ಕಲ್ಪ ಮೀಡಿಯಾ ಹೌಸ್ | ಸೊರಬ |
ಸಮಗ್ರ ಹಾಗೂ ಸುಸ್ಥಿರ ಕೃಷಿಯಲ್ಲಿ ಜೇನಿನ ಪಾತ್ರ ಹಿರಿದು, ಉತ್ತಮ ಇಳುವರಿಯ ಬೆಳೆಯೊಂದಿಗೆ ಅತ್ಯುತ್ತಮ ಆದಾಯ ನೀಡುವ ಜೇನು ಕೃಷಿಯಿಂದ ಜೀವವೈವಿಧ್ಯತೆಯ ಸಮತೋಲನ, ನಮ್ಮ ಆರೋಗ್ಯದ ಸದೃಢತೆಗೂ ಇವು ನೆರವಾಗುತ್ತವೆ ಎಂದು ಗೌತಮ್ ಬಿಚ್ಚುಗತ್ತಿ ಹೇಳಿದರು.
ಶಿಕಾರಿಪುರ ಹಳೇಮುಗಳಗೆರೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಇವರು ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದರು.
Also read: Karnataka Posts Strong Revenue Growth: CM Reviews Progress

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಅರುಣ್ ಕುಮಾರ್ ಹಾಗೂ ಡಾ. ಕೃಷ್ಣ ಕುಮಾರ್, ಶಿಬಿರಾರ್ಥಿಗಳು, ಗ್ರಾಮದ ಅನೇಕ ಕೃಷಿಕರು ಇದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post