No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಮನ್ನಣೆ: ಮೋದಿ-ಶಾ  ಪ್ರಯತ್ನಗಳಿಗೆ ವಿಶ್ವಸಂಸ್ಥೆಯ ಪ್ರಶಂಸೆ

kalpa News by kalpa News
July 10, 2023
in Special Articles
0
India’s New Identity: Recognition for Modi-Shah Duo’s Efforts by the United Nations
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಕಾಶ್ಮೀರದಲ್ಲಿನ ಮಕ್ಕಳ ರಕ್ಷಣಾ ಕ್ರಮಗಳಲ್ಲಿ ಗಮನಾರ್ಹ ಪ್ರಗತಿಯ ಕಾರಣ ಭಾರತವು ಸಶಸ್ತ್ರ ಸಂಘರ್ಷ ಮಕ್ಕಳಿರುವ ದೇಶಗಳ ಪಟ್ಟಿಯಿಂದ ಹೊರಗೆ ಬಂದಿದೆ.

ಕಳೆದ 9 ವರ್ಷಗಳಲ್ಲಿ, ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ ಹೊಸ ಆಯಾಮನ್ನು ನೀಡಲು ಮೋದಿ ಮತ್ತು ಶಾ ಜೋಡಿ ಅವಿರತವಾಗಿ ಶ್ರಮಿಸಿದೆ.  ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಯಶಸ್ವಿ ಕಾರ್ಯತಂತ್ರಗಳ ಪರಿಣಾಮವಾಗಿ 12 ವರ್ಷಗಳಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆಯ ‘ಮಕ್ಕಳು ಮತ್ತು ಸಶಸ್ತ್ರ ಸಂಘರ್ಷ ವರದಿ’ಯಿಂದ ಭಾರತ ಹೊರಗೆ ಬಂದಿದೆ.  ಭಾರತ ಸರ್ಕಾರವು, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮಕ್ಕಳಿಗೆ ಉತ್ತಮ ರಕ್ಷಣೆಯನ್ನು ನೀಡಲು ಕೈಗೊಂಡ ಮಹತ್ತರ ಕ್ರಮಗಳನ್ನು ವಿಶ್ವಸಂಸ್ಥೆ ಗುರುತಿಸಿದ್ದು ಗಮನಾರ್ಹ.
ಈ ಹಿಂದೆ ಭಾರತದ ಹೆಸರನ್ನು, ಬುರ್ಕಿನಾ ಫಾಸೊ, ಕ್ಯಾಮರೂನ್, ಲೇಕ್ ಚಾಡ್ ಬೇಸಿನ್, ನೈಜೀರಿಯಾ, ಪಾಕಿಸ್ತಾನ ಮತ್ತು ಫಿಲಿಪೈನ್ಸ್‌ನಂತಹ ದೇಶಗಳ ಜೊತೆಗೆ  “ಅಪಮಾನಿತ ಪಟ್ಟಿಯಲ್ಲಿ” ಪಟ್ಟಿ ಮಾಡಲಾಗಿತ್ತು.  ಆದರೆ, ಮೋದಿ-ಶಾ ಜೋಡಿ ಅಸಾಧ್ಯವೆನಿಸಿದ್ದ ಕಾರ್ಯವನ್ನು ಸಾಧಿಸಿದೆ.  ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರಸ್ ಅವರು ‘ಮಕ್ಕಳು ಮತ್ತು ಸಶಸ್ತ್ರ ಸಂಘರ್ಷ ವರದಿ’ಯ ಇತ್ತೀಚಿನ ಆವೃತ್ತಿಯಿಂದ ಭಾರತದ ಹೆಸರನ್ನು ತೆಗೆದುಹಾಕಿದ್ದಾರೆ.  ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಈ ವರದಿಯಲ್ಲಿ ಈ ಹಿಂದೆ, ಜಮ್ಮು ಮತ್ತು ಕಾಶ್ಮೀರವನ್ನು “ಸಂಘರ್ಷ ವಲಯ” ಎಂದು ಉಲ್ಲೇಖಿಸಲಾಗಿತ್ತು.  ವಾರ್ಷಿಕ ವರದಿಯ ಇತ್ತೀಚಿನ ಆವೃತ್ತಿಯನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು.  ಈ ವರದಿ ಮಕ್ಕಳ ಮೇಲಿನ ಸಶಸ್ತ್ರ ಸಂಘರ್ಷಗಳ ಪರಿಣಾಮ ಮತ್ತು ವಿವಿಧ ದೇಶಗಳಲ್ಲಿ ಅವರ ಹಕ್ಕುಗಳ ಉಲ್ಲಂಘನೆಯನ್ನು  ಎತ್ತಿ ತೋರಿಸುತ್ತದೆ.  ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಸಶಸ್ತ್ರ ಸಂಘರ್ಷದ ಕಾರಣ, ವಿಶ್ವಸಂಸ್ಥೆಯು ಈ ಹಿಂದೆ ಭಾರತವನ್ನು “ಅವಮಾನಿತ ದೇಶಗಳ” ಪಟ್ಟಿಯಲ್ಲಿ ಸೇರಿಸಿತ್ತು.  ಆದಾಗ್ಯೂ, ಆರ್ಟಿಕಲ್ 370 ಮತ್ತು 35ಎ ರದ್ದತಿಯ ಪರಿಣಾಮವಾಗಿ, ಈಗ ಪ್ರಗತಿಯ ಹಾದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರವು ಇನ್ನು ಮುಂದೆ ಯುಎನ್‌ನ ಸಶಸ್ತ್ರ ಸಂಘರ್ಷದಲ್ಲಿರುವ ಮಕ್ಕಳನ್ನು ಹೊಂದಿರುವ ದೇಶಗಳ ಪಟ್ಟಿಯ ಭಾಗವಾಗಿರುವುದಿಲ್ಲ.

ಕಳೆದ 9 ವರ್ಷಗಳಲ್ಲಿ, ಮೋದಿ-ಶಾ Modi-Shah ಜೋಡಿಯು ಒಂದರ ನಂತರ ಒಂದರಂತೆ ನಿಪುಣ ಕಾರ್ಯನೀತಿಗಳನ್ನು ಕಾರ್ಯಗತಗೊಳಿಸಿದ್ದು,  ಜಮ್ಮು ಮತ್ತು ಕಾಶ್ಮೀರವನ್ನು ಮುಖ್ಯವಾಹಿನಿಗೆ ತರುವ ಅವರ ಪ್ರಯತ್ನಗಳು ಫಲ ನೀಡುತ್ತಿವೆ. ದಣಿವರಿಯದ ನಾಯಕ ಅಮಿತ್ ಶಾ ಅವರು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದಾಗ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಮಾಡಿದಾಗ,  ಎಲ್ಲಾ ವಿರೋಧ ಪಕ್ಷಗಳು ಒಕ್ಕೊರಲಿನಿಂದ ವಿರೋಧಿಸಿದ್ದರು.  370ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ರಕ್ತಪಾತವಾಗುತ್ತದೆ ಎಂದು ಪ್ರತಿಪಕ್ಷಗಳು ಹುಯಿಲೆಬ್ಬಿಸ್ಸಿದ್ದವು.  ಆದಾಗ್ಯೂ, ಭಾರತದ ರಾಜಕೀಯದಲ್ಲಿ ಷಾ ಅವರ ಚಾಣಾಕ್ಷ  ನೀತಿಗಳ ಫಲವಾಗಿ ಯಾರೂ ಒಂದೇ ಒಂದು ಆಕ್ಷೇಪಣೆಯನ್ನು ವ್ಯಕ್ತಪಡಿಸಲು ಕೂಡ ಧೈರ್ಯ ಮಾಡಲಿಲ್ಲ.
370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ 2015 ರ ಅಡಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲ ನ್ಯಾಯ ಮಂಡಳಿಯಂತಹ ಮೂಲಸೌಕರ್ಯಗಳನ್ನು ಸ್ಥಾಪಿಸಲು ಸಾಧ್ಯವಾಯಿತು.  ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಶಸ್ತ್ರ ಮತ್ತು ಭದ್ರತಾ ಪಡೆಗಳಿಗೆ ತರಬೇತಿ ನೀಡುವುದು, ಮಕ್ಕಳ ಮೇಲೆ ಬಲಪ್ರಯೋಗವನ್ನು ನಿಷೇಧಿಸುವುದು ಮತ್ತು ಪೆಲೆಟ್ ಗನ್‌ಗಳ ಬಳಕೆಯನ್ನು ನಿಲ್ಲಿಸುವುದು ಸೇರಿದಂತೆ ವಿಶ್ವಸಂಸ್ಥೆಯು ಸೂಚಿಸಿದ ಹಲವು ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ.  ಬೇರೆ ಯಾವುದೇ ಪರ್ಯಾಯಗಳಿಲ್ಲದಿದ್ದಾಗ ಮಕ್ಕಳನ್ನು ಕಡಿಮೆ ಅವಧಿಗೆ ಬಂಧಿಸಲು ನಿರ್ಧರಿಸಲಾಗಿದೆ.

370 ಮತ್ತು 35ಎ ವಿಧಿಗಳನ್ನು ತೆಗೆದುಹಾಕುವ ಮೂಲಕ ಭಾರತಕ್ಕೆ ವಿಶ್ವದಲ್ಲಿ ಒಂದು ವಿಶಿಷ್ಟವಾದ ಮಜಲನ್ನು ದೊರಕಿಸಿ ಕೊಡುವಲ್ಲಿ ಅಮಿತ್ ಶಾ ಅವರ ನಿಪುಣ ನೀತಿಗಳ ಫಲಿತಾಂಶಗಳು ಸ್ಪಷ್ಟವಾಗಿ ಎದ್ದು ಕಾಣುತ್ತಿವೆ.  ವಿಶ್ವಸಂಸ್ಥೆಯ ‘ಮಕ್ಕಳು ಮತ್ತು ಸಶಸ್ತ್ರ ಸಂಘರ್ಷ ವರದಿ’ಯ ಅವಮಾನಕರ ಪಟ್ಟಿಯಿಂದ ಭಾರತವನ್ನು ತೆಗೆದು ಹಾಕಿರುವುದು ಮಹತ್ವದ ಸಾಧನೆಯಾಗಿದೆ.  ಭಾರತ ಈಗ ಹೊಸ ಯುಗವನ್ನು ಪ್ರವೇಶಿಸಿದೆ.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaModi-ShahNewsinKannadaNewsKannadaಮೋದಿ-ಶಾವಿಶೇಷ ಲೇಖನ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿಗೆ ಸಹಕಾರಿ ಆಗಿರುವ ಜೇನು ಅಭಿವೃದ್ಧಿಗೆ ಮುಂದಾಗಬೇಕು: ಗೌತಮ್ ಬಿಚ್ಚುಗತ್ತಿ ಸಲಹೆ

Next Post

ಪ್ರತಿ ಸ್ಟಾರ್ಟ್‌ಅಪ್‌ಗೂ ಒಬ್ಬನೇ ನಾಯಕನಿರಬೇಕು: ನಾರಾಯಣ ಮೂರ್ತಿ

kalpa News

kalpa News

Next Post
Every startup should have only one leader, not multiple leaders

ಪ್ರತಿ ಸ್ಟಾರ್ಟ್‌ಅಪ್‌ಗೂ ಒಬ್ಬನೇ ನಾಯಕನಿರಬೇಕು: ನಾರಾಯಣ ಮೂರ್ತಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL