No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 14, 2026
in Special Articles
0
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |
ಈ ಕಾರ್ಯಕ್ರಮದ ಬಗ್ಗೆ ಬರೆಯದೇ ಹೋದರೆ, ಇದರ ಅನುಭೂತಿಯ ಬಗ್ಗೆ ಹೇಳದೇ ಹೋದರೆ ಖಂಡಿತಾ ತಪ್ಪಾದೀತು.. ಏಕೆಂದರೆ ನಿಜಕ್ಕೂ ಪ್ರಭುಗಳ ತಪಸ್ಸು ಫಲಿಸಿದೆ. ಅದ್ಭುತವಾದ ರಸಾನುಭೂತಿ… ಆನಂದಾನುಭವ, ಭಗವಂತನ ಸಾಕ್ಷಾತ್ಕಾರವಾದ ಕಾರ್ಯಕ್ರಮ ನಾಮಮೃತ.

“ಯತ್ರ ಗೀಯತೇ ಹರಿಃ ತತ್ರ ತಿಷ್ಠಂತಿ ದೇವತಾಃ।

ಭಕ್ತಜನಸಮಾಕೀರ್ಣಂ ತದ್ ಸ್ಥಾನಂ ತೀರ್ಥಸಮ್ಮತಮ್॥” ಅಂದರೆ ಎಲ್ಲಿ ಹರಿಯ ಗಾನ ಮೊಳಗುವುದೋ ಅಲ್ಲಿ ದೇವತೆಗಳು ನೆಲೆಸುತ್ತಾರೆ; ಭಕ್ತರಿಂದ ತುಂಬಿದ ಆ ಸ್ಥಾನ ತೀರ್ಥಕ್ಷೇತ್ರಕ್ಕೆ ಸಮಾನ. ಎಂಬ ಶ್ಲೋಕದಂತೆ ಶಿವಮೊಗ್ಗದ ಕುವೆಂಪು ರಂಗಮಂದಿರವು ಒಂದು ಅವಿಸ್ಮರಣೀಯ ಸಂಜೆಗೆ ಸಾಕ್ಷಿಯಾಯಿತು. ದಿ. ಮಣೂರ್ ಗೋವಿಂದರಾಯ ಪ್ರಭು ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ “ನಾಮಾಮೃತ” ಭಕ್ತಿ ಗಾನ ಸಂಭ್ರಮ ನಿರೀಕ್ಷೆಯನ್ನೂ ಮೀರಿ ಅದ್ಭುತ ಯಶಸ್ಸು ಕಂಡಿತು. ಸಂಜೆ 5:30ರ ವೇಳೆಗಾಗಲೇ ರಂಗಮಂದಿರದ ಪ್ರತಿ ಆಸನವೂ ಭರ್ತಿಯಾಗಿ, ಸಂಗೀತಾಸಕ್ತರು ಶ್ರೀಮತಿ ಶಿವಶ್ರೀ ತೇಜಸ್ವಿಸೂರ್ಯ ಅವರ ಅಭಿಮಾನಿಗಳು ತುಂಬಿ ತುಳುಕುತ್ತಿದ್ದರು.
ಶ್ರೀಮತಿ ಶಿವಶ್ರೀ ತೇಜಸ್ವಿ ಸೂರ್ಯ ಅವರ ಕಂಠದಿಂದ ಹೊರಹೊಮ್ಮಿದ ಹಾಡುಗಳೆಲ್ಲವೂ ಅಮೃತದ ಸವಿ ಉಣಿಸಿದವು. ಸಾಕ್ಷಾತ್ ಭಗವಂತನ ದರ್ಶನವೇ ಆದ ಹಾಗೆ ಆಗಿದ್ದಂತೂ ಸುಳ್ಳಲ್ಲ.

“ಯಸ್ಯ ಕಂಠಾತ್ ಪ್ರವಹತಿ ಭಕ್ತಿಗಂಗಾ ಸರಸ್ವತೀ।

ಶ್ರೋತೃಚಿತ್ತಂ ಪ್ರಸನ್ನಂ ಸ್ಯಾತ್ ಈಶ್ವರಾನುಗ್ರಹೋ ಹಿ ಸಃ॥” ಅಂದರೆ ಯಾರ ಕಂಠದಿಂದ ಭಕ್ತಿ ಗಂಗೆ ಸರಸ್ವತಿಯಂತೆ ಹರಿಯುವಳೋ, ಆ ಗಾಯನದಿಂದ ಶ್ರೋತೃಗಳ ಮನ ಪ್ರಸನ್ನಗೊಳ್ಳುವುದು ಇದು ಈಶ್ವರನ ಅನುಗ್ರಹವೇ ಸರಿ ಎಂಬ ಶ್ಲೋಕದಂತೆ ಮುಖ್ಯ ಗಾಯಕಿಯಾದ ಶ್ರೀಮತಿ ಶಿವಶ್ರೀ ತೇಜಸ್ವಿ ಸೂರ್ಯ ಅವರು ತಮ್ಮ ಮಧುರ ಕಂಠದಿಂದ ಭಜನೆ ಮತ್ತು ಭಕ್ತಿ ಗೀತೆಗಳನ್ನು ಹಾಡಿ ಇಡೀ ರಂಗಮಂದಿರವನ್ನು ಭಾವಪರವಶಗೊಳಿಸಿದರು. ಪ್ರತಿ ಗೀತೆಯೂ ಶ್ರೋತೃಗಳ ಹೃದಯ ತಟ್ಟಿ, ಕಣ್ಣಾಲಿಗಳನ್ನು ತೇವಗೊಳಿಸಿತು. ಸಹ ಗಾಯನದಲ್ಲಿ ಅವರ ತಂದೆಯಾದ ಹಿರಿಯ ಕಲಾವಿದ ಶ್ರೀ ಜೆ. ಸ್ಯಂದ ಪ್ರಸಾದ್ ಹಾಗೂ ವಿನಯ್ ಶಿವಮೊಗ್ಗ ಅವರ ಅನುಭವ ಪೂರ್ಣ ಸ್ವರ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿತು. ಅಲ್ಲದೇ ಶಿವಶ್ರೀ ತಾವೊಬ್ಬರೇ ಹಾಡದೇ ಅಲ್ಲಿದ್ದವರನ್ನು ಒಳಗೊಳ್ಳುವಂತೆ ಮಾಡಿದ್ದು, ಎಲ್ಲರೂ ನಾಮ ಸ್ಮರಣೆ ಮಾಡಿ ಪುನೀತಭಾವ ಅನುಭವಿಸಿದ್ದು ಬೇರೆಯ ಲೋಕಕ್ಕೆ ಕೊಂಡೋಯ್ದ ಭಾವ ತಂದಿತು.
ಶಿವಶ್ರೀಯವರ ಕಂಠಸಿರಿಯಲ್ಲಿ ಬಂದ ಗಣಪತಿ, ರಾಮ, ಕೃಷ್ಣ ರ ಹಾಡುಗಳು ಕೇಳುಗರನ್ನೆಲ್ಲ ತಾವೂ ಕೂಡ ನಾಮಸ್ಮರಣೆ ಮಾಡುವಂತಾಯಿತು. ವಿಠಲನ ಹಾಡು, ಮೀರಾ ಭಜನ್, ಮರಾಠಿ ಅಭಂಗ್ ಎಲ್ಲವೂ ಅವರ ಜೇನಿನ ಕಂಠಕ್ಕೆ ಭಗವಂತನನ್ನೇ ತಾವೂ ಕಂಡು ನಮಗೂ ಅದರ ಅನುಭೂತಿಯಾಗುವಂತೆ ಮಾಡಿ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.

ವಾದ್ಯ ವೃಂದದ ಮಾಂತ್ರಿಕ ಸ್ಪರ್ಶ

“ತಾಲಲಯಸಮಾಯುಕ್ತಂ ವಾದ್ಯಗೀತಂ ಮನೋಹರಮ್ ಎಂದು ಕೇಳಿರುವ ಶ್ಲೋಕ ನೆನಪಾಯಿತು. ತಾಳ-ಲಯಗಳಿಂದ ಕೂಡಿದ ವಾದ್ಯ ಗೀತ ಎಷ್ಟು ಮನೋಹರವಾಗಿದೆಯೆಂದರೆ ದೇವತೆಗಳೇ ಆನಂದಿಸುತ್ತಾರೆ, ಮಾನವರ ಮಾತೇನು? ಎಂಬ
ಶ್ರೀ ಗೌರವ್ ಗಡಿಯಾರ್ ಅವರ ಹಾರ್ಮೋನಿಯಂ, ಶ್ರೀ ಅನಿರುದ್ಧ್ ಭಟ್ ಅವರ ಮೃದಂಗ ಮತ್ತು ಮಾಸ್ಟರ್ ಅಲ್ಲ ಪಂಡಿತ್ ಪ್ರದ್ಯುಮ್ನ ಕರ್ಪುರ್ ಅವರ ತಬಲಾ ವಾದನ ಕಾರ್ಯಕ್ರಮಕ್ಕೊಂದು ಅದ್ಭುತ ಲಯ ಮತ್ತು ತಾಳ ನೀಡಿದವು. ಮೂವರ ಸಮ್ಮಿಳಿತ ವಾದನ ಗಾಯನಕ್ಕೆ ಜೀವ ತುಂಬಿ ನಿಜವಾದ ಸಾಥ್ ನೀಡಿ ಇಡೀ ಸಭಾಂಗಣ ಭಕ್ತಿ ಲಹರಿಯಲ್ಲಿ ತೇಲಾಡುವಂತೆ ಮಾಡಿತು.

ಜನ ಸಾಗರ — ಭಕ್ತಿಯ ಹೊನಲು

ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಆಯೋಜನೆಗೊಂಡ ಈ ಭಕ್ತಿ ಗಾನ ಸಂಭ್ರಮಕ್ಕೆ ಜನರ ಸ್ಪಂದನ ಅಭೂತಪೂರ್ವವಾಗಿತ್ತು. ವಿವಿಧ ವಯೋಮಾನದವರು ಆಗಮಿಸಿ ಉಚಿತ ಪ್ರವೇಶದ ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ರಂಗಮಂದಿರ ತುಂಬಿ ತುಳುಕಿದ ದೃಶ್ಯ ಆಯೋಜಕರ ಪರಿಶ್ರಮಕ್ಕೆ ಸಿಕ್ಕ ಅತ್ಯುತ್ತಮ ಪ್ರತಿಫಲವಾಯಿತು.
ಟ್ರಸ್ಟ್‌ನ ಸೇವಾ ಮನೋಭಾವ

ದಿ. ಮಣೂರ್ ಗೋವಿಂದರಾಯ ಪ್ರಭು ಚಾರಿಟಬಲ್ ಟ್ರಸ್ಟ್ ಮತ್ತು ಪಂಚತಾರ ಐಸ್‌ಕ್ರೀಮ್ಸ್ ಪಾರ್ಲರ್ ಅವರ ಸಂಯುಕ್ತ ಆಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮ, ಸಮಾಜಕ್ಕೆ ಸಂಸ್ಕೃತಿ-ಭಕ್ತಿಯ ಕೊಡುಗೆ ನೀಡುವ ಟ್ರಸ್ಟ್‌ನ ಉದಾತ್ತ ಧ್ಯೇಯಕ್ಕೆ ಪ್ರತ್ಯಕ್ಷ ನಿದರ್ಶನವಾಗಿ ನಿಂತಿತು.

ಈ ಕಾರ್ಯಕ್ರಮದಲ್ಲಿ ಮತ್ತೊಂದು ಗಮನಿಸಿದ ಅಂಶ ಎಂದರೆ ಚುಟುಕಾದ ಸಭಾ ಕಾರ್ಯಕ್ರಮ ಹಾಗೂ “ಭಕ್ತಿಗಾನ ವಾರಿಧಿ” ಎಂಬ ಬಿರುದು ಶ್ರೀಮತಿ ಶಿವಶ್ರೀಯವರಿಗೆ ನೀಡಿದ್ದು, ಕಾರ್ಯಕ್ರಮದ ರಸಾಸ್ವಾದಾನೆಗೆ ಭಂಗ ಬರದಂತೆ ಆಯೋಜಕರು ನಿಗಾ ವಹಿಸಿದ್ದನ್ನು ಖಂಡಿತವಾಗಿಯೂ ಶ್ಲಾಘಿಸಲೇ ಬೇಕು.

“ಸಫಲಂ ತಸ್ಯ ಜೀವಿತಂ ಯಃ ಭಕ್ತ್ಯಾ ಗಾಯತಿ ಈಶ್ವರಮ್।
ಸಫಲಂ ತಸ್ಯ ಶ್ರವಣಂ ಯೋ ಭಕ್ತಿಗೀತಂ ಶೃಣೋತಿ ಚ॥” ಎನ್ನುವ ಸಾರ್ಥಕ ಭಾವ ಮೂಡಿತು.
“ನಾಮಾಮೃತ” ಕಾರ್ಯಕ್ರಮ ಶಿವಮೊಗ್ಗದ ಸಂಗೀತ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯ ಬರೆದಿದೆ. ಶ್ರೀಮತಿ ಶಿವಶ್ರೀ ತೇಜಸ್ವಿ ಸೂರ್ಯ ಅವರ ಮಧುರ ಕಂಠ, ಕಲಾವಿದರ ಸಮರ್ಥ ವಾದನ ಮತ್ತು ತುಂಬಿ ತುಳುಕಿದ ರಂಗಮಂದಿರ — ಇವೆಲ್ಲ ಈ ಕಾರ್ಯಕ್ರಮ ಎಂತಹ ಮಹಾ ಯಶಸ್ಸು ಕಂಡಿತೆಂಬುದಕ್ಕೆ ಜೀ.ವಂತ ಸಾಕ್ಷಿಯಾಗಿ ನಿಂತಿವೆ. ಇಂತಹ ಕಾರ್ಯಕ್ರಮಕ್ಕೆ ಸಾಕ್ಷಿಯಾದ ನಾವೇ ಧನ್ಯರು. ಇದಕ್ಕೆ ಕಾರಣೀಭೂತರಾದ ಶ್ರೀಪ್ರಕಾಶ್ ಪ್ರಭು ಹಾಗೂ ಶ್ರೀಮತಿ ರೀತಾ ಪ್ರಭುಗಳಿಗೆ ಶಿವಮೊಗ್ಗ ಜನತೆಯ ಪರವಾಗಿ ಅನಂತಾನಂತ ಧನ್ಯವಾದಗಳನ್ನಷ್ಟೇ ಹೇಳಬಹುದು… ಇನ್ನಷ್ಟು ಮತ್ತಷ್ಟು ಇದೇ ರೀತಿಯ ಕಾರ್ಯಕ್ರಮ ಆಯೋಜನೆ ಮಾಡುವಂತಾಗಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Articleವಿಶೇಷ ಲೇಖನ
Share200Tweet125Send
Previous Post

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

Next Post

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL