ಹೆಲ್ಮೆಟ್ ಧರಿಸಿ ವಾಹನ ಚಲಿಸಿ, ಮದ್ಯ ಸೇವಿಸಿ ವಾಹನ ಚಲಾಯಿಸಬಾರದು, ಅತಿ ವೇಗ ತಿಥಿ ಬೇಗ, ಅತಿಯಾದ ವೇಗ ಸಾವಿಗೆ ಆಹ್ವಾನ, ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಹೀಗೆ ವಿವಿಧ ಘೋಷಣೆಗಳೊಂದಿಗೆ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಬೈಕ್ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು.
Also read: ಸ್ಟಾರ್ಟ್ ಅಪ್ ಪರಿಸರ ವಿಕಸನಕ್ಕೆ ಉತ್ತಮ ವೇದಿಕೆ ಅನ್ವೇಷಣಾ ಸಂಸ್ಥೆ: ಪಾಟೀಲ್
ಪೋಷಕರು ಸಹ ತಮ್ಮ ಮಕ್ಕಳಿಗೆ ಬೈಕ್ಗಳನ್ನು ನೀಡುವುದನ್ನು ನಿಲ್ಲಿಸಬೇಕು. ಅಪ್ರಾಪ್ತರು ಅಪಘಾತ ಪಡಿಸಿದರೆ ಅದಕ್ಕೆ ಪೋಷಕರೇ ನೇರವಾದ ಹೊಣೆಯಾಗಬೇಕಾಗುತ್ತದೆ. 18 ವರ್ಷ ಮೇಲ್ಪಟ್ಟವರು ವಾಹನ ಚಾಲನಾ ಪರವಾನಗಿ ಪಡೆದ ನಂತರವೇ ಬೈಕ್ಗಳನ್ನು ಚಲಾಯಿಸಬೇಕು. ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದರಿಂದ ಅಪಘಾತದ ವೇಳೆ ಪ್ರಾಣಾಪಾಯದಿಂದ ಪಾರಾಗಬಹುದಾದ ಅನೇಕ ನಿದರ್ಶನಗಳಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ವಾಹನಗಳೊಂದಿಗೆ ಅಗತ್ಯ ಕಾಗದ ಪತ್ರಗಳನ್ನು ಹೊಂದಬೇಕು ಎಂದು ತಿಳಿಸಿದರು.
ಜಾಥಾದಲ್ಲಿ ಪಿಎಸ್ಐ ಎಚ್.ಎನ್. ನಾಗರಾಜ್, ಹೆಡ್ ಕಾನ್ಸ್ಟೇಬಲ್ಗಳಾದ ನಾಗೇಶ್, ಗಿರೀಶ್ ಡೋಂಗ್ರೆ, ಕೊಟ್ರೇಶಪ್ಪ, ಸೇರಿದಂತೆ ಪೊಲೀಸ್ ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ಅಧ್ಯಾಪಕರು, ಎನ್ಸಿಸಿ ಘಟಕದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post