ಕಲ್ಪ ಮೀಡಿಯಾ ಹೌಸ್ | ಸೊರಬ |
ಮಣಿಪಾಲ ಆರೋಗ್ಯಕಾರ್ಡ್ 2021ರ ನೋಂದಣಿಯನ್ನು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನ.30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಸಹ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರಸಾದ್ ಹೇಳಿದರು.
ಪಟ್ಟಣದ ವಿಪ್ರ ಸೌಹಾರ್ದ ಸಹಕಾರಿ ಬ್ಯಾಂಕ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಆರೋಗ್ಯ ಕಾರ್ಡ್ಗಳನ್ನು ಸುಲಭವಾಗಿ ನೋಂದಣಿ ಮಾಡಲು ಸರಳ ಹಾಗೂ ಪೂರ್ವಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡ್ನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಎಂದರು.
ಒಂದು ವರ್ಷ ಮತ್ತು ಎರಡು ವರ್ಷಗಳ ಯೋಜನೆಯ ಜೊತೆಗೆ ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬ ದ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎಪೈ ಆಸ್ಪತ್ರೆ ಉಡುಪಿ ಮತ್ತು ಮಣಿಪಾಲ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್, ಮಣಿಪಾಲ ಆಸ್ಪತ್ರೆ ಗೋವಾ, ಸೇರಿದಂತೆ ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾಲಯ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದರು.
ಕಾರ್ಡಿನ ಸದಸ್ಯತ್ವವು ಒಂದು ವರ್ಷದ ಅವಧಿಗೆ ಒಬ್ಬರಿಗೆ 300 ರೂ., ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ 600ರೂ., ಮತ್ತು `ಕುಟುಂಬ ಪ್ಲಸ್’ ಯೋಜನೆಗೆ ಅಂದರೆ 750ರೂ., ನಿಗದಿಪಡಿಸಲಾಗಿದೆ. ಎರಡು ವರ್ಷದ ಅವಧಿಗೆ ಒಬ್ಬರಿಗೆ 500ರೂ., ಕುಟುಂಬಕ್ಕೆ 800ರೂ., ಕೌಟುಂಬಿಕ ಪ್ಲಸ್ ಯೋಜನೆಗೆ 950 ರೂ., ನಿಗದಿ ಮಾಡಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಉಪಯೋಗಿಸಿ, ವೈದ್ಯರ ಸಮಾಲೋಚನೆ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆ ಶೇ.30 ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.12ರವರೆಗೆ ರಿಯಾಯಿತಿ ಮುಂತಾದ ಸೌಲಭ್ಯ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ವಿಪ್ರ ಸೌಹಾರ್ದ ಸಹಕಾರಿ ಬ್ಯಾಂಕ್, ಮೊ: 9916676886, ಸೈಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್, ಮೊ: 9538869791, ಕೃಷಿಕ ಸೌಹಾರ್ದ ಬ್ಯಾಂಕ್, ಮೊ: 8884101197, ಎನ್.ಎಸ್. ಪುಟ್ಟಪ್ಪ ಗೌಡ, ಮೊ: 9448721782 ಅಥವಾ ಮಹೇಶ್ ಗೋಖಲೆ, ಮೊ: 9986409875ಗೆ ಸಂಪರ್ಕಿಸುವಂತೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ಪ್ರತಿನಿಧಿಗಳಾದ ಶ್ರೀನಿವಾಸ ಭಾಗವತ್, ಅನಿಲ್ ನಾಯ್ಕ್, ವಿಪ್ರ ಸೌಹಾರ್ದ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ಸಿ. ರಾಘವೇಂದ್ರ, ಸೈಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್ ಸಿಬ್ಬಂದಿ ಕಿರಣ್, ಕೃಷಿಕ ಸೌಹಾರ್ದ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ್, ಮಹೇಶ್ ಗೋಖಲೆ ಸೇರಿದಂತೆ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post