No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳ ಲಗ್ಗೆ | ಅಪಾರ ಪ್ರಮಾಣದ ಮರಗಳ ಮಾರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2025
in ಸೊರಬ
0
ಸೊರಬ | ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳ ಲಗ್ಗೆ | ಅಪಾರ ಪ್ರಮಾಣದ ಮರಗಳ ಮಾರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ತಾಲ್ಲೂಕಿನ ಕಸಬಾ ಹೋಬಳಿ, ಗುಡವಿ ಗ್ರಾಪಂ ವ್ಯಾಪ್ತಿಯ ಕಂತನಹಳ್ಳಿ ಗ್ರಾಮದ ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳು ಲಗ್ಗೆ ಹಾಕಿದ್ದು ಅಪಾರ ಪ್ರಮಾಣದ ಮರಮಟ್ಟುಗಳ ಮಾರಣ ಹೋಮವಾಗಿದೆ.

ಕಂತನಹಳ್ಳಿ ಸನಂ 8ರಲ್ಲಿ ಒಟ್ಟು 533 ಎಕರೆ ಅರಣ್ಯವಿದೆ. ಇದಕ್ಕೆ ತಾಗಿಕೊಂಡು ಸಾರೆಮರೂರು ಗ್ರಾಮದ ಸನಂ 27ರಲ್ಲಿ 352 ಎಕರೆ ಅರಣ್ಯವಿದೆ. ಪ್ರಸ್ತುತ ಈ ಸನಂ ಗೆ ತಾಗಿಕೊಂಡು ಕೆಲ ಖಾಸಗಿ ಅಸ್ತಿಯೂ ಇದೆ. ಇದೇ ಸನಂ ನಲ್ಲಿ ಸುಮಾರು 15 ಎಕರೆ ಅತಿಕ್ರಮಣವೂ ಆಗಿದೆ.
ಇಲ್ಲಿ ಒತ್ತೂವರಿ ಅಥವಾ ಅತಿಕ್ರಮಣಕ್ಕಾಗಿ ನಾಶಪಡಿಸಲು ಸಜ್ಜು ನಡೆಯುತ್ತಿದ್ದಂತೆ ಗೋಚರಿಸುತ್ತಿದ್ದು ಬೆಲೆ ಬಾಳುವ ಮರಗಳನ್ನು ಕಟ್ಟಿಗೆ ಮಾಡಲು ಕತ್ತರಿಸಲಾಗಿದೆ. ಬೃಹತ್ ಪೈಕಸ್ ಮರವನ್ನು ಧರೆಗುರುಳಿಸಿದ್ದು ಸಾವಿರಾರು ಪಕ್ಷಿಗಳ ಆವಾಸ, ಆಹಾರಕ್ಕೆ ಕುತ್ತು ತರಲಾಗಿದೆ. ನೂರಾರು ಪಕ್ಷಿಗಳ ಮೊಟ್ಟೆ, ಮರಿಗಳು ಅಸು ನೀಗಿವೆ.

ಗುಂಜನೂರು ಗ್ರಾಮದ ಪುಟ್ಟರಾಜು ಬಿನ್ ಬಾಲಚಂದ್ರ, ಕೃಷ್ಣಮೂರ್ತಿ ಬಿನ್ ಶ್ರೀಕಾಂತ್, ಅನಿಲ್ ಕುಮಾರ್ ಬಿನ್ ಚಂದ್ರಪ್ಪ ಇವರ ವಿರುದ್ಧ ದೂರು ದಾಖಲಾಗಿದೆ. ಕಡಿಯಲು ಬಳಸಿದ ಮೆಷಿನ್ ಇತ್ಯಾದಿ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡು, ಇದರ ಹಿಂದೆ ಯಾರಿದ್ದಾರೆ ತನಿಖೆ ನಡೆಸಲಾಗುತ್ತಿದೆ.

ಜಾವೀದ್, ಆರ್ ಎಫ್ ಒ ಅರಣ್ಯ ಇಲಾಖೆ ಸೊರಬ ವಲಯ

ಬ್ರಿಟಿಷ್ ಅಧಿಕಾರಿಗಳಿಂದ ಪ್ರಶಂಸೆ ಪಡೆದ ಸೊರಬ ತಾಲ್ಲೂಕಿನ ೧೧೪ ಕಾನುಗಳಲ್ಲಿ ಪ್ರಸ್ತುತ ೧೪ ಕಾನುಗಳೂ ಪೂರ್ಣಪ್ರಮಾಣದಲ್ಲಿ ಉಳಿದಿಲ್ಲ. ಹಾಲಿ ಉಸ್ತುವಾರಿ ಸಚಿವರು ಹೊಸದಾಗಿ ಅರಣ್ಯ ಒತ್ತೂವರಿ, ನಾಶ ಮಾಡಬೇಡಿ ಎಂದು ಸೂಚಿಸುತ್ತಿದ್ದರೂ ಈಚೆಗೆ ಅವ್ಯಾಹತ ಕಾಡು ನಾಶವಾಗುತ್ತಿರುವುದು ಆತಂಕಕಾರಿ ಸಂಗತಿ.

ಶ್ರೀಪಾದ ಬಿಚ್ಚುಗತ್ತಿ, ವೃಕ್ಷಲಕ್ಷ ಆಂದೋಲನದ ಕಾರ್ಯಕರ್ತ

ಭಾರತದಲ್ಲಿ ಇದ್ದಷ್ಟು ಅರಣ್ಯ ಕಾಯ್ದೆ ಇನ್ಯಾವ ದೇಶದಲ್ಲೂ ಇಲ್ಲ. ಆದರೆ, ಕಾನೂನು ಅರಿಯದೆ ಪಾಲನೆಯಾಗುತ್ತಿಲ್ಲ. ಜೀವವೈವಿಧ್ಯ ಕಾಯ್ದೆಯ ಪ್ರಕಾರ ಅರಣ್ಯ ಒತ್ತೂವರಿ, ಮರಕಡಿತಲೆಗೆ, ವನ್ಯಜೀವಿಗಳ ಬೇಟೆ ಗೆ ಅವಕಾಶ ಇಲ್ಲ. ಈ ಬಗ್ಗೆ ಮೇಲಿಂದಮೇಲೆ ಸರ್ಕಾರ ಹೇಳುತ್ತಿದ್ದರೂ ನಾಶ ತಡೆಗಟ್ಟಲಾಗುತ್ತಿಲ್ಲ. ಅರಣ್ಯ ಇಲಾಖೆ ತೀವ್ರ ಗಮನಹರಿಸಬೇಕು. ಕಾನೂನು ಕ್ರಮದಲ್ಲಿ ಯಾವುದೇ ಲಾಬಿಗೂ ಮಣಿಯಬಾರದು.

ಎಂ.ಆರ್. ಪಾಟೀಲ್, ಹಿರಿಯ ವಕೀಲರು, ಅಧ್ಯಕ್ಷರು, ಪರಿಸರ ಜಾಗೃತಿ ಟ್ರಸ್ಟ್‌ ಸೊರಬ

ಈಗ ಕಡಿದುರುಳಿಸಿರುವ 80ಕ್ಕೂ ಹೆಚ್ಚು ಮರಗಳು ಐದಾರು ಎಕರೆ ವಿಸ್ತೀರ್ಣದಲ್ಲಿದ್ದು ಬೆಲೆಬಾಳುವ ಪಾರಂಪರಿಕ ಮರಗಳಾಗಿವೆ. ನಂದಿ, ಹೊನ್ನೆ, ಬಣಗಿ, ಮತ್ತಿ, ಹುಣಾಲು ಮುಂತಾದ ಜಾತಿಯವದ್ದಾಗಿದೆ. ಈ ಮರಗಳ ಕಡಿತಲೆ ವೇಳೆ ಸಾವಿರಾರು ಮುಂಪೀಳಿಗೆ ಸಸ್ಯಗಳು ನಾಶಗೊಂಡಿವೆ.
ಈ ಅತಿಕ್ರಮಣದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದ್ದು ಅರಣ್ಯ ಇಲಾಖೆ ಬಾಯಿ ಮುಚ್ಚಿಸಿ ಪ್ರಕರಣವನ್ನು ತಿರುಚಲಾಗುತ್ತಿದೆ ಎಂಬ ಆರೋಪವೂ ಗ್ರಾಮಸ್ಥರಿಂದ ಕೇಳಿ ಬಂದಿದೆ. ಮುಖ್ಯವಾಗಿ ಇದು ನಿರ್ಜನ ಪ್ರದೇಶವೇನಲ್ಲ, ವಾಹನ ಓಡಾಡುವ ರಸ್ತೆ ವ್ಯವಸ್ಥೆ ಇರುವ ಇಲ್ಲಿ ಏನೆ ಚಟುವಟಿಕೆ ನಡೆದರೂ ಗಮನಕ್ಕೆ ಬರುವಂತಿದೆ. ಆದಾಗ್ಯೂ ಅರಣ್ಯ ಇಲಾಖೆ ಗಮನಕ್ಕೆ ಬಾರದಿರುವುದು ಪ್ರಶ್ನಾರ್ಹ ಎನ್ನುತ್ತಾರೆ ಸ್ಥಳೀಯರು.

ಒಂದುವರ್ಷದ ಈಚೆಗೆ ಸೊರಬದಲ್ಲಿ ಅವ್ಯಾಹತವಾಗಿ ಅರಣ್ಯ ನಾಶವಾಗಿದ್ದು ಚಂದ್ರಗುತ್ತಿ ಹೋಬಳಿಯಲ್ಲಿ ಅತಿ ಹೆಚ್ಚು, ಕಸಬಾ, ಉಳವಿ, ಕುಪ್ಪಗಡ್ಡೆ, ಜಡೆ ಭಾಗದಲ್ಲಿ ಒಂದಿಷ್ಟು ಕಾಡು ಅತಿಕ್ರಮಣ, ಮರಗಳ ನಾಶ ಪ್ರಕರಣ ಕಂಡುಬಂದಿದೆ. ಸಾಲದೆಂಬಂತೆ ಚಂದ್ರಗುತ್ತಿ ಭಾಗದಲ್ಲಿ ಅವ್ಯಾಹತ ಅನಧಿಕೃತ ಮರಳು ದಂದೆಯೂ ನಡೆಯುತ್ತಿದೆ.
ಚಂದ್ರಗುತ್ತಿ ಹೋಬಳಿಯ ಹೊಳೆಮರೂರು, ತೋರಣಗೊಂಡನಕೊಪ್ಪ, ಅಂದವಳ್ಳಿ, ಮುಟಗುಪ್ಪೆ, ಗೊಗ್ಗೆಹಳ್ಳಿ, ಹರಳಿಗೆ, ಕೋಡಂಬಿ ಇನ್ನೂ ಅನೇಕ ಕಡೆ ಅರಣ್ಯ ನಾಶವಾದ ಬಳಿಕ ಇದೀಗ ಕಂತನಹಳ್ಳಿ ಗ್ರಾಮದ ಸನಂ 8ರ ನಿತ್ಯ ಹರಿದ್ವರ್ಣದ ಸಮೃದ್ಧ ಕಾಡಿನಲ್ಲಿ ಅಪಾರ ಪ್ರಮಾಣದ ಬೆಲೆಬಾಳುವ ಪಾರಂಪರಿಕ ವೃಕ್ಷಗಳನ್ನು ಕಡಿದು ನಾಶಪಡಿಸಲಾಗಿದ್ದು ಪರಿಸರಕ್ಕೆ ತುಂಬಲಾರದ ನಷ್ಟವಾಗಿದೆ. ಅರಣ್ಯ ಘಾತುಕರು ಕಾನೂನಿನ ಕುಣಿಕೆಯಿಂದ ನುಣುಚಿಕೊಳ್ಳುವಲ್ಲಿ ಅರಣ್ಯ ಇಲಾಖೆಯೆ ಸಹಕರಿಸುತ್ತಿದೆಯಾ ಎಂಬ ಅನುಮಾನ ಕಾಣಿಸುತ್ತಿದೆ.

ಕೃಷಿ ಜಮೀನುಗಳು ಲೇಔಟ್ ಗಳಾಗಿ, ಅರಣ್ಯ ಭೂಮಿ ವಾಣಿಜ್ಯ ಬೆಳೆಗಾಗಿ ಪರಿವರ್ತನೆ ಹೊಂದುತ್ತಿರುವ ಸೊರಬದಲ್ಲಿ ಬಹುತೇಕ ಇನ್ನು ಮುಂದೆ ನೀರಿನ ಅಭಾವದ ಜೊತೆಗೆ ಆಹಾರ ಬೆಳೆಗಳು ಸಂಪೂರ್ಣ ಕಾಣೆಯಾಗಲಿದೆ ಎಂದು ಪರಿಸರಾಸಕ್ತ ಅನೇಕ ಅಧ್ಯಯನಕಾರರು ಆತಂಕ ವ್ಯಕ್ತಪಡಿಸಿದ್ದಾರೆ.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

19 ನಿಮಿಷ 17 ಸೆಕೆಂಡ್ ನಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಮೂಡಿಬಂದ ರಾಷ್ಟ್ರಗೀತೆ

Next Post

ಜೈನ ನಿರ್ವಾಣ ಉತ್ಸವ ವೇದಿಕೆ ಕುಸಿತ | 7 ಮಂದಿ ಸಾವು | 40ಕ್ಕೂ ಅಧಿಕ ಜನರಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೈನ ನಿರ್ವಾಣ ಉತ್ಸವ ವೇದಿಕೆ ಕುಸಿತ | 7 ಮಂದಿ ಸಾವು | 40ಕ್ಕೂ ಅಧಿಕ ಜನರಿಗೆ ಗಾಯ

ಜೈನ ನಿರ್ವಾಣ ಉತ್ಸವ ವೇದಿಕೆ ಕುಸಿತ | 7 ಮಂದಿ ಸಾವು | 40ಕ್ಕೂ ಅಧಿಕ ಜನರಿಗೆ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
ಮೇ.9ರಂದು ಚಿತ್ರದುರ್ಗದಲ್ಲಿ ಬಿಎಸ್‍ವೈ ಅಭಿಮಾನೋತ್ಸವ: ಶಾಸಕ ಅರಗ ಜ್ಞಾನೇಂದ್ರ

ಮೇ.9ರಂದು ಚಿತ್ರದುರ್ಗದಲ್ಲಿ ಬಿಎಸ್‍ವೈ ಅಭಿಮಾನೋತ್ಸವ: ಶಾಸಕ ಅರಗ ಜ್ಞಾನೇಂದ್ರ

May 7, 2026
ಯೋಗಾಸನಕ್ಕೆ ಜಾಗತಿಕ ವೇದಿಕೆ | ಭಾರತದ ಆತಿಥ್ಯದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌

ಯೋಗಾಸನಕ್ಕೆ ಜಾಗತಿಕ ವೇದಿಕೆ | ಭಾರತದ ಆತಿಥ್ಯದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌

May 7, 2026
ಡಿಜಿಟಲ್ ವಂಚನೆ | ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಡಿಜಿಟಲ್ ವಂಚನೆ | ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

May 7, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಚಿಪ್ಪು ಹಂದಿಯ ಚಿಪ್ಪು ಮಾರಾಟ ಯತ್ನ ಹಿನ್ನೆಲೆ | ಮೂವರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL