No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ಪ್ರಾಣಿ ಪ್ರೇಮಿಗಳು ನೋಡಲೇಬೇಕಾದ ಚಿತ್ರ A Dog Year!

A Dog Year

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಸಚಿನ್ ಪಾರ್ಶ್ವನಾಥ್
0
ಪ್ರಾಣಿ ಪ್ರೇಮಿಗಳು ನೋಡಲೇಬೇಕಾದ ಚಿತ್ರ A Dog Year!

ಪ್ರಾಣಿ ಪ್ರೇಮಿಗಳು ನೋಡಲೇಬೇಕಾದ ಚಿತ್ರ A Dog Year!

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | |

ಏನಾದ್ರೂ ಹೇಳೋಣ ಅಂದ್ಕೊಂಡ್ ಸುಮಾರ್ ದಿನ ಆಗಿದ್ವು. ಬರೆಯೋದೆ ಬಿಟ್ರಾ ಅಂತ ಬೈಯ್ಯೋರಿಗೆ ಏನೂ ಕಡಿಮೆ ಇರಲಿಲ್ಲ. ಅಂತೂ ಇವತ್ತು ಮನಸು ಮಾಡಿ ಒಂದು ಫಿಲಂ ಬಗ್ಗೆ ಹೇಳೋಣ ಅಂದ್ಕೊಂಡ್ ಕೂತೆ. 2009 ಅಲ್ಲಿ ಬಂದ A Dog Year ಅನ್ನೋದು ಫಿಲಂ ಹೆಸರು. ಅರವತ್ತರ ಅಸುಪಾಸಿನ ಒಬ್ಬ ವ್ಯಕ್ತಿ ಕುರಿತ ಕಥೆ. ಆತ ಒಬ್ಬ ನಾಯಿ ಪ್ರೇಮಿ. ಅದಾಗಲೇ ಕುಟುಂಬದಿಂದ ದೂರ ಉಳಿದು ತನ್ನದೇ ಪುಸ್ತಕ ಪ್ರಪಂಚದಲ್ಲಿ ಬದುಕುತ್ತಿದ್ದ ಒಬ್ಬ ಪ್ರಸಿದ್ಧ ಬರಹಗಾರ ಕೂಡ.

ಜಾನ್ ಪತ್ನಿ ಮತ್ತು ಮಗಳು ಎಲ್ಲೋ ದೂರದಲ್ಲಿ ಇರುತ್ತಿದ್ದು, ಆತನ ಬದುಕು ಇದ್ದ ಎರಡು ನಾಯಿಗಳು ಮತ್ತು ಪುಸ್ತಕದ ಜೊತೆ ಸಾಗುತ್ತಿತ್ತು. ಸ್ಟಾಂನ್ಲಿ ಮತ್ತು ಜೂಲಿಯಸ್ ಅವೆರಡು ನಾಯಿಗಳ ಹೆಸರು. ಹೀಗಿದ್ದಾಗ ಅವನ ಜೀವನದಲ್ಲಿ ಮತ್ತೊಂದು ನಾಯಿಯ ಪ್ರವೇಶ ಆಗುತ್ತದೆ. ಅವನು ಡಿವೋನ್. ಅದೆಷ್ಟು ನಿಷ್ಕಲ್ಮಶ, ಮುಗ್ಧ ಮತ್ತು ಅತ್ಯುತ್ಸಾಹಿತ ಅಂದರೆ ಜಾನ್ (ಜೇಫ್ ಬ್ರಿಜ್ಸ್ ) ಬದುಕು ಸಂಪೂರ್ಣವಾಗಿ ಬದಲಾಗಿ ಬಿಡುತ್ತದೆ. ಒಂದೂ ಕಾಲು ತಾಸಿನ ಚಿತ್ರ ನೀವು ನಿಜವಾಗಿ ನಾಯಿ ಪ್ರೇಮಿ ಆಗಿದ್ದರೆ ಖಂಡಿತ ರುಚಿಸುತ್ತದೆ.

ಎಷ್ಟು ಸರಳವಾಗಿ ನಾಯಿ ಮತ್ತು ಜಾನ್ ಬದುಕನ್ನು ಎರಡು ಸಮಾನಾಂತರ ರೇಖೆಗಳಲ್ಲಿ ಚಿತ್ರ ಕೊಂಡೊಯ್ಯುತ್ತದೆ ಎಂದರೆ ಅದರ ಆನಂದವೇ ಬೇರೆ. ಮನುಷ್ಯನ ಬದುಕನ್ನು ಅವನ ಅತಿ ನೆಚ್ಚಿನ ಜೀವದ ಕಣ್ಣುಗಳಲ್ಲಿ ನೋಡುವ ಪ್ರಯತ್ನ ಎಂದೇ ಹೇಳಬಹುದು. 2009 ರಲ್ಲಿ ತೆರೆ ಕಂಡ ಈ ಚಿತ್ರದಲ್ಲಿ ಬೆರಳೆಣಿಕೆಯ ಕಲಾವಿದರು ಇದ್ದು ಎಂದಿನಂತೆ ಜೇಫ್ ನೀರು ಕುಡಿದಷ್ಟೇ ಸರಳವಾಗಿ ಅಭಿನಯಿಸಿದ್ದು, ನಿಜವಾಗಿ ಆತನೊಂದಿಗೆ ಪೈಪೋಟಿಗೆ ಬಿದ್ದಂತೆ ಡಿವೋನ್ ನಾಯಿ ಅಭಿನಯಿಸಿದೆ. ಸ್ಟಾಂನ್ಲಿಯ ಸಾವು ಸೇರಿದಂತೆ ಡಿವೋನ್ ಇರುವ ಹಲವು ದೃಶ್ಯಗಳು ಕಣ್ಣಾಲಿಗಳಲ್ಲಿ ನೀರು ತುಂಬಿಸಿದರೆ ಅಚ್ಚರಿ ಏನಲ್ಲ. ಈಗಲೂ ಈ ಚಿತ್ರ Hotstar ನಲ್ಲಿ ಲಭ್ಯ.

ಈ ಚಿತ್ರ ನೋಡುವಾಗ, ರೋಹಿತ್ ಚಕ್ರತೀರ್ಥ ಅವರ ಗಂಧದಮಾಲೆ ಪುಸ್ತಕದಲ್ಲಿ ಬರುವ ಒಂದು ಘಟನೆ ನೆನಪಿಗೆ ಬಾರದೆ ಇರದು. ಕ್ಯಾನ್ಸರ್ ಪೀಡಿತ ಕೊನೆಯ ಹಂತದಲ್ಲಿದ್ದ ಸಾಕು ನಾಯಿ ಬೇಲ್ಕರ್‌ಗೆ ದಯಾಮರಣದ ಚುಚ್ಚುಮದ್ದು ಕೊಟ್ಟ ಡಾಕ್ಟರ್ ಮೈಕ್ ಶಿಷ್ಟಾಚಾರ ಪಾಲಿಸಿ, ರಾನ್ ಕುಟುಂಬದೊಂದಿಗೆ ಕೆಲವು ನಿಮಿಷಗಳನ್ನು ಕಳೆದರು. ಬೆಕ್ಕು ನಾಯಿಗಳಿಗೆಲ್ಲ ಹೆಚ್ಚೆಂದರೆ 12 ವರ್ಷ ಬದುಕುತ್ತವೆ. ಪಾಪ ಅಷ್ಟು ಚಿಕ್ಕ ಆಯುಸ್ಸನ್ನು ದೇವರು ಯಾಕೆ ಕೊಟ್ಟನೋ ಏನೋ – ಎಂಬ ಮಾತು ಬಂತು. ಅದುವರೆಗೆ ಆ ಎಲ್ಲ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ರಾನ್ ಮಗ ಶೇನ್ ಥಟ್ಟನೆ “ಯಾಕೆ ಅನ್ನೋದು ನನಗೆ ಗೊತ್ತು ಡಾಕ್ಟರ್” ಎಂದ.

“ಹೌದ?”

“ಹೌದು” ಎನ್ನುತ್ತಾ ಎಲ್ಲರ ಮಧ್ಯೆ ಜಿಗಿದು ಡಾಕ್ಟರ್ ಮೈಕ್ ರನ್ನು ನೋಡುತ್ತ ಹೇಳಿದ “ನೋಡಿ ಡಾಕ್ಟರ್, ಈಗ ಮನುಷ್ಯ 100 ವರ್ಷ ಬದುಕ್ತಾ‌ನೆ. ಯಾಕೆ ಅಷ್ಟು ದೊಡ್ಡ ಲೈಫ್ ಕೊಟ್ಟಿದ್ದಾನೆ ದೇವರು ಹೇಳಿ. ಯಾಕೇ ಅಂದ್ರೆ ಮನುಷ್ಯ ಹುಟ್ಟಿದ ಮೇಲೆ ಬೇರೆಯವರ ಜೊತೆ ಹೊಂದಿಕೊಂಡು ಹೋಗೋದನ್ನು ಕಲೀಬೇಕು. ಎಲ್ಲರನ್ನೂ ಪ್ರೀತಿಯಿಂದ ನೋಡೋದನ್ನು ಕಲೀಬೇಕು. ಮನೆಯವರ ಜೊತೆ ಯಾವತ್ತೂ ಖುಷಿಯಾಗಿರೋದು ಹೇಗೆ ಅನ್ನೋದನ್ನು ಕಲೀಬೇಕು. ಪ್ರಾಮಾಣಿಕನಾಗಿರುವುದನ್ನು ಕಲೀಬೇಕು. ಇಷ್ಟೆಲ್ಲಾ ವಿಷಯ ಕಲಿತು ಅಳವಡಿಸಿಕೊಂಡು ಬದುಕಬೇಕು ಅಂದ್ರೆ ನೂರು ವರ್ಷ ಬೇಕು. ಆದ್ರೆ ನಾಯಿಗೆ ಅದೆಲ್ಲ ವಿಷಯ ಕಲೀಬೇಕಾದ ಅಗತ್ಯವೇ ಇರೋದಿಲ್ಲ. ಯಾಕೇಂದ್ರೆ ಹೊಂದಿಕೊಂಡು ಹೋಗೋದು, ಪ್ರೀತಿ ಮಾಡೋದು, ಪ್ರಾಮಾಣಿಕನಾಗಿರೋದು ಇವನ್ನೆಲ್ಲ ಅದು ಹುಟ್ತಾನೇ ಕಲ್ತೇ ಬಂದಿರೋದ್ರಿಂದ, ಇಲ್ಲಿ ಈ ಜಗತ್ತಲ್ಲಿ ಕೇವಲ ಬದುಕಿಹೋದ್ರೆ ಆಯ್ತು ನೋಡಿ! ಅದಕ್ಕೆ ದೇವರು ನಾಯಿಗೆ 12 ವರ್ಷ ಬದುಕೋದಕ್ಕೆ ಅಂತ ಮಾತ್ರ ಕೊಟ್ಟಿದ್ದಾನೆ.”
ಅಬ್ಬಾ ಅದೆಂಥಹ ಅನ್ಯೋನ್ಯತೆ! ಪ್ರತಿಯೊಬ್ಬರ ಬದುಕಿನಲ್ಲಿ ತಂದೆ, ತಾಯಿ, ಪತ್ನಿ, ಮಕ್ಕಳು, ರಕ್ತ ಸಂಬಂಧಿಗಳು, ಗೆಳೆಯರು ಹೀಗೆ ಹಲವಾರು ಸಂಬಂಧಗಳು ಬಂದು ಹೋಗುತ್ತವೆ. ಆದರೆ ಬರಿ ನಿಮ್ಮನ್ನು ಅಷ್ಟೇ, ಅದು ನೀವು ಹೇಗಿದ್ದಿರೋ ಹಾಗೆಯೇ ಪ್ರೀತಿಸಲು ನಿಮ್ಮ ಸಾಕು ಪ್ರಾಣಿಗೆ ಮಾತ್ರ ಸಾಧ್ಯ. ಅದರಲ್ಲೂ ಅದು ನಾಯಿ ಆಗಿದ್ದರೆ ಖಂಡಿತಾ ಆ ಒಡಹುಟ್ಟಿದಂತಹ ಭಾವನೆ ಅಂತೂ ಎಂದಿಗೂ ಸಾಯುವುದಿಲ್ಲ.

ಜೀವವೊಂದು ಬೇಕಾಗಿದೆ
ಅಹುದು, ಬೇಗೆಯ ಬದುಕಿನಲಿ
ನಗುವ ತರುವ ಉಸಿರೊಂದು ಬೇಕಾಗಿದೆ
ನಾಳೆಗಳ ಕನಸಿಗೆ ಕಸುವು ತುಂಬುವ
ಜೊತೆಯೊಂದು ಬೇಕಾಗಿದೆ

ಅಗತ್ಯತೆಗಷ್ಟೇ ಊಳಿಡುವ ಅನಾದರದ
ಊರಿನಲ್ಲಿ ಕಣ್ಮುಚ್ಚದೇ ಕಾಯುವ
ಛಲವೊಂದು ಬೇಕಾಗಿದೆ
ಕಷ್ಟ ನಷ್ಟ ಅನಿಷ್ಟಗಳ ಎದುರಿಸಿ ಬೆದರಿಸಲು
ಕಾವಲೊಂದು ಬೇಕಾಗಿದೆ

ನನ್ನ ಎರಡು ಹೆಜ್ಜೆಗಳಿಗೆ ತನ್ನ
ನಾಲ್ಕು ಹೆಜ್ಜೆಗಳ ಕೊಡುವ
ಬಲವೊಂದು ಬೇಕಾಗಿದೆ
ಎದೆಯ ಮೇಲೆ ಪಾದಗಳಿಟ್ಟು
ಒಡಯೊಳಗೆ ಜೀವವನು ಊಡುವ
ದೈವವೊಂದು ಬೇಕಾಗಿದೆ

ಪ್ರೀತಿಯ ಪಿಂಟುವಿಗೆ ಇದು ಅರ್ಪಣೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: A Dog YearKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Article by Sanchin Parshwanath
Share201Tweet123Send
Previous Post

ಶಿವಮೊಗ್ಗದಲ್ಲೇ ಇದು ಪ್ರಥಮ: ಪಿ&ಟಿ ಕಾಲೋನಿಯ ಮನೆಯನ್ನು ಏಳು ಅಡಿ ಮೇಲೆತ್ತಿದ ಬಿಹಾರಿಗಳು!

Next Post

ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

April 3, 2026
ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

April 3, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL