No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ರೈತ ಪರ ಯೋಜನೆ ರೂಪಿಸಿರುವ ಕಿಸಾನೋ ಕಾ ಪ್ರಧಾನ್…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಸಚಿನ್ ಪಾರ್ಶ್ವನಾಥ್, ಅಂಕಣ
0
Kissano Ka Pradhan

Kissano Ka Pradhan

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | |

ಇಂದು ಭೂಮಿ ಹುಣ್ಣಿಮೆ. ರೈತ ಬಂಧುಗಳು ಭೂತಾಯಿಯ ಪೂಜೆ ಮಾಡಿ ಸಂಭ್ರಮ ಪಡುವ ಸಮಯ. ಎಲ್ಲೆಡೆ ಹಸಿರು, ಮೊನ್ನೆ ಮೊನ್ನೆ ಮುಗಿದ ದಸರೆ, ದೀಪಾವಳಿಯ ಎದುರುಗೊಳ್ಳುವ ದಿನಗಳು. ಇನ್ನು ಮುಂದೆ ಬಿಡುವಿಲ್ಲದ ಕೆಲಸಗಳು ಆರಂಭಗೊಳ್ಳುತ್ತವೆ. ಭೂ ರಕ್ಷೆ ಕಟ್ಟಿಕೊಂಡು ತಾಯಿ ಭೂಮಿಯ ಕಾಯುವ ಹರಕೆ ಮಾಡಿಕೊಂಡು, ರುಚಿ ರುಚಿ ಅಡುಗೆಯ ಸವಿಯುವ ಅವಕಾಶ. ಇಂತಹ ಸುಸಮಯದಲ್ಲಿ ರೈತರ ಪ್ರಧಾನಿಯನ್ನು ಒಮ್ಮೆ ನೆನೆಯೋಣ ಬನ್ನಿ.

ರೈತರ ಸಾಲಮನ್ನಾವನ್ನು ದೊಡ್ಡ ಸಾಧನೆ ಎಂದು ಭಾವಿಸಿ, ಅದನ್ನೇ ಬಂಡವಾಳ ಮಾಡಿಕೊಂಡ ಪಕ್ಷಗಳ ನಡುವೆ ನರೇಂದ್ರ ಮೋದಿಯವರು ಭಿನ್ನರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಲಮನ್ನಾ ಯೋಜನೆಯ ಆಗುಹೋಗುಗಳನ್ನು ವಿವರಿಸಿ, ಅದರಿಂದ ಹೊರೆ ಹೆಚ್ಚುತ್ತದೆಯೇ ವಿನಃ ಕಡಿಮೆ ಆಗುವುದಿಲ್ಲ ಎಂದವರು ಮೋದಿ. ವಿಶ್ವ ಬ್ಯಾಂಕ್‌ನಿಂದಲೋ, ವಿದೇಶಗಳಿಂದಲೋ ಸಾಲ ತಂದು ಮಾಡುವ ಮನ್ನಾ ಹೊರೆಯೇ ಅಲ್ಲವೇ? ಹಿಂಬಾಗಿಲಿನಿಂದ ಹೊಸದೊಂದು ಆಪತ್ತು ತಂದುಕೊಂಡಂತೆ. ಆದರೆ ಈಗ ಹಾಗಾಗುತ್ತಿಲ್ಲ. ತಮ್ಮ ಮೊದಲ ಅವಧಿಯಲ್ಲಿ ಬೇವು ಲೇಪಿತ ಗೊಬ್ಬರ ಸಕಾಲಕ್ಕೆ, ಸಬ್ಸಿಡಿ ಸಹಿತ ದೊರೆಯುವಂತೆ ಮಾಡಿದ್ದ ಮೋದಿಯವರು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೊಳಿಸಿದ್ದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ
ಈ ಪ್ರಾಯೋಗಿಕವಾಗಿ ಯೋಜನೆ ಡಿಸೆಂಬರ್ 1, 2018 ರಂದು ಜಾರಿಯಾಗಿತ್ತು. ಸದರಿ ಯೋಜನೆಯಂತೆ ಎರಡು ಎಕರೆವರೆಗಿನ ಭೂಮಿ ಹೊಂದಿರುವ ರೈತರಿಗೆ ಮೂರು ಕಂತುಗಳಲ್ಲಿ ವಾರ್ಷಿಕ 6000 ರೂಪಾಯಿಗಳ ನೀಡಲಾಗುತ್ತಿತ್ತು. 2019-20ನೇ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ 75000 ಕೋಟಿ ರೂಪಾಯಿಗಳ ಅಂದಾಜು ಮಾಡಲಾಗಿತ್ತು. ಆದರೆ ಹೊಸ ತಿದ್ದುಪಡಿಯಂತೆ ಪ್ರತಿ ರೈತರೂ ಈ ಯೋಜನೆಯ ಫಲಾನುಭವಿಗಳಾಗಿದ್ದು, 14.50 ಕೋಟಿ ಹೊಸ ರೈತರಿಗೆ ಈ ಸೌಲಭ್ಯ ಸಿಗಲಿದೆ. ಈಗಾಗಲೇ ಹಲವು ಕಂತುಗಳಲ್ಲಿ ಹಣ ಬಿಡುಗಡೆ ಆಗಿದ್ದು, 1.57 ಲಕ್ಷ ಕೋಟಿ ರೂಪಾಯಿಗಳಷ್ಟು ಹಣ ರೈತರ ಸೇರಿದೆ. ವಾರ್ಷಿಕ ಎರಡು ಕಂತುಗಳಲ್ಲಿ ಈ ಹಣ ರೈತರ ಖಾತೆಗೆ ಜಮಾ ಆಗುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ
ಇದು ನರೇಂದ್ರ ಮೋದಿಯವರ ಯೋಜನೆಗಳಲ್ಲಿ ಒಂದು. ಈಗಾಗಲೇ ಜಾರಿಯಲ್ಲಿರುವ ಅಟಲ್ ಪಿಂಚಣಿ ಯೋಜನೆ ಮಾದರಿಯಲ್ಲಿ ಅಸುರಕ್ಷಿತ ರೈತ ವರ್ಗಕ್ಕೆ ಪಿಂಚಣಿ ಸಿಗಲಿದೆ. ಎರಡು ಎಕರೆವರೆಗಿನ ಭೂಮಿ ಹೊಂದಿರುವ ರೈತರಿಗೆ 60 ವರ್ಷ ವಯಸ್ಸಿನ ನಂತರ ಮಾಸಿಕ 3000 ರೂಪಾಯಿಗಳ ತನಕ ಪಿಂಚಣಿ ದೊರೆಯಲಿದೆ. ಹೆಚ್ಚಿನ ನಿಯಮಗಳು ಅಟಲ್ ಪಿಂಚಣಿ ಯೋಜನೆಯಂತೆ ಇದ್ದು, 18 ರಿಂದ 40 ವರ್ಷ ವಯಸ್ಸಿನವರು ಯೋಜನೆಗೆ ಅರ್ಹರು. ರೈತರು ಭರಿಸಿದಷ್ಟೇ ಹಣವನ್ನು ಸರ್ಕಾರವೂ ತುಂಬಲಿದೆ. ಪಿಂಚಣಿ ಪಡೆಯುವ ಸಂದರ್ಭದಲ್ಲಿ ಫಲಾನುಭವಿ ನಿಧನರಾದರೆ ನಾಮ ನಿರ್ದೇಶಿತರಿಗೆ ಪಿಂಚಣಿಯ 50%ರಷ್ಟು ಹಣ ದೊರೆಯಲಿದೆ. ರೈತರು ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ಈ ಪಿಂಚಣಿ ಯೋಜನೆಗೆ ಬಳಸಬಹುದಾಗಿದೆ.

ಕಾಲು-ಬಾಯಿ ರೋಗ ನಿರೋಧಕ ಚುಚ್ಚುಮದ್ದು:
ಗೋವು ಪ್ರೇಮಿಗಳಿಗೆ, ಬಡ ರೈತರಿಗೆ ಇದು ಸಿಹಿ ಸುದ್ದಿ. ಹಸುಗಳು ಕಾಲು-ಬಾಯಿ ರೋಗದಿಂದ ಬಳಲುತ್ತಿರುವ ಮತ್ತು ಹಠಾತ್ತನೆ ನಿಧನ ಹೊಂದಿದ ಸುದ್ದಿ ಕೇಳುತ್ತಲೇ ಇರುತ್ತದೆ. ಆದರೆ ಕೇಂದ್ರ ಸರ್ಕಾರದ ಯೋಜನೆಯಂತೆ ಹಸು, ಎತ್ತು, ಎಮ್ಮೆ, ಕುರಿ, ಆಡು ಮತ್ತು ಹಂದಿಗಳಂತಹ ಪ್ರಾಣಿಗಳಿಗೆ ರೋಗ ನಿರೋಧಕ ಚುಚ್ಚುಮದ್ದು ದೊರೆಯಲಿದೆ. ಸುಮಾರು 50 ಕೋಟಿ ಪ್ರಾಣಿಗಳು, 13343 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಲು-ಬಾಯಿ ರೋಗದಿಂದ ಮುಕ್ತಿ ಪಡೆಯಲಿವೆ.

ಪ್ರಧಾನ ಮಂತ್ರಿಯವರ ವ್ಯಾಪಾರಿ ಪಿಂಚಣಿ ಯೋಜನೆ (Pradhan Mantri Laghu Vyapari Maan-dhan Yojana) ಸಣ್ಣ ವರ್ತಕರು, ಸಗಟು ವ್ಯಾಪಾರಿಗಳು ಮತ್ತು ಸ್ವಂತ ಉದ್ಯೋಗದಲ್ಲಿ ತೊಡಗಿಸಿಕೊಂಡವರು ಈ ಯೋಜನೆಯ ಫಲಾನುಭವಿಗಳು. ಅವರು ವಾರ್ಷಿಕವಾಗಿ ತೆರುವ ಜಿಎಸ್‌ಟಿ 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರಬೇಕು ಎನ್ನಲಾಗಿದೆ. ಅರವತ್ತು ವರ್ಷ ವಯಸ್ಸಿನ ನಂತರ ಮಾಸಿಕ 3000 ರೂಪಾಯಿಗಳ ಪಡೆಯಲಿದ್ದಾರೆ. ಇಲ್ಲೂ ಸರ್ಕಾರ ಅವರ ಹಣದಷ್ಟೇ ತನ್ನ ಪಾಲನ್ನು ನೀಡಲಿದೆ. ಆಸಕ್ತರಿಗಾಗಿ ಗ್ರಾಹಕ ಸೇವಾ ಕೇಂದ್ರಗಳನ್ನು ಭಾರತ ಸರ್ಕಾರ ಸ್ಥಾಪಿಸಿದೆ. ಬಹು ಚರ್ಚಿತ ಕೃಷಿ ಕಾಯ್ದೆ ಕುರಿತು ನೋಡುವುದಾದರೆ,

ರೈತರಿಂದ ಬೆಲೆ ನಿಗದಿ:
ಎಲ್ಲಾ ಉತ್ಪನ್ನಗಳಿಗೆ ಮೊದಲೇ ದರ ನಿಗದಿಪಡಿಸಿದಂತೆ ಬೆಳೆದ ಬೆಳೆಗೆ ತಾನೇ ಬೆಲೆ ನಿರ್ಧರಿಸುವ ಹಕ್ಕು ರೈತನದ್ದಾಗಬೇಕು. ಅಂತಹ ಒಂದು ಆಯ್ಕೆ ಈ ಕಾಯ್ದೆಯಲ್ಲಿ ಇದೆ. ಕೇಂದ್ರ ಸರ್ಕಾರದ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಉತ್ನನ್ನ ಮತ್ತು ಪಶುಸಂಪತ್ತು ಮಾರುಕಟ್ಟೆ(ಪ್ರಚಾರ ಮತ್ತು ಸೌಲಭ್ಯ)ಕಾಯ್ದೆ-2017 ಮಾದರಿ ಕಾಯ್ದೆಯ ಶಿಫಾರಸುಗಳನ್ವಯ ರಾಜ್ಯದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಇದರನ್ವಯ ಕಲಂ 8(2) ಮತ್ತು ಕಲಂ 117ಕ್ಕೆ ತಿದ್ದುಪಡಿ ಮಾಡಲಾಗಿದೆ. ಕಲಂ 8(3)ನ್ನು ಕೈಬಿಡಲಾಗಿದೆ.

ದಂಡ ಮತ್ತು ಶಿಕ್ಷೆ ರದ್ದು:
ಕಲಂ 8(2) ರಡಿ ಇದುವರೆಗೆ ಅಧಿಸೂಚಿತ ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಪ್ರಾಂಗಣದಲ್ಲೇ ಮಾರಾಟ ಮಾಡಬೇಕೆಂಬ ನಿರ್ಬಂಧ ಈಗ ಇಲ್ಲ. ಎಪಿಎಂಸಿ ಸಮಿತಿಯ ನಿಯಂತ್ರಣವನ್ನು ಪ್ರಾಂಗಣಕ್ಕೆ ಸೀಮಿತಗೊಳಿಸಿದೆ. ಕಲಂ 8(2)ರ ಉಲ್ಲಂಘನೆಗೆ ದಂಡ ಮತ್ತು ಸಜೆ ಶಿಕ್ಷೆಯನ್ನು ವಿಧಿಸುತ್ತಿದ್ದ ಕಲಂ 117 ಕೈಬಿಡಲಾಗಿದೆ. ಈ ತಿದ್ದುಪಡಿಯಿಂದ ರೈತ ತಾನು ಬೆಳೆದ ಬೆಳೆಯನ್ನು ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯ ದೊರಕಿದೆ.

ರಾಜ್ಯ/ಅಂತಾರಾಜ್ಯದಲ್ಲೂ ಮಾರಾಟಕ್ಕೆ ಅವಕಾಶ:
ಹೊಸ ಕಾಯ್ದೆ ಅನ್ವಯ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಅಂತರ್‌ ಜಿಲ್ಲೆ ಮತ್ತು ರಾಜ್ಯಗಳಲ್ಲಿ ರೈತರು ತಾವೇ ನಿರ್ಧರಿಸಿದ ಬೆಲೆಗೆ ಮಾರಾಟ ಮಾಡಲು ಅವಕಾಶವನ್ನು ಮಾಡಿಕೊಡಲಾಗಿದೆ.

ಮಧ್ಯವರ್ತಿ ರಹಿತ ಮಾರುಕಟ್ಟೆ:
ರೈತರು ಈ ಹಿಂದೆ ತಮ್ಮ ಉತ್ಪನ್ನಗಳನ್ನು ಅನ್ಯ ಸ್ಥಳಗಳಿಗೆ ಒಯ್ದು ಮಾರಾಟ ಮಾಡಲು ಅಧಿಕೃತ ದಾಖಲೆಗಳಾದ ಪಹಣಿ ಅಥವಾ ಸ್ಥಳೀಯ ರೆವಿನ್ಯೂ ಅಧಿಕಾರಿಗಳು ನೀಡುವ ದೃಢೀಕರಣದೊಂದಿಗೆ ಆವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ತಿದ್ದುಪಡಿಯಿಂಧಾಗಿ ಯಾವುದೇ ದಾಖಲಾತಿಗಳಿಲ್ಲದೆ ತಮ್ಮ ಉತ್ಪನ್ನಗಳನ್ನು ಸಾಗಾಟ ಮಾಡಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಇದರಿಂದಾಗಿ ಸ್ಥಳೀಯ ದಲ್ಲಾಳಿಗಳ ಗೋಗರೆಯುವ ಸ್ಥಿತಿ ಇತ್ತು. ಈಗ ರೈತ ಸ್ವತಂತ್ರ, ದಾಖಲೆ ರಹಿತವಾಗಿ ಮಾರುಕಟ್ಟೆ ಆಯ್ಕೆ ಆತನ ಮುಂದಿದೆ.

ಎಪಿಎಂಸಿಗಳು ಹಾಗೆಯೇ ಇರಲಿವೆ. ನೂತನ ಎಪಿಎಂಸಿ ಕಾಯ್ದೆಯಿಂದ ಯಾವುದೇ ಎಪಿಎಂಸಿಗಳನ್ನು ಮುಚ್ಚುವ ಅಂಶ ಇಲ್ಲ.

ಕನಿಷ್ಠ ಬೆಂಬಲ ಬೆಲೆ ಮುಂದುವರಿಕೆ:
ಕಾಯ್ದೆಯನ್ನು ಓದದೇ, ಅರಿಯದೇ ದಿಕ್ಕು ತಪ್ಪಿಸುವ ಸಲುವಾಗಿ ಮುಂದಾದವರೆ ಹೆಚ್ಚು. ಈ ಕಾಯ್ದೆಯಲ್ಲಿ ಯಾವುದೇ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಉಂಟಾದಾಗ ಎಂದಿನಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ನಡೆಯುತ್ತದೆ. ಈ ಹಿಂದಿನಂತೆ ಕನಿಷ್ಟ ಬೆಂಬಲ ಬೆಲೆ ಹಾಗೆಯೇ ಇರಲಿದೆ.

ರೈತಸ್ನೇಹಿ:
ಎಪಿಎಂಸಿ ಪ್ರಾಂಗಣದಲ್ಲಿ ವ್ಯಾಪಾರ ಮಾಡುವ ಜೊತೆಯಲ್ಲಿಯೇ 2007ರಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ಎಪಿಎಂಸಿ ಪ್ರಾಂಗಣದ ಹೊರಗೆ ರೈತರಿಂದ ನೇರ ಖರೀದಿಗೆ ಅವಕಾಶ ಕಲ್ಪಿಸಿ ನೇರ ಖರೀದಿ ಕೇಂದ್ರಗಳಿಗೆ ಲೈಸೆನ್ಸ್‌ ನೀಡಲಾಗಿದೆ. ಇದಾಗಲೇ ಹಲವು ಕಂಪನಿಗಳು ನೇರ ಖರೀದಿ ಲೈಸೆನ್ಸ್‌ ಪಡೆದು ಕಾರ್ಯನಿರ್ವಹಿಸುತ್ತಿವೆ. 2014ರಿಂದ ಆನ್‌ಲೈನ್‌ ಟ್ರೇಡಿಂಗ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇದ್ದಲ್ಲಿಗೇ ಬಂದು ಖರೀದಿ:
ರೈತರು ನೇರ ವ್ಯಾಪಾರಿಗಳಿಗೆ, ಯಾವುದೇ ಮಾರುಕಟ್ಟೆಗಳಲ್ಲಿ, ಬೇರೆ ರಾಜ್ಯಗಳಿಗೂ ತೆರಳಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶವನ್ನು ಈಗ ಕಲ್ಪಿಸಲಾಗಿದೆ. ಇಲ್ಲವೇ ವ್ಯಾಪಾರಿಗಳು ರೈತರ ಮನೆ ಬಾಗಿಲಿಗೆ ಇಲ್ಲವೇ ಹೊಲಗಳಿಗೇ ಬಂದು ಬೆಳೆಗಳನ್ನು ಖರೀದಿ ಮಾಡಬಹುದು.

ಆರೋಗ್ಯಕರ ಸ್ಪರ್ಧೆ, ಬೆಲೆ
ಯಾರಿಗೆ ಬೇಕಾದರೂ ಎಲ್ಲಿ ಬೇಕಾದರೂ ಬೆಳೆಯನ್ನು ಮಾರಾಟ ಮಾಡುವ ಹಕ್ಕನ್ನು ರೈತರಿಗೆ ನೀಡಿರುವ ಪರಿಣಾಮ ರೈತನಿಗೆ ಹೆಚ್ಚಿನ ಅವಕಾಶಗಳು ಸಿಗುವುದರೊಂದಿಗೆ ವ್ಯಾಪಾರಿಗಳ ಮಧ್ಯೆ ಸ್ಪರ್ಧೆ ಏರ್ಪಡುತ್ತದೆ. ಈ ಹಿನ್ನೆಲೆಯಲ್ಲಿ ಒಬ್ಬರಿಗೇ ಮಾರಾಟ ಮಾಡಬೇಕೆಂಬ ನಿಬಂಧನೆಗಳಿಲ್ಲದೆ, ಹೆಚ್ಚು ಬೆಲೆ ಕೊಟ್ಟು ಕೊಂಡುಕೊಳ್ಳುವವರಿಗೆ ಮಾರಾಟ ಮಾಡಿ ರೈತರು ಅಧಿಕ ಲಾಭವನ್ನು ಗಳಿಸಬಹುದು.

ಮುಕ್ತ ಮಾರುಕಟ್ಟೆ ಅವಕಾಶ
ರೈತ-ಮಾರಾಟಗಾರರಿಗೆ ಈಗಾಗಲೇ ಇರುವ ವಿವಿಧ ಮಾರುಕಟ್ಟೆಚಾನಲ್‌ಗಳಾದ ಮಾರುಕಟ್ಟೆಪ್ರಾಂಗಣ, ನೇರ ಖರೀದಿ ಕೇಂದ್ರ, ಖಾಸಗಿ ಮಾರುಕಟ್ಟೆಪ್ರಾಂಗಣ, ರೈತ-ಗ್ರಾಹಕ ಮಾರುಕಟ್ಟೆಪ್ರಾಂಗಣ ವೇರ್‌ಹೌಸ್‌ ಇತ್ಯಾದಿಗಳೊಂದಿಗೆ ಈಗ ಮತ್ತೊಂದು ಉತ್ತಮ ಬದಲಿ ಸೌಕರ್ಯ ಲಭ್ಯವಿರುವಂತಾಗಿದ್ದು, ಮುಕ್ತ ಮಾರುಕಟ್ಟೆ ದೊರೆತಂತಾಗಿದೆ.

ನರೇಂದ್ರ ಮೋದಿಯವರು ತಮ್ಮ ಪ್ರಣಾಳಿಕೆಯ ಪ್ರತಿ ಭರವಸೆಯನ್ನು ಜಾರಿ ಮಾಡುವ ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಒಬ್ಬ ಸಣ್ಣ ರೈತ, ಚಿಕ್ಕ ವರ್ತಕ ಅಷ್ಟೇ ಏಕೆ ರೈತನ ಬಡ ಹಸುವನ್ನು ಮರೆಯದ ಮೋದಿಯವರ ಸರ್ಕಾರದ ಯೋಜನೆಗಳು ನಿಜಕ್ಕೂ ಶ್ಲಾಘನೀಯ. ಕೊನೆಯದಾಗಿ ಎಲ್ಲರಿಗೂ ಭೂಮಿ ಹುಣ್ಣಿಮೆ ಹಬ್ಬದ ಶುಭಾಶಯಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Article by Sachin ParshwanathKannada NewsKannada News LiveKannada News OnlineKannada News WebsiteKannada WebsiteLatest News Kannadanarendra modiNews in KannadaNews Kannadaನರೇಂದ್ರ ಮೋದಿ
Share202Tweet123Send
Previous Post

ರಾಮಾಯಣ ಕಾವ್ಯದಲ್ಲಿ ಸಾಮಾಜಿಕ ಮೌಲ್ಯಗಳಿವೆ: ಶಾಸಕ ರಘುಮೂರ್ತಿ ಅಭಿಪ್ರಾಯ

Next Post

ಹುತಾತ್ಮ ಪೊಲೀಸರ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಮುಸ್ತಫಾ ಹುಸೇನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುತಾತ್ಮ ಪೊಲೀಸರ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಮುಸ್ತಫಾ ಹುಸೇನ್

ಹುತಾತ್ಮ ಪೊಲೀಸರ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಮುಸ್ತಫಾ ಹುಸೇನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL