ಕಲ್ಪ ಮೀಡಿಯಾ ಹೌಸ್ | ಸೊರಬ |
ಲಿಂಗಾಯತ, ಪರಿಶಿಷ್ಟ ಹಾಗೂ ಪರಿಶಿಷ್ಟ ಜಾತಿಗೆ ಹೆಚ್ಚಿಸಿರುವ ಮೀಸಲಾತಿಯನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ತಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಇದು ರಾಜನೀತಿಗೆ ವಿರೋಧಿಯಾಗಿದ್ದು, ಕಾಂಗ್ರೆಸ್ ನಾಯಕರಿಗೆ ಜನಹಿತಕ್ಕಿಂತ ಭ್ರಷ್ಟಾಚಾರವೆ ಮುಖ್ಯವಾಗಿದೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬೃಹತ್ ಬೆಂಗಳೂರು ಪ್ರಾಧಿಕಾರ ಹಾಗೂ ಕೊಳಚೆ ನಿಗಮ ಮಂಡಳಿಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
ಸಾಮಾನ್ಯ ಜನರ ಬದುಕನ್ನು ಉನ್ನತಮಟ್ಟದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರಕ್ಕೆ ಮಾತ್ರ ಸಾಧ್ಯವಾಗಿದ್ದು, ಈ ಬಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಹೇಳಿದರು.
ರೂ 900ಕೋಟಿ ವೆಚ್ಚದಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ರೂ 5ಸಾವಿರ ಕೋಟಿ ಅನುದಾನದಲ್ಲಿ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗುವುದು ಎಂದು ತಿಳಿಸಿದರು.
ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ತಾಲ್ಲೂಕಿನ ಬಗರ್ ಹುಕುಂ ಸಾಗುವಳಿದಾರರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮತ್ತೆ ಬಗರ್ ಹುಕುಂ ಹಕ್ಕುಪತ್ರ ನೀಡಲು ಅವ್ಯವಹಾರ ನಡೆಸಲು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಎಲೆಕ್ಷನ್ ಬಂದರೆ ಸಾಕು ಕಲೆಕ್ಷನ್ ಮಾಡಿಕೊಳ್ಳಲು ಮುಂದಾಗುವ ಮಧು ಬಂಗಾರಪ್ಪ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಪರೋಕ್ಷವಾಗಿ ಹೆಸರು ಹೇಳದೆ ವ್ಯಂಗ್ಯವಾಡಿದರು.
ಭವಿಷ್ಯದ ಚುನಾವಣೆ ಇದಾಗಿದ್ದು, ಉತ್ತರಾಖಂಡದಲ್ಲಿ ನಕ್ಸಲ್ ರ ಅಟ್ಟಹಾಸಕ್ಕೆ ಪೊಲೀಸರು ದುರ್ಮಣ ಹೊಂದಿದ್ದಾರೆ. ಶಾಂತಿ, ಸುವ್ಯವಸ್ಥೆಗೆ ಹಾಗೂ ಅಭಿವೃದ್ಧಿಗೆ ಡಂಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ಅವಶ್ಯಕ ಇದೆ ಎಂದು
ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಮೀಸಲಾತಿ ರದ್ದುಪಡಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ. ಅಭಿವೃದ್ಧಿ ಸಹಿಸದ ಕಾಂಗ್ರೆಸ್ ಅಭ್ಯರ್ಥಿ ಸೋಲಿಸುವುದೇ ಬಿಜೆಪಿ ಉದ್ದೇಶವಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ, ಕುಂದನ್ ಪರಿವಾರ್, ಶರಾವತಿ ರಾವ್, ಸುಧಾ ಶಿವಪ್ರಸಾದ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಎಂ.ಡಿ. ಉಮೇಶ್, ಮಲ್ಲಿಕಾರ್ಜುನ ವೃತ್ತಿಕೊಪ್ಪ, ದೇವೇಂದ್ರಪ್ಪ ಚನ್ನಾಪುರ, ಅಶೋಕ ಶೇಟ್, ರಾಜು ಕೆಂಚಿಕೊಪ್ಪ,ಈಶ್ವರ ಚನ್ನಪಟ್ಟಣ, ಗುರುಕುಮಾರ್ ಪಾಟೀಲ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post