Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬದ ಆಯುರ್ವೇದ ಆಸ್ಪತ್ರೆಯಲ್ಲಿ ಔಷಧ ಸಸ್ಯಗಳ ಭಂಡಾರ ರಾಜ್ಯಕ್ಕೇ ಮಾದರಿ

ಭವಿಷ್ಯದ ತಲೆಮಾರಿಗೆ ಸಸ್ಯಗಳ ಪರಿಚಯಿಸುವ ಗುರಿ | ಡಾ.ಎಂ.ಕೆ. ಮಹೇಶ್ ಅವರ ಮುತುವರ್ಜಿಯಿಂದ ಎದ್ದು ನಿಂತ ಸಸ್ಯ ಲೋಕ

June 25, 2023
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಶಿವಮೊಗ್ಗ ಜಿಲ್ಲೆಯ ಸೊರಬ #Soraba ತಾಲೂಕಿನ ಉದ್ರಿ ಗ್ರಾಮದಲ್ಲಿ ಮಾದರಿ ವೈದ್ಯರೊಬ್ಬರ ಆಸಕ್ತಿಯ ಪರಿಣಾಮ ರಾಜ್ಯಕ್ಕೇ ಮಾದರಿಯಾಗುವ ಕಾರ್ಯವೊಂದು ತಲೆಎತ್ತಿ ನಿಂತಿದ್ದು, ಇಡಿಯ ಮಲೆನಾಡೇ ಹೆಮ್ಮೆ ಪಡುವಂತಹದ್ದಾಗಿದೆ.

ಹೌದು… ಅಶ್ವಗಂಧ, ಶತಾವರಿ, ಶಿಗ್ರು, ಕಾಮಕಸ್ತೂರಿ, ಪಾರಿಜಾತ, ಶಮಿ, ಸೋಮವಾರ ಬೇರು ಹೀಗೆ ಸುಮಾರು 75ಕ್ಕೂ ಅಧಿಕ ಔಷಧ ಸಸ್ಯಗಳನ್ನು ತಾಲೂಕಿನ ಉದ್ರಿ ಗ್ರಾಮದ ಸರ್ಕಾರಿ ಆಯುರ್ವೇದ #Ayurveda ಚಿಕಿತ್ಸಾಲಯದ ಆವರಣದಲ್ಲಿ ಸಸಿಗಳ ನೆಟ್ಟಿರುವುದು ಮಾತ್ರವಲ್ಲದೇ ಬೆಳೆಸುವ ಪ್ರಕ್ರಿಯೆಯೂ ನಡೆಯುತ್ತಿದೆ. ಉದ್ಯಾನವು ಆಸ್ಪತ್ರೆಗೆ ಬರುವ ರೋಗಿಗಳಿಗೆ ಮನೋಲ್ಲಾಸ ನೀಡುತ್ತಿದೆ.
ದೊರೆತಿರುವ ದಾಖಲೆಗಳ ಪ್ರಕಾರ 1930ರಲ್ಲಿ ಆರಂಭವಾಗಿರುವ ಆಸ್ಪತ್ರೆಯು ತಾಲೂಕಿನಲ್ಲಿ ಉದ್ರಿ #Udri ಆಸ್ಪತ್ರೆ ಎಂದೇ ಖ್ಯಾತಿಯೂ ಇದೆ. ಇಲ್ಲಿ ಸೇವೆ ಸಲ್ಲಿಸಿ ಹೋದ ವೈದ್ಯರುಗಳು ಸಹ ಉತ್ತಮ ಸೇವೆ ನೀಡುವ ಮೂಲಕ ಉದ್ರಿ ಡಾಕ್ಟರ್ ಎಂದೇ ಗುರುತಿಸಿಕೊಂಡಿದ್ದಾರೆ.

ಪ್ರಸ್ತುತ ಇಲ್ಲಿನ ಆಸ್ಪತ್ರೆಯಲ್ಲಿ ಆಯುಷ್ #Ayush ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಕೆ. ಮಹೇಶ್ ಅವರು ಸುತ್ತಲಿನ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಜೊತೆಗೆ ಮುತುವರ್ಜಿ ವಹಿಸಿದ್ದರಿಂದ ಆಸ್ಪತ್ರೆಯ ಆವರಣದಲ್ಲೊಂದು ಔಷಧ ಸಸ್ಯಗಳ ಲೋಕ ಎದ್ದು ನಿಂತಿದೆ.
ಕ್ಯಾನ್ಸರ್ #Cancer ಕಾಯಿಲೆಗೆ ಲಕ್ಷಣಫಲ, ಕೊಬ್ಬು ಮತ್ತು ಸಕ್ಕರೆ ಕಾಯಿಲೆಗೆ ಬೆಟ್ಟದ ನೆಲ್ಲಿ, ರೋಗ ನಿರೋಧಕ ಶಕ್ತಿಗೆ ಅಶ್ವಗಂಧ, ಪಚನ ಕ್ರಿಯೆಗೆ ವಿಷ್ಣುಕಾಂತಿ, ಜೀರ್ಣಕ್ರಿಯೆಗೆ ಧಾಲ್ಚಿನ್ನಿ, ಮೂಳೆ ಮುರಿತಕ್ಕೆ ನೀಡುವ ಅಸ್ತಿಶೃಂಖಲ, ಗರ್ಭಕೋಶ ಕಾಯಿಲೆಗೆ ಬಳಕೆಯಾಗುವ ಅಶೋಕ, ಕರಳು ಸಂಬಂಧಿ ಕಾಯಿಲೆಗೆ ಬಿಲ್ವ, ಹೊಟ್ಟೆ ನೋವಿಗೆ ಕಛೂರ, ಕಿಡ್ನಿ ಸ್ಟೋನ್‍ಗೆ ರಾಣಫಲ ಸೇರಿದಂತೆ ವಿವಿಧ ಔಷಧೀಯ ಗುಣಗಳುಳ್ಳ ಮರೀಚ, ಜಲಬ್ರಾಹ್ಮಿ, ಅಪಮಾರ್ಗ, ಅಮಲಕಿ, ಚಿತ್ರಕ, ಗುಡೂಚಿ, ದೂಪದ ಮರ, ಅಸ್ಥಿಶೃಂಖಲ, ದೊಡ್ಡಪತ್ರೆ, ದೂರ್ವ, ಪಿಪ್ಪಲಿ ಅಶೋಕ, ಮಧುನಾಶಿನಿ, ಪಾನ್ ಪತ್ರೆ, ವಚ ಹೀಗೆ ಸುಮಾರು 75ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ.

ಪ್ರತಿಯೊಂದು ಸಸಿಗೂ ವೈಜ್ಞಾನಿಕವಾಗಿ, ಆಯುರ್ವೇದದಲ್ಲಿ #Ayurveda ಬಳಕೆಯಲ್ಲಿರುವ ಮತ್ತು ಆಡು ಭಾಷೆಯಲ್ಲಿ ಬಳಕೆಯಲ್ಲಿ ಹೆಸರಿನ ನಾಮಫಲಕದ ಜೊತೆಗೆ ಉಪಯೋಗದ ಕುರಿತು ಕಿರು ಮಾಹಿತಿ ನಾಮಫಲಕ ಅಳವಡಿಸಿರುವುದು ವಿಶೇಷ. ಪ್ರತಿ ಸಸಿಗೂ ಸ್ಥಳೀಯರ ಸಹಕಾರದೊಂದಿಗೆ ಹನಿ ನೀರಾವರಿ ವ್ಯವಸ್ಥೆ ಸಹ ಕಲ್ಪಿಸಲಾಗಿದೆ.

ಉದ್ರಿ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ಸ್ಥಳದ ಕೊರತೆಯ ನಡುವೆಯೂ ಗ್ರಾಮಸ್ಥರ ಮತ್ತು ಸ್ಥಳೀಯ ಗ್ರಾಪಂ ಸಹಕಾರದೊಂದಿಗೆ ಕಳೆದ ಮೂರು ವರ್ಷದಿಂದ ಔಷಧ ಸಸ್ಯಗಳ ಉದ್ಯಾನ ಮಾಡಲಾಗಿದೆ. ತಾವು ಸೇವೆ ಸಲ್ಲಿಸುವ ವೇಳೆಯಲ್ಲಿ ಗ್ರಾಮಸ್ಥರು ಸಹ ಉತ್ತಮ ಸಹಕಾರ ನೀಡುತ್ತಿದ್ದಾರೆ. ಗ್ರಾಮಸ್ಥರ ನೆರವಿನಿಂದ ಪರಿಸರ ದಿನ, ರಕ್ತದಾನ ಶಿಬಿರದಂತಹ ಅನೇಕ ಸಮಾಜಮುಖಿ ಕಾರ್ಯಗಳು ಸಹ ನಡೆದಿದೆ. ತಾಲೂಕು ಕೇಂದ್ರದಲ್ಲಿ 10 ಹಾಸಿಗೆಗಳ ಆಯುರ್ವೇದ ಆಸ್ಪತ್ರೆ ನಿರ್ಮಿಸಲು ಅನುಮೋದನೆಯ ಹಂತದಲ್ಲಿದ್ದು, ತಾಲೂಕು ಕೇಂದ್ರದ ಆಸ್ಪತ್ರೆಯ ಆವರಣದಲ್ಲಿಯೇ ಔಷಧ ವನ ಅಥವಾ ಉದ್ಯಾನ ಮಾಡುವ ಅಭಿಲಾಷೆ ಇದೆ.
– ಡಾ. ಎಂ.ಕೆ. ಮಹೇಶ್, ವೈದ್ಯಾಧಿಕಾರಿಗಳು, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಉದ್ರಿ

ಆಸ್ಪತ್ರೆಯ ಆವರಣದಲ್ಲಿ ಬೆಳೆದಿರುವ ಔಷಧೀಯ ಸಸ್ಯಗಳಿಂದ ಔಷಧವನ್ನು ತಯಾರಿಸುತ್ತಿಲ್ಲ. ಬದಲಿಗೆ ಮುಂದಿನ ಪೀಳಿಗೆಗೆ ಅಪರೂಪದ ಸಸ್ಯ ಪ್ರಭೇದಗಳನ್ನು ಪರಿಚಯಿಸಿ ಸಂರಕ್ಷಿಸುವ ಕಾರ್ಯ ನಡೆಯುತ್ತಿದೆ. ಇದಕ್ಕೆ ಸ್ಥಳೀಯ ಗ್ರಾಮಸ್ಥರು ಹಾಗೂ ಯುವಕರು ಸಹ ಕೈಜೋಡಿಸಿದ್ದಾರೆ. ಸಸಿಗಳನ್ನು ಖುದ್ದು ವೈದ್ಯರೇ ಹಾಸನ, ಚಿಕ್ಕಮಗಳೂರು, ಶಿರಸಿ ಸೇರಿದಂತೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಭಾಗದಿಂದ ಆಯ್ದು ತಂದಿದ್ದಾರೆ.
ಸ್ಥಳಾವಕಾಶವಿದಿದ್ದರೆ ಔಷಧ ವನವನ್ನೇ ಮಾಡುವ ಹಂಬಲ ಇಲ್ಲಿನ ವೈದ್ಯರದ್ದು. ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವ ಮಂದಿಯೇ ಹೆಚ್ಚು, ಆದರೆ, ಇಲ್ಲಿನ ಸರ್ಕಾರಿ ಆಯುವೇದ ಚಿಕಿತ್ಸಾಲಯ ಸುತ್ತಲಿನ ಹತ್ತಾರು ಗ್ರಾಮಗಳ ಜನತೆಗೆ ವರದಾನವಾಗಿದೆ. ಆಸ್ಪತ್ರೆಯ ಆವರಣದಲ್ಲಿನ ಔಷಧ ಉದ್ಯಾನ ಆಸ್ಪತ್ರೆಯ ಪರಿಸರವನ್ನೇ ಬದಲಿಸಿದ್ದು, ರೋಗಿಗಳಲ್ಲಿ ಮನೋಸ್ತೈರ್ಯವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ.

ನರೇಗಾ ಸದ್ಭಳಕೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಕ್ರಿಯಾಯೋಜನೆ ತಯಾರಿಸಿ ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲಾಗಿದೆ. 109 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಅನುದಾನದ ಕೊರತೆಯ ನಡುವೆ ನರೇಗಾ ವರದಾನವಾಗಿದೆ. ನರೇಗಾ ಸೇರಿದಂತೆ ಸುಮಾರು 2ಲಕ್ಷ ರೂ., ವೆಚ್ಚದಲ್ಲಿ ಸುಂದರ ಉದ್ಯಾನ ನಿರ್ಮಾಣವಾಗಿದೆ.
ಉದ್ರಿ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯವು ತಾಲೂಕಿನಲ್ಲಿಯೇ ಮಾದರಿಯಾಗಿದ್ದು, ಕೇವಲ ಆಸ್ಪತ್ರೆಯಾಗಿರದೆ, ಔಷಧ ಸಸ್ಯಗಳ ಭಂಡಾರವನ್ನೇ ಹೊತ್ತು ನಿಂತಿರುವುದು ಗ್ರಾಮಸ್ಥರಿಗೂ ಸಹ ಹೆಮ್ಮೆಯ ವಿಷಯವಾಗಿದೆ.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Kalahamsa Infotech private limited

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಜೂನ್ 25 ರ ನಾಳೆ ಸಾಮೂಹಿಕ ರಂಗಪ್ರವೇಶ: ಬನ್ನಿ ಅಪರೂಪದ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ

Next Post

ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿಎಂ ಸಿದ್ಧರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿಎಂ ಸಿದ್ಧರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!