Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಅವ್ಯವಸ್ಥೆಯ ಆಗರವಾದ ತಾಲೂಕು ಮಟ್ಟದ ದಸರಾ ಆಯ್ಕೆ ಕ್ರೀಡಾಕೂಟ

ಕನಿಷ್ಟ ವ್ಯವಸ್ಥೆಗಳಿಲ್ಲದೆ ಪರದಾಡಿದ ಕ್ರೀಡಾಪಟುಗಳು | ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸದ ಆಯೋಜಕರು

September 4, 2023
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಆಯ್ಕೆಯ ಕ್ರೀಡಾಕೂಟ Dasara Sports Event ಅವ್ಯವಸ್ಥೆಯ ಆಗರವಾಗಿತ್ತು.

ಸ್ವಚ್ಛತೆಯ ಕೊರತೆ, ಕುಡಿಯುವ ನೀರಿಗೆ ಪರದಾಟ, ವಿದ್ಯಾರ್ಥಿನಿಯರಿಗೆ ಬಟ್ಟೆ ಬದಲಿಸಲು ಸಹ ಕೊಠಡಿ ಇರದೇ ಮುಜುಗರ ಅನುಭವಿಸುವ ಸ್ಥಿತಿ, ಪ್ರಥಮ ಚಿಕಿತ್ಸೆಯ ಸೌಲಭ್ಯವೂ ಇರಲಿಲ್ಲ. ಇನ್ನೂ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳು ಅಂಕಣಕ್ಕೆ ಇಳಿಯಲು ಸಹ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿತ್ತು. ತಾಲೂಕಿನ ವಿವಿಧ ಭಾಗಗಳಿಂದ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳೇ ಪಾಲ್ಗೊಂಡಿರುವುದು ಕಂಡು ಬಂದಿತು.

ಕ್ರೀಡಾಂಗಣದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಕ್ರೀಡಾಂಗಣದಲ್ಲಿ ತೆಗ್ಗು ಉಬ್ಬುಗಳಿದ್ದು ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗುತ್ತಿಲ್ಲ. ಅನೇಕ ಕ್ರೀಡಾಪಟುಗಳು ಗಾಯಗೊಂಡಿದ್ದಾರೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕ್ರೀಡಾಂಗಣ ಜಾನುವಾರುಗಳನ್ನು ಮೇಯಿಸುವ ಮೈದಾನದಂತಿದೆ. ಯಾವುದೇ ಕ್ರೀಡಾಂಗಣದ ಅಂಕಣಗಳು ಸಮರ್ಪಕವಾಗಿಲ್ಲ. ಉತ್ತಮ ಕ್ರೀಡಾಂಗಣ ಸೌಲಭ್ಯ ಕಲ್ಪಿಸಿದರೆ ತಾಲೂಕಿನಲ್ಲಿಯೂ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಾಗಿ ಹೊರ ಹೊಮ್ಮಲಿದ್ದಾರೆ. ಸಂಬಂಧ ಪಟ್ಟ ಇಲಾಖೆಯವರು ಕ್ರೀಡಾಂಗಣಕ್ಕೆ ಸೂಕ್ತ ಸೌಲಭ್ಯ ಒದಗಿಸಬೇಕು.
ಪ್ರಶಾಂತ್ ಮತ್ತು ಪ್ರಮೋದ್, ಕ್ರೀಡಾಪಟುಗಳು

ಕ್ರೀಡಾಂಗಣದಲ್ಲಿ ಸ್ವಚ್ಛತೆ ಕೊರತೆ ಎದ್ದು ಕಾಣುತ್ತಿದೆ. ಸಮರ್ಪಕ ಶೌಚಗೃಹ ವ್ಯವಸ್ಥೆ ಇಲ್ಲ. ಕ್ರೀಡಾಂಗಣದಲ್ಲಿ ಕಲ್ಲುಗಳು ತುಂಬಿ ಹೋಗಿದೆ. ವಿದ್ಯಾರ್ಥಿಯರು ಗಾಯಗೊಂಡರೆ ಪ್ರಾಥಮಿಕ ಚಿಕಿತ್ಸಾ ಸೌಲಭ್ಯವಿಲ್ಲದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತ ಸಂದರ್ಭವಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ. ರಾಜ್ಯದ ವಿವಿಧಡೆ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿದ್ದೇನೆ. ಆದರೆ, ಹೋಲಿಕೆ ಮಾಡಿದಾಗ ಕ್ರೀಡಾಕೂಟದ ವ್ಯವಸ್ಥೆ ನೋಡಿದರೆ ಬೇಸರ ಬರುತ್ತದೆ. ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವ ಬದಲು ಆಯೋಜಿಸದ್ದರೆ ಒಳಿತು.
ಪ್ರೀತಿ, ರಾಷ್ಟ್ರ ಮಟ್ಟದ ಕ್ರೀಡಾಪಟು

ಕ್ರೀಡಾಂಗಣದಲ್ಲಿ ಆಯೋಜಕರು ಕ್ರೀಡಾಕೂಟ ಆಯೋಜಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕನಿಷ್ಟ ಗಮನವನ್ನು ನೀಡದೇ ಇರುವುದು ಕಂಡು ಬಂದಿತು. ಕ್ರೀಡಾಕೂಟಗಳಲ್ಲಿ ಅನೇಕರು ಬಿದ್ದು ಎದ್ದು ಗಾಯಗೊಂಡರೆ ಪ್ರಥಮ ಚಿಕಿತ್ಸೆ ನೀಡುವ ವ್ಯವಸ್ಥೆ ಸಹ ಇರಲಿಲ್ಲ. ಕ್ರೀಡಾಕೂಟಗಳನ್ನು ಆಯೋಜಿಸುವಾಗ ಅಂಬ್ಯುಲೆನ್ಸ್ ವ್ಯವಸ್ಥೆ ಇರಬೇಕು ಎನ್ನುವ ಬಗ್ಗೆ ಗಮನ ನೀಡದೇ ಸಮೀಪದಲ್ಲಿ ಸರ್ಕಾರಿ ಆಸ್ಪತ್ರೆ ಇದೆ ಎಂದು ಆಯೋಕರು ಬೇಜವಾಬ್ದಾರಿ ತನದಿಂದ ವರ್ತಿಸಿದರು ಎಂಬುದು ಕ್ರೀಡಾಪಟುಗಳ ಆರೋಪ.

Also read: ಭರಮಸಾಗರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಸಂಪನ್ನ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಖೋಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್ ಪಂದ್ಯಾವಳಿಗಳನ್ನು ಯುವಕ-ಯುವತಿಯರಿಗೆ ಆಯೋಜಿಸಲಾಗಿತ್ತು. ಆದರೆ, ಅಥ್ಲೆಟಿಕ್ಸ್ ಕ್ರೀಡಾಪಟುಗಳು ರನ್ನಿಂಗ್ ಟ್ರ್ಯಾಕ್ ಸಮರ್ಪಕವಾಗಿಲ್ಲದೇ ಅನೇಕರು ಗಾಯಗೊಂಡರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳು ಸಹ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗದೆ ಬೇಸರ ವ್ಯಕ್ತಪಡಿಸುವ ಸ್ಥಿತಿ ಎದುರಾಯಿತು. ಇನ್ನು ಖೋಖೋ, ಕಬಡ್ಡಿ ಅಂಕಣಗಳಂತೂ ಕ್ರೀಡಾಪಟುಗಳಿಗೆ ವ್ಯತಿರಿಕ್ತ ಪರಿಣಾಮ ಬೀರಿತು. ಎಲ್ಲೆಂದರಲ್ಲಿ ಬೆಳೆದ ಹುಲ್ಲುಗಳು, ಕಲ್ಲು ಮಿಶ್ರಿತ (ಗೊಚ್ಚು ಕಲ್ಲು) ಅಂಕಣದಿಂದಾಗಿ ಕ್ರೀಡಾಪಟುಗಳಿಗೆ ಸ್ಪರ್ಧೆಯ ಹುಮ್ಮಸ್ಸು ಮೊಟಕುವಾಗುವಂತೆ ಮಾಡಿತು ಎಂಬುದು ಕ್ರೀಡಾಭಿಮಾನಿಗಳ ಆರೋಪವಾಗಿದೆ.
ಕ್ರೀಡಾಂಗಣದಲ್ಲಿ ಸಮರ್ಪಕ ಶೌಚಗೃಹ ಇಲ್ಲದೇ ವಿದ್ಯಾರ್ಥಿನಿಯರು ಮತ್ತು ಯುವತಿಯರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯೂ ಸಹ ಇಲ್ಲದಿರುವುದು ಕಂಡು ಬಂದಿತು. ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ಆಯೋಜಕರಿಗೆ ಅನುಕೂಲ ಸಿಂಧುವಾಗಿತ್ತು. ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡಿರುವ ಬಗ್ಗೆ ಕ್ರೀಡಾಪಟುಗಳು ಬೇಸರ ವ್ಯಕ್ತಪಡಿಸಿದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಭರಮಸಾಗರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಸಂಪನ್ನ

Next Post

ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಶಿಬಿರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!