ಕಲ್ಪ ಮೀಡಿಯಾ ಹೌಸ್ | ಸೊರಬ |
ಕ್ಷೇತ್ರದ ವಿವಿಧ ಕಡೆಗಳಲ್ಲಿ ಕೋಟ್ಯಂತರ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಾಸಕ ಕುಮಾರ್ ಬಂಗಾರಪ್ಪ MLA Kumar Bangarappa ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಉಳವಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಸುಮಾರು 9 ಕೋಟಿ 21 ಲಕ್ಷ ರೂಪಾಯಿಗಳ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಇನ್ನು, ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ದೂಗೂರು ಗ್ರಾಮದಲ್ಲಿ ಎಸ್ ಸಿ ಸತ್ಯಪ್ಪನ ಮನೆಯಿಂದ ಎಕೆ ಚಂದ್ರಪ್ಪನ ಮನೆವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ 81.13 ಲಕ್ಷ ರೂಪಾಯಿ ವೆಚ್ಚದಲ್ಲಿ ದೂಗೂರು ಗ್ರಾಮದಲ್ಲಿ ಮನೆಮನೆಗೆ ಜಲಜೀವನ್ ಮಿಷನ್ ಯೋಜನೆಯಡಿನಲ್ಲಿ ಸಂಪರ್ಕ ಕಾಮಗಾರಿಯನ್ನು ಶಾಸಕರು ಉದ್ಘಾಟಿಸಿದರು.
Also read: ಅದ್ದೂರಿ ಹಂಪಿ ಉತ್ಸವಕ್ಕೆ ಸಕಲ ಸಿದ್ದತೆ: ಸಚಿವೆ ಶಶಿಕಲಾ ಜೊಲ್ಲೆ
ಅಲ್ಲದೇ, 29.80 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಕುಪ್ಪೆ ಗ್ರಾಮದಲ್ಲಿ ಮನೆಮನೆಗೆ ಜಲಜೀವನ್ ಮಿಷನ್ ಯೋಜನೆಯಡಿನಲ್ಲಿ ಸಂಪರ್ಕ ಕಾಮಗಾರಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post