No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ

ಭಾರತದ ಪ್ರಧಾನಿಯೊಬ್ಬರ ನಿಗೂಢ ಸಾವಿನ ಕಥಾ ಹಂದರದ ದಿ ತಾಷ್ಕೆಂಟ್ ಫೈಲ್ಸ್…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಅಂಕಣ, ಸಚಿನ್ ಪಾರ್ಶ್ವನಾಥ್
0
the Tashkent files : ಭಾರತದ ಪ್ರಧಾನಿಯೊಬ್ಬರ ನಿಗೂಢ ಸಾವಿನ ಕಥೆ .

the Tashkent files : ಭಾರತದ ಪ್ರಧಾನಿಯೊಬ್ಬರ ನಿಗೂಢ ಸಾವಿನ ಕಥೆ .

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ 

ಒಮ್ಮೆಯಾದರೂ ನೋಡಲೇಬೇಕಾದ ಬಹಳಷ್ಟು ಚಲನಚಿತ್ರಗಳ ಪಟ್ಟಿ ಎಲ್ಲರ ಮುಂದೆ ಇರುತ್ತದೆ. ಆದರೆ ಭಾರತದ ಇತಿಹಾಸವನ್ನು ಮೆಲುಕು ಹಾಕಿದಾಗ ಹೆಚ್ಚೇನೂ ಅಲ್ಲ ಕೇವಲ 53 ವರ್ಷಗಳ ಹಿಂದೆಯಷ್ಟೇ ಪ್ರಧಾನಿಯೊಬ್ಬರು ವಿದೇಶಕ್ಕೆ (ಉಜ್ಬೇಕಿಸ್ತಾನ) ರಾಜತಾಂತ್ರಿಕ ಕಾರಣಗಳಿಂದಲೇ ತೆರಳಿ ಶವವಾಗಿ ಮರಳುತ್ತಾರೆ.

ಭಾರತಕ್ಕೆ ತಂದ ಅವರ ಮೃತ ದೇಹವನ್ನು ಅವರ ಕುಟುಂಬದ ವಿರೋಧದ ನಡುವೆಯೂ ಪೋಸ್ಟ್ ಮಾರ್ಟಮ್ ಕೂಡ ಮಾಡದೇ ಸಂಸ್ಕಾರ ಮಾಡಲಾಗುತ್ತದೆ. ಭಾರತೀಯ ಮಾಧ್ಯಮಗಳ ಸಹಕಾರದೊಂದಿಗೆ ಒಂದು ಘೋರ ಸತ್ಯ ಮಣ್ಣಿನಲ್ಲಿ ಸೇರಿ ಹೋಗುತ್ತದೆ. ಈ ಸತ್ಯದ ಎಳೆಯ ಮೇಲೆ ಅತ್ಯಂತ ಪ್ರಬುದ್ಧವಾಗಿ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ದಿ ತಾಷ್ಕೆಂಟ್ ಫೈಲ್ಸ್ ಚಿತ್ರ ತಯಾರಿಸಿದ್ದಾರೆ.

ಬಲಪಂಥೀಯರು ಎಂದು ಹಣೆಪಟ್ಟಿ ಕಟ್ಟಿಸಿಕೊಂಡಿರುವ ವಿವೇಕ್ ಚಿತ್ರದಲ್ಲಿ ಅಂತಹ ಯಾವುದೇ ವಿಷಯವಿಲ್ಲದೇ ಪ್ರತಿ ಎಡ ಬಲ ಮತ್ತು ಮಧ್ಯಮ ಚಿಂತನೆಗಳಿಗೂ ಅವಕಾಶ ನೀಡಿದ್ದಾರೆ. ಪಾತ್ರಧಾರಿಗಳ ವಿಷಯಕ್ಕೆ ಬಂದರೆ ಮೇರು ನಟರ ದಂಡೇ ಇದೆ. ಮಿಥುನ್ ಚಕ್ರವರ್ತಿ, ಶ್ವೇತಾ ಬಸು ಪ್ರಸಾದ್, ಮಂದಿರಾ ಬೇಡಿ, ಪಲ್ಲವಿ ಜೋಷಿ, ರಾಜೇಶ್ ಶರ್ಮಾ ಮತ್ತು ಪಂಕಜ್ ತ್ರಿಪಾಠಿ ಮುಂತಾದವರು ಇದ್ದಾರೆ. ಇತ್ತೀಚೆಗೆ ಭಾರತ ಅಸಹಿಷ್ಣು ಎಂದು ಕೂಗು ಹಾಕಿದ ನಾಸಿರುದ್ದೀನ್ ಷಾ ಇದ್ದು, ಕನ್ನಡಿಗರಾದ ಪ್ರಕಾಶ್‌ ಬೆಳವಾಡಿ ಕೂಡ ಅತ್ಯುತ್ತಮವಾಗಿ ನಟಿಸಿದ್ದಾರೆ.

ಚಿತ್ರ ಆರಂಭವಾಗುವುದೇ ಹಾಗೆ, ಸತ್ಯದ ಕಠೋರ ಮುಖ ತೋರಿಸುತ್ತಾ. ಮಾಧ್ಯಮಗಳು ಅದು ದೃಶ್ಯ, ಪತ್ರಿಕಾ ಅಥವಾ ಇನ್ನಾವುದೇ ರೀತಿಯ ಮಾಧ್ಯಮಗಳಿರಬಹುದು. ಅಲ್ಲಿ ಗಾಸಿಪ್ ಇದ್ದರಷ್ಟೇ ಬೆಲೆ. ಉಪ್ಪು ಹುಳಿ ಖಾರ ಹಚ್ಚಿರದ ಮೇಲೆ ಅದು ಸಪ್ಪೆ. ಅಂತಹುದೇ ಮಸಾಲೆಭರಿತ ಸುದ್ಧಿ ಕೊಡುವ ಪ್ರಯತ್ನದಲ್ಲಿರುವ ಯುವ ಪತ್ರಕರ್ತೆ ರಾಗಿಣಿಯ ಪಾತ್ರದಲ್ಲಿ ಶ್ವೇತಾ ಬಸು ಪ್ರಸಾದ್ ಅದ್ಭುತವಾಗಿ ನಟಿಸಿದ್ದಾರೆ. ಆಕೆ ತರುವ ಸುದ್ದಿಗಳಲ್ಲಿ ಸತ್ಯವೇ ಇರುವುದಿಲ್ಲ ಎಂಬುದು ಅವರ ಸಂಪಾದಕನಿಗೆ ಕೊರಗು. ಅಲ್ಲದೆ ಅದರಿಂದ ಪತ್ರಿಕೆಗೂ ಲಾಭವಿಲ್ಲ ಎಂಬುದು ಸಂಪಾದಕನ ಆರೋಪ.

ಆದರೆ ಆ ಸಮಯದಲ್ಲಿ ಆಕೆಗೆ ಬರುವ ಅನಾಮಿಕ ಕರೆಯು ಒಂದಷ್ಟು ರಹಸ್ಯ ದಾಖಲೆಗಳನ್ನು ನೀಡಿ, ಅದನ್ನು ಬರೆಯಲು ತಿಳಿಸುತ್ತದೆ. ಅದು ಭಾರತ ಕಂಡ ಅದ್ವಿತೀಯ ನಾಯಕ ಮತ್ತು ಸ್ವತಂತ್ರ ಭಾರತದ ಎರಡನೆಯ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾವಿನ ಕುರಿತಾಗಿ ಇರುತ್ತದೆ. ಅದನ್ನು ಪ್ರಕಟಿಸಲು ತೊಡಗಿದ ಮೇಲೆ ಪತ್ರಿಕೆ ಮತ್ತು ರಾಗಿಣಿಗೆ ಇನ್ನಿಲ್ಲದ ಪ್ರಚಾರ ಸಿಗುತ್ತದೆ. ಶಾಸ್ತ್ರಿಯವರ ಸಾವಿನ ಬಗ್ಗೆ ಪ್ರಶ್ನೆಗಳೆದ್ದು ಸರ್ಕಾರಕ್ಕೆ ತಲೆ ನೋವಾಗಿಯೂ ಪರಿಣಮಿಸುತ್ತದೆ. ಆಗ ಸರ್ಕಾರ ಮುತ್ಸದ್ದಿ ರಾಜಕಾರಣಿ ಮಿಥುನ್ ಚಕ್ರವರ್ತಿ ನೇತೃತ್ವದಲ್ಲಿ ಸಮಿತಿಯ ರಚಿಸಲಾಗುತ್ತದೆ. ಸದಸ್ಯರಾಗಿ ಪ್ರಸ್ತುತ ಸಮಾಜದ ಅನೇಕ ಮುಖಗಳನ್ನು ನಾಮ ನಿರ್ದೇಶನ ಮಾಡಲಾಗುತ್ತದೆ. ಉದ್ಯಮಿ, ರಾಜಕಾರಣಿ, ನಿವೃತ್ತ ನ್ಯಾಯಾಧೀಶ, ಇತಿಹಾಸಕಾರ್ತಿ, ಸಾಮಾಜಿಕ ಕಾರ್ಯಕರ್ತೆ ಹೀಗೆ ಇಂದಿನ ಆಧುನಿಕ ಸಮಾಜದ ಯಾರೆಲ್ಲ ತಮ್ಮ ಹಿಡಿತವನ್ನು ಹೊಂದಿರುವರೋ ಅವರೆಲ್ಲರಿಗೂ ಅಲ್ಲಿ ಅವಕಾಶವಿದೆ.

ಗಮನಿಸಬೇಕಾದ ಅಂಶವೆಂದರೆ ಆ ಸಮಿತಿಯ ಪ್ರತಿ ಸದಸ್ಯನೂ ತಾನು ಅರಿತದ್ದೇ ಸತ್ಯ ಎಂಬ ತಗಾದೆಯವರು. ಎಲ್ಲರೂ ಅವರವರ ವೈಯಕ್ತಿಕ ಹಿತಾಸಕ್ತಿಗಳನ್ನು ಕಾಯಲು ಸೇರಿರುತ್ತಾರೆ. ಸಮಿತಿಯು ಆರಂಭವಾದ ಮೇಲೆ ರಾಗಿಣಿ ಕಲೆ ಹಾಕುವ ಪ್ರತಿ ಮಾಹಿತಿಗೂ ಅಲ್ಲಿ ದೊಡ್ಡ ಮಟ್ಟದ ವಿರೋಧ ಮತ್ತು ಅಷ್ಟೇ ಬೆಂಬಲ ಎದುರಾಗುತ್ತದೆ. ಸಾವಿನ ಕುರಿತಾದ ಸತ್ಯವನ್ನು ಪ್ರತಿಯೊಂದು ದೃಷ್ಟಿಕೋನದಲ್ಲೂ ತೋರಿಸುವ ಪ್ರಯತ್ನ ಮಾಡಿ ವಿವೇಕ್ ಅಗ್ನಿಹೋತ್ರಿ ಗೆದ್ದಿದ್ದಾರೆ.

ಚಿತ್ರದ ವಿಷಯಕ್ಕೆ ಬಂದರೆ ಲಾಲ್ ಬಹದ್ದೂರ್ ಶಾಸ್ತ್ರಿಯವರು ದುರ್ಘಟನೆಯ ರಾತ್ರಿ ಆರಾಮಾಗಿಯೇ ಇದ್ದರು, ಚೆನ್ನಾಗಿ ಓಡಾಡುತ್ತಲೇ ಇದ್ದರು, ತಾಷ್ಕೆಂಟ್‌ನಲ್ಲಿ ಅವರು ಉಳಿಯುವ ಸ್ಥಳವನ್ನು ಕೊನೆಯ ಗಳಿಗೆಯಲ್ಲಿ ಬದಲಾಯಿಸಲಾಯಿತು, ಅಲ್ಲಿ ಆಮ್ಲಜನಕದ ವ್ಯವಸ್ಥೆ ಕೂಡ ಇರಲಿಲ್ಲ, ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರ ಸಹಿಗಳಲ್ಲಿ ವ್ಯತ್ಯಾಸ, ಆ ದಿನ ಅವರೊಂದಿಗೆ ಮಾಮೂಲಿ ಅಡಿಗೆಯವನು ಇರಲಿಲ್ಲ, ಆರು ದಿನಗಳ ಪ್ರಯತ್ನದ ನಂತರ ಭಾರತ ಪಾಕ್ ಒಂದು ತುಂಬಾ ಒಳ್ಳೆಯ ಒಪ್ಪಂದಕ್ಕೆ ಸಹಿ ಹಾಕಿದ್ದವು, ಅವರ ದೇಹ ನೀಲಿ ಬಣ್ಣಕ್ಕೆ ತಿರುಗಿತ್ತು, ಅವರ ದೇಹದ ಮೇಲೆ ಕೊಯ್ದ ಗುರುತುಗಳಿದ್ದವು ಹೀಗೆ ಅನೇಕ ಸತ್ಯಗಳು ದಾಖಲೆ ಸಮೇತವಾಗಿ ರುಜುವಾತು ಆಗುತ್ತಲೇ ಹೋಗುತ್ತದೆ. ಆಗೆಲ್ಲಾ ದಿನಂಪ್ರತಿ ನಡೆಯುವಂತೆ ಸಮಿತಿಯ ಇತರ ಸದಸ್ಯರಾದ ಪಟ್ಟಭದ್ರ ಹಿತಾಸಕ್ತಿಗಳು ಅದನ್ನು ತಳ್ಳಿ ಹಾಕಲು ಇನ್ನಿಲ್ಲದ ಪ್ರಯತ್ನ ಮಾಡುತ್ತಾರೆ.

ಯಾವಾಗೆಲ್ಲಾ ಸತ್ಯದ ಕೂಗು ಏಳುತ್ತದೆಯೋ ಆಗೆಲ್ಲ ಮೇಲಿನ ‘ವರ್ಗ’ ಆ ಕೂಗನ್ನು ಅದುಮಲು ಯತ್ನಿಸಿದೆ. ಅದು ಬೋಸರ ಹತ್ಯೆಯೇ ಇರಬಹುದು, ಶಾಸ್ತ್ರಿಗಳ ವಿಷಯವೇ ಇರಬಹುದು. ಆದರೆ ಈ ಚಿತ್ರದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಕುಟುಂಬವು ಸಂಪೂರ್ಣ ಸಹಕಾರ ನೀಡಿದ್ದು ದಾಖಲೆಗಳ ವಿಷಯದಲ್ಲಿ ಕಿಂಚಿತ್ತೂ ಕೊರತೆ ಕಾಣುವುದಿಲ್ಲ. ಕೆಜಿಬಿಯ ಅಧಿಕಾರಿಗಳು ಬರೆದ ಪುಸ್ತಕಗಳು, ಸಮಾನಾಂತರ ಕಾಲದ ಅನೇಕ ವಿದೇಶಿ ಪತ್ರಿಕೆ ಮತ್ತು ಲೇಖಕರು ಬರೆದಿರುವ ಹಲವು ದಾಖಲೆಗಳು ಸಿಗುತ್ತವೆ. ಲಾಲ್ ಬಹದ್ದೂರ್ ಶಾಸ್ತ್ರಿಯವರು ಭಾರತದ ಪ್ರಧಾನಮಂತ್ರಿಯಾಗಿ ಇರುವಾಗಲೇ ರಕ್ತಸಿಕ್ತವಾಗಿ ಶವವಾಗಿ ಮರಳುತ್ತಾರೆ. ಆದರೆ ಭಾರತದ ಸರ್ವೋಚ್ಚ ಸರ್ಕಾರ ಅದನ್ನು ಏನೂ ಆಗೇ ಇಲ್ಲವೇನೋ ಎಂಬಂತೆ ನಿಗೂಢವಾಗಿ ತೆರೆಮರೆಗೆ ಸರಿಸುತ್ತದೆ.

ದಾಖಲೆಗಳ ಹುಡುಕಾಟದಲ್ಲಿ ಶಾಸ್ತ್ರಿಯವರ ನಿಕಟವರ್ತಿ ಭಕ್ಷಿಯವರ ಭೇಟಿಯಾಗುವ ರಾಗಿಣಿ ಅಮೂಲ್ಯ ದಾಖಲೆಗಳನ್ನು ಪಡೆಯುತ್ತಾಳೆ. ಆದರೆ ಅವಳನ್ನು ಹಿಂಬಾಲಿಸುತ್ತಿದ್ದವರು ಭಕ್ಷಿಯವರನ್ನು ಬಸ್ ಅಪಘಾತ ಮಾಡಿ ಕೊಲೆ ಮಾಡಲಾಗುತ್ತದೆ. ಆಗ ಸಮಿತಿಯಿಂದ ರಾಗಿಣಿಯನ್ನು ತೆಗೆದು ಹಾಕಲಾಗುತ್ತದೆ. ಅವಳಿಗೆ ದೇಶದ್ರೋಹಿಯ ಪಟ್ಟ ಕಟ್ಟಲಾಗುತ್ತದೆ. ಹಠ ಬಿಡದ ಪತ್ರಕರ್ತೆ ಸಮಿತಿಯಲ್ಲಿ ಸದಸ್ಯರಾಗಿ ಇನ್ನೊಂದು ಅವಕಾಶ ಗಿಟ್ಟಿಸುತ್ತಾಳೆ. ಅದೊಂದು ಅದ್ಭುತ ದೃಶ್ಯ.

ರಾಗಿಣಿ ಮತ್ತೆ ಸಮಿತಿ ಸೇರುವುದಕ್ಕೆ ಸಮಿತಿಯ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತದೆ. ಆಗ ಸರ್ಕಾರದ ಪರವಾಗಿ ಬಂದಿದ್ದ ಯುವ ನೇತಾರ ರಾಗಿಣಿಯನ್ನು ಉಗ್ರಗಾಮಿ ಎಂದು ಕರೆಯುತ್ತಾನೆ. ಅದಕ್ಕೆ ಆಯೋಗದ ಅಧ್ಯಕ್ಷರಾದ ಮಿಥುನ್ ಚಕ್ರವರ್ತಿ ಪಶ್ಚಾತ್ತಾಪದಿಂದ ಮತ್ತು ನ್ಯಾಯಯುತವಾಗಿ ಪ್ರತಿಯೊಬ್ಬ ಸದಸ್ಯನ ಉದ್ದೇಶವನ್ನು ತಿಳಿಸುತ್ತಾರೆ. ಅದು ಹೀಗಿದೆ. “ಉಗ್ರಗಾಮಿ?!

ಉಗ್ರಗಾಮಿ ಯಾರು ಎಂದು ನನಗೂ ಗೊತ್ತಿದೆ. ಒಬ್ಬ ಭಯೋತ್ಪಾದಕ ಇಷ್ಟು ವರ್ಷಗಳ ಪ್ರಯತ್ನದ ನಂತರವೂ ಮಾಡದನ್ನು ನಾವು, ದೇಶದ ವಿವಿಧ ಚಹರೆಗಳು ನಾವು ಮಾಡುತ್ತಿದ್ದೇವೆ. ರಾಜಕೀಯದ ಭಯೋತ್ಪಾದಕರಾಗಿ ದೇಶವನ್ನು ವಿಭಜಿಸಿದ್ದೇವೆ. ಜನರಿಂದ ಸತ್ಯವನ್ನು ಮತ್ತು ಅದಕ್ಕಾಗಿ ಹೋರಾಡುವ ಶಕ್ತಿಯನ್ನು ಕಿತ್ತುಕೊಂಡೆವು.”

“ಸರ್ಕಾರೇತರ ಸಂಸ್ಥೆಗಳು (NGOs), ಇವಕ್ಕೆ ಸತ್ಯ ಯಾಕೆ ಬೇಕು ಎಂದರೆ ಸರ್ಕಾರವನ್ನು ಒತ್ತಾಯಿಸಲು, ಹಿಡಿತದಲ್ಲಿ ಇಟ್ಟುಕೊಳ್ಳಲು ಮತ್ತು ಯಾವುದೇ ಸರ್ಕಾರ ತಮ್ಮ ಸುದ್ದಿಗೆ ಬರದಂತೆ ತಡೆಯಲು. ಇವರು ಸಾಮಾಜಿಕ ಉಗ್ರಗಾಮಿಗಳು.”

“ನ್ಯಾಯಾಧೀಶರು, ಇವರಿಗೆ ಯಾಕೆ ಸತ್ಯ ಬೇಕು ಎಂದರೆ, ಅವರೀಗ ನಿವೃತ್ತರು. ಸರ್ಕಾರದಿಂದ ಹೆಚ್ಚಿನದನ್ನು ಪಡೆಯಬಹುದು, ಸರ್ಕಾರಿ ದಾಖಲೆಗಳಲ್ಲಿ ಒಳ್ಳೆಯ ಹೆಸರಿನೊಂದಿಗೆ ಅಜರಾಮರಾಗಬಹುದು. ಇವರು ನ್ಯಾಯಾಂಗದ ಉಗ್ರರು.”

“ಇತಿಹಾಸಕಾರರಾಗಿ ಹೊಸ ಹೊಸ ಸತ್ಯಗಳನ್ನು ಒಪ್ಪಿಕೊಂಡರೆ ಅವರ ಹಳೆಯ ಪುಸ್ತಕಗಳ ಬೆಲೆ ಏನು? ಸಮಾಜದಲ್ಲಿ ಅವರ ಮೌಲ್ಯ ಕುಸಿದುಹೋಗುತ್ತದೆ. ಅವರಿಗೆ ರಾಯಧನದ (Royalty) ಚಿಂತೆ. ಇವರಿಗೂ ನಿಜವಾದ ಸತ್ಯ ಬೇಕಿಲ್ಲ. ಇವರು ಬೌದ್ಧಿಕ ಉಗ್ರರು.”

ಹೀಗೆ ಸಾಗುವ ದೃಶ್ಯ ಅಕ್ಷರಶಃ ಇಂದಿನ ಸಮಾಜವನ್ನು ಕಣ್ಣೆದುರು ತರುತ್ತದೆ. ಮಾಧ್ಯಮಗಳ ಮತ್ತು ಸಮಿತಿಯ ಸಮ್ಮುಖದಲ್ಲಿ ರಾಗಿಣಿ ದಾಖಲೆಗಳನ್ನು ಪ್ರಸ್ತುತ ಪಡಿಸುತ್ತಾಳೆ. ಆ ಅನಾಮಿಕ ವ್ಯಕ್ತಿ ಬೇರಾರೂ ಆಗಿರದೇ ಸಮಿತಿಯ ಸದಸ್ಯರಲ್ಲೇ ಒಬ್ಬರು ಎಂಬ ವಿಷಯವೂ ತಿಳಿಯುತ್ತದೆ. ಕೊನೆಯಲ್ಲಿ ರಾಜಕಾರಣಿ ಪತ್ರಕರ್ತೆಗೆ ನಿನಗೆ ರಾಜಕಾರಣಕ್ಕೆ ಸ್ವಾಗತ ಎಂದು ಹೇಳುವಾಗ ಪ್ರಸಕ್ತ ರಾಜಕೀಯ ಸ್ಥಿತಿಗತಿ ಕಣ್ಣ ಮುಂದೆ ಬರುತ್ತದೆ. ಇತ್ತೀಚಿನ ಪ್ರತಿ ಹೋರಾಟಗಾರರು ರಾಜಕೀಯದ ಸಾಗರವನ್ನು ಸೇರಿದ ಮೇಲೆ ಕೊನೆಗೆ ತಾವು ನಂಬಿದ ಮತ್ತು ಜನತೆಗೆ ತೋರಿದ ಸತ್ಯಕ್ಕೆ ಸಮಾಧಿ ಕಟ್ಟಿ ರಾಜಕಾರಣಿಯೇ ಆಗಿ ಹೋಗುತ್ತಾರೆ. ಅಂತೆಯೇ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುಟುಂಬದ ಸಹಯೋಗದಿಂದ ನಿರ್ಮಿಸಿದ ಈ ಚಿತ್ರದಲ್ಲಿ ಶಾಸ್ತ್ರಿಯವರ ಸಾವಿನ ಹಿಂದಿನ ಸತ್ಯವನ್ನು ಅರಿಯಲು ನೀವು ಖಂಡಿತ ಚಿತ್ರವನ್ನು ನೋಡಲೇಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D Tashkent filesKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Article by Sachin Parshwanathದಿ ತಾಷ್ಕೆಂಟ್ ಫೈಲ್ಸ್
Share198Tweet123Send
Previous Post

ತೀರ್ಥಹಳ್ಳಿ: ಅ.3ರಂದು ಶ್ರೀಕ್ಷೇತ್ರ ಹೆಗಲತ್ತಿ ದೇವಾಲಯದಲ್ಲಿ ವಿಶೇಷ ಸೇವೆ ಲಭ್ಯ…

Next Post

ಗಾಂಧೀಜಿ ವೇಷಧರಿಸಿ ರಸ್ತೆಯಲ್ಲಿ ಪೈರು ನೆಟ್ಟ ಯುವಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಾಂಧೀಜಿ ವೇಷಧರಿಸಿ ರಸ್ತೆಯಲ್ಲಿ ಪೈರು ನೆಟ್ಟ ಯುವಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಗಾಂಧೀಜಿ ವೇಷಧರಿಸಿ ರಸ್ತೆಯಲ್ಲಿ ಪೈರು ನೆಟ್ಟ ಯುವಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL