ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಹಾಯ ಗ್ರಾಮದಲ್ಲಿ ಶ್ರೀ ಕೆಂಚಾಂಬ ಮತ್ತು ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಕ್ಷೇತ್ರದಿಂದ 1,50,000 ಡಿ.ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ವಿತರಿಸಿದರು. ಯೋಜನೆಯ ಸಮುದಾಯಕ್ಕೆ ಸಂಬಂಧಪಟ್ಟಂತೆ ಜ್ಞಾನದೀಪ ಹಾಗೂ ಶ್ರದ್ಧಾಕೇಂದ್ರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುಬ್ರಾಯ ನಾಯ್ಕ್, ದೇವಸ್ಥಾನ ಸಮಿತಿಯ ಅಧ್ಯಕ್ಷ ಇಂಧುದರ ಗೌಡ್ರು, ಉಮೇಶಪ್ಪ, ಕೊಪ್ಪದ ನಾಗಪ್ಪ, ಅಕ್ಬರ್ ಸಾಬ್, ಶಿವಾಜ್ ಗೌಡ್ರು, ದೇವರಾಜ್ ವಕೀಲರು, ಊರಿನ ಹಿರಿಯರು, ವಲಯದ ಮೇಲ್ವಿಚಾರಕರಾದ ಮಾರುತಿ, ಶ್ಯಾಮಲಾ, ಸೇವಾಪ್ರತಿನಿಧಿಯಾದ ಅನ್ನಪೂರ್ಣ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post