No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ ಶಾಸಕರ ಆಪ್ತ ಸಹಾಯಕನಿಂದ ಅಕ್ರಮ ಭೂ ಕಬಳಿಕೆ: ದಸಂಸ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2022
in ಸೊರಬ
0
ಸೊರಬ ಶಾಸಕರ ಆಪ್ತ ಸಹಾಯಕನಿಂದ ಅಕ್ರಮ ಭೂ ಕಬಳಿಕೆ: ದಸಂಸ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸೊರಬದ ಬಿಜೆಪಿ ಶಾಸಕ ಕುಮಾರ್‌ಬಂಗಾರಪ್ಪ MLA Kumar Bangarappa ಅವರ ಆಪ್ತ ಸಹಾಯಕ ಉಮೇಶ್‌ಗೌಡ ಮಾಜಿ ಸೈನಿಕರ ಕೋಟಾದಡಿ ರಾಜಕೀಯ ಪ್ರಭಾವ ಬಳಸಿಕೊಂಡು ಅಕ್ರಮವಾಗಿ 4 ಎಕರೆ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಮಹೇಶ್ ಶಕುನವಳ್ಳಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, ಉಮೇಶ್ ಗೌಡನ ಭೂ ಕಬಳಿಕೆ ಅಕ್ರಮವನ್ನು ದಾಖಲೆ ಸಹಿತ ಬಿಡುಗಡೆ ಮಾಡಿದರು. ಉಮೇಶ್ ಗೌಡ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನವರಾಗಿದ್ದು, ಪಿಂಚಣಿ ಪಡೆಯುತ್ತಿದ್ದಾರೆ. ಅಲ್ಲದೆ ಸಿದ್ದಾಪುರ ತಾಲ್ಲೂಕಿನಲ್ಲಿ ಭೂಮಿಯನ್ನು ಹೊಂದಿರುತ್ತಾರೆ. ಈಗಾಗಲೆ ಸೊರಬದಲ್ಲಿ ಮಾಜಿ ಸೈನಿಕರ ಕೋಟಾದಡಿ 2015 ರಿಂದ 36 ಸೈನಿಕರು ಅರ್ಜಿ ಸಲ್ಲಿಸಿ ಭೂಮಿಗಾಗಿ ಕಾಯುತ್ತಿರುವಾಗ ಜೇಷ್ಠತೆಯನ್ನು ಉಲ್ಲಂಘಿಸಿ 2019ರಲ್ಲಿ ಅರ್ಜಿ ಸಲ್ಲಿಸಿದ ಉಮೇಶ್ ಗೌಡನಿಗೆ ತರಾತುರಿಯಲ್ಲಿ ಯಾವುದೇ ದಾಖಲೆಗಳು ಇಲ್ಲದೆ ತಹಶೀಲ್ದಾರರು ಕುಂಬತ್ತಿ ಗ್ರಾಮದಲ್ಲಿ 4 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸೇನೆಯಿಂದ ನಿವೃತ್ತಿ ಹೊಂದಿ ಪಿಡಿಓ ಹುದ್ದೆಯಲ್ಲಿರುವ ಉಮೇಶ್ ಗೌಡ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಆಪ್ತಸಹಾಯಕರಾಗಿ, ಕಾರ್ಯನಿರ್ವಹಿಸುತ್ತಿದ್ದು, ಶಾಸಕರ ರಾಜಕೀಯ ಪ್ರಭಾವ ಬಳಸಿಕೊಂಡು ಸುಳ್ಳು ದಾಖಲೆಗಳನ್ನು ಸಲ್ಲಿಸಿ ಕುಂಬತ್ತಿ ಗ್ರಾಮದಲ್ಲಿ ಮಾಜಿ ಸೈನಿಕರ ಕೋಟಾದಡಿ ನಾಲ್ಕು ಎಕರೆ ಜಮೀನು ಕಬಳಿಸಿರುವುದು ಬಯಲಾಗಿದೆ ಎಂದು ಹೇಳಿದರು.

ಭೂ ಮಂಜೂರಾತಿ ಅರ್ಜಿಯಲ್ಲಿ ಮಾಜಿ ಸೈನಿಕ ಎಂದು ನಮೋದಿಸದೆ, ಶಾಸಕರ ಆಪ್ತಸಹಾಯಕ ಎಂದು ನಮೋದಿಸುವ ಮೂಲಕ ಅಧಿಕಾರಿಗಳ ಮೇಲೆ ರಾಜಕೀಯ  ಪ್ರಭಾವ ಬೀರುವ ಹುನ್ನಾರ ನಡೆಸಿರುವ ಉಮೇಶ್ ಗೌಡ ವಾರ್ಷಿಕ 5.14ಲಕ್ಷ ರೂ. ಆದಾಯ ಬರುತ್ತಿದೆ ಎಂದು ಕೇವಲ ಪ್ರಮಾಣಪತ್ರ ಸಲ್ಲಿಸಿದ್ದಾರೆ ವಿನಃ ದೃಢೀಕೃತ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ. ಮೂಲತಃ ಸಿದ್ದಾಪುರ ತಾಲ್ಲೂಕಿನ ನಿವಾಸಿಯಾಗಿರುವ ಉಮೇಶ್ ಗೌಡ ಸಿದ್ದಾಪುರ ತಾಲ್ಲೂಕಿನ ಕೊಂಡ್ಲಿ ಹೋಬಳಿ ಕಸ್ತೂರ ಗ್ರಾಮದ ಸ.ನಂ 3/7ರಲ್ಲಿ ತಾನು ಹೊಂದಿರುವ ಆಸ್ತಿ ಇದ್ದರೂ ಅದನ್ನು ಮರೆಮಾಚಿ ಸೊರಬ ನಿವಾಸಿ ಎಂದು ಹೇಳಿಕೊಂಡಿದ್ದು ಯಾವುದಕ್ಕೂ ನಿರ್ಧಿಷ್ಟ ದಾಖಲೆಗಳನ್ನು ಸಲ್ಲಿಸದೆ ಸರ್ಕಾರಕ್ಕೆ ವಂಚಿಸಿದ್ದಾನೆ. ಈತನ ವಿರುದ್ದ ಸರ್ಕಾರ ಈ ಕೂಡಲೆ ಪೊಲೀಸ್ ಕೇಸು ದಾಖಲಿಸಿ ಅಕ್ರಮವಾಗಿ ಮಂಜೂರು ಮಾಡಿರುವ ಭೂಮಿ ಯ ಪಾಣಿಯನ್ನು ರದ್ದು ಪಡಿಸಬೇಕು ಎಂದು ಮಹೇಶ್ ಶಕುನವಳ್ಳಿ ಆಗ್ರಹಿಸಿದರು.
ಉಮೇಶ್ ಗೌಡನಿಗೆ ಮಂಜೂರು ಮಾಡಿರುವ ಭೂಮಿಯ ಮಹಜರ್‌ನಲ್ಲಿ ಕಂದಾಯಾಧಿಕಾರಿಗಳು ಯಾವುದೇ ಬೆಲ ಬಾಳುವ ಮರಗಳಿಲ್ಲ ಎಂದು ವರದಿ ನೀಡಿದ್ದರೆ. ವಲಯ ಅರಣ್ಯ ಸಂರಕ್ಷಣಾಧಿಕಾರಿಗಳು ಈ ಜಾಗದಲ್ಲಿ 1988 ರಿಂದ ಅಕೇಶಿಯ ನಡುತೋಪು ಇದೆ. ಸಂಬಂಧಪಟ್ಟ ಇಲಾಖೆ ಅನುಮತಿ ಪಡೆಯಬೇಕು ಎಂದು ವರದಿ ಸಲ್ಲಿಸಿದ್ದಾರೆ. ಹಾಗಾದರೆ ಕಂದಾಯಾಧಿಕಾರಿಗಳ ಮಹಜರ್ ವರದಿ ಶಾಸಕರ ಕಚೇರಿಯಲ್ಲಿ ಸಿದ್ದಪಡಿಸಲಾಯಿತಾ?, ಅಕ್ರಮ ಭೂಮಿ ನೋಂದಣಿಯನ್ನು ತಡೆಯುತ್ತೇನೆ ಎಂದು ಘೋಷಿಸುವ ಶಾಸಕರು ತಮ್ಮ ಆಪ್ತ ಸಹಾಯಕನೆ ಸುಳ್ಳು ದಾಖಲೆಗಳನ್ನು ಕೊಟ್ಟು, ಮರೆಮಾಚಿ ಅಕ್ರಮವಾಗಿ ಭೂಮಿ ಪಡೆದಿರುವ ಬಗ್ಗೆ ಯಾಕೆ ಮೌನವಹಿಸಿದ್ದಾರೆ? ಇದಕ್ಕೆ ಶಾಸಕರು ಉತ್ತರಿಸಬೇಕು ಎಂದು ಡಿಎಸ್ ಎಸ್ ಆಗ್ರಹಿಸಿದೆ.

ಸರ್ಕಾರ ದ ನಿಯಮಗಳನ್ನು ಉಲ್ಲಂಘಿಸಿ ಶಾಸಕರ ಪ್ರಭಾವ ಬಳಸಿಕೊಂಡು ಉಮೇಶ್ ಗೌಡ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾನೆ. ಕಂದಾಯ ಇಲಾಖೆ ಅಧಿಕಾರಿಗಳು ಉಮೇಶ್ ಗೌಡನ ಕಪಿಮುಷ್ಟಿಯಲ್ಲಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸಾಮಾನ್ಯ ಗುತ್ತಿಗೆ ನೌಕರರ ಮೇಲೆ ದರ್ಪ ತೋರುವ ಶಾಸಕ ಕುಮಾರ್ ಬಂಗಾರಪ್ಪ ತಮ್ಮ ಆಪ್ತನೇ ಸರ್ಕಾರಕ್ಕೆ ವಂಚಿಸಿ ಅಕ್ರಮವಾಗಿ ಭೂ ಕಬಳಿಸಿರುವುದರ ಬಗ್ಗೆ ಬಾಯಿ ಬಿಡದಿರುವುದು ಇದರಲ್ಲಿ ಅವರ ಪಾತ್ರವು ಇರುವುದನ್ನು ತೋರಿಸುತ್ತದೆ ಎಂದ ಮಹೇಶ್ ಶಕುನವಳ್ಳಿ ಅವರು ತಹಶೀಲ್ದಾರರು ಈ ಕೂಡಲೆ ಉಮೇಶ್ ಗೌಡನಿಗೆ ಅಕ್ರಮವಾಗಿ ಮಂಜೂರು ಮಾಡಿರುವ ಭೂಮಿಯ ಪಾಣಿಯನ್ನು ರದ್ದು ಪಡಿಸದಿದ್ದರೆ. ತಾಲ್ಲೂಕು ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸಲಾಗುವುದು, ಅಗತ್ಯಬಿದ್ದರೆ ಅರೆಬೆತ್ತಲೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಡಿ ಎಸ್ ಎಸ್ ವಿಭಾಗೀಯ ಸಂಚಾಲಕ ಗುರುರಾಜ್, ಮುಖಂಡರಾದ ಮಂಜು ಚಿಕ್ಕಶಕುನ, ಬಂಗಾರಪ್ಪ ನಿಟ್ಟಕ್ಕಿ, ಪ್ರಭು ಹೀರೆಚೌಟ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA Kumar BangarappaNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಾಸಕ ಕುಮಾರ್‌ಬಂಗಾರಪ್ಪಶಿವಮೊಗ್ಗ_ನ್ಯೂಸ್ಸೊರಬ
Share200Tweet123Send
Previous Post

ಹಿಂದೂ ಮಹಾಸಭಾ ಮೆರವಣಿಗೆಯಲ್ಲಿ ಕಂಗೊಳಿಸುತ್ತಿದೆ ಕಲಾವಿದ ವಿಷ್ಣು ಕೈಚಳಕದ ಆಂಜನೇಯನ ಮೂರ್ತಿ

Next Post

ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಸಿಂಗಾರಗೊಂಡ ಶಿವಮೊಗ್ಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಸಿಂಗಾರಗೊಂಡ ಶಿವಮೊಗ್ಗ

ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಸಿಂಗಾರಗೊಂಡ ಶಿವಮೊಗ್ಗ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 30-ಎಪ್ರಿಲ್ 3: ಮೈಸೂರು-ನಂಜನಗೂಡು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 21, 2026
A Blissful concert by the Divine Duo

A Blissful concert by the Divine Duo

March 21, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL