Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ

May 11, 2021
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಸೊರಬ: ಪಟ್ಟಣದ ಹೊರವಲಯದಲ್ಲಿರುವ ಹಳೇಸೊರಬ ಕಾನು ಅರಣ್ಯ ಪ್ರದೇಶದಲ್ಲಿ, ಅಮೂಲ್ಯವಾದ ಹಲವಾರು ಬೃಹತ್ ಮರಗಳನ್ನು ಇತ್ತೀಚೆಗೆ ಅಕ್ರಮವಾಗಿ ದುಷ್ಕರ್ಮಿಗಳು ಕಡಿದಿರುವ ಘಟನೆಯನ್ನು, ತೀವ್ರವಾಗಿ ಖಂಡಿಸಿರುವ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಅವರು, ಈ ಕುರಿತು ಎಲ್ಲ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಇಲಾಖೆಗೆ ಆದೇಶಿಸಿದ್ದಾರೆ.

ಈಗಾಗಲೇ ಸ್ಥಳೀಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣವನ್ನು ದಾಖಲಿಸಿ, ಕಡಿದ ಮರಗಳನ್ನು ವಶಪಡಿಸಿಕೊಳ್ಳುವ ಕಾರ್ಯವನ್ನು ಮಾಡುತ್ತಿರುವದಕ್ಕೆ ಅವರು ಶ್ಲಾಘಿಸಿದ್ದು, ಈ ಬಗೆಯ ಭಾರಿ ಪ್ರಮಾಣದ ಮರಗಳ್ಳತನ ತಡೆಯಲು ಅರಣ್ಯ ಇಲಾಖೆಗೆ ಬೆಂಬಲ ನೀಡಬೇಕೆಂದು ಅವರು ಸಾರ್ವಜನಿಕರನ್ನು ವಿನಂತಿಸಿದ್ದಾರೆ.

ಹಳೇಸೊರಬ ಗ್ರಾಮದ ಸರ್ವೆ ನಂ.245ರಲ್ಲಿ ಸುಮಾರು 540ಎಕರೆಗೂ ಮಿಕ್ಕಿ ವಿಸ್ತಾರದ ಈ ಕಾನುಅರಣ್ಯವಿದೆ. ಈ ನಿತ್ಯಹರಿದ್ವರ್ಣ ಕಾಡಿನಲ್ಲಿ 250-300 ವರ್ಷಗಳಿಗೂ ಹೆಚ್ಚಿನ ಆಯುಷ್ಯದ ಭಾರಿ ಗಾತ್ರದ ಬಹಳಷ್ಟು ಹಳೆಯ ಮರಗಳಿವೆ. ದೇವದಾರು, ಹಲಸು, ಬರಣಿ, ನೇರಳೆ, ಹೊನ್ನೆ, ಬೀಟೆ ಇತ್ಯಾದಿ ಹಲವು ಬಗೆಯ ಅಮೂಲ್ಯವಾದ ಹಾಗೂ ವಿನಾಶದಂಚಿನ ಪ್ರಬೇಧಗಳ ಬಲಿತಮರಗಳಿವೆ. ಅಂಥವನ್ನೇ ಈಗ ಕಡಿದಿರುವದು ಖೇದಕರ ಎಂದು ಅವರು ತಿಳಿಸಿದ್ದಾರೆ.

ಅಪಾರ ಜೀವವೈವಿಧ್ಯವಿರುವ ಮಲೆನಾಡಿನ ಈ ಪ್ರಾತಿನಿಧಿಕ ಕಾನುಅರಣ್ಯವನ್ನು ಈವರೆಗೂ ಸಂರಕ್ಷಿಸಿಕೊಂಡು ಬಂದಿರುವ ಈ ಭಾಗದ ಗ್ರಾಮಸ್ಥರ ಕಾಳಜಿ ಶ್ಲಾಘನಾರ್ಹ. ಇವನ್ನೆಲ್ಲ ಮನಗಂಡೇ ರಾಜ್ಯ ಸರ್ಕಾರದ ಪಶ್ಚಿಮಘಟ್ಟ ಕಾರ್ಯಪಡೆಯು ಇದನ್ನು “ಜೀವವೈವಿಧ್ಯ ತಾಣ”ವನ್ನಾಗಿ ಘೋಷಿಸಲು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ 2011ರಲ್ಲೇ ಶಿಫಾರಸ್ಸು ಮಾಡಿತ್ತು. ಈ ಜಾಗೃತಿಯ ಫಲವಾಗಿ ಅರಣ್ಯ ಇಲಾಖೆಯು, ಗ್ರಾಮಸ್ಥರು, ರೈತರು, ಜನಪ್ರತಿನಿಧಿಗಳು, ಸ್ವಯಂಸೇವಾಸಂಸ್ಥೆಗಳು- ಹೀಗೆ ಎಲ್ಲ ಸ್ಥಳೀಯರ ಸಹಕಾರದೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಈ ದೇವರಕಾಡನ್ನು ಸಂರಕ್ಷಿಸುತ್ತ ಬಂದಿದೆ. ಇಲಾಖೆಯು ಸುತ್ತಲೂ ಕಂದಕ ರಚಿಸಿ, ಸಂಪೂರ್ಣ ರಕ್ಷಣೆಯನ್ನೂ ಒದಗಿಸಿದೆ. ಆದರೂ, ಕೆಲವೇ ಕೆಲವು ದುಷ್ಕರ್ಮಿಗಳು ಸರ್ಕಾರ ಹಾಗೂ ಸಮೂದಾಯದ ಈ ಎಲ್ಲ ಸಂರಕ್ಷಣೆಯ ಪ್ರಯತ್ನಗಳನ್ನು ಧಿಕ್ಕರಿಸಿ ಇಲ್ಲಿ ಮರಗಳನ್ನು ಕಡಿದಿರುವದು ಖಂಡನಾರ್ಹ. ಇದು “ಅರಣ್ಯ ಸಂರಕ್ಷಣೆ ಕಾನೂನು”, “ಜೀವವೈವಿಧ್ಯ ಸಂರಕ್ಷಣೆ ಕಾನೂನು” ಹಾಗೂ “ವನ್ಯಜೀವಿ ರಕ್ಷಣೆ ಕಾನೂನು”ಗಳ ಹಲವು ಅಂಶಗಳ ಭಾರಿ ಉಲ್ಲಂಘನೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಪಾರ ಜೀವಸಂಪತ್ತಿನ ಭಂಡಾರವಾಗಿರುವ ಹಾಗೂ ಐತಿಹಾಸಿಕ ಮಹತ್ವವಿರುವ ಈ ಹಳೇಸೊರಬ ಕಾನನ್ನು, ಹಳೇಸೊರಬ ಗ್ರಾಮ ಪಂಚಾಯಿತಿಯ ಜೀವವೈವಿಧ್ಯ ನಿರ್ವಹಣಾ ಸಮಿತಿಯು, ಜೀವವೈವಿಧ್ಯ ತಾಣ ಎಂದು ಗುರುತಿಸಿ, ಕಳೆದ ದಿ. 24 ಜುಲೈ 2020ರಂದು ಅದನ್ನು ಅಧಿಕೃತವಾಗಿ ಘೋಷಿಸಿದೆ. ಇದಕ್ಕೆ ಹೆಚ್ಚಿನ ಮನ್ನಣೆ ನೀಡಲು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ ಪ್ರಸ್ತಾವನೆ ಕೂಡ ಸಲ್ಲಿಸಿದ್ದು, ಆ ಕುರಿತಂತೆ ಚಿಂತನೆ ಕೂಡ ಸಾಗಿದೆ. ಇನ್ನು ಮುಂದಾದರೂ ಈ ಬಗೆಯ ದುಷ್ಕೄತ್ಯ ನಡೆಯದಂತೆ ನಿಗಾವಹಿಸಬೇಕೆಂದು, ಅವರು ಜಿಲ್ಲಾಡಳಿತಕ್ಕೂ ಸೂಚಿಸಿದ್ದಾರೆ.

ಕೊರೋನಾ ಲಾಕ್‌ಡೌನ್ ಅವಧಿಯನ್ನು ದುಷ್ಕರ್ಮಿಗಳು ಈ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳುವದನ್ನು ತಡೆಯಬೇಕಿದೆ. ಹೋದವರ್ಷದ ಲಾಕ್‌ಡೌನ್ ಅವಧಿಯಲ್ಲೂ ಈ ಬಗೆಯಲ್ಲಿ ಮರಗಳ್ಳತನ ಹಾಗೂ ಕಾಡಿನ ಹೊಸ ಅತಿಕ್ರಮಣದ ಘಟನೆಗಳು ನಡೆದಿರುವದು ಇಲ್ಲಿ ಉಲ್ಲೇಖನಾರ್ಹ. ಆದ್ದರಿಂದ, ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ, ಶಿವಮೊಗ್ಗದ ತಾಲ್ಲೂಕುಗಳ ಅರಣ್ಯಗಳ ರಕ್ಷಣೆಗೆ ವಿಶೇಷ ಆದ್ಯತೆಯನ್ನು ಅರಣ್ಯ ಇಲಾಖೆ ನೀಡಬೇಕಿದೆ ಹಾಗೂ ಇದಕ್ಕೆ ಜಿಲ್ಲಾಡಳಿತ ಸಂಪೂರ್ನ ಸಹಕಾರ ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Anantha Hegde AshisaraKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಅನಂತ ಹೆಗಡೆ ಅಶೀಸರಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಬಳ್ಳಾರಿಯಲ್ಲಿ ನಾಳೆಯಿಂದ ಸಂಪೂರ್ಣ ಲಾಕ್‌ಡೌನ್: ಸಚಿವ ಆನಂದ್ ಸಿಂಗ್

Next Post

ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಗತ್ಯ ವಸ್ತು ಖರೀದಿಗೆ ವಾಹನ ಬಳಕೆಗೆ ಅವಕಾಶ ನೀಡಲು ಪ್ರಸನ್ನ ಕುಮಾರ್ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!