ಕಲ್ಪ ಮೀಡಿಯಾ ಹೌಸ್ | ಸೊರಬ |
ಬಿರುಸಿನ ಗಾಳಿ ಮಳೆಗೆ ಅಂಗನವಾಡಿ ಕೇಂದ್ರದ ಮೇಲೆ ಮರವೊಂದು ಉರುಳಿರುವ ಘಟನೆ ತಾಲೂಕಿನ ಬಾಡದಬೈಲು ಗ್ರಾಮದಲ್ಲಿ ಸೋಮವಾರ ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ.
ಅಂಗನವಾಡಿ ಕೇಂದ್ರ ತೆರದಿದ್ದ ವೇಳೆಯಲ್ಲಿಯೇ ಮರ ಉರುಳಿದೆ. ಕೇಂದ್ರದಲ್ಲಿ 9 ಮಕ್ಕಳಿದ್ದರು. ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಆದರೆ, ಕೇಂದ್ರದ ಅಡುಗೆ ಕೋಣೆಯ 3 ಪಕಾಸಿ, ಹಂಚುಗಳಿಗೆ ಹಾನಿಯಾಗಿದೆ.
ಸ್ಥಳಕ್ಕೆ ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಉಪಾಧ್ಯಕ್ಷೆ ಲಕ್ಷ್ಮಿ ಚಂದ್ರಪ್ಪ, ಸದಸ್ಯರಾದ ರೇಣುಕಾ ಪ್ರಸಾದ್, ತಿರುಪತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
Also read: ರಾಷ್ಟ್ರಧ್ವಜದ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ವಿಷಾಧದ ಸಂಗತಿ: ಶಾಸಕ ಈಶ್ವರಪ್ಪ
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post