ಕಲ್ಪ ಮೀಡಿಯಾ ಹೌಸ್ | ಸೊರಬ |
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಆಗಮಿಸಿದ ಸಿಆರ್ಪಿಎಫ್ ಪಡೆಯಿಂದ ಪಥಸಂಚಲನ ನಡೆಸಲಾಯಿತು.
ಪಟ್ಟಣದ ಶ್ರೀ ರಂಗನಾಥ ದೇವಸ್ಥಾನ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ಸಾಗರ ರಸ್ತೆ, ಪುನಃ, ಖಾಸಗಿ ಬಸ್ ನಿಲ್ದಾಣ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಥಸಂಚನ ನಡೆಸಿ ನಂತರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ತಲುಪಿತು.
ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಈಗಾಗಲೇ 80 ಸಿಬ್ಬಂದಿಯನ್ನು ಒಳಗೊಂಡ ಸಿಆರ್ಪಿಎಫ್ ಪಡೆ ಆಗಮಿಸಿದೆ.
ಡಿವೈಎಸ್ಪಿ ಡಿ.ಟಿ. ಪ್ರಭು ನೇತೃತ್ವದಲ್ಲಿ ಸಿಪಿಐ ಭಾಗ್ಯವತಿ, ಪಿಎಸ್ಐ ಎಚ್.ಎನ್. ನಾಗರಾಜ್, ಆನವಟ್ಟಿ ಪಿಎಸ್ಐ ಶಿವಪ್ರಸಾದ್, ಸೊರಬ ಕ್ರೈಂ ಪಿಎಸ್ಐ ಮಾಳಪ್ಪ ವೈ. ಚಿಪ್ಪಲಕಟ್ಟಿ, ಸಿಆರ್ಪಿಎಫ್ ಅಸಿಸ್ಟೆಂಟ್ ಕಮಾಂಡೋ ಎನ್. ನೀಲಪ್ಪಯ್ಯನ್ ಸೇರಿದಂತೆ ಪೊಲೀಸ್ ಠಾಣೆಯ 20 ಸಿಬ್ಬಂದಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post