No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇವಿಎಂ ಎಷ್ಟು ಸರಿ..?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2024
in Special Articles
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಇವಿಎಂ #EVM ಇವಿಎಂ ಇವಿಎಂ. ಎಲ್ಲಿ ನೋಡಿದರೂ ಅದೇ ಸುದ್ದಿ. ಒಂದು ಮಾತಿದೆ “ಒಂದೇ ಸುಳ್ಳನ್ನು ಪದೇ ಪದೇ ಹೇಳಿ ಅದನ್ನು ಸತ್ಯ ಮಾಡಬಹುದು” ಎಂದು. ಹಾಗೆಯೇ ಈ ಮಾಧ್ಯಮಗಳು ಇಂದು ಅಮೇರಿಕಾದಲ್ಲಿ, ನಿನ್ನೆ ಮತ್ತೊಂದು ಕಡೆ ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಹೇಳಿ ಹೇಳಿ ಜನರಿಗೆ ಅದು ಸತ್ಯ ಅನ್ನಿಸಿಬಿಟ್ಟಿದೆ.

ಭಾರತ ದೇಶದಲ್ಲಿ ಮೊದಲ ಬಾರಿಗೆ 1982ರಲ್ಲಿ ಕೇರಳದ ಉತ್ತರ ಪರವೂರ್­ನಲ್ಲಿ ಇವಿಎಂ ಬಳಸಿದರು. ಸಂಪೂರ್ಣವಾಗಿ ಬಳಸಿದ್ದ ರಾಜ್ಯ ಗೋವಾ 1999ರಲ್ಲಿ. ಪ್ರಮುಖವಾಗಿ ಭಾರತದಲ್ಲಿ ಮತದಾರರ ಸಂಖ್ಯೆ ಹೆಚ್ಚಿದ್ದು ಈ ಚುನಾವಣೆ ಹೊತ್ತಿಗೆ ಅದು 97 ಕೋಟಿಯನ್ನು ದಾಟಿದೆ ಎನ್ನಲಾಗಿದೆ. ಅಲ್ಲದೆ 1980ರ ನಂತರ ಉತ್ತರ ಪ್ರದೇಶ, ಬಿಹಾರ, ಜಮ್ಮು ಕಾಶ್ಮೀರ, ಆಂಧ್ರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ಗಳಲ್ಲಿ ನಡೆದ ಹಿಂಸಾಚಾರ, ಚುನಾವಣಾ ಅವ್ಯವಹಾರ ಮತ್ತು ಬ್ಯಾಲೆಟ್ ಪತ್ರಗಳ ವರ್ಗಾವಣೆ ಇನ್ನಿತರ ಗಂಭೀರ ಸಮಸ್ಯೆಗಳು ಇವಿಎಂ ಅವಶ್ಯಕ ಎಂದು ತೋರಿಸಿದವು. 1990-96 ರ ತನಕ ಭಾರತದ ಚುನಾವಣಾ ಉಸ್ತುವಾರಿ ಹೊತ್ತಿದ್ದ ಟಿ ಎನ್ ಶೇಷನ್ ಅವರು ಕೂಡ ಇವಿಎಂ ಈ ಸಮಯದ ತುರ್ತು ಕ್ರಮ ಎಂದೇ ಹೇಳಿದರು.
ನಂತರದಲ್ಲಿ ಇವಿಎಂ ಗಳ ಕುರಿತು ಹೆಚ್ಚಿನ ಗಮನ ಹೋಯಿತು. ಭಾರತದ ಬಂಗಾಳದಷ್ಟು ಜನ ಸಂಖ್ಯೆ ಹೊಂದಿರದ ಜರ್ಮನಿ ಅಂತಹ ಚಿಕ್ಕ ದೇಶಗಳ ಉದಾಹರಣೆ ಕೊಟ್ಟು ಇವಿಎಂ ಹಳೆಯುವುದು ಎಷ್ಟು ಸರಿಯೋ ದೇವರೇ ಬಲ್ಲ. ಅದು ಬಿಡಿ ಭಾರತದ ಖ್ಯಾತ BHEL ಮತ್ತು ECIL ಗಳು ಇವಿಎಂಗಳನ್ನು ಸುಜಾತ ರಂಗರಾಜನ್ ಮೇಲ್ವಿಚಾರಣೆಯಲ್ಲಿ ತಯಾರಿಸಿದವು. ಹಾಗೆಯೇ ದೇಶದ ಆರು ಪ್ರಮುಖ ನಗರಗಳಲ್ಲಿ ಪರೀಕ್ಷೆಗೆ ಒಳಪಡಿಸಿ ಅಸಂತೃಪ್ತಿ ಹೊಂದಿದವರನ್ನು ಆಹ್ವಾನಿಸಲಾಯಿತು. ಆಗಲೂ ಯಾರಿಂದ ಏನನ್ನೂ ಸಾಬೀತು ಪಡಿಸಲು ಸಾಧ್ಯವೇ ಆಗಲಿಲ್ಲ. ಆದರೂ ವಿಪಕ್ಷಗಳ ಇವಿಎಂ ದುರ್ಬಳಕೆ ಮಾಡಿಕೊಂಡಿದೆ ಎಂಬ ಅರ್ಜಿಗೆ ಓಗೊಟ್ಟು 2011ರಂದು ಚುನಾವಣಾ ಆಯೋಗಕ್ಕೆ ವಿವಿಪ್ಯಾಟ್ (Voter Verified Paper Audit Trial) ಬಳಕೆಗೆ ಸೂಚಿಸಿತು. ವಿವಿಪ್ಯಾಟ್ ಎಂದರೆ ಯಾರಾದರೂ ಮತ ಹಾಕಿದ ನಂತರ ಮತಯಂತ್ರದ ಚಿಕ್ಕ ಗಾಜಿನ ಕಿಂಡಿಯಲ್ಲಿ ಅವರು ಯಾರಿಗೆ ಮತ ಹಾಕಿದ್ದು ಎಂದು ಸುಮಾರು ಏಳು ಸೆಕೆಂಡ್ ಗಳ ಮಟ್ಟಿಗೆ ತೋರಿಸುತ್ತದೆ. ನಂತರದ ದಿನಗಳಲ್ಲಿ ಏಪ್ರಿಲ್ 9, 2019ರ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಚುನಾವಣಾ ಆಯೋಗ 20625 ಇವಿಎಂಗಳಿಗೆ ವಿವಿಪ್ಯಾಟ್ ಸೇರಿಸಿತು. ಆದರೂ ವಿರೋಧ ಪಕ್ಷಗಳ ವರಾತ ನಿಲ್ಲಲ್ಲೇ ಇಲ್ಲ. ಸರಿ ಎಂದ ಆಯೋಗ, ಪ್ರಸಾದ್ ಸಮಿತಿಯ ವರದಿಯ ಪ್ರಕಾರ ಎಲ್ಲಾ ಪಕ್ಷಗಳ ಪ್ರತಿನಿಧಿಗಳ ಎದುರು ವಿವಿಪ್ಯಾಟ್ ಮತ್ತು ಮತಗಳ ಮಾದರಿ ತಾಳೆ ನೋಡುವಿಕೆಯನ್ನು ಆರಂಭಿಸಲಾಯಿತು.

ಸೈಯದ್ ಸೂಜಾ ಎಂಬ ಸ್ವಘೋಷಿತ ತಂತ್ರಜ್ಞ The India Todayಗೆ ಬರೆದ ಲೇಖನದಲ್ಲಿ ಭಾರತೀಯ ರಾಜಕೀಯ ಪಕ್ಷಗಳು ಇವಿಎಂ ದುರ್ಬಳಕೆ ಮಾಡಿಕೊಂಡಿವೆ ಎಂದು ಘೋಷಿಸಿದ. ಆದರೆ ಆತ ಅದಕ್ಕೆ ಬೇಕಾದ ಸಾಕ್ಷಿ ಪುರಾವೆ ಒದಗಿಸಲಿಲ್ಲ. ಅದು ಕೇವಲ ಒಂದು ಪ್ರಚಾರ ಪಡೆಯುವ ಗಿಮಿಕ್ ಆಗಿತ್ತು. ಅದಕ್ಕೆ ಪ್ರತಿಯಾಗಿ ಚುನಾವಣಾ ಆಯೋಗ ಆತನ ಮೇಲೆ ದೆಹಲಿಯಲ್ಲಿ FIR ದಾಖಲಿಸಿತು.
ಹಿಂದೊಮ್ಮೆ ಚುನಾವಣಾ ಆಯೋಗ ಎಲ್ಲಾ ಪಕ್ಷಗಳಿಗೂ ಇವಿಎಂ ಅನ್ನು ಪರೀಕ್ಷಿಸಿ, ಅದನ್ನು ದುರ್ಬಳಕೆ ಮಾಡಬಹುದು ಎಂದು ಧೃಡಪಡಿಸಲು ಅವಕಾಶವನ್ನು ನೀಡಿತ್ತು. ಆದರೆ ಯಾವ ಪಕ್ಷವೂ ಅದನ್ನು ಸಾಕ್ಷೀಕರಿಸಲು ಆಗಲಿಲ್ಲ. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಡ ಅಷ್ಟೇ ಏಕೆ ಕರ್ನಾಟಕ ರಾಜ್ಯ ಚುನಾವಣಾ ಫಲಿತಾಂಶ ಬಂದಾಗಲೂ ವಿಪಕ್ಷಗಳು ಇವಿಎಂ ಕುರಿತು ದನಿ ಎತ್ತಲಿಲ್ಲ.

ಇವಿಎಂ ದುರ್ಬಳಕೆ ಮಾಡಲು ಸಾಧ್ಯವೇ ಇಲ್ಲ ಎನ್ನುವುದಕ್ಕೆ ಎರಡು ರೀತಿಯ ಕಾರಣಗಳ ನೀಡಬಹುದು. ಮೊದಲನೆಯದಾಗಿ ಇವಿಎಂಗಳಿಗೆ ನೀಡುವ ಭಧ್ರತೆ ಮತ್ತು ವ್ಯವಸ್ಥೆ. BHEL ಮತ್ತು ECIL ನಿಂದ ಹೊರಟು ಯಂತ್ರಗಳು ಜಿಲ್ಲಾ ಕಛೇರಿಗಳ ಸ್ಟ್ರಾಂಗ್ ರೂಂಗಳ ಸೇರುತ್ತವೆ. ದಿನದ 24/7 ಗಂಟೆಗಳೂ ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗುತ್ತದೆ. ಮತದಾನಕ್ಕೆ ಮೂರು ವಾರಗಳು ಇರುವಾಗ ಚುನಾವಣಾ ಕ್ಷೇತ್ರಗಳ ಸ್ಟ್ರಾಂಗ್ ರೂಂಗಳಿಗೆ ವರ್ಗಾಯಿಸಲಾಗುತ್ತದೆ. ಅಲ್ಲೂ ಕೂಡ ಯಾವ ಯಂತ್ರ, ಯಾವ ಮತಗಟ್ಟೆಗೆ ಎಂದು ಮೊದಲೇ ನಿರ್ಧರಿಸುವುದಿಲ್ಲ. ನಂತರ ಎಲ್ಲಾ ಪಕ್ಷಗಳ ಪ್ರತಿನಿಧಿಗಳ ಕರೆಸಿ ಅವರ ಎದುರಿಗೆ ಇವಿಎಂಗಳ ಹಂಚಲಾಗುತ್ತದೆ. ಯಾವುದೇ ಪಕ್ಷ 1000 ಮತಗಳ ಮಾಡಿ ಒಂದು ಇವಿಎಂ ಅನ್ನು ಪರೀಕ್ಷಿಸಬಹುದು. ಹೀಗೆ ಪರೀಕ್ಷಿಸಿ ಸೀಲ್ ಮಾಡಿ, ನಿರ್ದಿಷ್ಟ ಗುರುತಿನ ಸಂಖ್ಯೆ ನೀಡಿದ ಮೇಲೆಯೇ ಇವಿಎಂಗಳ ಬೂತ್ ಗಳಿಗೆ ಒಯ್ಯಲಾಗುತ್ತದೆ. ಮತದಾನದ ದಿನ ಕೂಡ ಪ್ರತಿನಿಧಿಗಳು ಐವತ್ತು ಮತಗಳವರೆಗೆ ಪ್ರಯತ್ನಿಸಿ ಪರೀಕ್ಷಿಸಬಹುದು. ಮತದಾನದ ನಂತರ ಮತಗಳ ಸಂಖ್ಯೆ ಮತ್ತು ಮತಗಟ್ಟೆ ಸಂಖ್ಯೆ ಇನ್ನಿತರ ವಿವರಗಳನ್ನು ಎಲ್ಲಾ ಪಕ್ಷಗಳ ಪ್ರತಿನಿಧಿಗಳಿಗೂ ನೀಡಲಾಗುತ್ತದೆ. ನಂತರವಷ್ಟೇ ಇವಿಎಂಗಳ ಮತ್ತೆ ಸ್ಟ್ರಾಂಗ್ ರೂಂಗೆ ಒಯ್ಯಲಾಗುತ್ತದೆ. ಚುನಾವಣಾ ಆಯೋಗ ಇಲ್ಲಿ ಒಂದು ವಿಶೇಷ ಅಧಿಕಾರವನ್ನು ನೀಡಿದೆ. ಅದೇನೆಂದರೆ ಯಾವುದೇ ಪಕ್ಷ ಬಯಸಿದಲ್ಲಿ ದಿನದ ಇಪ್ಪತ್ನಾಲ್ಕು ಗಂಟೆಯೂ ಇವಿಎಂ ಅನ್ನು ಕಾಯಬಹುದು.
ವೈಜ್ಞಾನಿಕವಾಗಿ ನೋಡುವುದಾದರೆ ಇವಿಎಂ ನಲ್ಲಿ ಎರಡು ವಿಭಾಗಗಳಿದ್ದು, ಕಂಟ್ರೋಲ್ ಯುನಿಟ್ ಮತ್ತು ಬ್ಯಾಲೊಟಿಂಗ್ ಯುನಿಟ್. ಕಂಟ್ರೋಲರ್ ಒಮ್ಮೆ ಅವುಗಳನ್ನು ಒಂದು ಯಂತ್ರಕ್ಕೆ ಅಳವಡಿಸಿದ ಮೇಲೆ ಉತ್ಪಾದಕರು ಕೂಡ ಅದನ್ನು ಬದಲಾಯಿಸಲು ಆಗುವುದಿಲ್ಲ. ಮತದಾನ ಮುಗಿದ ನಂತರ ಎರಡೂ ಯುನಿಟ್­ಗಳನ್ನು ಸಂಬಂಧಿತ ಅಧಿಕಾರಿಗಳ ಎದುರು ಮತ್ತು ಪಕ್ಷಗಳ ಪ್ರತಿನಿಧಿಗಳ ಎದುರು ಬೇರ್ಪಡಿಸಿ ಇಡಲಾಗುತ್ತದೆ. ಇದಾದ ಮೇಲೆ ಮತ ಚಲಾಯಿಸಲು ಬರುವುದಿಲ್ಲ. ಇವಿಎಂ ಮತ್ತು ವಿವಿಪ್ಯಾಟ್­ಗಳನ್ನು ಒತ್ತಾಯಪೂರ್ವಕವಾಗಿ ತೆರೆಯಲು ಪ್ರಯತ್ನಿಸಿದರೆ ಅವು ಬಂದ್ ಆಗಿಬಿಡುತ್ತವೆ. ಹಾಗೂ ಅದರೊಳಗಿನ ಒಂದು ಗಡಿಯಾರ ಈ ಎಲ್ಲ ಚಟುವಟಿಕೆಗಳನ್ನು ದಾಖಲಿಸುತ್ತದೆ. ಮತ್ತು ಫಲಿತಾಂಶದ ಸಮಯದಲ್ಲಿ ರಿಸಲ್ಟ್ ಗುಂಡಿಯನ್ನು ಒತ್ತಿದಾಗ ಫಲಿತಾಂಶ ಪಡೆಯಲು ಸಾಧ್ಯ. ಆದರೆ ಈ ರೀತಿ ಮಾಡುವ ಮೊದಲು ಅಧಿಕಾರಿಗಳು ಮತ್ತು ಪಕ್ಷಗಳ ಪ್ರತಿನಿಧಿಗಳ ಕರೆಸಿ ಮತಗಳ ಹೊಂದಿಸಿ ನೋಡುತ್ತಾರೆ. ಯಾವ ಮತಗಟ್ಟೆ, ಟ್ಯಾಗ್­ಗಳು ಮತ್ತು ಸೀಲ್­ಗಳು ಸರಿಯಾಗಿ ಇದ್ದರೆ ಮಾತ್ರ ಅದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಾರೆ. ಫಲಿತಾಂಶಕ್ಕಾಗಿ ಸೀಲ್ ಮಾಡಿದ ಕ್ಲೋಸ್ ಬಟನ್ ಅನ್ನು ಒಡೆದು ಒತ್ತಲಾಗುತ್ತದೆ. ಯಾವುದೇ ರೀತಿಯಲ್ಲೂ ಅಂತರ್ಜಾಲಕ್ಕೆ ಸಂಪರ್ಕಿತವಾಗದ ಇವಿಎಂ ಅನ್ನು ದುರ್ಬಳಕೆ ಮಾಡಲು ಹೇಗೆ ಸಾಧ್ಯ?
ಅಲ್ಲದೆ ಅಂತಿಮವಾಗಿ ಹೇಳುವುದಾದರೆ ಇಷ್ಟು ಸ್ಪಷ್ಟವಾಗಿ ಮತ್ತು ಯಾವುದೇ ಗೊಂದಲಗಳಿಗೂ ಅವಕಾಶ ಇಲ್ಲದೆ ನಡೆಯುವ ಭಾರತದ ಇವಿಎಂಗಳನ್ನು ಫಿಜಿ, ನೇಪಾಳ, ಭೂತಾನ್, ಕೀನ್ಯ ಮತ್ತು ನಮೀಬಿಯ ಸೇರಿದಂತೆ ಅನೇಕ ದೇಶಗಳು ಖರೀದಿಸುತ್ತವೆ. ಇಷ್ಟಾಗಿಯೂ ಭಾರತದ ವಿಪಕ್ಷಗಳು ಯಾವಾಗೆಲ್ಲಾ ಅವರಿಗೆ ಋಣಾತ್ಮಕ ಫಲಿತಾಂಶ ಬಂದಿದೆಯೋ ಆಗೆಲ್ಲಾ ಇವಿಎಂ ದುರ್ಬಳಕೆ ಆಪಾದನೆ ಮಾಡುತ್ತವೆ. ಅದಕ್ಕೆ ಎಡಪಂಥೀಯ ಮಾಧ್ಯಮಗಳು ಅದನ್ನು ದೊಡ್ಡದು ಮಾಡಿ ತೋರಿಸುತ್ತವೆ. ಆದರೆ ಇಲ್ಲಿಯ ತನಕ ಯಾವ ಪಕ್ಷವೂ ಅದನ್ನು ಸಾಕ್ಷೀಕರಿಸಲು ಆಗಲಿಲ್ಲ. ಇವಿಎಂ ಅನ್ನು ದೂಷಿಸುವುದು ಸೆಕ್ಷನ್ 505(1)(b) ಪ್ರಕಾರ ಒಂದು ಕಾನೂನಾತ್ಮಕ ಅಪರಾಧವೂ ಹೌದು. ನಿಮಗಿದು ತಿಳಿದಿರಲಿ ಇದಾಗಲೇ ನಲವತ್ತು ಬಾರಿ ಇವಿಎಂ ವಿರುದ್ಧ ಅನೇಕ ವಿಪಕ್ಷಗಳು, NGO ಗಳು ಹಾಗೂ ಕೆಲ ವ್ಯಕ್ತಿಗಳು ಸರ್ವೋಚ್ಚ ನ್ಯಾಯಾಲಯದ ಕದ ತಟ್ಟಿದ್ದು, ಪ್ರತಿ ಬಾರಿಯೂ ನ್ಯಾಯಾಲಯ ಇವಿಎಂ ಸರಿ ಎಂದೇ ಆದೇಶ ಹೊರಡಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

     

Tags: EVMKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಇವಿಎಂವಿಶೇಷ ಲೇಖನ
Share196Tweet123Send
Previous Post

ಹಿಂದು ಸಮಾಜ ಜಾಗೃತಿ ಆದರೆ ಈ ಸರ್ಕಾರ ಉಳಿಯಲ್ಲ: ಮಾಜಿ ಸಚಿವ ಈಶ್ವರಪ್ಪ ಕಿಡಿ

Next Post

ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ 

ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ 

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL