ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯಲ್ಲಿ ಇಂದು ರಾಜ್ಯ ಸರ್ಕಾರ ರಚಿಸಿರುವ SIT ತನಿಖೆ ವ್ಯಾಪ್ತಿಗೆ ಸೌಜನ್ಯ ಪ್ರಕರಣ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ಈಗ ರಚಿಸಲಾಗಿರುವ SIT, ಸರಣಿ ಅಸಹಜ ಸಾವಿನ ಶವ ಹೂತಿಟ್ಟ ಪ್ರಕರಣವನ್ನು ಮಾತ್ರ ತನಿಖೆ ನಡೆಸಲಿದೆ ಎಂದಿದ್ದಾರೆ.
ಎಸ್ಐಟಿ ಅವರು ಕೆಲಸ ಪ್ರಾರಂಭ ಮಾಡುತ್ತಾರೆ. ಒತ್ತಡದ ಪ್ರಶ್ನೆ ಇಲ್ಲ. ಒತ್ತಡಕ್ಕೆ ಮಣಿದು ಮಾಡುವ ಕೆಲಸ ಅಲ್ಲ. ಅಲ್ಲಿನ ಸಾಧಕ ಬಾಧಕ ವಸ್ತು ಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತದೆ. ನಾವು ಪ್ರಾಥಮಿಕವಾಗಿ ತನಿಖೆ ಮಾಡಿ ಸ್ಟೇಷನ್ ಮಟ್ಟದಲ್ಲಿ ಅಂತ ಅವರಿಗೆ ಹೇಳಿದ್ದೆವು. ಜೊತೆಗೆ ಇನ್ನೂ ಹೆಚ್ಚಿನ ರೀತಿಯ ತನಿಖೆ ಆಗಬೇಕು ಎಂಬುದು ಹೆಚ್ಚಿನ ರೀತಿಯ ಅಭಿಪ್ರಾಯಗಳು ಸರ್ಕಾರ ಇದರಲ್ಲಿ ಮುಚ್ಚಿ ಇಡುವಂತದ್ದು ಏನೂ ಇಲ್ಲ ಎಂದಿದ್ದಾರೆ.
ಸ್ವಲ್ಪ ಯೋಚನೆ ಮಾಡಿ ನಾವು ತೀರ್ಮಾನ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನು ಬರುತ್ತದೆ ಅದನ್ನು ಕಾದು ನೋಡೋಣ. ಇದು ಸಣ್ಣ ವಿಚಾರ ಅಂತ ನಾವು ಪರಿಗಣಿಸಿಲ್ಲ ಸ್ಟೇಷನ್ ಮಟ್ಟದಲ್ಲಿ ಅವರು ಕಂಪ್ಲೆಂಟ್ ಕೊಟ್ಟಾಗ ಎಫ್ಐಆರ್ ಹಾಕಿ ಅವರು ತನಿಖೆ ಮಾಡ್ತಾರೆ. ಅದು ಹೆಚ್ಚು ಹೆಚ್ಚು ಬೆಳೆದಾಗ ತನಿಖೆ ತೀವ್ರತೆಯನ್ನು ಪಡೆಯುತ್ತೆ. ಹಾಗಾಗಿ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಎಸ್ಐಟಿ ರಚನೆ ಮಾಡಿದ್ದೇವೆ ಎಂದಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಸರಣಿ ಹತ್ಯೆ ಹಾಗೂ ಶವಗಳ ಸಂಸ್ಕಾರ ಆರೋಪದ ತನಿಖೆ ನಡೆಸಲು SIT ರಚನೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಎಸ್ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ. ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post