ಕಲ್ಪ ಮೀಡಿಯಾ ಹೌಸ್ | ಸೊರಬ |
ದಲಿತ ಮಹಿಳೆಗೆ ಅಪಮಾನ ಮಾಡಿದ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶನಿವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಸಮಿತಿಯ ತಾಲೂಕು ಸಂಚಾಲಕ ಎಚ್. ಬಸವರಾಜ ಹಸ್ವಿ ಮಾತನಾಡಿ, ಇತ್ತೀಚೆಗೆ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕೆಂದು ಹೇಳಿಕೆ ನೀಡಿರುವುದು ದಲಿತ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ. ಅವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಮಹಿಳಾ ಸಂಚಾಲಕಿ ಗಂಗಮಾಳಮ್ಮ, ತಾಲೂಕು ಸಂಘಟನಾ ಸಂಚಾಲಕ ದಿನೇಶ ಹಣಜಿ, ಶೇಖರ ಚಿಕ್ಕಶಕುನ, ಮಂಜಪ್ಪ ಮಾವಲಿ, ರಶೀದ್ ಅಹಮ್ಮದ್, ಮಲ್ಲೇಶಪ್ಪ ಮಾವಲಿ, ಇರ್ಫಾನ್ ಭಾಷಾ, ಸುರೇಶ್ ಬಿಳವಾಣಿ, ವಕೀಲ ಲಕ್ಷಣ ಕಕ್ಕರಸಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವಿಕ್ರಂ ಸೇರಿದಂತೆ ಇತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















Discussion about this post