ಕಲ್ಪ ಮೀಡಿಯಾ ಹೌಸ್ | ಸೊರಬ |
ಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ Five state assembly election ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಡ್ ರಾಜ್ಯಗಳಲ್ಲಿ BJP victory in Rajasthan, Madhya Pradesh, Chhattisgarh ಬಿಜೆಪಿ ಪ್ರಪಂಡ ಬಹುಮತ ಪಡೆದು ಗೆಲುವು ಸಾಧಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಪುರಸಭೆ ಆವರಣದಲ್ಲಿ ಜಮಾಯಿಸಿ ಪ್ರಧಾನಿ ನರೇಂದ್ರ ಮೋದಿ, PMNarendraModi ರಾಜ್ಯಾಧ್ಯಕ್ಷ ವಿಜಯೇಂದ್ರ, Vijayendra ಪರ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.
Also read: ಬಡವರ ಪರ ಧ್ವನಿ ಎತ್ತಿ ಸರ್ಕಾರದ ಯೋಜನೆಗಳನ್ನು ಸಕಾರಗೊಳಿಸಿ: ಸಿಎಂಗೆ ಈಶ್ವರಪ್ಪ ಕಿವಿಮಾತು
ತಾಲೂಕು ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯನ್ನು ವಿರೋಧ ಪಕ್ಷಗಳು ಸೆಮಿಫೈನಲ್ ಎಂದೇ ಬಿಂಬಿಸಿದ್ದವು. ಐದು ರಾಜ್ಯಗಳಲ್ಲಿ ಬಿಜೆಪಿ ಸೋಲುತ್ತದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಆದರೆ, ಈಗ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ರಾಜ್ಯಗಳ ಪೈಕಿ ತೆಲಂಗಾಣ ಹೊರತು ಪಡಿಸಿ ಇನ್ನು ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಬಹುಮತವನ್ನು ಗಳಿಸಿ, ಅಧಿಕಾರವನ್ನು ಸ್ಥಾಪಿಸಲು ಮುಂದಾಗಿದೆ. ದೇಶಕ್ಕೆ ಮತ್ತೇ ನರೇಂದ್ರ ಮೋದಿ ಅವರು ಬೇಕು ಎಂದು ಆ ರಾಜ್ಯಗಳ ಮತದಾರ ಪ್ರಭುಗಳು ತೀರ್ಪು ನೀಡಿದ್ದಾರೆ ಎಂದರು.
ಬಿಜೆಪಿ ಯುವ ಮುಖಂಡರಾದ ಡಾ. ಜ್ಞಾನೇಶ್ ಅವರು ಮಾತನಾಡಿ ಲೋಕಸಕಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಎನ್ಡಿಎಗೆ 400ಕ್ಕು ಹೆಚ್ಚು ಸ್ಥಾನಗಳು ಲಭಿಸಲಿದ್ದು, ವಿಶ್ವ ನಾಯಕ ನರೇಂದ್ರ ಮೋದಿ ಮತ್ತೇ ಪ್ರಧಾನಿಯಾಗಲಿದ್ದಾರೆ. ಇದನ್ನು ಯಾರಿಂದಲು ತಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿಯೂ ಸಹ ಈ ಫಲಿತಾಂಶ ಬಿಜೆಪಿ ಸಂಘಟನೆಗೆ ಹೆಚ್ಚಿನ ಬಲವನ್ನು ತಂದು ಕೊಟ್ಟಿದೆ. ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗುತ್ತಿದೆ ರಾಜ್ಯದ ಜನರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಏಕಪ್ಪಾ ಗೆಲ್ಲಿಸಿದೆವು ಎಂಬ ಭಾವನೆಯಲ್ಲಿ ಇದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ತೆರಿಗೆದಾರರಿಗೆ ಮತ್ತಷ್ಟು ಹೊರೆ ಮಾಡಿ, ಸಾಮಾನ್ಯ ಜನರು ಹಾಗೂ ಮಧ್ಯಮ ವರ್ಗಗಳನ್ನು ಸುಲಿಗೆ ಮಾಡುತ್ತಿವೆ. ಎಲ್ಲರ ಅಭಿವೃದ್ದಿ ದೇಶದ ಪ್ರಗತಿ ಎಂದು ಭಾವಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಪರ ಯೋಜನೆಗಳು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಹೀಗಾಗಿ ಮತ್ತೇ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಡಾ. ಜ್ಞಾನೇಶ್ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಎಂ ಡಿ ಉಮೇಶ್, ಮಧುರಾಯ್ ಜಿ ಶೇಟ್, ಪ್ರಭು ಮೇಸ್ತ್ರಿ, ನಟರಾಜ್ ಉಪ್ಪಿನ್, ಜಯಲಕ್ಷ್ಮಿ, ಮುಖಂಡರಾದ ಶಿವಯೋಗಿ, ಗುರುಮೂರ್ತಿ ಹಿರೇಶಕುನ, ಯಶೋಧರ ಮತ್ತಿತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post