ಕಲ್ಪ ಮೀಡಿಯಾ ಹೌಸ್ | ಸೊರಬ |
ದೇಶದ ಏಕತೆ ಕಾಪಾಡುವುದು, ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರ ಪ್ರೇಮದಂತಹ ಗುಣ ಬೆಳೆಸಿಕೊಂಡು ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು ಎಂದು ತಹಶೀಲ್ದಾರ್ ಹುಸೇನ್ ಸರಕಾವಸ್ ತಿಳಿಸಿದರು
ಕಚೇರಿಗಳಲ್ಲಿ ಹಾರದ ಧ್ವಜ
ಸೊರಬ ಪಟ್ಟಣದ ಸರ್ಕಾರಿ ಮತ್ತು ಸರ್ಕಾರೇತರ ಕಛೇರಿಗಳಲ್ಲಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಧ್ವಜಾರೋಹಣವನ್ನು ಮಾಡದೆ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರೋತ್ಸವನ್ನು ಆಚರಣೆ ಮಾಡದೆ ಇರುವುದು ಇವರ ದೇಶಪ್ರೇಮವನ್ನು ಎತ್ತಿ ತೋರಿಸುವಂತಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲೆ ಹಿರಿಯ ಅಧಿಕಾರಿಗಳು ನಿರ್ಲಕ್ಷ ವಹಿಸಿರುವುದು ಕಿರಿಯ ಅಧಿಕಾರಿಗಳು ಯಾವ ರೀತಿ ಕೆಲಸ ಕಾರ್ಯ ನಿರ್ವಹಿಸುವತ್ತಾರೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಯಾವುದೆ ರೀತಿ ಕಟ್ಟಡ ಜಾಗದ ವ್ಯವಸ್ಥೆ ಇಲ್ಲದೆ ಸ್ವಯಂ ಪ್ರೇರಿತರಾಗಿ ಆಟೊ ಮತ್ತು ಹಮಾಲರ ಸಂಘ ಹಬ್ಬದಂತೆ ಸ್ವಾತಂತ್ರೋತ್ಸವನ್ನು ಆಚರಣೆ ಮಾಡಿರುವುದು ಸಾರ್ವಜನಿಕರು ಪ್ರಶಂಶೆ ವಕ್ತಪಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಅಧಿಕಾರಿಗಳನ್ನು ಸಂಪರ್ಕಿಸಿದ್ದು ಯಾವುದೆ ರೀತಿಯ ಸ್ಪಪಂದನೆ ನೀಡಿರುವುದಿಲ್ಲ
ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ನಮ್ಮ ದೇಶ ವಿಶ್ವಕ್ಕೆ ವಸುದೈವ ಕುಟುಂಬಂ ಎಂಬ ಸಂದೇಶ ಸಾರಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರ ತ್ಯಾಗ ಬಲಿದಾನವಿದೆ. ಇದರ ಪರಿಣಾಮವಾಗಿ ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಈ ಸ್ವಾತಂತ್ರ್ಯ ಉಳಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ. ಮಂಗಳಯಾನ ಮತ್ತು ಇತ್ತೀಚೆಗೆ ಚಂದ್ರಯಾನ-3 ಯಶಸ್ವಿ ಉಡಾವಣೆಯು ದೇಶದ ಹಿರಿಮೆಯಾಗಿದೆ ಎಂದರು.
Also read: ‘Har Ghar Tiranga’ Campaign: Home Minister Shah Participates, Unfurls Flag at His Residence
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಕೃಷಿ ಇಲಾಖೆಯ ಸಹಾಯ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್, ಉದ್ರಿ ಗ್ರಾಪಂ ಪಿಡಿಒ ಹೋಮೇಶ್, ಉರುಗನಹಳ್ಳಿಯ ವಿದ್ಯಾರ್ಥಿನಿ ಪ್ರಾರ್ಥನಾ ಅವರನ್ನು ಸನ್ಮಾನಿಸಲಾಯಿತು. ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post