No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಲಂಬಾಣಿ ಸಮುದಾಯದ ವಿಶಿಷ್ಟ ದೀಪಾವಳಿ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 24, 2022
in Special Articles
0
ಲಂಬಾಣಿ ಸಮುದಾಯದ ವಿಶಿಷ್ಟ ದೀಪಾವಳಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಬಂಜಾರ ಜನಾಂಗದ ಸಂಸ್ಕೃತಿಯಲ್ಲಿ ಅತಿದೊಡ್ಡ ಹಬ್ಬವೆಂದರೆ ದೀಪಾವಳಿ ಇದನ್ನು ಲಂಬಾಣಿ ಭಾಷೆಯಲ್ಲಿ ಸಾಮಾನ್ಯವಾಗಿ “ದವಾಳಿ” ಎಂದು ಕರೆಯುತ್ತಾರೆ. ಲಂಬಾಣಿಗರಿಗೆ ದೀಪಾವಳಿ ಹಬ್ಬವು ವಿಶೇಷ ಹಬ್ಬವಾಗಿದೆ ಹಾಗೂ ಲಂಬಾಣಿ ಸಮುದಾಯದಲ್ಲಿ ಈ ಹಬ್ಬವನ್ನು ಸಾಂಪ್ರದಾಯಕವಾಗಿ ವಿಶಿಷ್ಟವಾಗಿ ಆಚರಿಸುತ್ತಾರೆ. ಎಲ್ಲ ಸಮುದಾಯಕ್ಕೂ ಒಂದು ಬಗೆಯಾದರೆ ಲಂಬಾಣಿ ಜನಾಂಗಕ್ಕೆ ಮಾತ್ರ ದೀಪಾವಳಿ ಮತ್ತೊಂದು ಬಗೆಯ ವಿಶೇಷ.

ಲಂಬಾಣಿ ಸಮುದಾಯದಲ್ಲಿ ದೀಪಾವಳಿ ಹಬ್ಬ ವಿಶಿಷ್ಟವಾಗಿ ಎರಡು ದಿನಗಳ ಕಾಲ ಆಚರಿಸಿದರು ಕೂಡ ಅದರ 15 ದಿನದ ಹಿಂದೆಯೇ ತಾಂಡಾಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿರುತ್ತದೆ ಹೌದು ದೀಪಾವಳಿ ಹಬ್ಬದ ನಿಮಿತ್ತವಾಗಿ ಲಂಬಾಣಿ ಸಮುದಾಯದ ಹಿರಿಯ ಮಹಿಳೆಯರು ಮದುವೆಯಾಗದ ಯುವತಿಯರಿಗೆ ಹಾಗೂ ಚಿಕ್ಕ ಚಿಕ್ಕ ಹೆಣ್ಣು ಮಕ್ಕಳಿಗೆ ಲಂಬಾಣಿ ಯ ನೃತ್ಯವನ್ನು ಹಾಗೂ ಲಂಬಾಣಿ ಹಾಡನ್ನು ಅವರಿಗೆ ಹೇಳಿಕೊಟ್ಟು ಅಭ್ಯಾಸ ಮಾಡಿಸುತ್ತಾರೆ ಹಾಗೂ ಅವರ ವಸ್ತ್ರವಿನ್ಯಾಸದ ಮಹತ್ವವನ್ನು ತಮ್ಮ ಹೆಣ್ಣುಮಕ್ಕಳಿಗೆ ಪರಿಚಯಿಸಿ ಕೊಡುತ್ತಾರೆ. ಒಂದು ತಿಂಗಳು ಅಥವಾ ಹದಿನೈದು ದಿನಗಳ ಕಾಲ ನಿರಂತರವಾಗಿ ತಾಂಡಾಗಳ ಸೇವಾಲಾಲ್ ದೇವಾಲಯದ ಮುಂದೆ ನೃತ್ಯ ಹಾಗೂ ಹಾಡುಗಾರಿಕೆಯನ್ನು ಅಭ್ಯಾಸ ಮಾಡುತ್ತಾರೆ.ಆಧುನಿಕ ಯುಗದಲ್ಲಿ ಜಾನಪದ ನೃತ್ಯ ಪ್ರಕಾರ, ಹಾಡುಗಾರಿಕೆ ಹಾಗೂ ಜಾನಪದ ಕಲೆಗಳು ಮರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ ತಮ್ಮ ಪಾರಂಪರಿಕ ಸಂಪ್ರದಾಯ ಹಾಗೂ ಕಲೆಗಳನ್ನು ಮರೆಯದೆ ಅದನ್ನು ಉಳಿಸಿಕೊಂಡು ಹೋಗುತ್ತಿರುವುದು ಹಾಗೂ ಅದನ್ನು ಮೆರೆಸುತ್ತಿರುವುದು ಸಂತೋಷದ ವಿಚಾರವಾಗಿದೆ.

ಜಗತ್ತಿನ ಜೀವನ ಶೈಲಿ ಎಷ್ಟೇ ಬದಲಾದರೂ ಲಂಬಾಣಿ ಸಮುದಾಯ ಮಾತ್ರ ತಮ್ಮ ಮೂಲ ಸಂಪ್ರದಾಯವನ್ನು ಎಂದಿಗೂ ಮರೆಯುವುದಿಲ್ಲ.
ದೀಪಾವಳಿಯ ಮೊದಲನೇ ದಿನ
ದೀಪಾವಳಿಯ ಮೊದಲನೆಯ ದಿನ ಅಮವಾಸ್ಯೆಯ ದಿನ ಅದನ್ನು ” ಕಾಳಿ ಮಾಸ್ ” ಎಂದು ಕರೆಯುವುದರಿಂದ ಮರಿಯಮ್ಮ ದೇವಿಯ ಅವತಾರಗಳಲ್ಲಿ ಒಂದಾದ ಕಾಳಿ ದೇವಿಗೆ ಕುರಿಯನ್ನು ಬಲಿ ಕೊಡುವುದು ಪಾರಂಪರಿಕ ರೂಢಿ. ಸೂರ್ಯ ಉದಯಿಸುವದಕ್ಕಿಂತ ಮುಂಚೆ ಕುರಿಯನ್ನು ಬಲಿಕೊಟ್ಟು ಕಾಳಿ ದೇವಿಗೆ ಹಾಗೂ ಲಂಬಾಣಿ ಸಮುದಾಯವನ್ನು ರಕ್ಷಿಸುತ್ತಿರುವ ಅನೇಕ ದೈವಗಳಿಗೂ ಬಲಿಯನ್ನು ಅರ್ಪಿಸುತ್ತಾರೆ ಹಾಗೂ ಅಮಾವಾಸ್ಯೆಯ ದಿನದ ರಾತ್ರಿಯಂದು ಲಂಬಾಣಿ ಸಮುದಾಯದ ಯುವತಿಯರು ಹಾಗೂ ಬಾಲಕಿಯರು ಹಿರಿಯರು ಸಿದ್ಧಪಡಿಸಿದ ಪಾರಂಪರಿಕ ವಸ್ತ್ರಗಳನ್ನು ತೊಟ್ಟು ದೀಪಗಳನ್ನು ಹಿಡಿದುಕೊಂಡು ತಾಂಡಾದ ಎಲ್ಲಾ ಮನೆ ಮನೆಗಳಿಗೆ ಹೋಗುತ್ತಾರೆ. ಹೀಗೆ ಮನೆಗಳಿಗೆ ಹೋಗುವ ಮೊದಲು ಕುಲಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರು ಹಾಗೂ ಶ್ರೀ ಮರಿಯಮ್ಮ ದೇವಿಯವರು ನೆಲೆಸಿರುವ ತಾಂಡಾದ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಾರೆ. ಹಾಗೂ ದೇವಾಲಯದ ಮುಂದೆ ‘ ವರ್ಷೆದಾಡ್ ಕೋರ್ ದವಾಳಿ ಬಾಪು ತೋನ ಮೇರಾ; ‘ ವರ್ಷೆದಾಡ್ ಕೋರ್ ದವಾಳಿ ಸೇವಾಭಾಯಾ ತೋನ ಮೇರಾ ; ವರ್ಷೆದಾಡ್ ಕೋರ್ ದವಾಳಿ ಮರಿಯಮ್ಮ ತೋನ ಮೇರಾ…..’ ಎಂದು ಲಯಬದ್ದವಾಗಿ ಹಾಡುತ್ತಾ ತಾಂಡಾವನ್ನು ಲಂಬಾಣಿ ಸಮುದಾಯವನ್ನು ತಾಂಡದ ಜನತೆಯನ್ನು ಸುಖ ಸಂಪತ್ತು ಕೊಟ್ಟು ಕಾಪಾಡು ಎಂದು ಕೇಳಿಕೊಳ್ಳುತ್ತಾರೆ. ಆನಂತರ ತಾಂಡಾದ “ನಾಯಕ್” ರವರ ಮನೆಗೆ ಹೋಗಿ ದೀಪಗಳನ್ನು ಹಿಡಿದು ಲಯಬದ್ಧವಾಗಿ ಹಾಡುತ್ತಾ ತಾಂಡಾದ “ನಾಯಕ್” ರವರ ಅಪ್ಪಣೆ ಪಡೆದು ನಂತರ ಬೇರೆ ಮನೆಗಳಿಗೆ ಹೋಗುತ್ತಾರೆ. ಬಂಜಾರ ಸಮುದಾಯ ಕನ್ಯೆಯರನ್ನು ತಮ್ಮ ಮನೆಯ ಬೆಳದಿಂಗಳು ಎಂದು ಪರಿಗಣಿಸುತ್ತಾರೆ. ಯುವತಿಯರು ಹಾಡು ಹೇಳುತ್ತಾ ಹೋಗುವಾಗ ಮನೆಯ ಹಿರಿಯರು ಅವರನ್ನು ಸ್ವಾಗತಿಸುತ್ತಾರೆ ತಡರಾತ್ರಿಯವರೆಗೂ ಮನೆಮನೆಗೂ ಹೋಗಿ ದೀಪ ಬೆಳಗಿಸುತ್ತಾರೆ ಲಂಬಾಣಿ ಭಾಷೆಯಲ್ಲಿ ಇದನ್ನು “ಮೇರಾ” ಎಂದು ಕರೆಯುತ್ತಾರೆ “ಮೇರಾ” ಎಂದರೆ ದುಃಖ ನೋವು ಸೋಲು ಅವಮಾನ ಕಷ್ಟಗಳು ಕಳೆದು ಕತ್ತಲಿನಿಂದ ಬೆಳಕಿನೆಡೆಗೆ ಬರುವ ಪ್ರಕ್ರಿಯೆಯಾಗಿದೆ

ದೀಪಾವಳಿಯ ಮೇರಾ ಹಾಡು

ವರ್ಷೆದಾಡ್ ಕೋರ್ ದವಾಳಿ
ಬಾಪು ತೋನ ಮೇರಾ,

ವರ್ಷೆದಾಡ್ ಕೋರ್ ದವಾಳಿ
ಸೇವಾಭಾಯಾ ತೋನ ಮೇರಾ,

ವರ್ಷೆದಾಡ್ ಕೋರ್ ದವಾಳಿ
ಮರಿಯಮ್ಮ ತೋನ ಮೇರಾ,

ವರ್ಷೆದಾಡ್ ಕೋರ್ ದವಾಳಿ
ಗೋರ್ ಭಾಯಿ ತೋನ ಮೇರಾ,

ವರ್ಷೆದಾಡ್ ಕೋರ್ ದವಾಳಿ
ಜಗದಂಬಾ ತೋನ ಮೇರಾ….
ಹೀಗೆ ಏಕ ದನಿಯಲ್ಲಿ ಲಯಬದ್ಧವಾಗಿ “ಮೇರಾ” ಪದಗಳನ್ನು ಹಾಡುತ್ತಾ ತಮಗಿಂತಲೂ ಹಿರಿಯರಾದವರ ಸಂಬಂಧಗಳನ್ನು ಸಂಬೋಧಿಸಿ ಅವರಿಗೆ ಹಾಡಿನ ಮೂಲಕ ಹಾರೈಸುತ್ತಾರೆ ಅಪ್ಪ, ಅಕ್ಕ, ಅಣ್ಣ, ಚಿಕ್ಕಪ್ಪ, ದೊಡ್ಡಪ್ಪ, ತಾಂಡದ ನಾಯಕರು, ಹಾಗೂ ಕುಲದೇವರ… ಹೀಗೆ ಮನೆಯವರೆಲ್ಲರ ಹೆಸರು ಹೇಳಿ ಹಾರೈಸುತ್ತಾರೆ.

ದೀಪಾವಳಿಯ ಎರಡನೆಯ ದಿನ
ದೀಪಾವಳಿಯ ಎರಡನೆಯ ದಿನದಂದು ಯುವಕರು ಬೆಳಗ್ಗೆ ಬೇಗನೆ ಎದ್ದು ಮನೆಯಲ್ಲಿರುವ ಗೋವುಗಳ ಮೈಯ್ಯನ್ನು ತೊಳೆದು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಅಲಂಕಾರಿಕ ವಸ್ತುಗಳನ್ನು ಹಾಗೂ ವಸ್ತ್ರಗಳನ್ನು ತಂದು ಗೋವುಗಳನ್ನು ಅಲಂಕರಿಸಿ ಪೂಜಿಸುತ್ತಾರೆ. ಹಾಗೂ ದೀಪಾವಳಿಯು ಹಿರಿಯರ ಪೂಜೆಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಹಿರಿಯರ ಹಬ್ಬ ಎಂದೇ ಪ್ರಸಿದ್ಧಿ ಪಡೆದುಕೊಂಡಿದೆ. ಅಗಲಿದ ಹಿರಿಯರನ್ನು ಸ್ಮರಿಸುವುದು ಲಂಬಾಣಿ ಸಮುದಾಯದ ಪಾರಂಪರಿಕ ರೂಢಿ, ಹಿರಿಯರಿಗೆ ಧೂಪ ಸಲ್ಲಿಸುವುದು ಅತ್ಯಂತ ಮುಖ್ಯವಾದುದು, ಅಗಲಿದ ಹಿರಿಯರನ್ನು ಅಂದರೆ ಹತ್ತಾರು ತಲೆಮಾರಿನ ಅಜ್ಜ-ಅಜ್ಜಿಯನ್ನು ದೊಡ್ಡಪ್ಪ ಚಿಕ್ಕಪ್ಪ ರನ್ನು ಸ್ಮರಿಸಿ ಆಶೀರ್ವಾದ ಪಡೆಯುತ್ತಾರೆ. ಅವರು ಇಷ್ಟಪಡುತ್ತಿದ್ದ ಪದಾರ್ಥಗಳನ್ನು ತಯಾರಿಸುತ್ತಾರೆ ಹಾಗೂ ತುಪ್ಪ, ಧೂಪವನ್ನು, ಅಕ್ಕಿಹಿಟ್ಟು ಮತ್ತು ಬೆಲ್ಲದಿಂದ ತಯಾರಿಸಿದ ಪದಾರ್ಥಗಳನ್ನು ಅಡುಗೆ ಒಲೆಯ ಕೆಂಡದಲ್ಲಿ ಹಿರಿಯರಿಗೆ ಎಂದು ಸಮರ್ಪಣೆ ಮಾಡುತ್ತಾರೆ. ಈ ಪ್ರಕ್ರಿಯೆಯನ್ನು ಲಂಬಾಣಿ ಭಾಷೆಯಲ್ಲಿ “ಧಬುಕಾರ್” ಎಂದು ಕರೆಯುತ್ತಾರೆ. ಇದು ವಂಶವೃಕ್ಷ ಆಧಾರಿತ ಪದ್ಧತಿಗೆ ಸೀಮಿತವಾಗಿದೆ.
ಯುವತಿಯರು ತಮ್ಮ ಪಾರಂಪರಿಕ ವಸ್ತ್ರವನ್ನು ತೋಡುತ್ತಾರೆ. ವಸ್ತ್ರವು ಪೆಟಿಯಾ, ಚೋಟ್ಲಾ, ಭುರಿಯ, ಘುಗರಿ, ಬಲಿಯಾ, ಸಾಂಕ್ಲಿ, ಈoಟಿ, ಇವಗಳನ್ನು ಒಳಗೊಂಡಿರುತ್ತದೆ. ಯುವತಿಯರು ಇವುಗಳನ್ನೆಲ್ಲಾ ಬಳಸಿಕೊಂಡು ಸಾಂಪ್ರದಾಯಿಕವಾಗಿ ಸಿದ್ಧವಾಗುತ್ತಾರೆ.
ಸಿದ್ಧವಾದ ಯುವತಿಯರು ತಮ್ಮ ಗೆಳತಿಯರ ಜೊತೆ ಹಾಗೂ ತಮಗಿಂತ ಕಿರಿಯ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಿದಿರಿನಿ ಬುಟ್ಟಿಗಳನ್ನು ತೆಗೆದುಕೊಂಡು ಬೆಟ್ಟ ಗುಡ್ಡಗಳಿಗೆ ಹೋಗಿ ವಿವಿಧ ಜಾತಿಯ ಕಾಡು ಹೂವುಗಳನ್ನು ಸಂಗ್ರಹಿಸುತ್ತಾರೆ ಹೊನ್ನಂಬರಿ, ಅಣ್ಣೆಹೂವು ಹಾಗೂ ಉತ್ರಾಣಿ ಕಡ್ಡಿಗಳ್ಳನ್ನು ಸಂಗ್ರಹಿಸುತ್ತಾರೆ. ಬೇರೆ ಬೇರೆ ದಿಕ್ಕುಗಳಲ್ಲಿ ತೆರಳಿದ ಯುವತಿಯರು ಒಂದೆಡೆ ಸೇರಿ ಮನೆಯಿಂದ ತಂದ ಸಿಹಿ ತಿನಿಸುಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಹಾಗೂ ಮದುವೆ ನಿಶ್ಚಯವಾಗಿರುವ ಹೆಣ್ಣುಮಕ್ಕಳು ತಮ್ಮ ಗೆಳತಿಯರನ್ನು, ಸಂಬಂಧಿಕರನ್ನು ತಬ್ಬಿಕೊಂಡು ಅಳುವುದು ರೂಢಿ, ತಾನು ಬೆಳೆದ ವಾತಾವರಣ,ಅಲ್ಲಿನ ಬಾಲ್ಯದ ಗೆಳತಿಯರು, ಹಿರಿಯರನ್ನು ಬಿಟ್ಟು ಹೋಗಬೇಕಲ್ಲ ಎನ್ನುವ ದುಃಖವನ್ನು ಹಂಚಿಕೊಳ್ಳುತ್ತಾರೆ ಹಾಗೂ ಸಂಗ್ರಹಿಸಿದ ಹೂವುಗಳನ್ನು ಗ್ರಾಮಕ್ಕೆ ತರುವಾಗ ಲಂಬಾಣಿ ಹಾಡನ್ನು ಹೇಳಿಕೊಂಡು ನೃತ್ಯ ಮಾಡಿಕೊಂಡು ಬರುತ್ತಾರೆ ನಂತರ ಸಗಣಿಯಿಂದ ಭೂದಗಳನ್ನು ತಯಾರಿಸಿ ಅವುಗಳನ್ನು ತಾವು ತಂದಿರುವ ವಿವಿಧ ಜಾತಿಯ ಹೂವುಗಳಿಂದ ಭೂದಗಳನ್ನು ಅಲಂಕರಿಸಿ ಪ್ರತಿ ಮನೆಗೆ ಒಂದರಂತೆ ತಾಂಡಾದ ಎಲ್ಲಾ ಮನೆಗಳಿಗೂ ಇಡುತ್ತಾರೆ ಹಾಗೂ ಭೂದಗಳಿಗೆ ಆರತಿ ಮಾಡಿ ಆ ಮನೆಯವರ ಸುಖ-ಸಂಪತ್ತು ಹೆಚ್ಚಿಸುವಂತೆ ಕೇಳಿಕೊಳ್ಳುತ್ತಾರೆ. ಇದು ಜಗಳ, ಕಷ್ಟ, ದುಃಖ, ಮನಸ್ತಾಪ ಎಲ್ಲವನ್ನೂ ಮರೆಸಿ ಲಂಬಾಣಿ ಸಮುದಾಯವನ್ನು ಒಟ್ಟುಗೂಡಿಸುತ್ತದೆ.ಎಲ್ಲರೂ ಒಂದಾಗಿ ಹಬ್ಬ ಆಚರಿಸುವುದರಿಂದ ಒಗ್ಗಟ್ಟು ಪ್ರದರ್ಶನವಾಗುತ್ತದೆ. ಈ ಕಲೆ, ಸಂಪ್ರದಾಯಗಳು ಮನಸ್ಸಿಗೆ ಆನಂದ ನೀಡುವುದರೊಂದಿಗೆ ಸಂಬಂಧಗಳನ್ನು ಬೆಸೆಯುತ್ತವೆ.
ಲೇಖನ: ಲಿಂಗರಾಜು, ಗಾಡಿಕೊಪ್ಪ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share200Tweet125Send
Previous Post

ಯುವಜನರ ಮನಸ್ಥಿತಿ ಸಕಾರಾತ್ಮಕವಾಗಿ ಮುಂದುವರೆಯಬೇಕು: ಸುರೇಶ್ ಕಿವಿಮಾತು

Next Post

ಶಿವಮೊಗ್ಗದ ವೆಂಕಟೇಶ ನಗರದಲ್ಲಿ ವ್ಯಕ್ತಿಯ ಕೊಲೆ: ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ವೆಂಕಟೇಶ ನಗರದಲ್ಲಿ ವ್ಯಕ್ತಿಯ ಕೊಲೆ: ಕಾರಣವೇನು?

ಶಿವಮೊಗ್ಗದ ವೆಂಕಟೇಶ ನಗರದಲ್ಲಿ ವ್ಯಕ್ತಿಯ ಕೊಲೆ: ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL