No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ವೈಜ್ಞಾನಿಕ ನಾಗಾಲೋಟದಲ್ಲಿ ಕೆಲವು ಆದರ್ಶಗಳು ಮರೆಯಾಗಿವೆ: ವೀರಸೋಮೇಶ್ವರ ಶ್ರೀ ಆತಂಕ

kalpa News by kalpa News
December 24, 2021
in ಸೊರಬ
0
ವೈಜ್ಞಾನಿಕ ನಾಗಾಲೋಟದಲ್ಲಿ ಕೆಲವು ಆದರ್ಶಗಳು ಮರೆಯಾಗಿವೆ: ವೀರಸೋಮೇಶ್ವರ ಶ್ರೀ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ವೈಜ್ಞಾನಿಕ ನಾಗಾಲೋಟದಲ್ಲಿ ಕೆಲವು ಆದರ್ಶಗಳು ಮರೆಯಾಗಿವೆ. ಭಾರತೀಯ ಸಂಸ್ಕೃತಿ, ಆದರ್ಶಗಳನ್ನು ಮುಂದಿನ ಪೀಳಿಗೆಗೆ ಅರುಹದಿದ್ದರೆ ದೇಶದ ನೈತಿಕ ಅದಃಪತನಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶ್ರೀಗಳು ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ರಂಗಮಂದಿರದಲ್ಲಿ ಶುಕ್ರವಾರ ಶ್ರೀ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ರಾಜ್ಯ ಸುರಭಿಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ನಮ್ಮ ಪೂರ್ವಿಜರು ಸರ್ವ ಜನಾಂಗದ ಏಳ್ಗೆಗಾಗಿ ಹಲವಾರು ಸನ್ಮಾರ್ಗಗಳನ್ನು ವ್ಯವಸ್ಥಿತವಾಗಿ ಇರಿಸಿ ಹೋಗಿದ್ದಾರೆ. ಅವರು ನೀಡಿದ ಆದರ್ಶ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದರೆ ಸಮಾಜದಲ್ಲಿನ ಹಲವು ವಿಧದ ಸಾಧಕರನ್ನ, ಸೇವಕರನ್ನ, ಸನ್ಮಾರ್ಗಿಗಳನ್ನು ಹುಡುಕಿ ಗೌರವಿಸುವ ಸಂಪ್ರದಾಯ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸುರಭಿ ಸೇವಾ ಟ್ರಸ್ಟ್ ಕಾರ್ಯ ಶ್ಲಾಘನೀಯ, ಇನ್ನಷ್ಟು ಇಂತಹ ಸತ್ಕಾರ್ಯ ಟ್ರಸ್ಟ್ ನಡೆಸಲಿ ಎಂದರು.

ದೇಶದ ಬೆನ್ನೆಲುಬು ರೈತ ಇಂತಹ ರೈತ ಇಂದು ಕೇವಲ ಮತಬ್ಯಾಂಕಿಗಷ್ಟೆ ಸೀಮಿತವಾಗಿದ್ದಾನೆ. ದೇಶದ ಅಭಿವೃದ್ಧಿಗೆ ಪೂರಕವಾಗುವಷ್ಟು ಭೂಮಿ ಇದ್ದರೂ ದುಡಿಯಲಾರದೆ ಪಟ್ಟಣದ ಕಡೆ ವಲಸೆ ಹೋಗುವಂತಹ ಸ್ಥಿತಿಯನ್ನು ನಮ್ಮ ಸರ್ಕಾರಗಳು ತಂದೊಡ್ಡಿವೆ. ದುಡಿಯುವ ಕೈಗಳಿಗೆ ಕೂತು ಉಣ್ಣುವಂತಹ ಸವಲತ್ತು ನೀಡಿ ಅವರನ್ನ ಸೋಮಾರಿಗಳನ್ನಾಗಿಸಿದ್ದಾರೆ. ದೇಶದ ಅನೇಕ ವಿಧದ ತಾರತಮ್ಯತೆ, ಜಾತಿ ಸಂಘರ್ಷಗಳ ನಿಯಂತ್ರಣಕ್ಕೆ ಮೊದಲು ದುಡಿಯುವ ಕೈಗಳಿಗೆ ಅವಕಾಶ, ಸೌಲಭ್ಯ ನೀಡಬೇಕು. ಮತಾಂತರ ಪಿಡುಗು ದೇಶದ ಸಂಸ್ಕೃತಿಯ ಜೊತೆಗೆ ಕೌಟುಂಬಿಕ ವಿಘಟನೆಗಳಿಗೆ ಕಾರಣವಾಗುತ್ತಿದೆ. ಇಂತಹ ಅನಿಷ್ಟ ಸಂಸ್ಕೃತಿಯನ್ನು ಹೊಡೆದೋಡಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವವೂ ಹೌದು ಎಂದರು.

ದೇಶದ ಸುವ್ಯವಸ್ಥೆಯಲ್ಲಿ ಕೃಷಿ ಸೇವೆ, ಸೇನೆಯಲ್ಲಿನ ಸೇವಕರು, ಪತ್ರಿಕೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಇವುಗಳ ಮೌಲ್ಯ ಕುಸಿಯದಂತೆ ನೋಡಿಕೊಳ್ಳಬೇಕು. ದೇಶ ಪ್ರೇಮ, ಸೇವಾ ಮನೋಭಾವ ಬೆಳೆಸಿಕೊಂಡು ಭವ್ಯಭಾರತದ ಸಂಸ್ಕೃತಿಯನ್ನು ಕಾಪಾಡಿಕೊಳ್ಳಬೇಕು ಎಂದರು.

ಸುರಭಿಶ್ರೀ ಪ್ರಶಸ್ತಿ ಸ್ವೀಕರಿಸಿದ ಖ್ಯಾತ ಚಿತ್ರನಟಿ ಉಮಾಶ್ರೀ ಭ್ರೂಣಹತ್ಯೆಯಂತಹ ಪಿಡುಗು ತೊಲಗಬೇಕು. ಹೆಣ್ಣುಮಕ್ಕಳ ಸಾಧನೆ, ಸೇವೆಯನ್ನು ಗುರುತಿಸಿ ಸಮಾಜದ ಮುಖ್ಯ ಸ್ತರಕ್ಕೆ ತರುವ ಕಾರ್ಯ ಇನ್ನಷ್ಟು ಆಗಬೇಕು. ಉಳ್ಳವರ ಸೇವೆಯ ಜೊತೆಗೆ ಉಳ್ಳದವರ ಸೇವೆಯನ್ನೂ ಪರಿಗಣಿಸಿ ಪ್ರಚುರಪಡಿಸುವಂತೆ ಸಂಘಸಂಸ್ಥೆಗಳು ಕಾರ್ಯನಿರ್ವಹಿಸಬೇಕು ಎಂದರು.

ಸುವರ್ಣ ನ್ಯೂಸ್‌ನ ಜಯಪ್ರಕಾಶ್ ಶೆಟ್ಟಿ, ಜಡೆ ಸಂಸ್ಥಾನ ಮಠದ ಡಾ.ಮಹಂತ ಶ್ರೀಗಳು, ದಿವಾಕರಭಾವೆ, ಚಿಕ್ಕಾವಲಿ ನಾಗರಾಜಗೌಡ, ಯೋಧ ಸದಾಶಿವಪ್ಪ, ರಜತ್ ವಿನಾಯಕ ಶೇಟ್ ಇವರುಗಳು ವಿವಿಧ ಸೇವಾ ಸಾಧನೆಯ ಹಿನ್ನೆಲೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಸುರಭಿ ಸೇವಾಟ್ರಸ್ಟ್ ನ ಟ್ರಸ್ಟೀ ಎಸ್.ಜಿ.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಶಾಂತಾಪುರ ಮಠದ ಶಿವಾನಂದ ಶಿವಾಚಾರ್ಯ ಶ್ರೀಗಳು, ಕಡೆನಂದಿಹಳ್ಳಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು, ಜೆ.ಶಿವಾನಂದಪ್ಪ, ಆರ್.ಸಿ.ಪಾಟೀಲ್, ವೇದಿಕೆಯಲ್ಲಿದ್ದರು.


ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actress Uma shriKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಚಿತ್ರನಟಿ ಉಮಾಶ್ರೀಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾನುವಾರುಗಳ ರಕ್ಷಣೆ ಮಾಡಿಕೊಳ್ಳುವಂತೆ ಭಾರತೀಯ ರೈಲ್ವೆ ಅಧಿಕಾರಿಗಳಿಂದ ಮನವಿ

Next Post

ಎಮ್‌ಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

kalpa News

kalpa News

Next Post
ಎಮ್‌ಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

ಎಮ್‌ಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL