No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವಭಾರತ ನಿರ್ಮಾಣಕ್ಕೊಂದು ಅರಿವಿನ ಸೋಪಾನ ಬೇಸ್

ಅಂಬೇಡ್ಕರ್ ಚೈತನ್ಯಕ್ಕೊಂದು ಅರ್ಥಪೂರ್ಣ ಗೌರವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2022
in Special Articles
0
ನವಭಾರತ ನಿರ್ಮಾಣಕ್ಕೊಂದು ಅರಿವಿನ ಸೋಪಾನ ಬೇಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಸರಿಯಾದ ಶಿಕ್ಷಣದ ಶಕ್ತಿ ಏನೆಂಬುದು ಇಡೀ ಮನುಕುಲಕ್ಕೇ ಗೊತ್ತಿದೆ. ಏಕೆಂದರೆ, ಶಿಕ್ಷಣವು ವ್ಯಕ್ತಿತ್ವ, ತಿಳಿವಳಿಕೆ, ಸಾಧನೆ, ಚಾರಿತ್ರ್ಯ, ಸಬಲೀಕರಣ, ಆತ್ಮವಿಶ್ವಾಸ, ತರ್ಕಶಕ್ತಿ, ದಾರ್ಶನಿಕತೆ, ಸಚ್ಚಿಂತನೆ- ಇತ್ಯಾದಿಗಳ ಮೂಲ. ಇಂತಹ ಶಿಕ್ಷಣದ ಮೂಲಬೀಜಗಳು ಇರುವುದು ನಮ್ಮ ಕುಟುಂಬ ವ್ಯವಸ್ಥೆಯಲ್ಲೇ. ಅದರಲ್ಲೂ ಇದರಲ್ಲಿ ನಮ್ಮ ತಾಯಂದಿರ ಪಾತ್ರ ಮಹತ್ತ್ವದ್ದು. ಹೀಗಾಗಿಯೇ, `ಮನೆಯೇ ಮೊದಲ ಪಾಠಶಾಲೆ, ಜನನಿ ತಾನೇ ಮೊದಲ ಗುರುವು, ಜನನಿಯಿಂದ ಪಾಠ ಕಲಿತ ಜನರು ಧನ್ಯರು’ ಎನ್ನುವ ಬಣ್ಣನೆ ಚಾಲ್ತಿಯಲ್ಲಿದೆ.

ಆದರೆ, ಒಂದು ನಾಗರಿಕ ಸಮಾಜವಾಗಿ ಶಿಕ್ಷಣಕ್ಕೆ ಅಚ್ಚುಕಟ್ಟಾದ, ಗುಣಮಟ್ಟದ ಸಾಂಸ್ಥಿಕ ವ್ಯವಸ್ಥೆಯನ್ನು ಒದಗಿಸಬೇಕಾದ್ದು ಒಂದು ಸರಕಾರದ ಅಥವಾ ವ್ಯವಸ್ಥೆಯ ಆದ್ಯ ಕರ್ತವ್ಯ. ಇದನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ Dr. Baba Saheb Ambedkar ಅವರಂತಹ ಚಿಂತಕರು ಚೆನ್ನಾಗಿ ಮನಗಂಡಿದ್ದರು. ಇದನ್ನು ಅವರ ಚಿಂತನೆಗಳಲ್ಲಿ ಸ್ಪಷ್ಟವಾಗಿ ಕಾಣಬಹುದು.

ಆಧುನಿಕ ಜಗತ್ತಿನಲ್ಲಿ ಶಿಕ್ಷಣವು ಸಾಂಪ್ರದಾಯಿಕವಾದ ಚಹರೆಗಳಿಂದ ಬಿಡಿಸಿಕೊಂಡು, ಸಂಕೀರ್ಣ ಜಗತ್ತಿನ ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ರೂಪುಗೊಳ್ಳಬೇಕಾಗುತ್ತದೆ. ಇದು ಕಾಲಧರ್ಮ. ಖ್ಯಾತ ಚಿಂತಕ ಓಶೋ, ಇದನ್ನೆಲ್ಲ ಐವತ್ತು ವರ್ಷಗಳ ಹಿಂದೆಯೇ ಹೇಳಿದ್ದರು. ಇದರ ಜತೆಗೆ, ನಾವು ನಮ್ಮ ಜನ ಸಮುದಾಯಗಳು, ಸಮಾಜ ಮತ್ತು ರಾಷ್ಟ್ರದ ಅಗತ್ಯಗಳಿಗೆ ತಕ್ಕಂತೆ ಶಿಕ್ಷಣ ಕ್ರಮವನ್ನೂ ಗುಣಮಟ್ಟದ ಉನ್ನತ ಸಂಸ್ಥೆಗಳನ್ನೂ ಕಟ್ಟಬೇಕು; ಇದೆಲ್ಲ ಒಂದು ನಿರಂತರ ವಿದ್ಯಮಾನವಾಗಿರುವಂತೆ ನೋಡಿಕೊಳ್ಳಬೇಕು. ಈ ಮೂಲಕ ದೇಶೀಯ ಮತ್ತು ಜಾಗತಿಕ ಅಗತ್ಯಗಳಿಗೆ ಸ್ಪಂದಿಸಬೇಕು; ಅಲ್ಲಿನ ಸ್ಪರ್ಧೆಯನ್ನು ಎದುರಿಸಬೇಕು; ವಿಶ್ವ ಮಟ್ಟದಲ್ಲಿ ಭಾರತದ ಪ್ರತಿಭಾಶಕ್ತಿಯನ್ನು ಪ್ರದರ್ಶಿಸಬೇಕು.

ಅಂಬೇಡ್ಕರ್ ಅವರು ನಮ್ಮ ಸಂವಿಧಾನ ರಚನೆಯಲ್ಲಿ ವಹಿಸಿದ ಪಾತ್ರ ಎಲ್ಲರಿಗೂ ಗೊತ್ತಿದೆ. ಆದರೆ, ಅವರು ಅರ್ಥಶಾಸ್ತ್ರವೂ ಸೇರಿದಂತೆ 64 ವಿಷಯಗಳಲ್ಲಿ ಪದವಿ ಪಡೆದಿದ್ದರು ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ! ಅವರು, The Problem of the Rupee ಎನ್ನುವ ತಮ್ಮ ಮಹಾಪ್ರಬಂಧಕ್ಕೆ 1923ರಲ್ಲಿ ಪಿಎಚ್.ಡಿ ಪದವಿ ಪಡೆದುಕೊಂಡಿದ್ದು ಪ್ರತಿಷ್ಠಿತ `ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್’ನಿಂದ. ಅಂಬೇಡ್ಕರ್ ಈ ಸಂಸ್ಥೆಗೆ ಕಾಲಿಟ್ಟಿದ್ದು 1916ರಲ್ಲಿ. ಈ ಘಟನೆಗೆ 2016ರಲ್ಲಿ ನೂರು ವರ್ಷ ತುಂಬಿತಷ್ಟೆ. ಇದರ ನೆನಪಿಗೆ ಪ್ರಧಾನಿ ನರೇಂದ್ರ ಮೋದಿಯವರು, ತಮ್ಮ ಲಂಡನ್ ದಿನಗಳಲ್ಲಿ ಉಳಿದುಕೊಂಡಿದ್ದ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಿ, ಲೋಕಾರ್ಪಣೆ ಮಾಡಿದರು. ನಾವೀಗ, ಅಂಬೇಡ್ಕರ್ ಅವರ ಪಿಎಚ್.ಡಿ ಸಾಧನೆಯ ಶತಮಾನೋತ್ಸವದ ಹೊಸ್ತಿಲಲ್ಲಿದ್ದೇವೆ.

ಯೋಗಾಯೋಗವೆಂಬಂತೆ, ನಾವೀಗ ಅವರ ಗೌರವಾರ್ಥವಾಗಿ ಭವ್ಯವಾಗಿ ನಿರ್ಮಿಸಿರುವ `ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನವರ್ಸಿಟಿ’ (ಬೇಸ್) ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಳ್ಳುತ್ತಿದೆ. ಇದು, ನಮ್ಮ ಸಂವಿಧಾನ ಶಿಲ್ಪಿಗೆ ಅವರ 125ನೇ ಜನ್ಮದಿನದ ಅಂಗವಾಗಿ ಸಮರ್ಪಿಸುತ್ತಿರುವ ಒಂದು ಅರ್ಥಪೂರ್ಣ ಕೊಡುಗೆ. ಇದರ ಜತೆಯಲ್ಲೇ, ಅಂಬೇಡ್ಕರ್ ಅವರ 22 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನೂ ಅನಾವರಣಗೊಳಿಸಲಾಗುತ್ತಿದೆ.

`ಬೇಸ್’ ಕ್ಯಾಂಪಸ್ ನಮ್ಮ ಉಳಿದ ವಿ.ವಿ.ಗಳಂತಲ್ಲ. ಇದೊಂದು ಏಕೀಕೃತ ವಿಶ್ವವಿದ್ಯಾಲಯ. 43 ಎಕರೆ ವಿಶಾಲ ಪ್ರದೇಶದಲ್ಲಿ ತಲೆಯೆತ್ತಿರುವ ಈ ಸಂಸ್ಥೆಯಲ್ಲಿ ಅರ್ಥಶಾಸ್ತ್ರ ಮತ್ತು ಸಮಾಜವಿಜ್ಞಾನಗಳ ಅಧ್ಯಯನ ಪ್ರಧಾನವಾಗಿ ನಡೆಯಲಿದೆ. ಇಲ್ಲಿರುವ ಬೋಧಕ ಸಿಬ್ಬಂದಿಯೆಲ್ಲ ಸ್ವತಃ ಪಿಎಚ್.ಡಿ ಪಡೆದಿರುವವರು. 2017ರಲ್ಲಿ ಬೀಜರೂಪದಲ್ಲಿ ಅಸ್ತಿಭಾರ ಕಂಡ `ಬೇಸ್’ಗೆ ನಮ್ಮ ಸರಕಾರ ಅಗ್ರ ಆದ್ಯತೆ ಕೊಟ್ಟಿದ್ದು, ಈಗ ಮೊದಲ ಹಂತದ ಕ್ಯಾಂಪಸ್ ಮೈದಾಳುವಂತೆ ಮಾಡಿದೆ. ಈ ಇಚ್ಛಾಶಕ್ತಿಯ ಫಲವಾಗಿ 13 ಬ್ಲಾಕ್ ಗಳು ನಿರ್ಮಾಣವಾಗಿದ್ದು, ಇದಕ್ಕಾಗಿ 250 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ವಿಕಸನದ ಹಂತದಲ್ಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿರುವುದು `ಬೇಸ್’ನ ಹೆಗ್ಗಳಿಕೆಗಳಲ್ಲೊಂದು. ಹೀಗಾಗಿ, ಆರಂಭದಿಂದಲೇ ಇಲ್ಲಿ ಪರಿಪೂರ್ಣ ಮತ್ತು ಸಮಗ್ರ ಶಿಕ್ಷಣದ ವ್ಯವಸ್ಥೆ ಬೇರು ಬಿಡಲು ಅವಕಾಶವಾಗಿದೆ. ಅರ್ಥಶಾಸ್ತ್ರದಲ್ಲಿ 5 ವರ್ಷಗಳ ಇಂಟೆಗ್ರೇಟೆಡ್ ಎಂ.ಎಸ್ಸಿ, 2 ವರ್ಷಗಳ ಎಂ.ಎಸ್ಸಿ ಮತ್ತು ಹಣಕಾಸು ಅರ್ಥಶಾಸ್ತ್ರದಲ್ಲಿ ಇಲ್ಲಿ ಸದ್ಯಕ್ಕೆ ಸ್ನಾತಕೋತ್ತರ ಪದವಿಗಳನ್ನು ಒದಗಿಸಲಾಗುತ್ತಿದೆ.

ನಮ್ಮ ವಿಶ್ವವಿದ್ಯಾಲಯಗಳು ರಾಷ್ಟ್ರ ನಿರ್ಮಾಣದ ಮಹೋನ್ನತ ಗುರಿಯನ್ನು ಹೊಂದಿರುವ ಜೀವಂತ ಸಂಸ್ಥೆಗಳಾಗಿರಬೇಕು. ಇವು ನಮ್ಮ ಬದುಕಿನಲ್ಲಿ ಲೌಕಿಕತೆ ಮತ್ತು ಆಧ್ಯಾತ್ಮಿಕತೆ ಎರಡನ್ನೂ ಬೆಸೆಯಲು ತಮ್ಮ ಯೋಗದಾನ ನೀಡಬೇಕು. ವ್ಯಕ್ತಿಗತ ಆಸೆ-ಆಕಾಂಕ್ಷೆಗಳನ್ನು ಪೂರೈಸಿಕೊಳ್ಳುವ ಸೀಮಿತ ಪರಿಧಿಯನ್ನು ದಾಟಿ, ಮಾತೃಭೂಮಿಯ ಉನ್ನತಿಗೆ ಇವು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಜೊತೆಗೆ, ನಮ್ಮ ನಾಗರಿಕತೆ ಮತ್ತು ಸಂಸ್ಕೃತಿಗಳ ಉನ್ನತ ಮೌಲ್ಯಗಳನ್ನು ಇವು ಹೆಮ್ಮೆ-ಅಭಿಮಾನಗಳಿಂದ ಎತ್ತಿ ಹಿಡಿಯಬೇಕು.
-ಡಾ.ಶಾಮಪ್ರಸಾದ್ ಮುಖರ್ಜಿ

`ಬೇಸ್’ನಲ್ಲಿ ಸಾಮಾಜಿಕ ನ್ಯಾಯ ಮತ್ತು ಪ್ರತಿಭೆ ಎರಡಕ್ಕೂ ಮನ್ನಣೆ ಕೊಡಲಾಗುತ್ತಿದೆ. ಇದರ ಜತೆಗೆ, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ 371ಜೆ ವಿಧಿಯ ಪ್ರಕಾರ ಕೊಡಬೇಕಾದ ಆದ್ಯತೆಯನ್ನೂ ಪಾಲಿಸಲಾಗುತ್ತಿದೆ. ರಾಜ್ಯದ ಪಾಲಿಗೆ ಮಕುಟಮಣಿಯಾಗಲಿರುವ ಮತ್ತು ದೇಶ-ವಿದೇಶಗಳ ಮಟ್ಟದಲ್ಲಿ ಗಮನ ಸೆಳೆಯಲಿರುವಂತಹ `ಬೇಸ್’ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ, ಅಂದರೆ 2024-25ನೇ ಶೈಕ್ಷಣಿಕ ಸಾಲಿನ ವೇಳೆಗೆ 1,100 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಸಿಗಲಿದೆ.

ಶಿಕ್ಷಣದಲ್ಲಿ ನಾವು ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಾಪಿತವಾಗಬೇಕಾದ್ದು ಇಂದಿನ ತುರ್ತು ಅನಿವಾರ್ಯತೆಗಳಲ್ಲಿ ಒಂದು. ಇದು ಸಾಧ್ಯವಾಗಬೇಕೆಂದರೆ ಸಂಶೋಧನೆಗೆ ಒತ್ತು ಸಿಗುವಂತಹ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಬೇಕಾದ್ದು ಅಗತ್ಯ. ಇದನ್ನು ಗಮನದಲ್ಲಿ ಇಟ್ಟುಕೊಂಡು, ದೇಶದ ಪ್ರತಿಷ್ಠಿತ ಅಧ್ಯಯನ ಸಂಸ್ಥೆಗಳಾದ ಎನ್.ಎಸ್.ಎಲ್.ಯು.ಐ, ಭೋಪಾಲಿನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸುಶಾಸನ ಮತ್ತು ನೀತಿ ವಿಶ್ಲೇಷಣಾ ಸಂಸ್ಥೆ, `ಸ್ಕೋಪ್’ ಮುಂತಾದ ಸಂಸ್ಥೆಗಳೊಂದಿಗೆ ಸಂಶೋಧನೆ ಮತ್ತು ಜ್ಞಾನ ವಿನಿಯಯದ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ಜತೆಗೆ, ಕೇಂದ್ರ ಸರಕಾರದ ಹಲವು ಇಲಾಖೆಗಳು ಹಾಗೂ ಯೂನಿಸೆಫ್, ಯುನೈಟೆಡ್ ಕಿಂಗ್ಡಮ್ ವಿ.ವಿ.ಗಳಂಥ ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೂ ಇಂತಹ ಒಪ್ಪಂದಗಳಿಗೆ ಅಂಕಿತ ಹಾಕಲಾಗಿದೆ.

ಯಾವುದೇ ತರಹದ ಶಿಕ್ಷಣ ಸಂಸ್ಥೆಯಾಗಲಿ, ಅಲ್ಲಿ ಓದಿದವರಿಗೆ ಉದ್ಯೋಗದ ಖಾತ್ರಿ ಸಿಗುವಂತೆ ನೋಡಿಕೊಳ್ಳಬೇಕಾದ್ದು ತುಂಬಾ ಮುಖ್ಯ. ಇಲ್ಲದಿದ್ದರೆ, ಎಂತಹ ಸುಸಜ್ಜಿತ ಕ್ಯಾಂಪಸ್ಸುಗಳನ್ನು ಕಟ್ಟಿದರೂ ಪ್ರಯೋಜನವಿಲ್ಲ. `ಬೇಸ್’ ಇದನ್ನು ತನ್ನ ಪ್ರಮುಖ ಗುರಿಗಳಲ್ಲಿ ಒಂದಾಗಿ ಇಟ್ಟುಕೊಂಡಿದೆ ಎನ್ನುವುದು ಗಮನಾರ್ಹ ಸಂಗತಿ. ಏಕೆಂದರೆ, ಕಳೆದ ನಾಲ್ಕೈದು ವರ್ಷಗಳಲ್ಲಿ ಇಲ್ಲಿ ವಿದ್ಯಾರ್ಥಿಗಳಾಗಿದ್ದವರ ಪೈಕಿ ಶೇಕಡ 80ರಷ್ಟು ಜನರನ್ನು ಉದ್ಯೋಗಗಳು ಅರಸಿಕೊಂಡು ಬಂದಿವೆ. ಅದರಲ್ಲೂ ಬ್ಯಾಂಕಿಂಗ್, ಕನ್ಸಲ್ಟೆನ್ಸಿಗಳು, ಸಂಶೋಧನಾ ಸಂಸ್ಥೆಗಳು, ಎನ್.ಜಿ.ಓ.ಗಳು ಮೊದಲಾದ ವಲಯಗಳಲ್ಲಿ `ಬೇಸ್’ ವಿದ್ಯಾರ್ಥಿಗಳಿಗೆ ಒಳ್ಳೆಯ ಬೇಡಿಕೆ ಇದೆ.

ಇದಲ್ಲದೆ, ಓದುತ್ತಿರುವ ಹಂತದಲ್ಲಿ ಪ್ರಮುಖ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ` ಬೇಸ್’ ಸ್ಥಾಪನೆಯ ಹಿಂದೊಂದು ಸಮಾಜಪರವಾದ ಮಹೋದ್ದೇಶವಿದೆ. ಈ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನಗಳು ಸಿಗುವ ದಿನಗಳು ದೂರವೇನಿಲ್ಲ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಇಂಥ ಉನ್ನತ ಸಂಸ್ಥೆಯು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ, ನವಕರ್ನಾಟಕ ಮತ್ತು ನವಭಾರತ ನಿರ್ಮಾಣಕ್ಕೆ ಮೇಲ್ಪಂಕ್ತಿಯ ಸೋಪಾನವಾಗಲಿ ಎನ್ನುವುದೇ ನಮ್ಮ ಆಶಯ.

ಲೇಖಕರು: ಡಾ. ಸಿ ಎನ್ ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ, ಐಟಿ-ಬಿಟಿ, ಕೌಶಲ್ಯಾಭಿವೃದ್ಧಿ ಮತ್ತು
ಜೀವನೋಪಾಯ ಇಲಾಖೆ ಸಚಿವರು

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

Tags: BASEDr. Baba Saheb AmbedkarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleಡಾ. ಬಾಬಾಸಾಹೇಬ್ ಅಂಬೇಡ್ಕರ್ಬೇಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಸಿಎಂ ಯಡಿಯೂರಪ್ಪ ಭಾರತ – ದಕ್ಷಿಣ ಆಪ್ರಿಕಾ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆ

Next Post

ಫೋಟೋಗೆ ಪೋಸ್ ನೀಡಿ ಮಾಯವಾದ ಅಪರೂಪದ ಜೀವಿ! ಯಾವ ಪ್ರಾಣಿ ಇದು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೋಟೋಗೆ ಪೋಸ್ ನೀಡಿ ಮಾಯವಾದ ಅಪರೂಪದ ಜೀವಿ! ಯಾವ ಪ್ರಾಣಿ ಇದು ಗೊತ್ತಾ?

ಫೋಟೋಗೆ ಪೋಸ್ ನೀಡಿ ಮಾಯವಾದ ಅಪರೂಪದ ಜೀವಿ! ಯಾವ ಪ್ರಾಣಿ ಇದು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL