ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಸಿದ್ಧಾರೂಢ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ರಜತ ಮಹೋತ್ಸವದ ಅಂಗವಾಗಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು ವಿಶೇಷ ಪೂಜೆ ಸಲ್ಲಿಸಿದರು.
Read Also: ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿರುವ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಪೋಟ: ಆತಂಕ
ಇಂದು ಮುಂಜಾನೆ ಶ್ರೀಗಳವರು ವಿಶೇಷ ಪಂಚಾಮೃತ ಅಭಿಷೇಕ ಹಾಗೂ ಪೂಜೆ ಸಲ್ಲಿಸಿದರು. ನಂತರ ಭಕ್ತಾದಿಗಳಿಗೆ ಮಂತ್ರಾಕ್ಷತೆ ನೀಡಿ ಅನುಗ್ರಹ ಮಾಡಿದರು.
ಮಠದ ವ್ಯವಸ್ಥಾಪಕರಾದ ಗೋಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿ ಆಚಾರ್, ಜಗನ್ನಾಥ, ಪ್ರಧಾನ ಅರ್ಚಕರಾದ ವೆಂಕಟೇಶ್, ಗುರುರಾಜಾಚಾರ್, ಅಡುಗೆ ವಿಜೇಂದ್ರ, ರಾಘವೇಂದ್ರ, ಮಧುಸೂದನ್, ಮಾಧವ ಮೂರ್ತಿ, ಅನಂತು, ರಮಾಕಾಂತ್, ಡಾ.ದಯಾವತಿ, ಸುಮಾ, ಶೇಷಗಿರಿ ಹಾಗೂ ಎಲ್ಲಾ ಭಕ್ತಾದಿಗಳಿಂದ ವಿಜೃಂಭಣೆಯಿಂದ ಇಂದಿನ ಕಾರ್ಯಕ್ರಮ ನಡೆಯಿತು.
Also Read: ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ
ಆಶೀರ್ವಾದ ಪಡೆದ ಶಾಸಕರು
ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇಂದು ಸಿದ್ಧಾರೂಢ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದರು.
ಇಂದು ಮುಂಜಾನೆ ಮಠಕ್ಕೆ ಭೇಟಿ ನೀಡಿದ ಶಾಸಕರು ಗುರುರಾಯರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತ ಸ್ವಾಮಿಗಳ ದರ್ಶನ ಪಡೆದು, ನಮನ ಸಲ್ಲಿಸಿ, ಆಶೀರ್ವಾದ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post