Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಭಾರತರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ

February 6, 2022
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಭಾರತರತ್ನ, ಗಾನಕೋಗಿಲೆ, ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್(92 ಅವರು ಇಂದು ವಿಧಿವಶರಾಗಿದ್ದಾರೆ.

ಲತಾ ಮಂಗೇಶ್ಕರ್ ಅವರು ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜ.8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಕೆಲವು ದಿನಗಳ ನಂತರ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಸುಮಾರು 36 ಭಾಷೆಗಳಲ್ಲಿ 50 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿರುವ ಇವರು, ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲ್ಪಡುತ್ತಿದ್ದರು.ಇವರ ಸಾಧನೆಗೆ ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ.

ಅವರು ಹಾಡಿದ ’ಲಗ್ ಜಾ ಗಲೇ’, ’ಯೇ ಗಲಿಯಾನ್ ಯೇ ಚೌಬಾರಾ’, ’ರ್ಪ್ಯಾ ಕಿಯಾ ತೊ ಡರ್ನಾ ಕ್ಯಾ’, ’ಬಹೋನ್ ಮೇ ಚಲೇ ಆವೋ’, ’ರ್ವೀ ಜರಾ’ದ ’ತೇರೆ ಲಿಯೇ’ ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ.

ಲತಾ ಅವರು ಬಹುಶಃ ಹಿಂದಿಯ ಪ್ರತಿಯೊಬ್ಬ ಸಂಗೀತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ. ಇದಕ್ಕೆ ಒಂದೇ ಅಪವಾದವೆಂದರೆ ಓ.ಪಿ. ನಯ್ಯರ್. ಅದೇ ರೀತಿ ಅವರೊಂದಿಗೆ ಹಿಂದಿಯ ಪ್ರತಿಯೊಬ್ಬ ಗಾಯಕನ ಜೊತೆಯೂ ಹಾಡಿದ್ದಾರೆ. ಹಿಂದಿ ಚಿತ್ರರಂಗದ ಬಹುತೇಕ ನಟಿಯಾರಿಗಾಗಿ ಲತಾ ಹಾಡಿದ್ದಾರೆ. ಐವತ್ತರ ದಶಕದಲ್ಲಿ ಮೇಲೇರಿದ ಅವರ ಕೀರ್ತಿ ಪತಾಕೆ ಕೆಳಕ್ಕೆ ಇಳಿಯಲೇ ಇಲ್ಲ. ಗಜಲ್, ಪ್ರೇಮಗೀತೆ, ಭಜನೆ, ಜನಪದ ಗೀತೆ, ಯುಗಳಗೀತೆ, ಕ್ಲಬ್ ಸಾಂಗ್ … ಹೀಗೆ ಪ್ರತಿಯೊಂದೂ ಬಗೆಯ ಹಾಡುಗಳನ್ನು ಲತಾ ಹಾಡಿದ್ದಾರೆ. ಹಿಂದಿಯಲ್ಲದೆ ಭಾರತದ ಪ್ರತಿಯೊಂದು ಭಾಷೆಯಲ್ಲೂ ಅವರು ಹಾಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರನ್ನು “ಲತಾ ದೀದಿ” ಎಂದೇ ಕರೆಯುತ್ತಾರೆ. ಲತಾ ಅವರು ವಿವಾಹವಾಗಲಿಲ್ಲ. ತಮ್ಮ ಜೀವನವನ್ನು ಸಂಗೀತಕ್ಕೇ ಮುಡಿಪಾಗಿಟ್ಟರು. ಲತಾ ಅವರ ಕುಟುಂಬದಲ್ಲಿ ಪ್ರತಿಯೊಬ್ಬರೂ ಸಂಗೀತ ಕ್ಷೇತ್ರದಲ್ಲಿರುವುದು ಒಂದು ವಿಶೇಷ. ಆಶಾ ಮತ್ತು ಲತಾ, ಉಷಾ ಮತ್ತು ಲತಾ, ಮೀನಾ ಮತ್ತು ಲತಾ ಹಾಡಿರುವ ಕೆಲವು ಯುಗಳಗೀತೆಗಳೂ ಪ್ರಸಿದ್ಧವಾಗಿವೆ. ತಮ್ಮ ಹೃದಯನಾಥ್ ಮಂಗೇಷ್ಕರ್ ಸಂಗೀತ ನಿರ್ದೇಶನದಲ್ಲಿ ಲತಾ ಅನೇಕ ಗೀತೆಗಳನ್ನು ಹಾಡಿದ್ದಾರೆ – ಉದಾ. ಮೀರಾ ಭಜನೆಗಳು. ಲತಾ ಅವರು “ಲೇಕಿನ್” ಎಂಬ ಕಲಾತ್ಮಕ ಚಿತ್ರವನ್ನು ನಿರ್ಮಿಸಿದರು.ಚೀನಾ-ಭಾರತ ಯುದ್ಧದಲ್ಲಿ ಭಾರತದ ಅನೇಕ ಸೈನಿಕರು ತಮ್ಮ ಪ್ರಾಣ ತೆತ್ತರು. ಇವರ ನೆನಪಿನಲ್ಲಿ ಒಂದು ವಿಶೇಷಗೀತೆಯನ್ನು ಪ್ರದೀಪ್ ಎಂಬ ಕವಿ ರಚಿಸಿದರು. ಈ ಗೀತೆಯನ್ನು ಸಿ. ರಾಮಚಂದ್ರ ಅವರ ಸಂಗೀತ ನಿರ್ದೇಶನದಲ್ಲಿ ಲತಾ ಅವರು 1963 ಜನವರಿ 27ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಹಾಡಿದರು. “ಐ ಮೇರೆ ವತನ್ ಕೇ ಲೋಗೋಂ, ಜರಾ ಆಂಖ್ ಮೇ ಭರಲೋ ಪಾನಿ … ” ಎಂದು ಪ್ರಾರಂಭವಾಗುವ ಗೀತೆಯನ್ನು ಕೇಳಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ಕಣ್ಣಿನಲ್ಲಿ ನೀರಾಡಿತು. ಅವರು ಲತಾ ಮಂಗೇಶ್ಕರ್ ಅವರೊಂದಿಗೆ ಕಾರ್ಯಕ್ರಮದ ನಂತರ ಮಾತಾಡಿ “ನೀನು ನನ್ನನ್ನು ಅಳಿಸಿಬಿಟ್ಟೆ,” ಎಂದು ಭಾವುಕರಾಗಿ ಹೇಳಿದರಂತೆ. ಈ ಹಾಡನ್ನು ನವದೆಹಲಿಯಲ್ಲಿ ಪ್ರತಿ ಜನವರಿ 26ರ ಸಮಾರಂಭದಲ್ಲಿ ಕೇಳಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BollywoodIndian Playback SingerLata Mangeshkarlegendary singerMumbaiPlay Back Singerಭಾರತರತ್ನಲತಾ ಮಂಗೇಶ್ಕರ್ಹಿನ್ನೆಲೆ ಗಾಯಕಿ
Previous Post

ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ

Next Post

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!