ಕಲ್ಪ ಮೀಡಿಯಾ ಹೌಸ್
ಸೊರಬ: ದೇಶದ ರಾಜಕಾರಣದಲ್ಲಿ ರಾಜೀವ ಗಾಂಧಿ ಹಾಗೂ ರಾಜ್ಯ ರಾಜಕಾರಣದಲ್ಲಿ ದೇವರಾಜ ಅರಸು ಅವರ ಹೆಸರು ಚಿರಸ್ಥಾಯಿಯಾಗಿದ್ದು, ಅವರು ಸರ್ವ ಸಮುದಾಯಗಳು ಒಪ್ಪಿದ ನಾಯಕರಾಗಿದ್ದರು ಎಂದು ಕಾಂಗ್ರೆಸ್ ಮುಖಂಡ, ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪಟ್ಟಣದ ಬಂಗಾರಧಾಮದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ರಾಜೀವ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉಳುವವನೇ ಹೊಲದೊಡೆಯ ಕಾಯ್ದೆ ಸೇರಿದಂತೆ ಸಾಮಾಜಿಕ ಸಮಾನತೆ ಹಿತದೃಷ್ಟಿಯಿಂದ ಕಡುಬಡವರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಿ ಬಡವರ ಬದುಕಿನಲ್ಲಿ ಹೊಸ ಆಶಾಕಿರಣ ಮತ್ತು ಹೊಸ ಬದುಕನ್ನು ರೂಪಿಸಿದ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ರೈತರ ಏಳಿಗೆಗೆ ಅನೇಕ ಕಾಯ್ದೆಗಳನ್ನು ಜಾರಿಗೆ ತಂದರು. ಇಬ್ಬರೂ ಸಹ ಹಿಂದುಳಿದ ಸಮಾಜದ ಧೃವತಾರೆಗಳು ಎಂದು ಬಣ್ಣಿಸಿದರು.
ರಾಷ್ಟ್ರ ರಾಜಕಾರಣದಲ್ಲಿ ರಾಜೀವ ಗಾಂಧಿಯವರು ಅಪ್ರತಿಮ ದೂರದೃಷ್ಟಿ ಹೊಂದಿದ್ದ ವ್ಯಕ್ತಿಯಾಗಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಆಧುನಿಕ ಭಾರತದ ನಿರ್ಮಾಣದಲ್ಲಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಪಂಚಾಯತ್ರಾಜ್ ವ್ಯವಸ್ಥೆ ಬಲಗೊಳಿಸಲು ಅವರು ಕೈಗೊಂಡ ನಿರ್ಧಾರಗಳು ಕಾರಣವಾಯಿತು. ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನೆಡಿಸಿದ ಬಗ್ಗೆ ಯುವ ಸಮೂಹ ಅರಿತುಕೊಳ್ಳಬೇಕು. ಐಟಿ ಕ್ಷೇತ್ರದಲ್ಲಿ ಮಾಡಿದ ಕ್ರಾಂತಿಯಿಂದ ವಿಶ್ವದದಲ್ಲಿ ಬಲಿಷ್ಠಗೊಳ್ಳಲು ಸಾಧ್ಯವಾಯಿತು ಎಂದರು.
ಬ್ಲಾಕ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತಾಲೂಕು ಅಧ್ಯಕ್ಷ ಮುಹಮ್ಮದ್ ಸಾಜೀದ್, ಯುವ ಘಟಕದ ಅಧ್ಯಕ್ಷ ಎಂ. ಕರುಣಾಕರ, ಎನ್ಎಸ್ಯುಐ ಅಧ್ಯಕ್ಷ ವೀರೇಂದ್ರ ಪಾಟೀಲ್. ಪುರಸಭೆ ಸದಸ್ಯೆ ಸುಲ್ತಾನಬೇಗಂ, ಕಾಂಗ್ರೆಸ್ ಮುಖಂಡರಾದ ಗಣಪತಿ ಹುಲ್ತಿಕೊಪ್ಪ, ವೈ.ಜಿ. ಪುಟ್ಟಸ್ವಾಮಿ, ಎಂ.ಡಿ. ಶೇಖರ್, ಪರಶುರಾಮ ಸಣ್ಣಬೈಲ್, ಮೆಹಬೂಬ್ ಬಾಷಾ, ಸಿರಾಜುದ್ಧೀನ್, ಇರ್ಫಾನ್ ಬಾಷಾ, ಮೆಹಬೂಬ್ ಅಲಿ, ಮುಕ್ತಾರ್ ಬಾಷಾ, ಅಯ್ಯೂಬ್ ಖಾನ್, ಜಿಯಾವುಲ್ಲಾ, ಬಸವರಾಜ ಸಾರೇಕೊಪ್ಪ, ಈಶ್ವರಪ್ಪ ಗೋಪಾಲಪ್ಪ, ಶೇಖರಪ್ಪ ಸೇರಿದಂತೆ ಮತ್ತಿತರರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post