇತ್ರದಲ್ಲಿ ʼಹರಕೆಯ ಕುರಿʼಯನ್ನು ತಂದು ನಿಲ್ಲಿಸಿದ್ದಾರೆಂದು ಹೇಳಿದ್ದರು. ಈಗ ಅದೇ ಸಿದ್ದರಾಮಯ್ಯನವರು ಅದೇ ಹರಕೆಯ ಕುರಿಯನ್ನು ತಬ್ಬಿಕೊಂಡಿದ್ದಾರೆ ಎಂದು ಹೆಚ್‌ಡಿಕೆ ಕುಟುಕಿದರು.

ಆವತ್ತು ಅವರು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು ಹಾಗೂ ಉಪ ಮುಖ್ಯಮಂತ್ರಿಯೂ ಆಗಿದ್ದರು. ಕಾಂಗ್ರೆಸ್‌ʼಗೆ ಅನಾನುಕೂಲ ಆಗುತ್ತದೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ಕೊಡಬೇಡಿ ಎಂದು ಆಗಲೇ ಹೇಳಬಹುದಿತ್ತಲ್ಲ. ಆಗ ಹೇಳದೇ ಈಗ ಸಿಂಧಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ನಾವು ಟಿಕೆಟ್‌ ಕೊಟ್ಟರೆ ಟೀಕೆ ಮಾಡುವುದು ಏಕೆ? ಇದು ದ್ವಂದ್ವ ನೀತಿಯಲ್ಲವೇ? ಎಂದು ಮಾಜಿ ಸಿಎಂ ಪ್ರಶ್ನೆ ಮಾಡಿದರು.

ಆವತ್ತು ಬಸ್‌ ನಿಲ್ಲಿಸಿದ್ದೆವು, ಹತ್ತಿಕೊಂಡರು. ಆಮೇಲೆ ಮುಂದಿನ ನಿಲ್ದಾಣದಲ್ಲಿ ಇಳಿದುಹೋದರು ಎಂದು ಇದೇ ವೇಳೆ ಪರೋಕ್ಷವಾಗಿ ಜಮೀರ್‌ ಅಹಮದ್‌ʼಗೆ ಟಾಂಗ್‌ ಕೊಟ್ಟರು ಹೆಚ್‌ಡಿಕೆ.

ಜೆಡಿಎಸ್‌ ಪಕ್ಷ ಮುಗಿದುಹೋಯಿತು ಎಂದು ಪದೇಪದೆ ಹೇಳಿದರೆ ಕೊನೆಗೆ ಮುಗಿದು ಹೋಗುವುದು ಕಾಂಗ್ರೆಸ್‌ ಪಕ್ಷವೇ. ಹಿಂದೆ 2018ರಲ್ಲಿ ಇದೇ ವ್ಯಕ್ತಿ ಅವರಪ್ಪನಾಣೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲ್ಲ ಎಂದರು. ಕೊನೆಗೆ ಏನಾಯಿತು? ಅವರೇ ನಮ್ಮ ಮನೆಗೆ ಬಾಗಿಲಿಗೆ ಬಂದು ನಿಂತುಕೊಂಡರು. ಇದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ಹೆಚ್‌ಡಿಕೆ ಟಾಂಗ್‌ ನೀಡಿದರು.

ಸಾಲ ಮನ್ನಾ ಮಾಡಲು ಸಹಕಾರ ನೀಡಲಿಲ್ಲ. ನಮ್ಮ ಭಾಗ್ಯಗಳು ನಿಲ್ಲಬಾರದು, ಸಾಲ ಮನ್ನಾಕ್ಕೆ ಹಣ ಹೊಂದಿಸಿಕೊಳ್ಳುವುದು ನಿಮಗೆ ಬಿಟ್ಟಿದ್ದು. ರೈತರ ಸಾಲ ನನಗೆ ಸಂಬಂಧವಿಲ್ಲ, ಅದು ನಿಮ್ಮ ಪಕ್ಷದ ಭರವಸೆ ಅಂದ್ರು. ಆದರೆ, ನಾನು ಕೊಟ್ಟ ಮಾತನ್ನು ಉಳಿಸಿಕೊಂಡೆ. ನನ್ನ 37 ಶಾಸಕರ ಬೆಂಬಲದಿಂದ ಅದು ಸಾಧ್ಯವಾಯಿತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸತ್ಯ ಕಹಿಯಾಗಿರುತ್ತದೆ:
ಕುಮಾರಸ್ವಾಮಿ ಅವರು ಎಲ್ಲರದ್ದೂ ಬಿಚ್ಚಡಲಿ ಎಂದು ಕೆಲವರು ಹೇಳುತ್ತಿದ್ದಾರೆ. ಒಂದು ವೇಳೆ ನಾನು ಅವರೆಲ್ಲರ ಜಾತಕ ತೆರೆದಿಟ್ಟರೆ ಅವರು ಹೊರಗೆ ಓಡಾಡೋಕೆ ಸಾಧ್ಯವೇ ಆಗಲ್ಲ. ಸತ್ಯ ಯಾವತ್ತೂ ಕಹಿಯಾಗಿರುತ್ತದೆ ಎಂದ ಅವರು ಎಚ್ಚರಿಕೆ ನೀಡಿದರು.

ನಾನು ನಿನ್ನೆಯೇ ಹೇಳಿದ್ದೇನೆ. ಜನಪರ ವಿಷಯ ಹಾಗೂ ಮಾಡಿರುವ ಸೇವಾ ಕಾರ್ಯಗಳನ್ನು ಇಟ್ಟುಕೊಂಡು ಚುನಾವಣೆ ನಡೆಸೋಣ ಎಂದು ಎಲ್ಲ ಪಕ್ಷಗಳಿಗೂ ಹೇಳಿದ್ದೇನೆ. ಹಾಗಂತ ನಾನು ಅಹಂಭಾವದಿಂದ ಹೇಳಲಾರೆ. ಆದರೆ, ಎಲ್ಲರ ಮನೆ ದೋಸೆ ತೂತೇ ಎನ್ನುವುದನ್ನು ಯಾರು ಮರೆಯಬಾರದು. ಎಚ್ಚರಿಕೆಯಿಂದ ಮಾತನಾಡಿ ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ವೈಯಕ್ತಿಕ ಟೀಕೆ ಜೀರ್ಣಿಸಿಕೊಂಡಿದ್ದೇನೆ:
ನಾನು ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡಿದೆ ಎನ್ನುವ ಕಾರಣಕ್ಕೆ ಕಳೆದ ಒಂದು ವಾರದಿಂದ ಕೆಲವರು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದರು. ಅದನ್ನೆಲ್ಲವನ್ನೂ ಜೀರ್ಣಿಸಿಕೊಂಡಿದ್ದೇನೆ ಹೊರತು ಹೆದರಿಲ್ಲ, ಈಗಲೂ ಹೆದರುವುದಿಲ್ಲ. ಆರ್‌ಎಸ್‌ಎಸ್‌ ಬಗ್ಗೆ ನಾನು ಹೇಳಿರುವುದು ಬರೀ ಆರೋಪವಲ್ಲ, ನನಗೆ ತಿಳಿದಿದ್ದು ಮತ್ತು ಓದಿದ್ದರಿಂದ ಗೊತ್ತಾಗಿದ್ದನ್ನು ಮಾತ್ರ ಹೇಳಿದ್ದೇನೆ. ಕೇವಲ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶಕ್ಕೆ ನಾನು ಸಂಘದ ಬಗ್ಗೆ ಮಾತನಾಡಿಲ್ಲ. ವಿಷಯಾಧಾರಿತವಾಗಿ ಮಾತ್ರ ಚರ್ಚೆ ಮಾಡಿದ್ದೇನೆ. ಆದರೆ, ಕಾಂಗ್ರೆಸ್‌ ಪಕ್ಷದವರು ಮತಕ್ಕಾಗಿ ಮಾತ್ರ ಕೀಳು ಮಟ್ಟದ ಟೀಕೆ ಮಾಡುತ್ತಿದ್ದಾರೆ. ಅದು ಅವರ ಸಂಸ್ಕೃತಿ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಇಬ್ರಾಹಿಂ ಅವರು ಬರ್ತಾರೆ
ಸಿ.ಎಂ. ಇಬ್ರಾಹಿಂ ಅವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಎಲ್ಲರೂ ಹೇಳ್ತದ್ರಲ್ಲ, ಜೆಡಿಎಸ್‌ನಿಂದ ಗುಳೆ ಎದ್ದಿದೆ ಎಂದು. ಈಗ ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಬರಲು ಗುಳೆ ಎದ್ದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾರ್ಮಿಕವಾಗಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: H D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSindhagiSindhagi By-electionState Newsಸಿಂಧಗಿಸಿಂಧಗಿ ಉಪ ಚುನಾವಣೆಹೆಚ್.‌ಡಿ.ಕುಮಾರಸ್ವಾಮಿ
Share197Tweet123Send
Previous Post

`ಸೂಪರ್-30’ ಯೋಜನೆಯಡಿ ಜಿಲ್ಲೆಗೊಂದು ಮಾದರಿ ಎಂಜಿನಿಯರಿಂಗ್ ಕಾಲೇಜು

Next Post

ಗಮನಿಸಿ! ಕುವೆಂಪು ವಿವಿ ಬಳಿ ಲಿಂಕ್ ಲೈನ್ ಕಾಮಗಾರಿ ಹಿನ್ನೆಲೆ ಅ.25ರಂದು ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಕುವೆಂಪು ವಿವಿ ಬಳಿ ಲಿಂಕ್ ಲೈನ್ ಕಾಮಗಾರಿ ಹಿನ್ನೆಲೆ ಅ.25ರಂದು ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

February 26, 2026
ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

February 26, 2026
ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

February 26, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL