No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜ್ಞಾನಾಧಾರಿತ, ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆ ಅಳವಡಿಸಿಕೊಂಡಿರುವ ವಿಭಿನ್ನ ಶಿಕ್ಷಣ ಸಂಸ್ಥೆ ಕ್ರೈಸ್ಟ್‌ಕಿಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2025
in Special Articles
0
ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ | ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ವಿಶೇಷ ಲೇಖನ  |

ಮನುಷ್ಯನ ವಿಕಾಸಕ್ಕೆ ಶಿಕ್ಷಣ ಮೂಲಸಾಧನ. ಇದನ್ನರಿತ ಆಧುನಿಕ ಮನುಷ್ಯ ಸಮಾಜ ಶಿಕ್ಷಣಕ್ಕೆ ಎಲ್ಲಿಲ್ಲದ ಮಹತ್ವ ನೀಡುತ್ತಿದೆ. ತಂತ್ರಜ್ಞಾನಗಳ ಔನ್ನತಿಯ ಈ ಕಾಲಘಟ್ಟದಲ್ಲಿ ಹೊಸ ಹೊಸ ರೂಪದೊಂದಿಗೆ ಶಿಕ್ಷಣ ಸೇವೆ ನಡೆಯುತ್ತಿದೆ. ಇದೇ ಮಾದರಿಯ ಶಿಕ್ಷಣ ಪದ್ಧತಿಯ ಮೂಲಕ ಶಿಸ್ತು, ಗುಣಮಟ್ಟ ಹಾಗೂ ವಾಗಿ ಕಾಣಿಸುತ್ತಿದೆ.

ಸಾಧನೆಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗಳ ಗರಿಮೆ

ದಿವಂಗತ ರೆ.ಫಾ.ಎಫ್.ಪಿ.ಎಸ್ ಮೊನಿಸ್ ಇವರ ನೇತೃತ್ವದಲ್ಲಿ 1989ರಲ್ಲಿ ಆರಂಭಗೊಂಡ ಸಂಸ್ಥೆ ಬಡ ಮತ್ತು ಗ್ರಾಮೀಣ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣ ಮತ್ತು ‘ಜೀವನಕ್ಕಾಗಿ ಶಿಕ್ಷಣ’ ಎಂಬ ಧ್ಯೇಯದೊಂದಿಗೆ ಮುಂದುವರಿಯುತ್ತಾ ಬಂದಿದೆ. ಇದು ಕ್ರೈಸ್ಟ್‌ಕಿಂಗ್ ಚಾರಿಟೇಬಲ್ ಟ್ರಸ್ಟ್‌ನ ಆಶ್ರಯದಲ್ಲಿ ನಡೆಯುತ್ತಿದ್ದು ಅಡಳಿತ ಮಂಡಳಿ ಯಾವುದೇ ವೈಯಕ್ತಿಕ ಪ್ರತಿಫಲಾಪೇಕ್ಷೆಯಿಲ್ಲದೆ ಸಂಗ್ರಹವಾದ ಹಣವನ್ನು ಸಂಸ್ಥೆಯ ಬೆಳವಣಿಗೆಗೆ ವಿನಿಯೋಗಿಸುತ್ತಾ ಬಂದಿದೆ. ಪ್ರಸ್ತುತ ಸಮಾಜದ ಶಿಕ್ಷಣ ವ್ಯಾಪರೀಕರಣ ಮತ್ತು ವಾಣಿಜ್ಯೀಕರಣಕ್ಕೆ ವಿರುದ್ಧವಾಗಿ ಪ್ರತಿಯೊಬ್ಬರಿಗೂ ಶಿಕ್ಷಣ ಎನ್ನುವ ಭಾವನೆಯೊಂದಿಗೆ ಶಿಕ್ಷಣ ಕೈಂಕರ್ಯವನ್ನು ಮುಂದುವರಿಸುತ್ತಿದೆ. ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಸರ್ವಧರ್ಮ ಸಹಬಾಳ್ವೆಯ ಊರಾದ ಕಾರ್ಕಳದಲ್ಲಿ ಆಧುನಿಕ ಶಿಕ್ಷಣ ಪದ್ಧತಿಯೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರೆಗೆ ಅತ್ಯುತ್ಕೃಷ್ಟ ಗುಣಮಟ್ಟದ ಶಿಕ್ಷಣ ಇಲ್ಲಿ ಲಭ್ಯವಿದೆ. ತನ್ನ ಈ ಶೈಕ್ಷಣಿಕ ವಿಶೇಷತೆಗೆ ಐ.ಎಸ್.ಒ 9001:2015 ಪ್ರಮಾಣ ಪತ್ರ ಹಾಗೂ ಕರ್ನಾಟಕದ ಅತ್ಯುತ್ತಮ ಸಾರ್ವಜನಿಕ ಶಿಕ್ಷಣ ಸಂಸ್ಥೆ, ಬೆಸ್ಟ್ ಸ್ಕೂಲ್ ಇನ್ ಕರ್ನಾಟಕ ಫಾರ್ ಟೀಚಿಂಗ್ 2019, ಮೋಸ್ಟ್ ಎಡ್‌ಮಯರ್ಡ್ ಪಬ್ಲಿಕ್ ಸ್ಕೂಲ್ ಇನ್ ಕರ್ನಾಟಕ, ಮೋಸ್ಟ್ ಪ್ರಾಮಿಸಿಂಗ್ ಹಾಗೂ ಟ್ರಸ್ಟೆಡ್ ಪದವಿಪೂರ್ವ ಕಾಲೇಜು-2024 ಮುಂತಾದ ಪ್ರಶಸ್ತಿಗಳ ಗರಿ ಈ ಸಂಸ್ಥೆಯ ಮುಡಿಗೇರಿದೆ. ಉಡುಪಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶ ಹಾಗೂ ಮೌಲ್ಯಯುತ ಶಿಕ್ಷಣಕ್ಕೆ ಈ ಸಂಸ್ಥೆ ಪ್ರಸಿದ್ಧಿ ಪಡೆದಿದೆ.
ಹಾಸ್ಟೆಲ್ ಸೌಲಭ್ಯ

ಎಂಟನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಹುಡಗರಿಗೆ ಹಾಗೂ ಹುಡುಗಿಯರಿಗೆ  ಹಾಸ್ಟೇಲ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹುಡುಗಿಯರಿಗೆ ನೂತನ ಹಾಸ್ಟೆಲ್ ನಿರ್ಮಾಣಗೊಂಡಿದ್ದು ಈಗಾಗಲೇ ಕಾರ್ಯಾರಂಭ ಮಾಡಿದೆ.

ನೂತನ ಕಾಲೇಜು ಕಟ್ಟಡ

ಪದವಿಪೂರ್ವ ಕಾಲೇಜಿಗೆ ಸುಮಾರು ೧೨ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ. ಇದು ಸುಸಜ್ಜಿತ ತರಗತಿ ಕೊಠಡಿಗಳು, ವಿಶಾಲ ಗ್ರಂಥಾಲಯ, ಆಧುನಿಕ ಸೌಲಭ್ಯಗಳನ್ನೊಳಗೊಂಡ ಲ್ಯಾಬ್‌ಗಳು, ಕಿರು ಚಿತ್ರಮಂದಿರ, ಎರಡು ಸಾವಿರ ಜನ ಆಸೀನರಾಗಬಹುದಾದ ಬೃಹತ್ ಸಭಾಂಗಣ, ಲಿಫ್ಟ್ ವ್ಯವಸ್ಥೆಗಳನ್ನು ಒಳಗೊಂಡಿದೆ.

ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ(ಪ್ರೀ ಕೆಜಿ, ಎಲ್‌ಕೆಜಿ, ಯುಕೆಜಿ), ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ತನಕದ ಶಿಕ್ಷಣ ಏಕ ಸೂರಿನಡಿ ಲಭ್ಯವಿದೆ. ಈಗಾಗಲೇ ಸುಮಾರು ೨೪೦೦ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಪದವಿಪೂರ್ವದಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿದ್ದು ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ಪಿಸಿಎಂಸಿ, ಪಿಸಿಎಂಎಸ್ ಕೋರ್ಸ್‌ಗಳು, ವಾಣಿಜ್ಯ ವಿಭಾಗದಲ್ಲಿ ಇಬಿಎಸಿ ಹಾಗೂ ಇಬಿಎಎಸ್, ಹೆಚ್‌ಇಬಿಎ ಕೋರ್ಸ್‌ಗಳನ್ನು ಅಳವಡಿಸಲಾಗಿದೆ.

http://kalpa.news/wp-content/uploads/2025/03/PES-Video.mp4

ನಿರಂತರ ಸಿಇಟಿ, ನೀಟ್, ಜೆಇಇ ಹಾಗೂ ಸಿಎ, ಸಿಎಸ್ ತರಬೇತಿ

ನುರಿತ ಹಾಗೂ ಅನುಭವಸ್ಥ ಉಪನ್ಯಾಸಕ ತಂಡದಿಂದ ಸಿ.ಇ.ಟಿ, ನೀಟ್, ಜೆ.ಇ.ಇ ತರಗತಿಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಪ್ರತೀ ವಾರ ಅಣಕು ಸಿಇಟಿ, ನೀಟ್ ಪರೀಕ್ಷೆ (moಛಿಞ ಖಿesಣ) ನಡೆಸಲಾಗುತ್ತದೆ. ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಸಿ.ಇ.ಟಿ/ನೀಟ್ ಕಲಿಕಾ ಸಾಮಾಗ್ರಿಗಳನ್ನು ಮಕ್ಕಳಿಗೆ ಒದಗಿಸಲಾಗುತ್ತಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ, ಸಿ.ಎಸ್ ತರಬೇತಿ ನೀಡಲಾಗುತ್ತಿದೆ. ಈ ಸಂಸ್ಥೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಫಾರ್ಮಸಿ, ಸಿ.ಎ, ಸಿಎಸ್ ಮುಂತಾದ ಪ್ರೊಫೆಸನಲ್ ಕೋರ್ಸ್ ಪೂರೈಸಿ ಉನ್ನತ ಸ್ಥಾನದಲ್ಲಿದ್ದಾರೆ.

ಕೌಶಲ್ಯಾಭಿವೃದ್ಧಿ ಹಾಗೂ ಫೌಂಢೇಷನ್ ಕೋರ್ಸ್

ಐದನೇ ತರಗತಿಯಿಂದ ಹತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಮತ್ತು ಪೌಂಡೇಷನ್ ಕೋರ್ಸ್ ನಡೆಸಲಾಗುತ್ತಿದೆ. ಮಕ್ಕಳನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿಯೇ ಭವಿಷ್ಯದ ನೀಟ್, ಜೆ.ಇ.ಇ, ಸಿ.ಇ.ಟಿ, ಸಿ.ಎ, ಎನ್‌ಡಿಎ, ಕೆವಿಪಿವೈ, ಎನ್‌ಟಿಎಸ್‌ಇ, ಐ.ಎ.ಎಸ್, ಐ.ಪಿ.ಎಸ್ ಹಾಗೂ ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರುಗೊಳಿಸುವುದು ಈ ಕೋರ್ಸ್‌ನ ಉದ್ದೇಶ. ಕಾರ್ಕಳದ ಪರಿಸರದಲ್ಲಿ ಶಿಕ್ಷಣ ಸಂಸ್ಥೆಯೊಂದು ಇಂತಹ ಸಾಹಸವನ್ನು ಆರಂಭಿಸಿರುವುದು ಮೊತ್ತ ಮೊದಲನೆಯದಾಗಿದೆ.
ಸತತವಾಗಿ 100% ಫಲಿತಾಂಶ ಪಡೆಯುತ್ತಿರುವ ಸಂಸ್ಥೆ

ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಕ್ವಾಲಿಟಿ ರಿಸಲ್ಟ್ ಇಂಡೆಕ್ಸ್‌ನಲ್ಲಿ  ನಿರಂತರವಾಗಿ ಕಾರ್ಕಳ ತಾಲೂಕಿನಲ್ಲಿ ಪ್ರಥಮ ಸ್ಥಾನದಲ್ಲಿರುವುದು ಸಂಸ್ಥೆಯ ವಿಶೇಷತೆಯಾಗಿದೆ. ಕಳೆದ ವರ್ಷ ಹತ್ತನೇ ತರಗತಿಯಲ್ಲಿ ಒಟ್ಟು 9 ವಿದ್ಯಾರ್ಥಿಗಳು ಆರು ನೂರಕ್ಕಿಂತ ಹೆಚ್ಚಿನ ಅಂಕ ದಾಖಲಿಸಿದ್ದಾರೆ. 2021-22 ಸಾಲಿನಲ್ಲಿ ಓರ್ವ ವಿದ್ಯಾರ್ಥಿನಿ 625 ರಲ್ಲಿ 625 ಅಂಕಗಳನ್ನು ಪಡೆದು ಕಾರ್ಕಳ ತಾಲೂಕಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪೂರ್ಣಾಂಕಗಳನ್ನು ಪಡೆದ ದಾಖಲೆಯನ್ನು ಈ ಮೂಲಕ ಕ್ರೈಸ್ಟ್‌ಕಿಂಗ್ ತನ್ನದಾಗಿಸಿಕೊಂಡಿದೆ. ಪದವಿಪೂರ್ವ ವಿಭಾಗದಲ್ಲಿ 2023-24ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಅಗ್ರ ಹತ್ತರೊಳಗೆ ಹತ್ತು ರ್‍ಯಾಂಕ್‌ಗಳನ್ನು ತನ್ನದಾಗಿಸಿಕೊಂಡಿದ್ದಲ್ಲದೆ 175 ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿಯನ್ನು ಪಡೆದುಕೊಂಡಿದ್ದರು. ಇದರ ಜೊತೆಗೆ ಪರೀಕ್ಷೆ ಬರೆದ 234 ವಿದ್ಯಾರ್ಥಿಗಳು ಕೂಡಾ ಪ್ರಥಮ ದರ್ಜೆಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದರು. ಪ್ರಸಕ್ತ 2024-25ನೇ ಸಾಲಿನಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ಹತ್ತರೊಳಗೆ ಐದು ವಿದ್ಯಾರ್ಥಿಗಳು ರ್‍ಯಾಂಕ್ ಪಡದುಕೊಂಡಿದ್ದಾರೆ, ವಾಣಿಜ್ಯ ವಿಭಾಗದಲ್ಲಿ ಸಂಸ್ಥೆಯು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಒಟ್ಟು 177 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಳ್ಳುವುದರ ಜೊತೆಗೆ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಗಿಂತ ಮೇಲಿನ ಅಂಕಗಳನ್ನು ಪಡೆದುಕೊಂಡಿದ್ದಾರೆ. ಜೆಇಇಯಲ್ಲಿ ಟಾಪರ್ ವಿದ್ಯಾರ್ಥಿ 99.6912 ಪರ್ಸಂಟೈಲ್ ಅಂಕಗಳನ್ನು ಪಡೆದುಕೊಂಡಿದ್ದಾನೆ. ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಷನ್ ಹಾಗೂ ನಾಲ್ಕು ವಿದ್ಯಾರ್ಥಿಗಳು ಸಿಎಸ್‌ಇಇಟಿ ಯನ್ನು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ.

ಉಚಿತ ಮತ್ತು ಶುಲ್ಕ ರಿಯಾಯಿತಿಯ ಶಿಕ್ಷಣ

ಈಗಿನ ಕಾಲದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಗಗನಕುಸುಮವಾಗಿದೆ. ಇದನ್ನು ಅರಿತ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನವರು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಿದ್ದಾರೆ. ಹತ್ತನೇ ತರಗತಿಯಲ್ಲಿ 96 ಶೇಖಡಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ಸಂಪೂರ್ಣ ರಿಯಾಯಿತಿ ಸಿಗಲಿದೆ. ಅಲ್ಲದೇ ಹತ್ತನೇ ತರಗತಿಯಲ್ಲಿ 90 ರಿಂದ 96 ಶೇಖಡದೊಳಗೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ 50% ರಿಯಾಯಿತಿ ನೀಡಲಾಗುತ್ತದೆ. ಇದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ 50% ಶುಲ್ಕ ವಿನಾಯಿತಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ. 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಒಟ್ಟಾರೆಯಾಗಿ ಸುಮಾರು 38 ಲಕ್ಷದ 24 ಸಾವಿರ ರೂಪಾಯಿಗಳ ಶುಲ್ಕ ಮನ್ನಾ ಮಾಡಲಾಗಿದೆ.
ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾರಮ್ಯ

ವಿದ್ಯಾರ್ಥಿಗಳಲ್ಲಿ ಕ್ರೀಯಾಶೀಲತೆ ಪುಟಿದೇಳುವಂತೆ ಮಾಡಿ ನಾಯಕತ್ವ ಗುಣ ಬೆಳೆಸಲು ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ಸದಾ ಒಂದಿಲ್ಲೊಂದು ಕಾರ್ಯಕ್ರಮ ಸಂಯೋಜಿಸುತ್ತಾ ಬರುತ್ತಿದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಕೌಶಲ್ಯವನ್ನು ವೃದ್ಧಿಸುವ ದೃಷ್ಠಿಯಿಂದ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳಿಂದ ನಿರಂತರ ಉಪನ್ಯಾಸ ಪ್ರಾತ್ಯಕ್ಷಿಕೆಗಳನ್ನು ನೀಡಲಾಗುತ್ತಿದೆ. ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಲ್ಲಿ ಮಕ್ಕಳಿಗೆ ನಿರಂತರ ತರಬೇತಿ ನೀಡಲಾಗುತ್ತಿದೆ. ಕಬ್, ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್‍ಸ್ ಮತ್ತು ರೇಂಜರ್‍ಸ್, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ, ವಿಜ್ಞಾನ ಸಂಘ, ವಾಣಿಜ್ಯ ಸಂಘ, ವಿದ್ಯಾರ್ಥಿ ಸಂಘ ಇತ್ಯಾದಿ ಸಂಘಗಳ ಮೂಲಕ ಮಕ್ಕಳ ದೈಹಿಕ, ಬೌದ್ಧಿಕ ವಿಕಾಸಕ್ಕೆ ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ತರಗತಿವಾರು ಚಟುವಟಿಕೆಗಳ ಮೂಲಕ ಮಕ್ಕಳ ಬೌದ್ಧಿಕ ವಿಕಸನಕ್ಕೆ ಒತ್ತು ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಇಲ್ಲಿಗೆ ಬಂದು ವಿದ್ಯಾರ್ಥಿಗಳನ್ನು ತರಬೇತುಗೊಳಿಸುತ್ತಾರೆ. ಆರನೇ ತರಗಯಿಂದ ಪದವಿ ಪೂರ್ವದವರೆಗಿನ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕಾಗಿ ಕೈಗಾರಿಕೆ, ಕೃಷಿ, ಹೈನುಗಾರಿಕೆ, ಆಶ್ರಮ, ವಿಶೇಷ ಶಾಲೆ, ವಿಜ್ಞಾನ ಸಂಶೋಧನಾಲಯಗಳು ಮುಂತಾದ ಕ್ಷೇತ್ರಗಳಿಗೆ ಭೇಟಿ ಕಾರ್ಯಕ್ರಮ ನಡೆಯುತ್ತದೆ. ವಿದ್ಯಾರ್ಥಿಗಳಿಗೆ ಚೆಂಡೆ, ಬ್ಯಾಂಡ್, ಯಕ್ಷಗಾನ, ಭರತನಾಟ್ಯ, ಕರಾಟೆ, ಚೆಸ್, ಶಾಸ್ತ್ರೀಯ ಸಂಗೀತ ಮುಂತಾದ ತರಬೇತಿಗಳನ್ನು ನೀಡಲಾಗುತ್ತಿದೆ. ಇವುಗಳಿಂದಾಗಿ ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಕ್ರೀಡೆ, ಸಾಂಸಕೃತಿಕ, ವೈಜ್ಞಾನಿಕ ಸಂಶೋಧನಾ ಕ್ಷೇತ್ರಗಳನ್ನು ಪಾರಮ್ಯ ಸಾಧಿಸುತ್ತಿದ್ದಾರೆ. ಈ ಸಾಲಿನಲ್ಲಿ ಚೆಸ್, ಶಟಲ್ ಬ್ಯಾಂಡ್ಮಿಂಟನ್, ಕುಸ್ತಿ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ೬ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಹಾಗೂ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ರಾಜ್ಯಮಟ್ಟದಲ್ಲಿ ೧೧, ಮೈಸೂರು ವಿಭಾಗ ಮಟ್ಟದಲ್ಲಿ೧೯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.

ಕಿಚನ್ ಲ್ಯಾಬ್ ಹಾಗೂ ಗ್ರೂಮಿಂಗ್ ತರಗತಿ

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅಡುಗೆ ಕೋಣೆ ಹಾಗೂ ಅಡುಗೆ ತಯಾರಿಯ ಕುರಿತಾದ ಜ್ಞಾನ ಬೆಳೆಸಲು ಕಿಚನ್ ಲ್ಯಾಬ್ ಎಂಬ ನೂತನ ಪರಿಕಲ್ಪನೆಯನ್ನು ಪರಿಚಯಿಸಲಾಗುತ್ತದೆ. ಇದರ ಜೊತೆಗೆ ಸಾಮಾಜಿಕ ನಡವಳಿಕೆ, ಕೌಟುಂಬಿಕ ಭಾಂಧವ್ಯ, ಸಮಾಜಮುಖಿ ವ್ಯಕ್ತಿತ್ವಗಳ ಅರಿವನ್ನು ಮೂಡಿಸಲು ಗ್ರೂಮಿಂಗ್ ತರಗತಿ ಎಂಬ ನೂತನ ಮೌಲ್ಯ ಬೋಧನಾ ತರಗತಿಗಳನ್ನು ಈ ವರ್ಷದಿಂದ ಆರಂಭಿಸಲಾಗುತ್ತಿದೆ. ವಿಶೇಷವಾಗಿ ಇದರ ಸಿಲೆಬಸ್ ಅನ್ನು ಕ್ರೈಸ್ಟ್‌ಕಿಂಗ್ ವಿದ್ಯಾ ಸಂಸ್ಥೆಯೇ ತಯಾರಿಸಿದೆ.

http://kalpa.news/wp-content/uploads/2025/02/Kumadvati-College-Shikaripura-2025-Video.mp4

ಸೇವಾ ವೈಶಿಷ್ಟ್ಯತೆ

ನಗರ ಪ್ರದೇಶದಲ್ಲಿದ್ದರೂ ಗ್ರಾಮೀಣ ಸೊಗಡನ್ನು ಬಿಡದೆ, ಸಾಂಪ್ರದಾಯಿಕ ಪದ್ಧತಿಯೊಂದಿಗೆ ಆಧುನಿಕ ವಿಧಾನಗಳ ಮೂಲಕ ಶಿಕ್ಷಣ ಸೇವೆ ನೀಡುತ್ತಿರುವ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು ವಿಭಿನ್ನವಾಗಿ ಕಾರ್ಯಾಚರಿಸುತ್ತಿವೆ. ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಆನ್‌ಲೈನ್ ಮುಖಾಂತರ ನಿರಂತರ ತರಗತಿಗಳನ್ನು ಮಾಡಿ ಆ ಮೂಲಕ ಮಕ್ಕಳು ಶಿಕ್ಷಣದಿಂದ ವಿಮುಖರಾಗದ ಹಾಗೇ ನೋಡಿಕೊಳ್ಳಲಾಗಿದೆ. ಇಲ್ಲಿ ನೀಡಿರುವ ಆನ್‌ಲೈನ್ ತರಗತಿಗಳು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮಾಜದ ಗಣ್ಯ ವ್ಯಕ್ತಿಗಳ ಮತ್ತು ವಿದ್ಯಾಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿವೆ. ಒಟ್ಟಿನಲ್ಲಿ ಶಿಕ್ಷಣದ ವ್ಯಾಪಾರೀಕರಣದ ನಡುವೆ ಈ ಶಿಕ್ಷಣ ಸಂಸ್ಥೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ನಗರ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಈ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೇದಿಕೆ ಒದಗಿಸುತ್ತಿದೆ. ಈ ರೀತಿಯ ತರಬೇತಿಗಳಿಂದ ಈ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ – ಸಾಹಿತ್ಯಿಕ ಸ್ಪರ್ಧೆಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚುತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSpecial Articleವಿಶೇಷ ಲೇಖನ
Share196Tweet123Send
Previous Post

ಸುಂದರ ಜೀವನಕ್ಕೆ ನೈತಿಕ ಶಿಕ್ಷಣ ಅತ್ಯವಶ್ಯ: ನಾರಾಯಣ ರಾವ್ ಅಭಿಪ್ರಾಯ

Next Post

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

ಇದು ನವ ಭಾರತ... ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL