No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಯಶಸ್ಸಿನ ಹಾದಿಯಲ್ಲಿ ಅದ್ಥುತ ರಂಗ ಪ್ರತಿಭೆ ಶಿಲ್ಪಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 31, 2025
in Special Articles
0
ಯಶಸ್ಸಿನ ಹಾದಿಯಲ್ಲಿ ಅದ್ಥುತ ರಂಗ ಪ್ರತಿಭೆ ಶಿಲ್ಪಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಉಡುಪಿ ಮಣ್ಣಿನ ಸುವಾಸನೆ, ಅಮ್ಮನ ಕನಸು, ಕಾಲೇಜಿನ ದಿನಗಳ ಉತ್ಸಾಹ – ಇವುಗಳ ಸಂಗಮವೇ ಶಿಲ್ಪಾ ಶೆಟ್ಟಿ ಅವರ ಕಲಾಜೀವನದ ಬುನಾದಿ.

ಬಾಲ್ಯದಿಂದಲೇ ಕಲೆ ಅವರ ಹೃದಯದ ನಂಟಾಗಿದ್ದು, ಕಾಲೇಜು ಸಂದರ್ಭದಲ್ಲಿ NSS ತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಹವ್ಯಾಸಿ ರಂಗತಂಡಗಳ ಮೂಲಕ ಅವರು ಮೊದಲ ಬಾರಿಗೆ ರಂಗಮಂಟಪವನ್ನು ಮುಟ್ಟಿದರು. ಆ ದಿನದ ಆ ಹೆಜ್ಜೆ, ಮುಂದಿನ ದಾರಿ ಹೇಗೆ ಇರಬೇಕು ಎಂಬುದನ್ನು ತೋರಿಸಿಕೊಟ್ಟಿತು. ನಂತರ ಮೈಸೂರಿನ ಪ್ರಸಿದ್ಧ ರಂಗಾಯಣದಲ್ಲಿ ನಟನಾ ತರಬೇತಿ ಪಡೆದು ತಮ್ಮ ಕಲೆಗೊಂದು ಹೊಸ ಶಕ್ತಿ ತುಂಬಿಕೊಂಡರು.
ಈ ಪಯಣದಲ್ಲಿ ತಾಯಿಯ ಪ್ರೋತ್ಸಾಹವೇ ದೊಡ್ಡ ಶಕ್ತಿ. “ನಿನ್ನ ಕನಸು ನಿನ್ನ ಹಾದಿ” ಎಂದು ಬೆನ್ನೆಲುಬಾಗಿ ನಿಂತ ತಾಯಿ, ಶಿಲ್ಪಾಳಿಗೆ ಧೈರ್ಯದ ದಾರಿಯನ್ನೂ ನೀಡಿದರು.

ಇಂದು ಶಿಲ್ಪಾ ಶೆಟ್ಟಿ ಅವರು 30ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ, ನೂರಕ್ಕೂ ಅಧಿಕ ಪ್ರದರ್ಶನಗಳ ಮೂಲಕ ಪ್ರೇಕ್ಷಕರ ಹೃದಯದಲ್ಲಿ ತಮ್ಮದೇ ಆದ ಸ್ಥಾನ ಪಡೆದಿದ್ದಾರೆ. ಪಾತ್ರವು ಎಷ್ಟು ದೊಡ್ಡದು, ಚಿಕ್ಕದು ಎಂಬುದಲ್ಲ – ಅದಕ್ಕೆ ಅವರು ತುಂಬುವ ಜೀವವೇ ಮುಖ್ಯ ಎಂಬ ನಂಬಿಕೆ ಅವರ ನಟನೆಯ ಕೌಶಲ್ಯವನ್ನು ವಿಶಿಷ್ಟವಾಗಿಸಿದೆ.

ರಂಗಭೂಮಿಯ ಹೊರತಾಗಿಯೂ, ಚಲನಚಿತ್ರ ಮತ್ತು ವೆಬ್‌ಸೀರೀಸ್ ಜಗತ್ತಿನಲ್ಲಿಯೂ ಅವರು ತಮ್ಮ ಪ್ರತಿಭೆಯನ್ನು ಪರಿಚಯಿಸಿದ್ದಾರೆ. ನವ್ಯ ರಾವ್ ನಿರ್ದೇಶನದ ಪುಟ್ಟ ಭಯ, ಪ್ಯಾರಮ್ಹವ್ ಸ್ಪಾಟ್‌ಲೈಟ್ ನಿರ್ಮಾಣದ ಸ್ಟ್ರಾಬೆರಿ, ತುಳು ಕಿರುಚಿತ್ರ 2 ಪಜ್ಜೆ, ನಾಗೇಂದ್ರ ಗಾಣಿಗ ನಿರ್ದೇಶನದ ಅಭಿರಾಮಚಂದ್ರ, ಮನ್ಸೋರೆ ಅವರ ದೂರತೀರಯಾನ ಮೊದಲಾದ ಚಿತ್ರಗಳಲ್ಲಿ ಅವರು ತಮ್ಮ ಕಲಾಶಕ್ತಿಯನ್ನು ತೋರಿಸಿದ್ದಾರೆ. ಶಿಮಾರೋ ಚಾನೆಲ್‌ನ ಹಿಂದಿ ವೆಬ್‌ಸೀರೀಸ್‌ನಲ್ಲಿ ನಟನೆಯ ಮೂಲಕ ದೇಶದಾದ್ಯಂತ ಪ್ರೇಕ್ಷಕರಿಗೆ ತಲುಪಿದ್ದಾರೆ. ವಿಶೇಷವಾಗಿ ರೂಪಾ ಅಯ್ಯರ್ ನಿರ್ದೇಶನದ ಬಾಲಿವುಡ್ ಚಿತ್ರ “ನೀರಾ ಆರ್ಯ” ಅವರ ಕಲಾಜೀವನಕ್ಕೆ ಮತ್ತೊಂದು ಬಣ್ಣ ತುಂಬಿದ ಚಿತ್ರವಾಗಿದೆ.
ಅವರು ಕೇವಲ ನಟಿ ಮಾತ್ರ ಅಲ್ಲ, ಬಹುಮುಖ ಕಲಾವಿದೆ. ಸಹಾಯಕ ನಿರ್ದೇಶಕಿಯಾಗಿ ಮನ್ಸೋರೆ ಅವರ 19 20 21 ಹಾಗೂ ದೂರತೀರಯಾನ ಚಿತ್ರಗಳಲ್ಲಿ, ಶಿವರುದ್ರಯ್ಯ ಅವರ ಸಿಗ್ನಲ್ ಮ್ಯಾನ್ ಚಿತ್ರದಲ್ಲಿ ಹಾಗೂ ಬಿ.ಎಂ. ಗಿರಿರಾಜ್ ಅವರ ಹಿಂದಿ ವೆಬ್‌ಸೀರೀಸ್‌ನಲ್ಲಿ ತಮ್ಮ ಹಾದಿ ವಿಸ್ತರಿಸಿದ್ದಾರೆ. ನಿರ್ದೇಶಕಿಯಾಗಿಯೂ ಭರತವಾಕ್ಯ, ಸೋರುತಿದು ಸಂಬಂಧ, ವಿಗಡ ವಿಕ್ರಮರಾಯ ಮೊದಲಾದ ನಾಟಕಗಳ ಮೂಲಕ ತಮ್ಮ ದೃಷ್ಟಿಕೋನವನ್ನು ವೇದಿಕೆಯ ಮೇಲೆ ಮೂಡಿಸಿದ್ದಾರೆ. ಬರಹಗಾರ್ತಿಯಾಗಿ 2 ಪಜ್ಜೆ ಕಿರುಚಿತ್ರ ಮತ್ತು ಅವನಿಯ ಚೌರ್ಯೋನ್ಮಾದ ನಾಟಕವನ್ನು ಬರೆದಿದ್ದಾರೆ.
ರಂಗಭೂಮಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶಿಲ್ಪಾ ಶೆಟ್ಟಿ, ಇತ್ತೀಚೆಗೆ ನದೃಸಾ ಎಂಬ ಕನ್ನಡ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಮಕ್ಕಳಲ್ಲಿ ಕಲೆ ಬೆಳೆಸುವುದು ಅವರ ಹೃದಯದ ಹಂಬಲ. ಬೆಂಗಳೂರಿನ ಆರ್ಕಿಡ್ಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ರಂಗಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಅನೇಕ ಮಕ್ಕಳ ಮನಸ್ಸಿನಲ್ಲಿ ಕಲೆಗೊಂದು ಹೊಸ ದಾರಿ ತೆರೆದಿದ್ದಾರೆ.
ಶಿಲ್ಪಾ ಶೆಟ್ಟಿ ಅವರ ಕಥೆ ಕೇವಲ ಸಾಧನೆಯ ಕಥೆಯಲ್ಲ. ಅದು ಕನಸಿಗೆ ಬೆಂಬಲ ನೀಡಿದ ತಾಯಿಯ ಕಥೆ, ಧೈರ್ಯದಿಂದ ಮುಂದುವರಿದ ಹೆಜ್ಜೆಯ ಕಥೆ, ಮತ್ತು ನಿರಂತರ ಶ್ರಮದ ಕಥೆ. ಇಂದು ಅವರು ಯುವ ಕಲಾವಿದರಿಗೆ “ಕಲೆ ಬದುಕಿನ ಉಸಿರು” ಎಂಬ ಸಂದೇಶವನ್ನು ನೀಡುತ್ತಾ, ತಮ್ಮದೇ ಆದ ಪ್ರೇರಣೆಯ ದೀಪವಾಗಿದ್ದಾರೆ.

ಮನೆಯಲ್ಲಿ ಆರ್ಥಿಕ ಸಂಕಷ್ಟಗಳಿದ್ದರೂ, ತಮ್ಮ ಕಲಾ ಜೀವನಕ್ಕೆ ಯಾವುದೇ ಅಡಚಣೆ ಬಾರದಂತೆ ಶಿಲ್ಪಾ ಶೆಟ್ಟಿ ಸ್ವಾವಲಂಬಿಯಾಗಿ ಬೆಂಗಳೂರಿನಲ್ಲಿ ತಮ್ಮ ಕಲಾ ಪಯಣವನ್ನು ಮುಂದುವರಿಸಿಕೊಂಡಿದ್ದಾರೆ. ದುಡಿಮೆ ಮತ್ತು ದೃಢಸಂಕಲ್ಪದ ಮೂಲಕ ಸ್ವಂತ ಮನೆಯ ಕನಸನ್ನೂ ಅವರು ನನಸಾಗಿಸಿಕೊಂಡಿದ್ದಾರೆ. ನಮ್ಮೂರಿನ ಹೆಮ್ಮೆಯ ಪ್ರತಿಭೆಯಾದ ಈ ಕಲಾಶಿಲ್ಪಾಳಿಗೆ ನಮ್ಮೆಲ್ಲರ ಪ್ರೋತ್ಸಾಹ ಅವಶ್ಯಕ. ಅವರ ಮುಂದಿನ ಕಲಾ ಪಯಣ ಇನ್ನಷ್ಟು ಯಶಸ್ಸುಗಳನ್ನು ತಂದುಕೊಡಲೆಂದು ಕಲ್ಪ ಡಿಜಿಟಲ್ ಮೀಡಿಯಾ ಕಡೆಯಿಂದ ಹಾರೈಸುತ್ತೇವೆ.

ಲೇಖನ. ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News OnlineKannada NewsWebsiteKannada WebsiteLatest News KannadaNews in KannadaNews KannadaSpecial Articleವಿಶೇಷ ಲೇಖನ
Share200Tweet125Send
Previous Post

MEIL Energy Acquires 250 MW Lignite-Based Power Plant in Tamil Nadu

Next Post

ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ | ರೈತರಿಗೆ ತಾಂತ್ರಿಕ ಮಾರ್ಗದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ | ರೈತರಿಗೆ ತಾಂತ್ರಿಕ ಮಾರ್ಗದರ್ಶನ

ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ | ರೈತರಿಗೆ ತಾಂತ್ರಿಕ ಮಾರ್ಗದರ್ಶನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL