ರಾಜ್ಯದ ಪದವಿ ಪೂರ್ವ ವಿಭಾಗದಲ್ಲಿ ಕೊರತೆ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ ವಹಿಸುವ ಜೊತೆಗೆ ಮಕ್ಕಳಲ್ಲಿನ ಪ್ರತಿಭೆಗಳ ಅನಾವರಣಕ್ಕೆ ಪ್ರೋತ್ಸಾಹಿಸಲು ಹೆಚ್ಚಿನ ಅನುದಾನ ನೀಡಲು ಒತ್ತು ನೀಡುವುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಹೇಳಿದರು.
ಗ್ರಾಮೀಣ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಇಲಾಖೆಯು ಸಹ ಸಹಕಾರ ನೀಡುತ್ತಿದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲು ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದ ಅವರು, ತಾಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಬೆಳಗಾವಿ ಅಧಿವೇಷನದ ತರುವಾಯ ಗ್ರಾಪಂ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೊತೆಗೆ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿಯೇ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
Also read: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ: ಸಚಿವ ಮಧು ಬಂಗಾರಪ್ಪ ಹೇಳಿಕೆ ಏನು?
ಎಸ್ಡಿಎಂಸಿ ಅಧ್ಯಕ್ಷ ಬಿ.ಕೆ. ಯುವರಾಜ್ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಸಿ.ಆರ್. ಪರಮೇಶ್ವರ್, ತಹಶೀಲ್ದಾರ್ ಎಚ್.ಎ. ಸರಕಾವಸ್, ತಾಪಂ ಇಒ ಡಾ. ಎನ್.ಆರ್. ಪ್ರದೀಪ್ ಕುಮಾರ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಆರ್. ಲಿಂಗರಾಜ ಒಡೆಯರ್, ಉಪಪ್ರಾಂಶುಪಾಲ ಡಿ. ಫಕೀರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಚ್. ಮನೋಹರ್, ಪ್ರೌಢಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಂ. ಹಾಲಪ್ಪ, ಶಿಕ್ಷಕರ ಸಂಘದ ಜಿ.ಆರ್. ಗಿರಿಧರ್, ಎಚ್.ಜಿ. ಗಣಪತಿ, ಇಬ್ರಾಹಿಂ ದೊಡ್ಮನಿ, ಶಶಿಕಲಾ, ಎಸ್ಡಿಎಂಸಿ ಸದಸ್ಯರಾದ ಪ್ರತಿಭಾ, ಜಯಶೀಲ, ಪ್ರಮುಖರಾದ ಎಚ್. ಗಣಪತಿ, ಎಂ.ಡಿ. ಶೇಖರ್, ಸದಾನಂದಗೌಡ ಬಿಳಗಲಿ, ಎಚ್. ಅಣ್ಣಪ್ಪ ಹಾಲಘಟ್ಟ, ಎಲ್.ಜಿ. ರಾಜಶೇಖರ, ಕೆ.ಪಿ. ರುದ್ರಗೌಡ, ಕೆ.ವಿ. ಗೌಡ, ರಾಜೇಂದ್ರ ನಾಯ್ಕ್, ಸೇರಿದಂತೆ ಪುರಸಭೆ ಸದಸ್ಯರು ಮತ್ತಿತರರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post