ಕಲ್ಪ ಮೀಡಿಯಾ ಹೌಸ್ | ಸೊರಬ |
ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಮತಗಳ ನಡುವೆ ಕಂದಕ ಸೃಷ್ಠಿಸದೇ ಎಲ್ಲರೂ ಒಂದೇ ಎಂಬ ಸಮಷ್ಠಿ ಪ್ರಜ್ಞೆಯನ್ನು ಪ್ರತಿಯೊಬ್ಬರೂ ಮೆರೆಯಬೇಕು ಎಂದು ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.
75ನೆಯ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ತಾಲೂಕಿನ ಬಿಳವಾಣಿ ಗ್ರಾಮದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ರಾಷ್ಟ್ರ ಧ್ವಜದೊಂದಿಗೆ ಸ್ವಾತಂತ್ರ ನಡಿಗೆ ಪಾದಯಾತ್ರೆ ಕಾರ್ಯಕ್ರಮದ ನಂತರ, ಪಟ್ಟಣದ ಶ್ರೀ ರಂಗನಾಥ ದೇವಸ್ಥಾನ ಮುಂಭಾಗ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರಕ್ಕಾಗಿ ಅನೇಕ ಮಹನೀಯರ ತ್ಯಾಗ ಬಲಿದಾನವಿದ್ದು, ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಸನ್ನಿವೇಶ ಸೃಷ್ಠಿಯಾದಲ್ಲಿ ಪ್ರತಿಯೊಬ್ಬ ಭಾರತೀಯ ಪ್ರಜೆಗಳು ಜಾತಿ, ಧರ್ಮಗಳ ಭೇದವಿಲ್ಲದೆ ಒಗ್ಗಟ್ಟಾಗಬೇಕು ಎಂದರು.


ಪಟ್ಟಣದಲ್ಲಿ ಪ್ರಥಮ ದರ್ಜೆ ಕಾಲೇಜು ಸಮೀಪದಲ್ಲಿ ವಿದ್ಯಾರ್ಥಿಗಳು ಮಧು ಬಂಗಾರಪ್ಪ ಅವರಿಗೆ ರಾಖಿ ಕಟ್ಟಿದ್ದು ವಿಶೇಷವಾಗಿತ್ತು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್, ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಮಹಿಳಾ ಘಟಕ ಅಧ್ಯಕ್ಷೆ ಸುಜಾತಾ ಜೋತಾಡಿ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ. ಪಾಟೀಲ್, ಮಾಜಿ ಸಚಿವ ಶಿವಮೂರ್ತಿ ನಾಯಕ್, ಮಾಜಿ ಶಾಸಕ ಮಹಾಲಿಂಗಪ್ಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಜಿಪಂ ಮಾಜಿ ಸದಸ್ಯರಾದ ತಾರಾ ಶಿವಾನಂದ, ರಾಜೇಶ್ವರಿ ಗಣಪತಿ, ಶಿವಲಿಂಗೇಗೌಡ, ವೀರೇಶ್ ಕೊಟಗಿ, ಪ್ರಮುಖರಾದ ಪಿ.ಎಸ್. ಮಂಜುನಾಥ್, ಕೆ. ಮಂಜುನಾಥ ಹಳೇಸೊರಬ, ಎಚ್. ಗಣಪತಿ, ಗೋಣಿ ಮಾಲತೇಶ್, ಕೆ.ಪಿ. ರುದ್ರಗೌಡ, ಪರಶುರಾಮ ಸಣ್ಣಬೈಲ್, ರಾಮಪ್ಪ ಸಣ್ಣಬೈಲ್, ರವಿ ಬರಗಿ, ಸಂಜೀವ ನೇರಲಗಿ, ಕಿರಣ್, ಪಾಂಡು ಕೊಡಕಣಿ, ಗಿರೀಶ್ ಮಂಚಿ, ಶ್ರೀಕಾಂತ ಚಿಕ್ಕಶಕುನ, ಪ್ರವೀಣ್ ಶಾಂತಗೇರಿ, ಸಂಜಯ್ ಸೇರಿದಂತೆ ಸಾವಿರಾರು ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post