ಕಲ್ಪ ಮೀಡಿಯಾ ಹೌಸ್ | ಸೊರಬ |
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಹಾಗೂ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾದಿಂದ BJP Raitha Morcha ಪ್ರತಿಭಟನೆ ನಡೆಸಲಾಯಿತು.
ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಪಠ್ಯವನ್ನು ಕಿತ್ತು ಬಿಸಾಕಿದ್ದೀವಿ ಎಂದು ಹೇಳುವ ಉದ್ಧಟನ ಮಾತುಗಳು ಶಿಕ್ಷಣ ಸಚಿವರು ಪಠ್ಯವನ್ನು ಹಿಡಿದ ಲಕ್ಷಣಗಳು ಕಾಣುತ್ತಿಲ್ಲ. ಇಂತಹ ದುರ್ಧೈವ ಸ್ಥಿತಿಯನ್ನು ರಾಜ್ಯದಲ್ಲಿ ಎದುರಿಸುವಂತಾಗಿದೆ. ಮತ್ತೊಂದಡೆ ಚುನಾವಣೆ ಪೂರ್ವದಲ್ಲಿ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದ ಸಿದ್ಧರಾಮಯ್ಯ ಅವರಿಗೆ ಕೇಂದ್ರದಿಂದ 5 ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಾಗಿಲ್ಲ. ಜೊತೆಗೆ 5 ಕೆ.ಜಿ ಅಕ್ಕಿಯನ್ನು ದೇಶದಲ್ಲಿಯೇ ಸಂಗ್ರಹಿಸಲು ಆಗದಿರುವುದನ್ನು ಜನತೆ ಸೂಕ್ಷವಾಗಿ ಗಮನ ನೀಡುತ್ತಿದ್ದಾರೆ.ಪ್ರಕಾಶ್ ತಲಕಾಲಕೊಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಕ್ಷೇತ್ರದ ಶಾಸಕರು ತಾಲೂಕಿನ ಬಗ್ಗೆ ಗಮನ ನೀಡುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ., ಅನುದಾನವನ್ನು ಕ್ಷೇತ್ರಕ್ಕೆ ನೀಡಲಾಗಿತ್ತು. ಆದರೆ, ಈಗಿನ ಶಾಸಕರು ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ. ಪಠ್ಯ ಪುಸ್ತಕಗಳಲ್ಲಿನ ದೇಶ ಭಕ್ತರ ಹೆಸರುಗಳನ್ನು ತೆಗೆದು ಹಾಕುವ ಜೊತೆಗೆ ಕಿತ್ತುಗೆದಿದ್ದೇವೆ ಎನ್ನುವುದು ಅವರ ಜ್ಞಾನದ ಮಟ್ಟವನ್ನು ಎತ್ತಿ ತೋರುತ್ತದೆ ಎಂದರು.
Also read: ಕರ್ನಾಟಕ ಪ್ರಜ್ಞಾವಂತರ ನಾಡು. ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಯುವ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದೆ ಬೆಳೆಗಳು ಒಣಗುತ್ತಿವೆ. ಇತ್ತ ಮಳೆಯೂ ಇಲ್ಲ. ಮತ್ತೊಂದಡೆ ವಿದ್ಯುತ್ ಇಲ್ಲದೆ ಶುಂಠಿ ಸೇರಿದಂತೆ ಯಾವುದೇ ಬೆಳೆಗಳಿಗೂ ನೀರನ್ನು ಹರಿಸಲು ಸಾಧ್ಯವಾಗುತ್ತಿಲ್ಲ. ರೈತರನ್ನು ಚಿಂತೆಗೀಡು ಮಾಡುವಂತಾಗಿದೆ. ಕೂಡಲೇ ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಹಾಗೂ ರೈತರಿಗೆ ಬೆಳೆ ಪರಿಹಾರವನ್ನು ವಿತರಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದಿಂದ ಮುಖ್ಯರಸ್ತೆ ಮಾರ್ಗವಾಗಿ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣ ಗೆ ನಡೆಸಿ, ತಹಶೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಉಪಾಧ್ಯಕ್ಷರಾದ ದೇವೇಂದ್ರಪ್ಪ ಚನ್ನಾಪುರ, ಈಶ್ವರ ಚನ್ನಪಟ್ಟಣ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಎಂ.ಡಿ. ಉಮೇಶ್, ಯು. ನಟರಾಜ್, ಪ್ರಮುಖರಾದ ಮಣ್ಣತ್ತಿ ಪರಮೇಶ್, ಗುರುಕುಮಾರ ಪಾಟೀಲ್, ನಾಗರಾಜ ಬರಗಿ, ಎಂ.ಕೆ. ಯೋಗೇಶ್, ಗುರುಮೂರ್ತಿ, ವಸಂಧುರಾಭಟ್, ಮೀನಾಕ್ಷಿ ಹೆಗಡೆ, ಡಿ. ಶಿವಯೋಗಿ, ಅಶೋಕ್ ಶೇಟ್, ಆಶೀಕ್ ನಾಗಪ್ಪ, ಸುರೇಶ್ ಉದ್ರಿ, ಆರ್. ಮನವೇಲ್, ಸುಭಾಷ್, ವಿನಾಯಕ ತವನಂದಿ, ಕೆ.ಜಿ. ಬಸವರಾಜ್ ಸೇರಿದಂತೆ ಮತ್ತಿತರರಿದ್ದರು ಪಾಲ್ಗೊಂಡಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post