No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2021
in Special Articles
0
ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಈಗ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದಾಗಿ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳಿವೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರಸಾರಿಗೆಯ ನಿಷೇಧವಿದೆ. ಕೆಲವು ಸ್ಥಳಗಳಲ್ಲಿ ಕೊರೊನಾದ ಸೋಂಕು ಕಡಿಮೆಯಿದ್ದರೂ, ಅಲ್ಲಿನ ಜನರು ಮನೆಯಿಂದ ಹೊರಗೆ ಬರಲು ಅನೇಕ ನಿಷೇಧಗಳಿವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ ಮತ್ತು ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿಷೇಧಗಳು ಬಂದಿವೆ. ಕೊರೊನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ. ಇದನ್ನೇ ‘ಆಪದ್ಧರ್ಮ’ ಎಂದು ಹೇಳುತ್ತಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

1. ಹಿಂದೂ ಧರ್ಮಶಾಸ್ತ್ರದಲ್ಲಿ ಹೇಳಿರುವ ಪರ್ಯಾಯವೆಂದರೆ ‘ಆಪದ್ಧಧರ್ಮ’ !
‘ಆಪದ್ಧರ್ಮ’ ಅಂದರೆ ‘ಆಪದಿ ಕರ್ತವ್ಯೋ ಧರ್ಮಃ|’ ಅಂದರೆ ‘ಆಪತ್ಕಾಲದಲ್ಲಿ ಧರ್ಮಶಾಸ್ತ್ರದಲ್ಲಿ ಮಾನ್ಯತೆಯಿರುವ ಕೃತಿಗಳು’. ಇಂತಹ ಕಾಲದಲ್ಲಿಯೇ ಶ್ರೀ ಗಣೇಶಚತುರ್ಥಿಯ ವ್ರತ ಮತ್ತು ಗಣೇಶೋತ್ಸವ ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ಹೇಳಿದಂತೆ, ಈ ಬಾರಿ ಉತ್ಸವದ ಸ್ವರೂಪದಲ್ಲಿ ಅಂದರೆ ಸಾಮೂಹಿಕ ಸ್ವರೂಪದಲ್ಲಿ ಈ ಉತ್ಸವವನ್ನು ಆಚರಿಸಲು ಮಿತಿಯಿದೆ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ‘ಸದ್ಯದ ದೃಷ್ಟಿಯಿಂದ ಧರ್ಮಾಚರಣೆ ಎಂದು ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು ?’, ಎಂಬ ವಿಚಾರವನ್ನು ಮಾಡಲಾಗಿದೆ. ಇಲ್ಲಿ ಮಹತ್ವದ ವಿಷಯವೆಂದರೆ, ‘ಹಿಂದೂ ಧರ್ಮವು ಎಷ್ಟು ವ್ಯಾಪಕವಾಗಿ ಮಾನವನ ವಿಚಾರವನ್ನು ಮಾಡಿದೆ?’, ಎಂಬುದನ್ನು ನಾವು ಕಲಿಯಬಹುದು. ಇದರಿಂದ ಹಿಂದೂ ಧರ್ಮದ ಏಕಮೇವಾದ್ವಿತೀಯತೆ ಗಮನಕ್ಕೆ ಬರುತ್ತದೆ.


2. ಗಣೇಶ ಚತುರ್ಥಿಯ ವ್ರತವನ್ನು ಹೇಗೆ ಆಚರಿಸಬೇಕು ?
ಗಣೇಶೋತ್ಸವವು ಹಿಂದೂಗಳ ಒಂದು ದೊಡ್ಡ ಹಬ್ಬವಾಗಿದೆ. ಶ್ರೀ ಗಣೇಶಚತುರ್ಥಿಗೆ, ಹಾಗೆಯೇ ಶ್ರೀ ಗಣೇಶೋತ್ಸವದ ದಿನಗಳಲ್ಲಿ ಗಣೇಶತತ್ತ್ವವು ನಿತ್ಯದ ತುಲನೆಯಲ್ಲಿ ಪೃಥ್ವಿಯ ಮೇಲೆ 1 ಸಾವಿರಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಸದ್ಯ ಕೊರೊನಾ ವೈರಾಣುವಿನ ಹಾವಳಿ ದಿನದಿಂದ ದಿನಕ್ಕೆ ದೊಡ್ಡ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಇದರಿಂದ ಕೆಲವು ಸ್ಥಳಗಳಲ್ಲಿ ಮನೆಯಿಂದ ಹೊರಗೆ ಬರುವುದನ್ನೂ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಪದ್ಧರ್ಮ ಮತ್ತು ಧರ್ಮಶಾಸ್ತ್ರಗಳನ್ನು ಜೊತೆಗೂಡಿಸಿ ದೃಶ್ಯಾವಳಿ, ದುಬಾರಿ ಅಲಂಕಾರ ಇತ್ಯಾದಿಗಳನ್ನು ಮಾಡದೇ ಸರಳವಾಗಿ ಮಣ್ಣಿನ ಸಿದ್ಧಿವಿನಾಯಕನ ವ್ರತವನ್ನು ಮುಂದಿನ ಪದ್ಧತಿಯಿಂದ ಮಾಡಬಹುದು.


ಪ್ರತಿ ವರ್ಷ ಅನೇಕರ ಮನೆಗಳಲ್ಲಿ ಜೇಡಿಮಣ್ಣು, ಪ್ಲಾಸ್ಟರ್ ಆಫ್ ಪ್ಯಾರಿಸ್ ಇತ್ಯಾದಿಗಳಿಂದ ತಯಾರಿಸಿದ ಮೂರ್ತಿಯನ್ನು ಪೂಜಿಸಲಾಗುತ್ತದೆ. ಈ ವರ್ಷ ಯಾವ ಪ್ರದೇಶದಲ್ಲಿ ಕೊರೋನಾ ವೈರಾಣುವಿನ ಸೋಂಕು ಅಲ್ಪ ಪ್ರಮಾಣದಲ್ಲಿದೆಯೋ, ಅಂದರೆ ಯಾವ ಭಾಗದಲ್ಲಿ ಸಂಚಾರಸಾರಿಗೆ ನಿಷೇಧವಿಲ್ಲವೋ, ಅಂತಹ ಸ್ಥಳಗಳಲ್ಲಿ ಎಂದಿನಂತೆ ಗಣೇಶಮೂರ್ತಿಯನ್ನು ತಂದು ಅದನ್ನು ಪೂಜಿಸಬೇಕು.

ಯಾರಿಗೆ ಕಾರಣಾಂತರಗಳಿಂದ ಮನೆಯಿಂದ ಹೊರಗೆ ಬರುವುದು ಸಾಧ್ಯವಿಲ್ಲವೋ, ಉದಾ. ಕೊರೋನಾದ ಸಾಂಕ್ರಾಮಿಕತೆಯಿಂದ ಅಕ್ಕಪಕ್ಕದ ಪರಿಸರ ಅಥವಾ ಕಟ್ಟಡವನ್ನು ‘ನಿಷೇಧಿತ ವಲಯ’ ಎಂದು ಘೋಷಿಸಿದ್ದರೆ, ಅಲ್ಲಿಯ ಜನರು ತಮಗೆ ಗಣೇಶತತ್ತ್ವದ ಲಾಭವಾಗಬೇಕೆಂದು ತಮ್ಮ ಮನೆಯಲ್ಲಿರುವ ಗಣೇಶನ ಮೂರ್ತಿ ಅಥವಾ ಗಣೇಶನ ಚಿತ್ರಕ್ಕೆ ಷೋಡಷೋಪಚಾರ ಪೂಜೆಯನ್ನು ಸಲ್ಲಿಸಬೇಕು. ಈ ಪೂಜೆಯನ್ನು ಮಾಡುವಾಗ ಪೂಜೆಯ ಅಂಗವಾದ ‘ಪ್ರಾಣಪ್ರತಿಷ್ಠಾಪನೆ’ ಈ ವಿಧಿಯನ್ನು ಮಾತ್ರ ಮಾಡಬಾರದು, ಎಂದು ಗಮನದಲ್ಲಿಡಬೇಕು.

3. ಜ್ಯೇಷ್ಠ ಗೌರಿ ವ್ರತವನ್ನು ಯಾವ ರೀತಿ ಮಾಡಬೇಕು ?
ಕೆಲವು ಮನೆಗಳಲ್ಲಿ ಭಾದ್ರಪದ ಶುಕ್ಲ ಪಕ್ಷ ಅಷ್ಟಮಿಯಂದು ಜ್ಯೇಷ್ಠ ಗೌರಿಯ ಪೂಜೆಯನ್ನು ಮಾಡಲಾಗುತ್ತದೆ. ಕೆಲವು ಮನೆಗಳಲ್ಲಿ ಕಲ್ಲುಗಳ ರೂಪದಲ್ಲಿ ಮತ್ತು ಇನ್ನು ಕೆಲವು ಮನೆಗಳಲ್ಲಿ ಮುಖವಾಡಗಳನ್ನು ಮಾಡಿ ಅವುಗಳನ್ನು ಪೂಜಿಸಲಾಗುತ್ತದೆ. ಕೊರೊನಾದ ಸಂಕಟದಿಂದ ಯಾರಿಗೆ ಪ್ರತಿವರ್ಷದಂತೆ ಕಲ್ಲುಗಳ ಸ್ವರೂಪದಲ್ಲಿ ಅಥವಾ ಮುಖವಾಡಗಳ ಸ್ವರೂಪದಲ್ಲಿ ಗೌರಿಯ ಪೂಜೆಯನ್ನು ಮಾಡಲು ಸಾಧ್ಯವಿಲ್ಲವೋ, ಅವರು ತಮ್ಮ ಮನೆಯಲ್ಲಿನ ಯಾವುದಾದರೂಂದು ದೇವಿಯ ಮೂರ್ತಿ ಅಥವಾ ದೇವಿಯ ಚಿತ್ರದ ಪೂಜೆಯನ್ನು ಮಾಡಬೇಕು.

ವಿಶೇಷ ಸೂಚನೆ :
ಗಣೇಶಮೂರ್ತಿಯನ್ನು ತರುವಾಗ, ಹಾಗೆಯೇ ಮೂರ್ತಿಯ ವಿಸರ್ಜನೆಯನ್ನು ಮಾಡುವಾಗ ಮನೆಯ ಕೆಲವೇ ವ್ಯಕ್ತಿಗಳು ಹೋಗಬೇಕು. ಮೂರ್ತಿಯ ವಿಸರ್ಜನೆ ಮಾಡುವಾಗ ತಮ್ಮ ಮನೆಯ ಹತ್ತಿರದ ಕೆರೆ ಅಥವಾ ಬಾವಿಯಲ್ಲಿ ವಿಸರ್ಜನೆ ಮಾಡಬೇಕು. ಈ ಸಮಯದಲ್ಲಿ ಜನಜಂಗುಳಿಯಾಗುವ ಅಪಾಯ ಹೆಚ್ಚಿರುವುದರಿಂದ ಕೊರೋನಾ ಸಂದರ್ಭದಲ್ಲಿ ಸರಕಾರವು ಹೇಳಿರುವ ಮಾರ್ಗದರ್ಶಕ ಅಂಶಗಳನ್ನು ತಪ್ಪದೇ ಪಾಲಿಸುವುದು ನಮ್ಮೆಲ್ಲರ ಕರ್ತವ್ಯವೇ ಆಗಿದೆ.

4. ‘ಗಣೇಶಮೂರ್ತಿಯು ಏಕೆ ಜೇಡಿಮಣ್ಣಿನದ್ದಾಗಿರಬೇಕು?’, ಈ ವಿಷಯದಲ್ಲಿ ಧರ್ಮಶಾಸ್ತ್ರದ ಆಧಾರ !
ಧರ್ಮಶಾಸ್ತ್ರಾನುಸಾರ ಜೇಡಿಮಣ್ಣಿನ ಮೂರ್ತಿಯನ್ನು ಪೂಜಿಸಿದರೆ, ಅದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಅತ್ಯಧಿಕ ಲಾಭವಾಗುತ್ತದೆ, ಎಂದು ಹಿಂದೂಗಳ ಧರ್ಮಶಾಸ್ತ್ರದ ಗ್ರಂಥಗಳಲ್ಲಿ ಹೇಳಲಾಗಿದೆ. ಧರ್ಮಸಿಂಧುವಿನಲ್ಲಿ ಗಣೇಶಚತುರ್ಥಿಯಂದು ಪೂಜಿಸಲ್ಪಡುವ ಗಣಪತಿಯ ಮೂರ್ತಿ ಹೇಗಿರಬೇಕು ?, ಎಂಬ ವಿಷಯದಲ್ಲಿ ಮುಂದಿನ ನಿಯಮಗಳನ್ನು ನೀಡಲಾಗಿದೆ.

ತತ್ರ ಮೃನ್ಮಯಾದಿಮೂರ್ತೌ ಪ್ರಾಣಪ್ರತಿಷ್ಠಾಪೂರ್ವಕಂ ವಿನಾಯಕಂ ಷೋಡಷೋಪಚಾರೈಃ ಸಂಪೂಜ್ಯ|
ಧರ್ಮಸಿಂಧು, ಪರಿಚ್ಛೇದ ||

ಅರ್ಥ:
ಈ ದಿನ (ಭಾದ್ರಪದ ಶುಕ್ಲ ಪಕ್ಷ ಚತುರ್ಥಿಯ ದಿನ) ಶ್ರೀ ಗಣೇಶನ ಮಣ್ಣು ಇತ್ಯಾದಿಗಳಿಂದ ತಯಾರಿಸಿದ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಸ್ಥಾಪನೆಯನ್ನು ಮಾಡಿ ಷೋಡಷೋಪಚಾರ ಪೂಜೆಯನ್ನು ಮಾಡಿ.

ಇನ್ನೊಂದು ಸಂದರ್ಭಕ್ಕನುಸಾರ ‘ಸ್ಮೃತಿಕೌಸ್ತುಭ’ ಹೆಸರಿನ ಧರ್ಮಗ್ರಂಥದಲ್ಲಿ ಶ್ರೀಕೃಷ್ಣನು ಧರ್ಮರಾಜನಿಗೆ ಸಿದ್ಧಿವಿನಾಯಕನ ವ್ರತವನ್ನು ಮಾಡುವುದರ ಬಗೆಗಿನ ಉಲ್ಲೇಖವಿದೆ. ಇದರಲ್ಲಿ ‘ಮೂರ್ತಿ ಹೇಗಿರಬೇಕು ’, ಎಂಬುದರ ಸವಿಸ್ತಾರ ವರ್ಣನೆ ಬಂದಿದೆ.

ಸ್ವಶಕ್ತಾಯ ಗಣನಾಥಸ್ಯ ಸ್ವರ್ಣರೌಪ್ಯಮಯಾಕೃತಿಮ್ |
ಅಥವಾ ಮೃನ್ಮಯಿ ಕಾರ್ಯಾ ವಿತ್ತಶಾಠ್ಯಂ ನ ಕಾರಯೇತ್ || -ಸ್ಮೃತಿಕೌಸ್ತುಭ

ಅರ್ಥ:
ಈ (ಸಿದ್ಧಿವಿನಾಯಕನ) ಪೂಜೆಗಾಗಿ ತಮ್ಮ ಕ್ಷಮತೆಗನುಸಾರ ಬಂಗಾರ, ಬೆಳ್ಳಿ ಅಥವಾ ಮಣ್ಣಿನ ಮೂರ್ತಿಯನ್ನು ತಯಾರಿಸಬೇಕು. ಇದರಲ್ಲಿ ಜಿಪುಣತನ ಮಾಡಬಾರದು.

ಇದರಲ್ಲಿ ಯಥಾಶಕ್ತಿ ಬಂಗಾರ, ಬೆಳ್ಳಿ ಅಥವಾ ಮಣ್ಣಿನಿಂದಲೇ ಮೂರ್ತಿಯನ್ನು ತಯಾರಿಸಬೇಕು’, ಎನ್ನುವ ಸ್ಪಷ್ಟ ಉಲ್ಲೇಖವಿರುವುದರಿಂದ, ಇದನ್ನು ಹೊರತುಪಡಿಸಿ ಇತರ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಶಾಸ್ತ್ರಾನುಸಾರ ಅಯೋಗ್ಯವಾಗಿದೆ.

-ವಿನೋದ ಕಾಮತ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaGanesha FestivalKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Articleಕೊರೋನಾ
Share202Tweet123Send
Previous Post

ಎನ್‌ಇಎಸ್: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ

Next Post

ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿಗೆ : ಕೇಂದ್ರ ಸಚಿವರ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿಗೆ : ಕೇಂದ್ರ ಸಚಿವರ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL