Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಮಲೆನಾಡ ಸುಸ್ಥಿರ ಕೃಷಿ ಅಭಿವೃದ್ಧಿಗೆ ಸರ್ಕಾರ ಬದ್ಧ: ವಿಶ್ವೇಶ್ವರ ಹೆಗಡೆ ಕಾಗೇರಿ

January 10, 2023
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಮಲೆನಾಡ ಸುಸ್ಥಿರ ಕೃಷಿ ಅಭಿವೃದ್ಧಿಗೆ ಸರ್ಕಾರ ಬದ್ಧವಿದ್ದು ಈಗಾಗಲೇ ಹಲವಾರು ಕೃಷಿ ಪೂರಕ ಸವಲತ್ತುಗಳನ್ನು ಒದಗಿಸುತ್ತ ಬರಲಾಗಿದೆ. ಈ ನಿಟ್ಟಿನಲ್ಲಿ ಕೃಷಿಕರೆ ಒಂದಾಗಿ ಕೃಷಿ ಸಮಸ್ಯೆಗಳನ್ನು ಹೀಗೆ ಸಮಗ್ರವಾಗಿ ಚಿಂತಿಸಿ ಸರ್ಕಾರದ ಗಮನ ಸೆಳೆಯುಲು ಮುಂದಾಗಿರುವುದು ಅತ್ಯುತ್ತಮ ಬೆಳವಣಿಗೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ Vishweshwara Hegade Kageri ಹರ್ಷ ವ್ಯಕ್ತಪಡಿಸಿದರು.

ಶಿರಸಿಯ ಕದಂಬ ಮಾರ್ಕೇಟ್ ಸಭಾಂಗಣದಲ್ಲಿ ಮಲೆನಾಡು ಶಿರಸಿ, ಸಾಗರ, ಸೊರಬ ಭಾಗದ ಕೃಷಿಕರು ಹಮ್ಮಿಕೊಂಡಿದ್ದ ಮಲೆನಾಡು ಸುಸ್ಥಿರ ಅಭಿವೃದ್ಧಿಯ ಕಾರ್ಯಸೂಚಿ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ಅವಕಾಶವಿದೆ. ಮಲೆನಾಡು ಕೃಷಿಕರು ಆಪೇಕ್ಷಿಸಿದ ಬೇಡಿಕೆಗಳನ್ನು ಕೂಲಂಕುಷವಾಗಿ ವಿಧಾನ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಹೀಗೆ ಮೇಲಿಂದ ಮೇಲೆ ಕೃಷಿಕರು ತಮ್ಮ ಸ್ಥಳೀಯ ಕೃಷಿ ವೈರುಧ್ಯಗಳನ್ನು ಬೆಳಕಿಗೆ ತರುವತ್ತ ಕ್ರಿಯಾಶೀಲರಾದರೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ ಮಾತನಾಡಿ, ಕರ್ನಾಟಕ ಸರಕಾರದ 2023-24ನೇ ಸಾಲಿನ ಮುಂಗಡಪತ್ರದಲ್ಲಿ ನಮ್ಮ ಮಲೆನಾಡು ಪ್ರಾಂತ್ಯದ ಸುಸ್ಥಿರ ಅಭಿವೃದ್ಧಿಗೆ ಅಗತ್ಯವಾದ ಚಟುವಟಿಕೆಗಳಿಗೆ ಆರ್ಥಿಕ ಸಂಪನ್ಮೂಲವನ್ನು ಕೋರಲು ಸಮಾಲೋಚನೆಗಾಗಿ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ. ವಿವಿಧ ಸಂಘಟನೆಗಳ ಪ್ರತಿನಿಧಿಗಳು, ತಜ್ಞರು, ಪ್ರಾಧ್ಯಾಪಕರು, ಸಹಕಾರಿ ನೇತಾರರು, ಮುಂತಾದವರು ಮಲೆನಾಡು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಕ್ರಮಗಳ ಬಗ್ಗೆ, ವಿಶೇಷವಾಗಿ ಬಜೆಟ್‌ನಲ್ಲಿ ಸೇರ್ಪಡೆ ಆಗಬೇಕಾದ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಾರ್ವಜನಿಕರಿಂದಲೂ ಈ ವಿಷಯಗಳ ಬಗ್ಗೆ ಹಲವು ಸಲಹೆಗಳನ್ನು ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ನಂತರ ಸಭಾಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪರಿಷ್ಕೃತ ವರದಿಯನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ವಿವಿಧ ಕೃಷಿ ವಲಯದ ಅಧಿಕಾರಿಗಳು, ತಜ್ಞರು, ಪ್ರಗತಿ ಪರ ಕೃಷಿಕರು ಪಾಲ್ಗೊಂಡು ತಮ್ಮ ವಿದ್ವತ್‌ಪೂರ್ಣ ಅಭಿಪ್ರಾಯಗಳನ್ನು ಹಂಚಿಕೊಂಡರು.
ರೈತ ಕುಟುಂಬಗಳಿಗೆ ಶೇ.50ರಷ್ಟು ಸಬ್ಸಿಡಿ ನೀಡಿ ಡ್ರೈಯರ್ ಯಂತ್ರ ನೀಡಬೇಕು. ತೋಟಗಾರಿಕಾ ಇಲಾಖೆ ಮೆಣಸಿನ ಬಳ್ಳಿ ಸತ್ತಿದ್ದಕ್ಕೆ, ಅಡಿಕೆ ಮರ ಸತ್ತಿದ್ದಕ್ಕೆ ಸರಿಯಾದ ಗರಿಷ್ಠ ಮೌಲ್ಯ ನಿರ್ಧರಿಸಿ ರೈತರಿಗೆ ಪರಿಹಾರ ನೀಡಬೇಕು. ಏಲಕ್ಕಿ, ಮೆಣಸು, ದಾಲ್ಚಿನಿ, ಜಾಯಿಕಾಯಿ ಸೇರಿದಂತೆ ಹಲವು ಸಾಂಬಾರು ಗಿಡಗಳನ್ನು ಬೆಳೆಸುವ ವಿಶೇಷ ಯೋಜನೆಗೆ ಕೇಂದ್ರ ಸಾಂಬಾರು ಮಂಡಳಿ ನೆರವು ನೀಡಬೇಕು ಎಂದು ಹೇಳಿದರು.

ರೈತರು ಜೇನು ಕುಟುಂಬ ಸಾಕುವಂತೆ ಜೇನು ಅಭಿವೃದ್ಧಿ ಯೋಜನೆ ಜಾರಿ ಮಾಡಲು ತೋಟಗಾರಿಕಾ ಇಲಾಖೆ ವಿಶೇಷ ತರಬೇತಿ, ನಿರ್ವಹಣೆ, ಶುದ್ಧೀಕರಣ ಘಟಕ, ಮಾರುಕಟ್ಟೆ, ಇತ್ಯಾದಿ ಸಮಗ್ರ ಯೋಜನೆ ರೂಪಿಸಿ ಜಾರಿ ಮಾಡಬೇಕು. ಬಿದಿರು ಬೆಳೆಸಲು ರಾಷ್ಟ್ರೀಯ ಯೋಜನೆ ಜಾರಿ ಆಗುತ್ತಿದೆ. ಈ ಯೋಜನೆ ಅಡಿಯಲ್ಲಿ ರೈತರು ಬಿದಿರು ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಳ್ಳುವಂತೆ ಯೋಜನೆ ರೂಪಿಸಬೇಕು ಎಂದರು.
ಕಾನು ಬೆಟ್ಟ ಸಂರಕ್ಷಣೆ-ಅಭಿವೃದ್ಧಿ ಯೋಜನೆಯನ್ನು ಹಳ್ಳಿಗಳಲ್ಲಿ ಅರಣ್ಯ ಇಲಾಖೆ ಜಾರಿ ಮಾಡಬೇಕು. ಗ್ರಾಮ ಅರಣ್ಯ ಸಮಿತಿಗಳು ಈ ಯೋಜನೆಯಲ್ಲಿ ಪಾಲ್ಗೊಳ್ಳುವಂತೆ ಯೋಜನೆ ರೂಪಿಸಬೇಕು. ಹಳ್ಳಿಗಳಲ್ಲಿ ಎಲ್ಲ ರೈತರಿಗೆ ಶೇ.75ರಷ್ಟುಸಬ್ಸಿಡಿ ನೀಡಿ ಸೋಲಾರ್ ನೀರು ಕಾಯಿಸುವ ಯೋಜನೆ ಹಾಗೂ ಸೋಲಾರ್ ಮನೆದೀಪ ಯೋಜನೆ ಜಾರಿ ಮಾಡಬೇಕು. ತೋಟಗಳಿಗೆ ಸೊಲಾರ್ ಬೇಲಿ ನಿರ್ಮಿಸಲು ಶೇ.100ರಷ್ಟುಸಬ್ಸಿಡಿ ನೀಡುವ ಯೋಜನೆಯನ್ನು ಅರಣ್ಯ ಇಲಾಖೆ ಜಾರಿ ಮಾಡಬೇಕು. ಮಂಗಗಳ ಹಾವಳಿ ಮಿತಿಮೀರಿ ಬೆಳೆ ಹಾನಿ ವಿಪರೀತವಾಗಿದೆ. ಅರಣ್ಯ ಇಲಾಖೆ ಈ ಎಲ್ಲಾ ರೈತರಿಗೆ ಬೆಳೆಹಾನಿ ಪರಿಹಾರ ನೀಡಬೇಕು. ಎಕರೆಗೆ ರೂ. 5000ದಂತೆ ಪರಿಹಾರ ನೀಡಬೇಕು. ನರೆಗಾ ಯೋಜನೆಯಲ್ಲಿ ಮಂಗಗಳ ಹಾವಳಿ ತಡೆಗಟ್ಟಲು ಮಂಗನ ಕಾವಲು ಯೋಜನೆ ಜಾರಿ ಮಾಡಬೇಕು. ರೈತರು ಅಪ್ಪೆಮಿಡಿ ಮಾವು ಗಿಡಗಳನ್ನು (ತಲಾ 100 ಗಿಡ) ಬೆಳೆಸಬೇಕು. ಮಿಡಿ ಮಾವು ಬೆಳೆಗಾರರ ಸಂಘ ಬಲಪಡಿಸುವ ಮೂಲಕ ತೋಟಗಾರಿಕಾ ಇಲಾಖೆ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದರು.

ರೈತರಿಗೆ ಹಾಲು ಉತ್ಪಾದಕ ಸಂಘಗಳ ಸಹಕಾರದಲ್ಲಿ ಸ್ಥಳೀಯ ಜಾನುವಾರು ತಳಿ ಅಭಿವೃದ್ಧಿ ಯೋಜನೆ ರೂಪಿಸಿ ಹೈನೋದ್ಯಮ ವಿಕಾಸ ಯೋಜನೆ ರೂಪಿಸಬೇಕು. ಶೇ.50ರಷ್ಟು ಸಬ್ಸಿಡಿ ನೀಡಿ ಸ್ಥಳೀಯ ಜಾನುವಾರು ಅಭಿವೃದ್ಧಿ ಪಡಿಸಿರುವ ತಳಿ ಆಕಳು ನೀಡುವ ಯೋಜನೆ ರೂಪಿಸಬೇಕು. ರೈತರು ಹನಿ ನೀರಾವರಿ ಯೋಜನೆ ಅಳವಡಿಸಲು ಶೇ.90ರಷ್ಟು ಸಬ್ಸಿಡಿ ನೀಡುವ ವಿಶೇಷ ಯೋಜನೆಯನ್ನು ಕೃಷಿ ಇಲಾಖೆ ಜಾರಿ ಮಾಡಬೇಕು. ರೈತರು ಕೃಷಿ ಹೊಂಡ ನಿರ್ಮಿಸಲು ಶೇ.90ರಷ್ಟು ಸಬ್ಸಿಡಿ ನೀಡಬೇಕು. ಕೃಷಿ ವಿಶ್ವವಿದ್ಯಾಲಯ ಗ್ರಾಮಗಳಲ್ಲಿ ಈ ಮೇಲಿನ ಮಾದರಿ ಯೋಜನೆ ಪ್ರಾತ್ಯಕ್ಷಿಕೆ ಮಾಡಬೇಕು. ಕೃಷಿ ವಿಶ್ವವಿದ್ಯಾಲಯ ಮಲೆನಾಡು ಮಾದರಿ ಸಮಗ್ರ ಯೋಜನೆಗೆ ತಾಂತ್ರಿಕ ಬೆಂಬಲ ನೀಡಬೇಕು ಮುಂತಾದ ಬೇಡಿಕೆಗಳನ್ನು ಮುಂದಿನ ಬಜೆಟ್ ಸಮಯದಲ್ಲಿ ಅಂಗೀಕರಿಸುವಂತೆ ಸಭಾಧ್ಯಕ್ಷರಿಗೆ ಮನವಿ ಪತ್ರ ನೀಡಲಾಯಿತು.
ಕದಂಬ ಸಾವಯವ ಟ್ರಸ್ಟ್ ಶಿರಸಿ, ಶ್ರೀ ಶಾರದಾಂಬಾ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಭೈರುಂಬೆ, ವೃಕ್ಷಲಕ್ಷ ಆಂದೋಲನ, ಕರ್ನಾಟಕ, ಶ್ರೀ ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನ, ಮಠದೇವಳ, ಪರಿಸರ ಜಾಗೃತಿ ಟ್ರಸ್ಟ್, ಗೋಸಂರಕ್ಷಣಾ ಸಮಿತಿ ಸೊರಬ ಇನ್ನೂ ಮುಂತಾದ ಸಂಘಟನೆಗಳವರು ಸಮಾಲೋಚನೆಯಲ್ಲಿ ಪಾಲ್ಗೊಂಡರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaVishweshwara Hegade Kageriಮಲೆನಾಡು_ಸುದ್ಧಿವಿಶ್ವೇಶ್ವರ ಹೆಗಡೆ ಕಾಗೇರಿಶಿವಮೊಗ್ಗ_ನ್ಯೂಸ್ಸೊರಬ
Previous Post

ಭಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆ ಆರೋಪಿಗಳ ಬಂಧನಕ್ಕೆ ಶಾಸಕ ಹಾಲಪ್ಪ ಸೂಚನೆ

Next Post

ಕನ್ನಡದ ಮತ್ತೊಂದು ದಾಖಲೆ: ಆಸ್ಕರ್ ಪ್ರಶಸ್ತಿಗೆ ಅರ್ಹತೆ ಪಡೆದ `ಕಾಂತಾರ’: ಯಾವ ವಿಭಾಗ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡದ ಮತ್ತೊಂದು ದಾಖಲೆ: ಆಸ್ಕರ್ ಪ್ರಶಸ್ತಿಗೆ ಅರ್ಹತೆ ಪಡೆದ `ಕಾಂತಾರ': ಯಾವ ವಿಭಾಗ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

September 28, 2025

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

September 28, 2025

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!