No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

51ರ ಸಂಭ್ರಮದಲ್ಲಿ ಬಹು ಕ್ಷೇತ್ರದ `ಕೃಷಿಕ’ ಪತ್ರಕರ್ತ ಗಜೇಂದ್ರಸ್ವಾಮಿ

kalpa News by kalpa News
February 28, 2024
in Special Articles
0
51ರ ಸಂಭ್ರಮದಲ್ಲಿ ಬಹು ಕ್ಷೇತ್ರದ `ಕೃಷಿಕ’ ಪತ್ರಕರ್ತ ಗಜೇಂದ್ರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಗಜ ವೃಂದಕ್ಕೆ ಅಧಿಪತಿ ಗಜೇಂದ್ರ. ಪತ್ರಿಕಾ ವೃಂದದಲ್ಲಿ ಇಂತಹ ಅಧಿಪತ್ಯ ಸ್ಥಾಪನೆ ಕಷ್ಟ ಸಾಧ್ಯ. ಆದರೆ ಪಾರುಪತ್ಯ ಸ್ಥಾಪನೆ ಅಸಾಧ್ಯವೇನಲ್ಲ. ಇಂತಹ ಅಸಾಧ್ಯತೆಯನ್ನು ಸಾಧ್ಯತೆಯನ್ನಾಗಿಸಿರುವ ತುಂಗಾ ತರಂಗ ದಿನಪತ್ರಿಕೆಯ ಸಂಪಾದಕ ಎಸ್.ಕೆ. ಗಜೇಂದ್ರ ಸ್ವಾಮಿ 50ನೇ ಜನ್ಮ ದಿನ ಪೂರೈಸಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದಾರೆ.

ಮನುಷ್ಯನ ಜೀವಿತಾವಧಿಯಲ್ಲಿ 50 ವರ್ಷ ಪೂರೈಕೆ ಮಹತ್ವದ ಮೈಲಿಗಲ್ಲು. ಗಜೇಂದ್ರ ಸ್ವಾಮಿಗೆ ಅದಾಗಲೇ 50 ವರ್ಷ ತುಂಬಿ ಹೋಯ್ತಾ ಎಂದು ಅಚ್ಚರಿ ಪಡುವಷ್ಟು ಕ್ರಿಯಾಶೀಲ, ಸಕ್ರಿಯವಾಗಿರುವ ಈ ಚಿರ ಯೌವನಿಗ ಪತ್ರಕರ್ತರಾಗಿರುವ ಜಿ. ಸ್ವಾಮಿ ಕಾಲಚಕ್ರ ಯಾರಿಗೂ ಕಾಯುವುದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ.

ಜನ್ಮ ದಿನಾಂಕ ಆಧಾರಿತ ವಯಸ್ಸು ಕೇವಲ ದೇಹಕ್ಕಷ್ಟೇ ಹೊರತು ಮನಸ್ಸಿಗಲ್ಲ. ಸಾಧಿಸಬೇಕೆಂಬ ಛಲ, ಪ್ರಯತ್ನ, ಪರಿಶ್ರಮವಿದ್ದರೆ ಉತ್ತಮ ಫಲ, ಯಶಸ್ಸು ಪಡೆಯಲು ವಯಸ್ಸು ಎಂದೂ ಅಡ್ಡಿಯಾಗುವುದಿಲ್ಲ. ಇದಕ್ಕೆ ಉತ್ತಮ ಉದಾಹರಣೆಯೇ ಪತ್ರಕರ್ತ ಗಜೇಂದ್ರ ಸ್ವಾಮಿ.
ನಮ್ಮ ಸುತ್ತಲಿನ ವಿದ್ಯಮಾನ, ಸಾಮಾಜಿಕ ಆಗು ಹೋಗುಗಳು, ಜನಸಾಮಾನ್ಯರ ಸಮಸ್ಯೆ, ಆಡಳಿತಶಾಹಿಯ ನ್ಯೂನತೆ, ಕರ್ತವ್ಯಲೋಪ ಸೇರಿದಂತೆ ನವನವೀನ ಸಂಗತಿಗಳನ್ನು ಬಹು ಬೇಗನೆ ಸಲೀಸಾಗಿ, ಸೂಕ್ಷ್ಮವಾಗಿ ಗ್ರಹಿಸುವ, ಆಳಕ್ಕಿಳಿದು ಅಧ್ಯಯನ ಮಾಡುವ ಮತ್ತು ಲೇಖನ, ವರದಿ, ವಿಶೇಷ ವರದಿ, ಹುಡುಕಾಟದ ವರದಿಗಳ ಮೂಲಕ ತಮ್ಮ ಪತ್ರಿಕೆಯಲ್ಲಿ ಅಚ್ಚುಕಟ್ಟಾಗಿ ಸಾದರ ಪಡಿಸುವ ಶೈಲಿ ಗಜೇಂದ್ರ ಸ್ವಾಮಿಯವರಿಗೆ ಸಿದ್ಧಿಸಿದೆ. ಸ್ಥಳೀಯ, ನಾಡು- ಹೊರನಾಡಿನ ಪ್ರಸ್ತುತ ಸುದ್ದಿ- ಸನ್ನಿವೇಶಗಳನ್ನು ದಿನನಿತ್ಯ ಪತ್ರಿಕೆಯ ಮೂಲಕ ಓದುಗರ ಮುಂದಿಡುತ್ತಾ ಬರುತ್ತಿದ್ದಾರೆ.

ವಯಸ್ಸು 50 ದಾಟಿದ್ದರೂ ತನ್ನ ಬದುಕಿನ ಅರ್ಧದಷ್ಟು ವಯಸ್ಸನ್ನು (28 ವರ್ಷ) ಪತ್ರಿಕೋದ್ಯಮದಲ್ಲಿ ಕಳೆದಿರುವ ಗಜೇಂದ್ರ ಸ್ವಾಮಿ ವೃತ್ತಿ ಬದುಕಿನಲ್ಲಿ ಸಾಗಿ ಬಂದ ಹಾದಿ ಸಲೀಸಲ್ಲ. ಸಾಕಷ್ಟು ಏಳು- ಬೀಳು, ಕಷ್ಟ- ನಷ್ಟ, ನೋವು- ನಲಿವನ್ನು ಅನುಭವಿಸಿ ಮನಸ್ಸಿದ್ದರೆ ಮಾರ್ಗ ಎಂದು “ಗಜ ಗಾಂಭಿರ್ಯ” ದಿಂದ ಸಾಗಿದ ಪರಿಣಾಮ ಯಶಸ್ಸು, ಸಾಧನೆ ಸಾಧ್ಯವಾಗಿದೆ.

ಚಿಕ್ಕ ಅಂಕುಶದಿಂದ ದೊಡ್ಡ ಗಜವನ್ನು (ಆನೆಯನ್ನು) ಬೇಕಾದರೂ ಪಳಗಿಸಬಹುದು ಎಂಬುದನ್ನು ಅರಿತಿರುವ ಗಜೇಂದ್ರ ಸ್ವಾಮಿ, ಪೆನ್ ಎಂಬ ಚಿಕ್ಕ ಅಂಕುಶ ಹಿಡಿದು ಆಡಳಿತಶಾಹಿ ಎಂಬ ಮದಗಜವನ್ನು ಸಾಮಾಜಿಕ ಹಿತಾಸಕ್ತಿ, ಬದ್ಧತೆ, ಕಾಳಜಿ, ಕಳಕಳಿಯಿಂದ ತಿವಿಯುತ್ತಿದ್ದಾರೆ. ಅದನ್ನು ಪಳಗಿಸಲು ಹರಸಾಹಸ ಪಡುತ್ತಲೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಲವು ಬಾರಿ ಯಶಸ್ಸನ್ನೂ ಸಾಧಿಸಿದ್ದಾರೆ.

ಪೆನ್ನಿನ ಮೇಲೆ ಪ್ರೀತಿ: ಪೆನ್ನಿನ ಮೇಲೂ ಪ್ರೀತಿ ಹೊಂದಿರುವ ಗಜೇಂದ್ರ ಸ್ವಾಮಿ ಅವರ ಬರವಣಿಗೆಯಲ್ಲೂ ‘ಕಿಕ್’ ಇದೆ. ಎಡಪಂಥೀಯ, ಬಲಪಂಥೀಯ ಎಂಬ ಯಾವುದೇ “ಇಸಂ” ಹೊಂದದೆ ‘ಮದ್ಯ’ಪಂಥೀಯರಾಗಿ, ಯಾವುದೇ ಮತ, ಜಾತಿ, ಧರ್ಮ, ಪಕ್ಷದ ಚೌಕಟ್ಟು ಹಾಕಿ ಕೊಳ್ಳದೆ ಆನೆ ನಡೆದದ್ದೇ ಹಾದಿ ಎಂಬಂತೆ ಗಜೇಂದ್ರ ಸ್ವಾಮಿ ಸಾಗುತಿದ್ದಾರೆ.
ಬರವಣಿಗೆ ಮೂಲಕ ತಾನೂ ಬೆಳೆಯುವುದರೊಂದಿಗೆ ಮತ್ತೊಬ್ಬರನ್ನೂ ಬೆಳೆಸುವಂತಹ, ಪ್ರೋತ್ಸಾಹಿಸುವಂತಹ ಸಹೃದಯತೆ ಜಿ. ಸ್ವಾಮಿಯವರ ವಿಶೇಷ ಗುಣ. ಪತ್ರಿಕೋದ್ಯಮದ ಗಂಧ- ಗಾಳಿ ಗೊತ್ತಿಲ್ಲದಂತಹ ಸೋಮಿನಕೊಪ್ಪದ ರಾಕೇಶ್‌ನನ್ನು ವಿಶೇಷ ವರದಿ ಮಾಡುವ ವರದಿಗಾರನನ್ನಾಗಿ ರೂಪಿಸಿ, ತಿದ್ದಿ- ತೀಡಿ, ಪ್ರೀತಿಯಿಂದ ಗದರಿ, ಬೈಯ್ದು ರಾಜ್ಯ ಮಟ್ಟದ ಪತ್ರಿಕೆಯಲ್ಲಿ ಕೆಲಸ ಮಾಡುವಂತಹ ಸಾಮರ್ಥ್ಯ ಮೂಡಿಸಿದ್ದಾರೆ. ಕೇವಲ ಇದೊಂದು ಸಾಂದರ್ಭಿಕ ಉದಾಹರಣೆ ಅಷ್ಟೇ. ಇಂತಹ ಅನೇಕರು ಸ್ವಾಮಿಯ ಪತ್ರಿಕೋದ್ಯಮ ಎಂಬ ಗರಡಿ ಮನೆಯಲ್ಲಿ ಪಳಗಿದ್ದಾರೆ. ಈಗ ರಾಜ್ಯಮಟ್ಡದ ಪತ್ರಿಕೆಗಳಲ್ಲಿ, ಟಿವಿ ಚಾನೆಲ್ ಗಳಲ್ಲಿ ಕೆಲಸ ಮಾಡುತ್ತಾ, ಅವರ ಪಟ್ಟುಗಳನ್ನು ಕಲಿತಿರುವುದನ್ನು ಅವರೇ ಸ್ಮರಿಸುತ್ತಾರೆ.

ಬ್ರೋ (ಬ್ರದರ್), ಸಿಸ್ (ಸಿಸ್ಟರ್) ಎಂದು ಕರೆಯುವುದು ಫ್ಯಾಷನ್ ಆಗಿರುವ ಇಂದಿನ ಕಾಲಮಾನದಲ್ಲಿ ತನಗಿಂತಲೂ ಕಿರಿಯ ವಯಸ್ಸಿನವರನ್ನೂ ಸಹ ಅಣ್ಣಾ ಹೇಳಿ, ಅಕ್ಕ ಹೇಳಿ ಎಂದು ಸಹೋದರತ್ವದ ಮನೋಭಾವದಿಂದ ಮೊಬೈಲ್ ಕರೆ ಸ್ವೀಕರಿಸಿ ಮಾತನಾಡು ಮನೋಭಾವ ಸ್ವಾಮಿಯವರದ್ದು. ಸಿಡುಕುತನ, ಮನೋಭಾವದ ಬದಲಾವಣೆ ಇಲ್ಲವೆಂದಲ್ಲ, ಆದರೆ ಅದು ಸಂದರ್ಭಕ್ಕೆ ಮಾತ್ರ ಸೀಮಿತ.
ಇವರ ಯಶಸ್ಸಿನ ಹುಡುಕಾಟದ ವರದಿಯ ನಡುವೆಯೂ ಹುಡುಕಾಟ, ಕುಲುಕಾಟವಿದ್ದರೂ ಅವರನ್ನು ಸ್ಥಿತಪ್ರಜ್ಞತೆಯಿಂದ ಸಹಿಸಿ, ಸೈರಿಸಿಕೊಂಡಿರುವ ಸಹಧರ್ಮಿಣಿ, ಸರ್ಕಾರಿ ಶಾಲೆಯ ಶಿಕ್ಷಕಿ ವೀಣಾ ಟೀಚರ್, ಅಪ್ಪನ ಮುದ್ದು ಮಗಳಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿ ದೀಪಿಕಾ ಜಿ. ಸ್ವಾಮಿ, ಕುಲಪುತ್ರ ಬಿ ಫಾರ್ಮಸಿ ಓದುತ್ತಿರುವ ದರ್ಶನ್ ಜಿ. ಸ್ವಾಮಿಯವರನ್ನು ಒಳಗೊಂಡ ಸುಖಿ ಕುಟುಂಬ ಇವರದ್ದು. ತಂದೆ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ ಹಾಗೂ ತಾಯಿ ಶಕುಂತಲಮ್ಮ ಅವರೊಂದಿಗೆ ಗುರುಹಿರಿಯರ ಮಾರ್ಗದರ್ಶನವನ್ನು ಅವರು ಸದಾ ಸ್ಮರಿಸುತ್ತಾರೆ.

ಪತ್ರಿಕೋದ್ಯಮದೊಂದಿಗೆ ಕೃಷಿಯಲ್ಲಿಯೂ ತೊಡಗಿಕೊಂಡಿರುವ ಗಜೇಂದ್ರ ಸ್ವಾಮಿ ಅಸಲಿ ಮಣ್ಣಿನ ಮಗ. ಅವರಿಗೆ ಅದರ ಬಗ್ಗೆ ವಿಶೇಷ ಆಸಕ್ತಿ. ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ, ನಾಟಕ, ರಂಗಭೂಮಿ ಮತ್ತಿತರೆ ಕ್ಷೇತ್ರಗಳಲ್ಲೂ ಇಂದಿಗೂ ಇವರ ಬರವಣಿಗೆಯ ಆಸಕ್ತಿ ಕುಂದಿಲ್ಲ. ಹಲವು ಪುಸ್ತಕಗಳನ್ನು ಸಂಪಾದಿಸಿದ್ದಾರೆ, ಸ್ವಂತ ರಚಿಸಿದ್ದಾರೆ. ಊಟಕ್ಕೆ ಒಂದಿಷ್ಟು ಉಪ್ಪಿನಕಾಯಿ ಎಂಬಂತೆ ಅವರ ವರದಿಯಲ್ಲಿ ಕ್ರೈಂ, ಸೆಕ್ಸ್ ವರದಿಗಳೂ ಉಂಟು. ಎಲ್ಲಿಯೂ ಅತಿರೇಖದ ವೈಭವೀಕರಣ ಇರೊಲ್ಲ. ಓದುಗರನ್ನು ಸೆಳೆಯುವ ಬರಹ ಅವರದು.
ಪತ್ರಕರ್ತ ಪಿ. ಲಂಕೇಶ್‌ರ ತುಂಟಾಟ, ರವಿ ಬೆಳೆಗೆರೆಯವರ ಲವಲವಿಕೆಯಂತಹ ಪೋರಿ- ಟಪೋರಿತನದಿಂದ ಬರಹದಲ್ಲಿ ಒಂದಿಷ್ಟು ಕಲಿತ 51ರ ಹರೆಯದ ಚಿರ ಯೌವನದ ಪತ್ರಕರ್ತರಾಗಿರುವ ಗಜೇಂದ್ರ ಸ್ವಾಮಿ “ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಇವರು ಬರೆಯದ ಪ್ರಕಾರಗಳೇ ಬಹುತೇಕ ಇಲ್ಲವೆನ್ನಬಹುದು.

ನುಡಿದಂತೆ ನಡೆಯುವ, ಬರೆದಂತೆ ಬದುಕುವ ಗಜೇಂದ್ರ ಸ್ವಾಮಿ ಪರಿಪಕ್ವ ಪರ್ತಕರ್ತರಾಗಿ ರೂಪುಗೊಂಡಿದ್ದಾರೆ. ಫೆ. 24ರ ಶನಿವಾರ ಇವರು 50 ವರ್ಷ ಪೂರೈಸಿ 51ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದಾಗ ‘ವಿಧಾತ ಸುಧೀರ್’ ಎಂದೇ ಹೆಸರಾಗಿರುವ ಸಹ್ಯಾದ್ರಿ ಸುದ್ದಿ ದಿನಪತ್ರಿಕೆಯ ಸಂಪಾದಕ ಸುಧೀರ್ ಸೋಷಿಯಲ್ ಮೀಡಿಯಾದಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದ ಗಜೇಂದ್ರ ಸ್ವಾಮಿಯವರ ಫೋಟೊ ಹಾಕಿ 51 ನಾಟ್ ಔಟ್ ಎಂದು ಶುಭ ಹಾರೈಸಿದ್ದರು. ಪೆನ್ ಎಂಬ ಬ್ಯಾಟ್ ಹಿಡಿದಿರುವ ಈ ದೈತ್ಯ ದಾಂಡಿಗ ಪತ್ರಕರ್ತ ಬದುಕಿನ ಮ್ಯಾಚ್‌ನಲ್ಲೂ ಸೆಂಚುರಿ ಬಾರಿಸಲಿ ಎಂಬುವುದೇ ಹಿತೈಷಿಗಳ ಹಾರೈಕೆ.

ಲೇಖಕರು: ಸಂತೋಷ್ ಎಲಿಗಾರ್, ಮೊ: 7848851966   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited                             

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSpecial Articleಮಲೆನಾಡು_ಸುದ್ಧಿವಿಶೇಷ ಲೇಖನಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕರಡಿ ಅರಣ್ಯ ಇಲಾಖೆ ಬಲೆಗೆ

Next Post

ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ

kalpa News

kalpa News

Next Post
ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ

ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL