Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಜೂ. 24ರಂದು ಉದಯೋನ್ಮುಖ ಕಲಾವಿದೆ “ಪ್ರಣವಿ ಬೇರಿಕೆ” ಭರತನಾಟ್ಯ ರಂಗಪ್ರವೇಶ

ವಿದುಷಿ ದೀಕ್ಷಾ ಶಾಸ್ತ್ರಿ ಸಾರಥ್ಯ | ಜೆಎಸ್‌ಎಸ್ ಸಭಾಂಗಣದಲ್ಲಿ ಭರತ ನೃತ್ಯ ಸಮರ್ಪಣೆ | ನೃತ್ಯಕಲಾ ಗುರುಕುಲ ಆಯೋಜನೆ

June 22, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಲೇಖನ: ಶಿವಮೊಗ್ಗ ರಾಮ್  |

ಉದ್ಯಾನನಗರಿಯ ನೃತ್ಯಕಲಾ ಗುರುಕುಲದ ಗುರು ದೀಕ್ಷಾ ಶಾಸ್ತ್ರಿ ಅವರ ಶಿಷ್ಯೆ ಪ್ರಣವಿ ಬೇರಿಕೆ ಭರತನಾಟ್ಯ #Bharatanatyam ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ. ಜೂ. 24ರ ಸಂಜೆ 6ಕ್ಕೆ ಜಯನಗರ 8ನೇ ಬಡಾವಣೆಯ ಜೆಎಸ್‌ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ರಂಗಪ್ರವೇಶಕ್ಕೆ #Rangapravesha ಮುಖ್ಯ ಅತಿಥಿಗಳಾಗಿ ದೃಷ್ಟಿ ಆರ್ಟ್ ಸೆಂಟರ್ ನಿರ್ದೇಶಕಿ ವಿದುಷಿ ಅನುರಾಧಾ ವಿಕ್ರಾಂತ್, ನಾದಂ ನೃತ್ಯ ಕೇಂದ್ರದ ನಿರ್ದೇಶಕಿ ನಂದಿನಿ ಮೆಹ್ತಾ ಆಗಮಿಸಿ ಯುವ ಕಲಾವಿದೆಗೆ ಪ್ರೋತ್ಸಾಹ ತುಂಬಲಿದ್ದಾರೆ. ಪ್ರಣವಿ ರಂಗಪ್ರವೇಶ ಪ್ರಸ್ತುತಿಗೆ ವಿದುಷಿ ಕಾಂಚನ ಶ್ರೀರಂಜನಿ (ಗಾಯನ), ಗುರು ದೀಕ್ಷಾ ಶಾಸ್ತ್ರಿ (ನಟುವಾಂಗ), ವಿದ್ವಾಂಸರಾದ ಹರ್ಷ ಸಾಮಗ (ಮೃದಂಗ), ಎನ್. ಆರ್. ಶ್ರೀಕೃಷ್ಣ ಭಟ್ (ಕೊಳಲು) ಮತ್ತು ಎ. ಶಂಕರ್ ರಾಮನ್ (ವೀಣೆ) ಪಕ್ಕವಾದ್ಯ ಸಹಕಾರವಿದೆ.
ಭರವಸೆಯ ಬೆಳಕು ಪ್ರಣವಿ ಬೇರಿಕೆ
ಬೆಂಗಳೂರಿನ ಆರ್.ವಿ. ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿ ಕಮ್ಯೂನಿಕೇಷನ್ ಇಂಜಿನಿಯರಿಂಗ್ ದ್ವಿತೀಯ ಸೆಮಿಸ್ಟರ್ ಪದವಿ ಅಧ್ಯಯನ ಮಾಡುತ್ತಿರುವ ಪ್ರಣವಿ ನೃತ್ಯ ಕಲಿಕೆಗೆ ಅಡಿ ಇಟ್ಟಿದ್ದು 6ನೇ ವಯಸ್ಸಿನಿಂದ. ಇಂಜಿನಿಯರ್ ವೃತ್ತಿಯಲ್ಲಿರುವ ಜಯಲಕ್ಷ್ಮೀ ಮತ್ತು ಲಕ್ಷ್ಮೀಶ್ ದಂಪತಿಗೆ ಮಗಳು ಕಲಾವಿದೆ ಆಗಬೇಕು ಎಂಬ ಉತ್ಕಟ ಅಪೇಕ್ಷೆಗೆ ಪ್ರಣವಿಯ ಉತ್ಸಾಹವೂ ಮಿಳಿತಗೊಂಡಿದ್ದು ಸುಕೃತವೇ ಸರಿ.

ಪ್ರಣವಿ ಬೇರಿಕೆ

ಬಹುಬೇಗ ನೃತ್ಯಕಲೆಗೆ ತನ್ನನ್ನು ಸಮರ್ಪಿಸಿಕೊಂಡಿದ್ದು ಈಕೆಯ ವಿಶೇಷತೆ. ಭರತನೃತ್ಯದ ಮೇರು ಪದ್ಮಭೂಷಣ ಡಾ. ಪದ್ಮಾ ಸುಬ್ರಹ್ಮಣ್ಯಂ ಅವರ ಪರಂಪರೆಯಲ್ಲಿ ಬಂದ ಶಿಷ್ಯೆ, ವಿಶ್ವಖ್ಯಾತಿಯ ಕಲಾವಿದೆ ಸುಂದರಿ ಸಂತಾನಂ ಕಲಾ ಕ್ಷೇತ್ರಕ್ಕೆ ಚಿರಪರಿಚಿತರು. ಇವರ ಮಾರ್ಗದರ್ಶನದಲ್ಲಿ ಸಾಗಿಬಂದಿರುವ ಭರತ ನೃತ್ಯಶಾಲೆಯ ಹೆಸರಾಂತ ನರ್ತಕಿಯರಾದ ಹರಿಣಿ ಸಂತಾನಂ, ದೀಕ್ಷಾ ಶಾಸ್ತ್ರಿ, ನಯನಾ ಸೋಮಯಾಜಿ, ನಮಿತಾ ರಾವ್, ಶ್ವೇತಾ ರಾಜಶೇಖರ್ ಅವರಿಂದ ನೃತ್ಯದ ಪಟ್ಟುಗಳನ್ನು ಕಲಿತುಕೊಂಡ ಪ್ರಣವಿ ಹಿಂತಿರುಗಿ ನೋಡಲೇ ಇಲ್ಲ. ಸದ್ಯ 2 ವರ್ಷದಿಂದ ದೀಕ್ಷಾ ಶಾಸ್ತ್ರಿ ಅವರಲ್ಲಿ ಕಲಿಕೆ ಮುಂದುವರಿಸಿರುವ ಪ್ರಣವಿ ಈಗ ಮಾರ್ಗ ಕರಣಗಳ ಅಭ್ಯಾಸದತ್ತ ಆಸಕ್ತಿ ತೋರಿದ್ದಾಳೆ.
ಕರ್ನಾಟಕ ಸಂಗೀತ #CarnaticMusic ಮತ್ತು ನೃತ್ಯ ಅಕಾಡೆಮಿ ಈಕೆಗೆ ವಿದ್ಯಾರ್ಥಿ ವೇತನ ನೀಡಿ ಕಲೆಗೆ ಉತ್ತೇಜನ ನೀಡಿದೆ. ವಿದುಷಿ ಕಾಂಚನಾ ಶ್ರೀರಂಜನಿ ಅವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡುತ್ತಿರುವ ಪ್ರಣವಿ ಈಗ ವಿದ್ವತ್ ಹಂತದ ಪಾಠಕ್ರಮದ ತಾಲೀಮಿನಲ್ಲಿ ನಿರತವಾಗಿರುವುದು ಗಮನೀಯ ಸಂಗತಿ.

ವಿವಿಧೆಡೆ ಪ್ರದರ್ಶನ
ಭರತ ನೃತ್ಯಶಾಲೆಯ ವಾರ್ಷಿಕೋತ್ಸವದಲ್ಲಿ ಪ್ರದರ್ಶನ ನೀಡಿ ಗಮನ ಸೆಳೆದ ಪ್ರಣವಿ, ಬೆಂಗಳೂರಿನ ದಕ್ಷಿಣ ಅಯೋಧ್ಯಾ ಎಂದೇ ಖ್ಯಾತವಾದ ಕೋದಂಡರಾಮ ದೇವಾಲಯದಲ್ಲಿ ಆಯೋಜಿಸಿದ್ದ ದಸರಾ #Dasara ಉತ್ಸವದಲ್ಲಿ ಕಲಾಪ್ರದರ್ಶನ ಮಾಡಿದ್ದು ಹೊಸತನಕ್ಕೆ ನಾಂದಿಯಾಯಿತು. 2022ರಲ್ಲಿ ಬೆಂಗಳೂರು #Bengaluru ಗಾಯನ ಸಮಾಜ ಏರ್ಪಡಿಸಿದ್ದ ಸಂಗೀತ ಸ್ಪರ್ಧೆಯಲ್ಲಿ 3ನೇ ಬಹುಮಾನ ಪಡೆದದ್ದು ಸ್ಫೂರ್ತಿ ನೀಡಿದೆ. ತಾಂತ್ರಿಕ ಶಿಕ್ಷಣದೊಂದಿಗೆ ಸಂಗೀತ ಮತ್ತು ಭರತ ನೃತ್ಯವನ್ನು ಸಮನ್ವಯಗೊಳಿಸಿಕೊಂಡಿರುವ ಪ್ರಣವಿ ಒಬ್ಬ ಉದಯೋನ್ಮುಖ ಕಲಾವಿದೆಯಾಗಿ ತನ್ನ ಪ್ರತಿಭಾ ವಿಕಸನಕ್ಕೆ ಅಣಿಗೊಂಡಿರುವುದು ಉತ್ತಮ ಯತ್ನ ಎನಿಸಿದೆ.
ಪರಿಸರವೇ ಕಲಿಸಿದ ಸಂಸ್ಕಾರ
ಸುಳ್ಯ #Sullia ಮೂಲದ ಜಯಲಕ್ಷ್ಮೀ ಮತ್ತು ಲಕ್ಷ್ಮೀಶ್ ಬೇರಿಕೆ ದಂಪತಿಗೆ ವೃತ್ತಿ ಬದುಕಿನ ನಡುವೆ ಸಂಗೀತ ಕೇಳುವ, ಕಛೇರಿಗಳಿಗೆ ಹೋಗಿ ಗಾಯನ ಆಸ್ವಾದಿಸುವ ಹವ್ಯಾಸ ರೂಢಿಗತವಾಯಿತು. ಇದಕ್ಕೆ ಸಜ್ಜನ ಮಿತ್ರವೃಂದ ಪ್ರೇರಣೆ ನೀಡಿತು. ಉತ್ತಮ ವಾತಾವರಣದಲ್ಲಿ ಬೆಳೆಯುವ ಮಕ್ಕಳು ಸಂಸ್ಕಾರವಂತರಾಗುತ್ತಾರೆ ಎಂಬುದಕ್ಕೆ ಪ್ರಣವಿಯೇ ನಿದರ್ಶನ. ಬೇರಿಕೆ ಕುಟುಂಬದಲ್ಲಿ ಯಾವ ಕಲಾವಿದರು ಇಲ್ಲದಿದ್ದರೂ ಪಾಲಕರ ಸಂಗೀತಾಸಕ್ತಿಯೇ ಪ್ರಣವಿ ಕಲಾರಾಧನೆಗೆ ಮುನ್ನುಡಿ ಬರೆಯಿತು.

ಮಕ್ಕಳಿಗೆ ಕೇವಲ ಶಾಲಾ ಶಿಕ್ಷಣ ನೀಡಿದರೆ ಸಾಲದು. ಕಲೆ ಮತ್ತು ಸಂಸ್ಕಾರವನ್ನೂ ನಮ್ಮ ನಿತ್ಯದ ಆಸಕ್ತಿ ಚಟುವಟಿಕೆಗಳಿಂದ ಕಲಿಸಬೇಕು ಎಂಬುದು ಜಯಲಕ್ಷ್ಮೀ ಮತ್ತು ಲಕ್ಷ್ಮೀಶ್ ಆಶಯ. ಅದಕ್ಕೆ ಪ್ರಣವಿ ಪ್ರತೀಕವಾಗಿದ್ದಾಳೆ. ಈಕೆ ಕಲಾರಂಗದ ಪ್ರತಿಮೆಯೂ ಆಗಿ ಮೇರು ಪಂಕ್ತಿಯಲ್ಲಿ ಮಿಂಚಬೇಕು ಎಂಬುದು ಗುರು ದೀಕ್ಷಾ ಶಾಸ್ತ್ರಿ ಅವರ ಆಶಯವೂ ಆಗಿದೆ.
ಗುರುಕೃಪೆ, ಕುಟುಂಬದ ಒಲುಮೆ, ಮಿತ್ರವರ್ಗದ ಮಹದಾಸೆಗಳು ಪ್ರಣವಿ ನರ್ತನ- ಗಾಯನಕ್ಕೆ ಪಲ್ಲವಿ- ಪಂಕ್ತಿಗಳಾಗಿವೆ. ಇವೆಲ್ಲದರ ಫಲವಾಗಿ ಆಕೆ ಪರಿಣತ ಕಲಾವಿದೆಯಾಗಿ ರೂಪುಗೊಂಡರೆ ಪಾಲಕರ ಶ್ರಮ-ತ್ಯಾಗ, ಗುರುಗಳ ಪಾಠಾಂತರ ಮತ್ತು ಶಿಷ್ಯವಾತ್ಸಲ್ಯಕ್ಕೆ ಮೌಲ್ಯ ದೊರಕಿದಂತೆ. ರಂಗ ಪ್ರವೇಶ ಎಂಬುದು ಈಕೆಯ ಉನ್ನತೋನ್ನತ ಸಾಧನೆಗೆ ಮಹಾದ್ವಾರ ತೆರೆಯುವ ಮಹತ್ತರ ವೇದಿಕೆಯಾಗಲಿ ಎಂಬುದೇ ಸುಸಂಸ್ಕೃತ ಮನಸ್ಸುಗಳ ಹಾರೈಕೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4
Tags: BENGALURUBharatanatyamCarnatic classical musicDrishti Art CenterKalpa Media HouseNrityakala GurukulaPranavi BerikeRangapraveshaSulliaಕರ್ನಾಟಕ ಶಾಸ್ತ್ರೀಯ ಸಂಗೀತಕಲ್ಪ ಮೀಡಿಯಾ ಹೌಸ್ದೃಷ್ಟಿ ಆರ್ಟ್ ಸೆಂಟರ್ನೃತ್ಯಕಲಾ ಗುರುಕುಲಪ್ರಣವಿ ಬೇರಿಕೆಭರತನಾಟ್ಯರಂಗಪ್ರವೇಶಸುಳ್ಯ
Previous Post

ಜೂ.25ರಂದು ನೃತ್ಯ ಕದಂಬಕಂ: ಉಚಿತ ಸಾಮೂಹಿಕ ರಂಗಪ್ರವೇಶ ಕಾರ್ಯಕ್ರಮ

Next Post

ಅಬ್ಬಬ್ಬಾ! ಶೆಡ್’ನಲ್ಲಿ ವಾಸಿಸುವ ಮಹಿಳೆಗೆ ಬಂದ ಕರೆಂಟ್ ಬಿಲ್ ಇಷ್ಟೊಂದಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಬ್ಬಬ್ಬಾ! ಶೆಡ್'ನಲ್ಲಿ ವಾಸಿಸುವ ಮಹಿಳೆಗೆ ಬಂದ ಕರೆಂಟ್ ಬಿಲ್ ಇಷ್ಟೊಂದಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!