Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗೆ ‘ಸಂಜೀವಿನಿ’ ಯೋಜನೆಯ ಬೆಳಕು

December 7, 2024
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಮಲೆನಾಡ ಹೆಬ್ಬಾಗಿಲಾದ ಶಿವಮೊಗ್ಗದ ಸಂಸ್ಕೃತಿ, ಸಾಂಪ್ರದಾಯಗಳು ವಿಶೇಷವಾಗಿದ್ದು ಮಲೆನಾಡಿನ ಸಾಂಪ್ರದಾಯಿಕ ಕರಕುಶಲತೆಯಾದ ಮಣ್ಣಿನ ಅಲಂಕಾರಿಕ ವಸ್ತು ತಯಾರಿಕೆಗೆ ಜೀವ ನೀಡುವ ಮೂಲಕ ಮಹಿಳೆಯರ ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಸರ್ಕಾರದ ‘ಸಂಜೀವಿನಿ’ ಯೋಜನೆ ಗ್ರಾಮೀಣ ಮಹಿಳೆಯರ ಬದುಕಲ್ಲಿ ಹೊಸ ಬೆಳಕು ಮೂಡಿಸಿದೆ.

ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ 13 ಜನ ಮಹಿಳೆಯರು ಗುಂಪು ‘ಪ್ರಗತಿ’ ಸ್ವಸಹಾಯ ಸಂಘ ಮತ್ತು ಹೊಂಬೆಳಕು ಸಂಜೀವಿನಿ ಒಕ್ಕೂಟ ಸೇರಿ ಅಳಿವಿನಂಚಿನಲ್ಲಿರುವ ಗುಡಿ ಕೈಗಾರಿಕೆ ಮೂಲಕ ಮಣ್ಣಿನ ಮಣ್ಣಿನ ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿಕೊಂಡು ಸ್ವಾವಲಂಬಿ ಬದುಕು ನಡೆಸುತ್ತಿರುವುದು ನಿಜಕ್ಕೂ ಸ್ಪೂರ್ತಿದಾಯಕವಾಗಿದೆ.

ಮಹಿಳೆಯರು ತಮ್ಮ ಕ್ರಿಯಾಶೀಲತೆಯಿಂದ ಸಿದ್ಧಪಡಿಸಿದ “ಸಾಂಪ್ರದಾಯಿಕ ದೀಪಗಳು, ಹಸೆ-ಚಿತ್ತಾರಗಳು, ಟೆರಕೋಟ ಆಭರಣಗಳು, ಸಾಗರದ ಕುಕೀಸ್‌ಗಳು ಹಾಗೂ ಮಲೆನಾಡಿನ ಸಿಹಿತಿಂಡಿ ತೊಡೆದೇವು” ಸೇರಿದಂತೆ ಇನ್ನೂ ಅನೇಕ ವಿವಿಧ ಮನಮೋಹಕ ಮಲೆನಾಡಿನ ಗೃಹೋತ್ಪನ್ನ ಸಾಮಗ್ರಿಗಳ ಮಾರಾಟವನ್ನು ರಾಜ್ಯದಾದ್ಯಂತ ವಿಸ್ತರಿಸಿದ್ದಾರೆ.

ಮಹಿಳೆಯರು ಕೌಟುಂಬಿಕ ಜವಾಬ್ದಾರಿಯೊಂದಿಗೆ ಗುಡಿ ಕೈಗಾರಿಕೆಯಲ್ಲಿಯೂ ತೊಡಗಿಕೊಂಡು ಆದಾಯ ಪಡೆಯುತ್ತಿದ್ದಾರೆ. ಪ್ರತಿಯೊಂದು ಉತ್ಪನ್ನವು ಆ ನೆಲದ ಸೊಬಗನ್ನು ವರ್ಣಿಸುತ್ತದೆ. ಸ್ವ-ಉದ್ಯೋಗದ ಕನಸನ್ನು ನನಸಾಗಿಸುವಲ್ಲಿ ಸರ್ಕಾರದ ಸಂಜೀವಿನಿ ಸೇರಿದಂತೆ ವಿವಿಧ ಯೋಜನೆಗಳು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಿದೆ.
ಹೇಮಂತ್ ಎನ್, ಜಿಲ್ಲಾ ಪಂಚಾಯತ್ ಸಿಇಒ

ಮಹಿಳೆಯರು ತಮ್ಮ ಮನೆ ಕೆಲಸ ಮುಗಿದ ನಂತರ, ಆರ್ಥಿಕವಾಗಿ ಸ್ವತಂತ್ರರಾಗಲು ಗುಡಿ ಕೈಗಾರಿಕೆಯಂತಹ ಕೌಶಲ್ಯ ರೂಢಿಸಿಕೊಂಡಿದ್ದೇವೆ. ಜಿಲ್ಲಾ ಪಂಚಾಯತ್ ವತಿಯಿಂದ ನೀಡುವ ಯೋಜನೆಗಳ ಸಹಕಾರದಿಂದ ಮಣ್ಣಿನ ಕರಕುಶಲ ತಯಾರಿಕೆಯಲ್ಲಿ ಉತ್ತಮ ಆದಾಯವನ್ನು ಗಳಿಸುತ್ತಿದ್ದೇವೆ. ರಾಷ್ಟç ಮಟ್ಟದಲ್ಲಿ ನಾವು ತಯಾರಿಸುವ ವಸ್ತುಗಳಿಗೆ ಉತ್ತಮ ಬೇಡಿಕೆ ಇದ್ದು, ಸರ್ಕಾರಿ ಯೋಜನೆಗಳು ಅತ್ಯಂತ ಸಹಕಾರಿಯಾಗಿವೆ.
ಜ್ಯೋತಿ ಶಿವರಾಜ್ , ಮಹಿಳಾ ಕರಕುಶಲ ತಯಾರಕಿ

Also read: ಭದ್ರಾವತಿ | ಹೆಚ್ಚುತ್ತಿರುವ ಏಡ್ಸ್ ಪ್ರಮಾಣ ತಗ್ಗಿಸಲು ಜಾಗೃತಿ ಅವಶ್ಯ | ಸುಶೀಲಭಾಯಿ ಕರೆ

ಈ ಗುಡಿ ಕೈಗಾರಿಕೆಯ ಮುಖ್ಯ ಆಧಾರಸ್ತಂಭ ಶ್ರೀಮತಿ ಜ್ಯೋತಿ ಶಿವರಾಜ್ ಎಂಬ ಮಹಿಳೆ. ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಸರ್ಕಾರ ನೀಡುವ 6 ತಿಂಗಳ ಉಚಿತ ಕರಕುಶಲ ಗುಡಿ ಕೈಗಾರಿಕೆ ತರಬೇತಿಯನ್ನು ಪಡೆದುಕೊಂಡು ತಮ್ಮ ಗ್ರಾಮವಾದ ಹಾರನಹಳ್ಳಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಣ್ಣಿನ ವಸ್ತುಗಳನ್ನು ತಯಾರಿಸಲು ಆರಂಭಿಸಿದರು. ಈಗ ವರ್ಷಕ್ಕೆ 6 ಲಕ್ಷಕ್ಕೂ ಅಧಿಕ ಆದಾಯವನ್ನು ಗಳಿಸುತ್ತಿದ್ದಾರೆ. ಇವರಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ 2023ರ ಮಹಿಳಾ ಸಾಧಕಿ ಪ್ರಶಸ್ತಿ ಹಾಗೂ ಗುಡಿ ಕೈಗಾರಿಕೆಯಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.

ಕೈಯಲ್ಲಿ ತಯಾರಾಗುವ ಮಣ್ಣಿನ ಅಲಂಕಾರಿಕ ವಸ್ತುಗಳು:

ಮಹಿಳೆಯರು ಸ್ವತಃ ಕೈಯಲ್ಲಿ ಮಣ್ಣಿನಿಂದ ಮನೆಯಲ್ಲಿ ಸಿದ್ದಪಡಿಸಿದ ಮಣ್ಣಿನ ದೀಪ, ಮ್ಯಾಜಿಕ್ ದೀಪ,ಲಿಂಗು, ಗಣೇಶ ದೀಪ, ತುಳಸಿದೀಪ, ಬೋಟಿಂಗ್ ಗಣೇಶ ದೀಪ, ಹೂವಿನ್ಯಾಸದ ದೀಪ, ಅಷ್ಟಲಕ್ಷಿö್ಮಯರ ದೀಪ, ಪಂಚದೀಪ, ಆರಾಮ್ ಗಣೇಶ ದೀಪ, ಹಂಸದೀಪ,ವಾಸ್ತು ದೀಪ, ಗೃಹ ಅಲಂಕಾರಿಕ ದೀಪ, ಹಾಗೂ ಗೊಂಬೆಗಳು, ಮನೆ ಆಲಂಕಾರಿಕ ವಸ್ತುಗಗಳು, ಮಣ್ಣಿನ ಗಂಟೆ, ಈ ರೀತಿ ಅನೇಕ ವಸ್ತುಗಳನ್ನು ತಯಾರಿಸುತ್ತಾರೆ.

ಗುಡಿ ಕೈಗಾರಿಕೆಗೆ ಸಹಕಾರಿಯಾದ ಸಂಜೀವಿನಿ ಯೋಜನೆ:

ನಂತರ ಮಹಿಳೆಯರು ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ ಗ್ರಾಮದ ಇತರೆ ಮಹಿಳೆಯರನ್ನು ಜೊತೆಗೂಡಿಸಿಕೊಂಡು ಗುಡಿ ಕೈಗಾರಿಯನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಿಸ್ತರಿಸಲು ಪ್ರಯತ್ನಿಸಿದರು. ಗ್ರಾಮ ಪಂಚಾಯತ್ ವತಿಯಿಂದ ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿಯಲ್ಲಿ ಪ್ರಾಥಮಿಕವಾಗಿ ರೂ.50 ಸಾವಿರಗಳ ಸಾಲವನ್ನು ಪಡೆದುಕೊಂಡು ಕರಕುಶಲ ಕಲೆಗೆ ಬೇಕಾದ ಮಣ್ಣನ್ನು ಹದಗೊಳಿಸುವ ಯಂತ್ರವನ್ನು ಪಡೆದುಕೊಂಡು ಈ ಮೂಲಕ ತಯಾರಿಕೆ ಪ್ರಮಾಣವನ್ನು ಹೆಚ್ಚಿಸಿಕೊಂಡರು. ನಂತರ ಇದೇ ಯೋಜನೆಯಡಿ ರೂ. 1.50 ಲಕ್ಷ ಸಾಲವನ್ನು ಪಡೆಕೊಂಡು ಗೊಂಬೆಗಳನ್ನು ಹಾಗೂ ಮಣ್ಣಿನ ವಿವಿಧ ಕರಕುಶಲ ವಸ್ತುಗಳನ್ನು ಸಿದ್ದಪಡಿಸಲು ಸಹಕಾರಿಯಾಗುವ ಅಧುನಿಕ ಯಂತ್ರವನ್ನು ಖರೀದಿಸಿದರು.

ಜಿಲ್ಲಾ ಪಂಚಾಯತ್ ಸಹಕಾರದಿಂದ ಉತ್ತಮ ಮಾರುಕಟ್ಟೆ:

ಗುಡಿ ಮತ್ತು ಸಣ್ಣ ಕೈಗಾರಿಕೆಗಳು ತಯಾರಿಸುವ ವಸ್ತುಗಳಿಗೆ ಮಾರುಕಟ್ಟೆಯ ಸೌಲಭ್ಯಗಳು ಇಲದೇ ಅನೇಕ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ಮುಚ್ಚಲಾಗಿದೆ. ಅದರೆ ಶಿವಮೊಗ್ಗ ಜಿಲ್ಲಾ ಪಂಚಾಯತ್  ಈ ಗುಡಿ ಕೈಗಾರಿಕೆಯನ್ನು ಗುರುತಿಸಿ ರಾಷ್ಟçಮಟ್ಟದಲ್ಲಿ ಕರಕುಶಲ ಕಲೆಗೆ ಮಾನ್ಯತೆ ದೊರೆಯುವಂತೆ ಮಾಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಗುಡಿ ಕೈಗಾರಿಕೆ ವಸ್ತುಗಳ ಮಾರಾಟ ಮಳಿಗೆ ತೆರೆದು ಪ್ರಧಾನಿ ಮೋದಿ ಅವರೊಂದಿಗೆ 2 ನಿಮಿಷಗಳ ಕಾಲ ಕರಕುಶಲ ಗುಡಿ ಕೈಗಾರಿಕೆ ಕುರಿತು ಚರ್ಚಿಸಲು ಅವಕಾಶವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಕಲ್ಪಿಸಲಾಗಿತ್ತು.

ರಾಷ್ಟ್ರ ಮಟ್ಟ ವಸ್ತು ಪ್ರದರ್ಶನಕ್ಕೆ ಆಯ್ಕೆ:

ಎನ್.ಆರ್.ಎಲ್.ಎಂ ಯೋಜನೆಯ ಸಂಜೀವಿನಿ ಕಾರ್ಯಕ್ರಮದಡಿ ರಾಜ್ಯಾದ್ಯಂತ ವಿವಿಧ ಸಭೆ ಸಮಾರಂಭ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ರದರ್ಶನ ಮತ್ತು ಮಾರಾಟವನ್ನು ಮಾಡಲು ಸಹಕರಿಸಿದೆ. ಕೇಂದ್ರ ಸರ್ಕಾರದ ಪಿಎಂ-ವಿಶ್ವಕರ್ಮ ಯೋಜನೆ, ಲಕ್‌ಪತಿ ದೀದಿ ಯೋಜನೆಗಳಿಗೆ ಈ ಮಹಿಳಾ ಸಂಘ ಆಯ್ಕೆಯಾಗಿದ್ದು 2023 ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ ವಸ್ತುಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ.

ಪ್ರಧಾನ ಮಂತ್ರಿಯವರ ಮನ್ ಕೀ ಬಾತ್‌ನಲ್ಲಿ ಕರಕುಶಲತೆ ಕುರಿತು ಪ್ರಸ್ತಾಪ

ದೇಶದ ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿ ಅವರು ನಡೆಸಿಕೊಡುವ ಆಕಾಶವಾಣಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯ ಜ್ಯೋತಿಯವರು ತಯಾರಿಸುವ ಮ್ಯಾಜಿಕ್ ದೀಪದ ಹಾಗೂ ಮಣ್ಣಿನ ಕರಕುಶಲ ವಸ್ತುಗಳ ಕುರಿತು ಮೋದಿ ಅವರು ಉಲ್ಲೇಖಿಸಿದ್ದು ಮಹಿಳೆಯರ ಸ್ವಾವಲಂಬನೆ ಜೀವನದ ಕುರಿತು ಮಾತನಾಡಿದರು.

ದೀಪಾವತಿ ಹಬ್ಬದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಮಲೆನಾಡಿನ ಕರೆಕುಶಲ ವಸ್ತುಗಳ ತಯಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು, ಜನಪ್ರತಿನಿಧಿಗಳಿಗೆ ಪ್ರಗತಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ವಿಶೇಷ ದೀಪಗಳು ಹಾಗೂ ಗೃಹ ಉತ್ಪನ್ನಗಳನ್ನು ಜಿ.ಪಂ ವತಿಯಿಂದ ಉಡುಗೊರೆಯಾಗಿ ನೀಡಿ, ಮಹಿಳೆಯರ ಗುಡಿ ಕೈಗಾರಿಕೆ ಕೌಶಲ್ಯವನ್ನು ಉತ್ತೇಜಿಸುವಂತೆ ಎಲ್ಲರಲ್ಲಿ ಮನವಿ ಮಾಡಿದ್ದಾರೆ.

ಲೇಖನ: ರಘು ಆರ್, ಅಪ್ರೆಂಟಿಸ್, ವಾರ್ತಾ ಇಲಾಖೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSpecial Articleಮಲೆನಾಡು_ಸುದ್ಧಿವಿಶೇಷ ಲೇಖನಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿ | ಹೆಚ್ಚುತ್ತಿರುವ ಏಡ್ಸ್ ಪ್ರಮಾಣ ತಗ್ಗಿಸಲು ಜಾಗೃತಿ ಅವಶ್ಯ | ಸುಶೀಲಭಾಯಿ ಕರೆ

Next Post

ರಾಷ್ಟ್ರೀಯ ಮತದಾರರ ದಿನಾಚರಣೆ | ವಿವಿಧ ಸ್ಪರ್ಧೆಗಳಲ್ಲಿ ಕ್ರೈಸ್ಟ್‌ಕಿಂಗ್‌ನ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಷ್ಟ್ರೀಯ ಮತದಾರರ ದಿನಾಚರಣೆ | ವಿವಿಧ ಸ್ಪರ್ಧೆಗಳಲ್ಲಿ ಕ್ರೈಸ್ಟ್‌ಕಿಂಗ್‌ನ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!