No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Monday, March 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅರಣ್ಯಭೂಮಿ ಕಬಳಿಕೆ ತಡೆಯುವಂತೆ ಆಗ್ರಹಿಸಿ ಸಾಗರ ಎಸಿಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2023
in ಸೊರಬ
0
ಅರಣ್ಯಭೂಮಿ ಕಬಳಿಕೆ ತಡೆಯುವಂತೆ ಆಗ್ರಹಿಸಿ ಸಾಗರ ಎಸಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಪಶ್ಚಿಮಘಟ್ಟದ ಹೃದಯಭಾಗ ಆಗುಂಬೆ ಹತ್ತಿರ ಕಂದಾಯ ಅರಣ್ಯ ಭೂಮಿ ಕಬಳಿಕೆಗೆ ತಯಾರಿ ನಡೆದಿದೆ, ಖಾಸಗಿಯವರು ಕಟ್ಟಡ ನಿರ್ಮಾಣ, ಅರಣ್ಯ ಕಟಾವು ಮಾಡಿ ತಂತಿ ಬೇಲಿ ಕಾಮಗಾರಿ ನಡೆಸಿದ್ದಾರೆ. ವೃಕ್ಷಲಕ್ಷ ಆಂದೋಲನ ಈ ದುಷ್ಕೃತ್ಯವನ್ನು ಖಂಡಿಸುತ್ತದೆ ಎಂದು ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ ಹೇಳಿದರು.

ಸಾಗರದ ಎಸಿ ಕಚೇರಿಯಲ್ಲಿ ಅರಣ್ಯಭೂಮಿ ಕಬಳಿಕೆ ತಡೆಯುವಂತೆ ಆಗ್ರಹಿಸಿ ಮನವಿ ನೀಡಿದರು.
600 ಎಕರೆ ಅರಣ್ಯ ಭೂಮಿ ಮಾರಾಟಕ್ಕೆ ಹುನ್ನಾರ: ಶಿವಮೊಗ್ಗಾ ಜಿಲ್ಲೆ ಆಗುಂಬೆ- ಮಾಸ್ತಿ ಕಟ್ಟೆ ಮಧ್ಯೆ ಕಟ್ಟೆಕೊಪ್ಪ ಗ್ರಾಮದ 600 ಎಕರೆ ದಟ್ಟಾರಣ್ಯ ಖಾಸಗಿಯವರ ಪಾಲಾಗಿ ವಿನಾಶದ ಅಂಚಿಗೆ ಸರಿಯುತ್ತಿದೆ. ಅರಣ್ಯ ಇಲಾಖೆ ಮೇಗರವಳ್ಳಿ ವ್ಯಾಪ್ತಿಯಲ್ಲಿ ಇರುವ ಕಟ್ಟೆಕೊಪ್ಪದ ಅರಣ್ಯ ಪ್ರದೇಶ ಹೊಸನಗರ ತಾ. ನಗರ ಹೋಬಳಿ ಯಡೂರು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿದೆ. ಕಟ್ಟೆಕೊಪ್ಪ ಗ್ರಾಮ ಸರ್ವೆ ನಂ. 98 ರಲ್ಲಿ ಸ.ನಂ. 72 ರಲ್ಲಿ ಸ.ನಂ 115 ನಲ್ಲಿ ಕಂದಾಯ ಅರಣ್ಯ ಪ್ರದೇಶವಿದೆ. ಈ ಭೂಮಿ ನಾಲ್ಕಾಣಿ ಕಂದಾಯ ಭೂಮಿ ಎಂದು ಹೆಸರು ಪಡೆದಿದೆ. 2018-19 ರಲ್ಲಿ ಇವುಗಳನ್ನು ಡೀಮ್ ಅರಣ್ಯ ಪಟ್ಟಗೆ ಸೇರ್ಪಡೆ ಮಾಡಲಾಗಿದೆ. ಈ ಗ್ರಾಮ ಅರಣ್ಯ ಪ್ರದೇಶ ನಿತ್ಯ ಹರಿದ್ವರ್ಣದ ಅರಣ್ಯ ಎನಿಸಿಕೊಂಡಿತ್ತು. ವರಾಹಿ ಆಣಿಕಟ್ಟು ಮತ್ತು ಮಾಣಿ ಅಣಿಕಟ್ಟು ಹಿನ್ನೀರು ಪ್ರದೇಶಕ್ಕೆ ತಾಗಿಕೊಂಡಿದೆ. ಶರಾವತಿ ಅಭಯಾರಣ್ಯ, ಸೋಮೇಶ್ವರ ಅಭಯಾರಣ್ಯ, ಅಂಬಾರ ಗುಡ್ಡ ಜೀವ ವೈವಿಧ್ಯ ತಾಣ, ಕೊಡಚಾದ್ರಿ, ಆಗುಂಬೆ ಈ ಎಲ್ಲ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಧ್ಯೆ ಇರುವ ಪಶ್ಚಿಮ ಘಟ್ಟದ ಹೃದಯಭಾಗದಲ್ಲಿರುವ ಕಟ್ಟೆಕೊಪ್ಪ ಗ್ರಾಮದ 600 ಎಕರೆ ಅರಣ್ಯ ಖಾಸಗಿಯವರ ಕೈಯಲ್ಲಿ ಸಿಲುಕಿದೆ. ಈಗಾಗಲೇ ಅಲ್ಲಿ 60ಎಕರೆ ಪ್ರದೇಶ ಧ್ವಂಸವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅರಣ್ಯದಲ್ಲಿ ಕಾಮಗಾರಿ, ಭೂದಾಖಲೆ ತಿದ್ದುಪಡಿ : 2ವರ್ಷ ಹಿಂದೇ ಮಾಡಿರುವ ಮನವಿಗೆ ಕ್ರಮ ಇಲ್ಲ !
ಇಲ್ಲಿ ಕಟ್ಟಡಗಳ ನಿರ್ಮಾಣವಾಗಿದೆ. ಅರಣ್ಯ ಭೂಮಿಗೆ ಖಾಸಗಿಯವರು ತಂತಿ ಬೇಲಿ. ಗೇಟ್ಗಳನ್ನು ಅಳವಡಿಸಿದ್ದಾರೆ. ಬೆಂಗಳೂರಿನ ಭೂಮಾಫಿಯಾ ಪ್ರವೇಶವಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಅಕ್ರಮ ಭೂ ದಾಖಲೆ ತಿದ್ದುಪಡಿಗಳು ನಡೆಯುತ್ತಿವೆ ಎಂದು ಸುತ್ತಲಿನ ಹಳ್ಳಿಗಳ ರೈತರು ಹೇಳುತ್ತಾರೆ. ಎಕ್ಕದ್ದೆ, ಕೈನಲ್ಲಿ ದಿಂಡ, ದೊಡ್ಡಿನಮನೆ, ಕರುಣಾಪುರ ಗ್ರಾಮಗಳ ರೈತರು 2020-21 ರಲ್ಲಿ ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಜಿಲ್ಲಾಡಳಿತದ ಗಮನ ಸೆಳೆಯಲಾಗಿತ್ತು. ಆ ಹಂತದಲ್ಲೇ ಕ್ರಮ ಕೈಗೊಂಡಿದ್ದರೆ ನೂರಾರು
ಎಕರೆ ಅರಣ್ಯ ನಾಶವಾಗುವುದು ನಿಲ್ಲುತ್ತಿತ್ತು ಎಂದು ಸುತ್ತಲಿನ ಹಳ್ಳಿಗಳ ಜನರು ಅಭಿಪ್ರಾಯ ಪಡುತ್ತಾರೆ.

Also read: ಬಂದೂಕಿನಿಂದ ಗುಂಡು ಹಾರಿಸಿ ಮಾವನನ್ನೇ ಕೊಂದ ಸೊಸೆ

ಮನವಿ ಆಗ್ರಹ : ಜಿಲ್ಲಾಡಳಿತ, ಜಿಲ್ಲಾ ಅರಣ್ಯ ಇಲಾಖೆ ತುರ್ತಾಗಿ ಸ್ಥಳ ಪರಿಶೀಲನೆ ಮಾಡಿ 600 ಎಕರೆ ಡೀಮ್ ಅರಣ್ಯ, 25 ಲಕ್ಷ ಗಿಡಮರಗಳು ನಾಶವಾಗದಂತೆ ರಕ್ಷಣೆ ನೀಡಬೇಕು. ಕಂದಾಯ ಕಾಗದ ಪತ್ರ ತಿದ್ದುಪಡಿ ಅಕ್ರಮ ಮಾಡದಂತೆ ತಡೆ ಹಾಕಬೇಕು. ಯಾವುದೇ ಮರ ಗಿಡ ಕಟಾವಿಗೆ ಹಾಗೂ ಕಾಮಗಾರಿಗೆ ಅವಕಾಶ ನೀಡಬಾರದು ಎಂದು ಗ್ರಾಮಗಳ ಜನ ಜಿಲ್ಲಾಧಿಕಾರಿಗಳಿಗೆ
ಮನವಿ ಮಾಡಿದ್ದಾರೆ. ಕಂದಾಯ ಕಾಯಿದೆ, ಅರಣ್ಯ ಕಾಯಿದೆ, ಜೀವ ವೈವಿಧ್ಯ ಕಾಯಿದೆ ಜಾರಿ ಮಾಡಿ ಸೂಕ್ಷ್ಮ ಅರಣ್ಯಗಳ ರಕ್ಷಣೆ ಮಾಡಬೇಕು ಎಂದಿದ್ದಾರೆ.
ನೇರಳೆ, ಧೂಪ, ತೇಗ, ಹೊನ್ನೆ, ಹಲಸು, ಬೆಲ್ಲವಾರ, ಗುಳಮಾವು, ಬಚ್ಚಾಣಿ, ಭೋಗೆ, ಹೈಗ, ಹುಲುಚಪ್ಪ, ಹೆಬ್ಬಲಸು, ಹರಳು, ಗುರಿಗೆ, ತಾರೆ, ಸುರಹೊನ್ನೆ, ನೆಟ್ಟುಗಾರ, ಬೈನೆ, ಸಂಪಿಗೆ, ಗಣಪೆ, ಬೂರಿ. ಘನತೆ, ದೇವದಾರು, ಕೆಂದಲ, ನಂದಿ, ರಾಮಪತ್ರೆ, ಮಂಗಪ್ಪ, ಇಪ್ಪ ಇತ್ಯಾದಿ ವಿನಾಶದ ಅಂಚಿನ ನೂರಾರು ವೃಕ್ಷ ವೈವಿಧ್ಯ ಇಲ್ಲದೆ. IUCN Red list ನಲ್ಲಿ ಬರುತ್ತವೆ. ಈ ಪ್ರದೇಶ 1940-50 ರಲ್ಲಿ ಕಾನು ಅರಣ್ಯ ಆಗಿತ್ತು . ಆನಂತರ ಖಾಸಗಿಯವರು ಭೂ ದಾಖಲೆ ತಿದ್ದುಪಡಿ ಮಾಡಿಸಿಕೊಂಡಿರಬಹುದು ಎಂದು ಸ್ಥಳೀಯರು ಹೇಳುತ್ತಾರೆ. ಇಲ್ಲಿ ಕಂದಾಯ ಇಲಾಖೆ ಅರಣ್ಯ ಇಲಾಖೆಯ ಜಂಟಿ ಪರಿಶೀಲನೆಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕು. ಭೂದಾಖಲೆ
ಆರ್.ಆರ್.56ನಲ್ಲಿ ಇಬ್ಬರು ಖಾಸಗಿಯವರಿಗೆ ತಲಾ 300 ಎಕರೆ ಭೂಮಿ ಹೇಗೆ ಸರ್ಕಾರ ನೀಡಲು ಸಾಧ್ಯ. ಈ ಬಗ್ಗೆ ಯಾವ ಉಲ್ಲೇಖವೂ ಇಲ್ಲ ಎಂದು ಭೂ ದಾಖಲೆ ತಜ್ಞರು ಅಭಿಪ್ರಾಯ ನೀಡುತ್ತಾರೆ. ಈ ಪ್ರದೇಶವನ್ನು ಜಿಲ್ಲಾ ಅರಣ್ಯ ಎಂದು ಸರ್ಕಾರ ಘೋಷಿಸಬಹುದು. ಜೀವವೈವಿಧ್ಯ ತಾಣಪಟ್ಟಿಗೆ ಸೇರ್ಪಡೆ ಮಾಡಬಹುದು ಎಂದು ಜೀವವೈವಿಧ್ಯ ಮಂಡಳಿ ಸದಸ್ಯ ಕೆ. ವೆಂಕಟೇಶ ಹೇಳಿದ್ದಾರೆ.

ಇಂಥ 10-15 ಪ್ರಕರಣಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇವೆ. ಸರ್ಕಾರ ಪಶ್ಚಿಮ ಘಟ್ಟದ ಇಂಥ ಸೂಕ್ಷ್ಮ ಅರಣ್ಯಗಳ ಸಂರಕ್ಷಣೆ, ನೀತಿ, ನಿರೂಪಣೆಗೆ ಅಧಿಕಾರಿಗಳು ತಜ್ಞರ ಸಮಿತಿ ನಿಯುಕ್ತಿ ಮಾಡಿ ವರದಿ ಆಧಾರದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಕಾರ್ಯಕರ್ತ ಶ್ರೀಪಾದ ಬಿಚ್ಚುಗತ್ತಿ ಹೇಳಿದ್ದಾರೆ.

ಈ ವೇಳೆ ವೃಕ್ಷಲಕ್ಷ ಆಂದೋಲನದ ಆನೆಗುಳಿ ಸುಬ್ರಾವ್ ಮೊದಲಾದವರಿದ್ದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share203Tweet123Send
Previous Post

ಬಂದೂಕಿನಿಂದ ಗುಂಡು ಹಾರಿಸಿ ಮಾವನನ್ನೇ ಕೊಂದ ಸೊಸೆ

Next Post

ಸರ್ಕಾರಿ ಶೌಚಾಲಯ ಕುಸಿದು 5 ವರ್ಷದ ಬಾಲಕ ಜೀವಂತ ಸಮಾಧಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಸರ್ಕಾರಿ ಶೌಚಾಲಯ ಕುಸಿದು 5 ವರ್ಷದ ಬಾಲಕ ಜೀವಂತ ಸಮಾಧಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL